Homeರಾಜಕೀಯ‘ಮೈತ್ರಿ ತೊರೆಯುವ ಬಗ್ಗೆ ಚರ್ಚಿಸುತ್ತೇವೆ, ಬಂಡಾಯ ಶಾಸಕರು ಹಿಂತಿರುಗುವ ಧೈರ್ಯ ತೋರಲಿ’: ಶಿವಸೇನೆ ವಕ್ತಾರ ಸಂಜಯ್...

‘ಮೈತ್ರಿ ತೊರೆಯುವ ಬಗ್ಗೆ ಚರ್ಚಿಸುತ್ತೇವೆ, ಬಂಡಾಯ ಶಾಸಕರು ಹಿಂತಿರುಗುವ ಧೈರ್ಯ ತೋರಲಿ’: ಶಿವಸೇನೆ ವಕ್ತಾರ ಸಂಜಯ್ ರಾವತ್‌

- Advertisement -
- Advertisement -

ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ನಡುವೆ ಶಿವಸೇನೆ ಸಂಸದ, ಪಕ್ಷದ ವಕ್ತಾರ ಸಂಜಯ್ ರಾವತ್ ಅವರು ಬಂಡಾಯ ಪಾಳಯದ ನಾಯಕ ಏಕನಾಥ್ ಶಿಂಧೆ ಪರ ನಿಂತ 22 ಶಾಸಕರೊಂದಿಗೆ ಸಂಪರ್ಕದಲ್ಲಿರುವುದಾಗಿ ಗುರುವಾರ ಹೇಳಿದ್ದಾರೆ. ಒಂದು ವೇಳೆ ವಿಶ್ವಾಸ ಮತಯಾಚನೆ ನಡೆದರೆ ಆಡಳಿತರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಗೆಲ್ಲುತ್ತದೆ ಎಂದು ಅವರು ತಿಳಿಸಿದ್ದಾರೆ.

ತಮ್ಮ ಪಕ್ಷವು ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗಿನ ಮೈತ್ರಿಯಿಂದ ಹೊರಬರಬೇಕು ಎಂದು ಬಂಡಾಯ ಶಾಸಕರು ಬಯಸುವುದಾರೆ ಅವರು ‘24 ಗಂಟೆಗಳಲ್ಲಿ’ ಮುಂಬೈಗೆ ಹಿಂತಿರುಗಬೇಕು ಎಂದು ಸಂಜಯ್ ರಾವತ್ ಹೇಳಿದ್ದಾರೆ. ‘‘ಈ ಬಗ್ಗೆ ನಾವು ಚರ್ಚಿಸುತ್ತೇವೆ, ಆದರೆ ಅವರು ಹಿಂತಿರುಗುವ ಧೈರ್ಯವನ್ನು ತೋರಿಸಬೇಕು” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವರು ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಸೂರತ್‌ನಿಂದ ಮುಂಬೈಗೆ ಹಿಂದಿರುಗಿದ ಶಾಸಕರಾದ ನಿತಿನ್ ದೇಶಮುಖ್ ಮತ್ತು ಕೈಲಾಶ್ ಪಾಟೀಲ್ ಅವರು ಉಪಸ್ಥಿತರಿದ್ದರು. ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ಧ ಬಿಜೆಪಿ ರೂಪಿಸಿದ ಸಂಚು ಎಂದು ನಿತಿನ್‌ ದೇಶಮುಖ್ ಆರೋಪಿಸಿದರೆ, ಹಲವಾರು ಶಾಸಕರು ಮುಂಬೈಗೆ ಮರಳಲು ತಯಾರಿದ್ದಾರೆ ಎಂದು ಕೈಲಾಶ್‌‌ ಪಾಟೀಲ್ ಹೇಳಿಕೊಂಡಿದ್ದಾರೆ.

ಬಂಡಾಯ ಶಾಸಕರು ಇದೀಗ ಬಿಜೆಪಿ ಆಡಳಿತವಿರುವ ಅಸ್ಸಾಂನ ಗುವಾಹಟಿಯ ರ್‍ಯಾಡಿಸನ್‌ ಬ್ಲೂ ಹೋಟೆಲ್‌ನಲ್ಲಿ ಇದ್ದಾರೆ. ಇಲ್ಲಿಂದ ಇಂದು ಹೊರ ಬಂದ ಹೊಸ ದೃಶ್ಯಾವಳಿಗಳು ಒಟ್ಟು 42 ಬಂಡಾಯ ಶಾಸಕರು ಶಿಂಧೆ ಅವರೊಂದಿಗೆ ಇದ್ದಾರೆ ಎಂಬುವುದು ತೋರಿಸಿದೆ ಎಂದು ಮಾಧ್ಯಮಗಳು ಹೇಳಿವೆ. ಇವರಲ್ಲಿ ಶಿವಸೇನೆಯ 34 ಶಾಸಕರಿದ್ದು, ಏಳು ಶಾಸಕರು ಪಕ್ಷೇತರರಾಗಿದ್ದಾರೆ.

ಇದನ್ನೂ ಓದಿ: ‘ಉದ್ಧವ್ ಠಾಕ್ರೆ ರಾಜೀನಾಮೆ ಬೇಡ; ಬಿಜೆಪಿ ಜೊತೆಗೆ ಮೈತ್ರಿ ಮಾಡೋಣ’- ಶಿವಸೇನೆಯ ಬಂಡಾಯ ಶಾಸಕ

ಪಕ್ಷಾಂತರ ವಿರೋಧಿ ಕಾನೂನು ಜಾರಿಯಾಗದಂತೆ ಇರಲು ಶಿಂಧೆ ಅವರಿಗೆ ಶಿವಸೇನೆಯ 55 ಶಾಸಕರಲ್ಲಿ 37 ಶಾಸಕರ ಬೆಂಬಲದ ಅಗತ್ಯವಿದೆ. ನಿನ್ನೆಯಷ್ಟೆ ಮತ್ತೆ ಆರು ಶಾಸಕರು ಶಿಂಧೆ ನೇತೃತ್ವದ ಬಂಡಾಯ ಪಾಳಯವನ್ನು ಸೇರಿದ್ದರು.

ಶಿಂಧೆ ಅವರ ಪಾಳಯದ 22 ಶಾಸಕರೊಂದಿಗೆ ಶಿವಸೇನೆ ಸಂಪರ್ಕದಲ್ಲಿದೆ ಎಂಬ ರಾವತ್ ಹೇಳಿದ್ದು, ನಿನ್ನೆ ಅವರು 20 ಬಂಡಾಯ ನಾಯಕರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...