Homeಮುಖಪುಟಬಂಡಾಯ ಶಾಸಕರು ಕೊಳೆತ ಎಲೆಗಳಿಂದಂತೆ, ಅವು ಉದುರಲೇಬೇಕು: ಉದ್ಧವ್ ಠಾಕ್ರೆ

ಬಂಡಾಯ ಶಾಸಕರು ಕೊಳೆತ ಎಲೆಗಳಿಂದಂತೆ, ಅವು ಉದುರಲೇಬೇಕು: ಉದ್ಧವ್ ಠಾಕ್ರೆ

- Advertisement -
- Advertisement -

ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಶಿವಸೇನೆಯ ಬಂಡಾಯ ನಾಯಕರನ್ನು ಮರದ ಕೊಳೆತ ಎಲೆಗಳಿಗೆ ಹೋಲಿಸಿದ್ದಾರೆ. ಬಂಡಾಯ ಎದ್ದಿರುವವರನ್ನು ಜನರು ಬೆಂಬಲಿಸುತ್ತಾರೆಯೇ ಎಂಬುದನ್ನು ತಿಳಿಯಲು ಚುನಾವಣೆ ನಡೆಯಲಿ ಎಂದು ಆಶಿಸಿದ್ದಾರೆ.

ಕಳೆದ ತಿಂಗಳು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಶಿವಸೇನಾ ಮುಖವಾಣಿ ‘ಸಾಮ್ನಾ’ಕ್ಕೆ ನೀಡಿರುವ ಮೊದಲ ಮೊದಲ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದಾರೆ. ‘ಪಕ್ಷದ ಕೆಲವು ನಾಯಕರನ್ನು ಹೆಚ್ಚು ನಂಬಿರುವುದು ತಪ್ಪು’ ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಒಳಗೊಂಡ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವು ಕಳೆದ ತಿಂಗಳು ಪಥನಗೊಂಡಿತು. ಶಿವಸೇನಾ ಶಾಸಕ ಏಕನಾಥ್ ಶಿಂಧೆ ಮತ್ತು ಇತರ 39 ಶಾಸಕರು ಪಕ್ಷದ ನಾಯಕತ್ವದ ವಿರುದ್ಧ ಬಂಡಾಯ ಎದ್ದಿದ್ದರಿಂದ ಉದ್ಧವ್‌ ನೇತೃತ್ವದ ಸರ್ಕಾರ ಉರುಳಿಬಿದ್ದಿತು.

ನಂತರ ಶಿಂಧೆ ಅವರು ಮುಖ್ಯಮಂತ್ರಿಯಾಗಿ ಮತ್ತು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

“ಈ ದಂಗೆಕೋರರು ಮರದ ಕೊಳೆತ ಎಲೆಗಳಂತಿದ್ದಾರೆ. ಅವುಗಳು ಉದುರಲೇಬೇಕು. ಹೊಸ ಎಲೆಗಳು ಬಂದರೆ ಮರಕ್ಕೆ ಒಳ್ಳೆಯದು” ಎಂದು ಉದ್ಧವ್‌ ಠಾಕ್ರೆ ತಿಳಿಸಿದ್ದಾರೆ.

ತಾವು ನಿಜವಾದ ಶಿವಸೇನೆಯನ್ನು ಪ್ರತಿನಿಧಿಸುತ್ತೇವೆ ಎಂಬ ಬಂಡಾಯ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಠಾಕ್ರೆ, ‘ಚುನಾವಣೆ ನಡೆಯಲಿ. ಜನರು ಯಾರನ್ನು ಆಯ್ಕೆ ಮಾಡುತ್ತಾರೆ ಎಂಬುದನ್ನು ನೋಡೋಣ’ ಎಂದು ತಿಳಿಸಿದ್ದಾರೆ.

“ಜನರು ನಮಗೆ ಮತ ಹಾಕುತ್ತಾರೋ ಅಥವಾ ಅವರನ್ನು ಬೆಂಬಲಿಸುತ್ತಾರೋ ಎಂಬುದು ಒಮ್ಮೆ ಸ್ಪಷ್ಟವಾಗುತ್ತದೆ” ಎಂದು ಮಾಜಿ ಸಿಎಂ ತಿಳಿಸಿದ್ದಾರೆ.

ಬಂಡಾಯಕ್ಕೆ ಯಾರನ್ನು ದೂಷಿಸಬಹುದು ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, “ನಾನು ಕೆಲವು ಸೇನಾ ಕಾರ್ಯಕರ್ತರು ಮತ್ತು ಮುಖಂಡರ ಮೇಲೆ ಹೆಚ್ಚು ನಂಬಿಕೆ ಇಟ್ಟಿರುವಂತೆ ತೋರುತ್ತಿದೆ. ಇಷ್ಟು ದಿನ ಅವರನ್ನು ನಂಬಿದ್ದು ನನ್ನ ತಪ್ಪು. ಬಿಜೆಪಿಯು ಶಿವಸೇನೆಯನ್ನು ಒಡೆಯಲು ಪ್ರಯತ್ನಿಸುತ್ತಿಲ್ಲ. ಆದರೆ ಇತರ ಪಕ್ಷಗಳ ಶ್ರೇಷ್ಠ ನಾಯಕರನ್ನು ತನ್ನೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

“ಕಾಂಗ್ರೆಸ್‌ನವರಾದ ಸರ್ದಾರ್ ಪಟೇಲ್ ಅವರನ್ನು ಹೇಗೆ ತಮ್ಮವರೆಂದು ಬಿಂಬಿಸಲು ಯತ್ನಿಸಿದರೋ, ಹಾಗೆಯೇ ಶಿವಸೇನೆಯನ್ನು ಸ್ಥಾಪಿಸಿದ ನನ್ನ ತಂದೆ ಬಾಳಾಸಾಹೇಬ್ ಠಾಕ್ರೆಯವರನ್ನು ತಮ್ಮವರೆಂದು ಬಿಂಬಿಸಿಕೊಳ್ಳಲು ಯತ್ನಿಸಿದ್ದಾರೆ” ಎಂದು ದೂರಿದ್ದಾರೆ.

ಇದನ್ನೂ ಓದಿರಿ: ಕೇರಳ: ಎದೆನೋವು ಎಂದರೂ ಬಿಡದೆ ಥಳಿಸಿದ ಪೊಲೀಸರು; ಕಸ್ಟಡಿ ಚಿತ್ರಹಿಂಸೆಗೆ ವ್ಯಕ್ತಿ ಬಲಿ

“ಈ ಜನರು ನಂಬಲರ್ಹರಲ್ಲ ಎಂದು ತೋರುತ್ತಿದೆ. ಅವರು ಮೂಲತಃ ಸೇನಾ ಕಾರ್ಯಕರ್ತರ ನಡುವೆ ಆಂತರಿಕ ಕಲಹವನ್ನು ಉಂಟುಮಾಡುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮಹಾ ವಿಕಾಸ್ ಅಘಾಡಿ ಮೈತ್ರಿಯು ರಾಜಕೀಯದಲ್ಲಿ ಪ್ರಯತ್ನಿಸಲು ಯೋಗ್ಯವಾಗಿದೆ ಎಂಬ ಸೂಚನೆಯನ್ನೂ ಅವರು ನೀಡಿದ್ದಾರೆ.

“ಜನರ ಪ್ರಕಾರ ಅದು ತಪ್ಪು ಹೆಜ್ಜೆಯಾಗಿದ್ದರೆ, ಅವರು ನಮ್ಮ ಮೈತ್ರಿ ವಿರುದ್ಧ ಬಂಡೇಳುತ್ತಿದ್ದರು. ಮಹಾ ವಿಕಾಸ್ ಅಘಾಡಿಯಲ್ಲಿ ನಾವು ಪರಸ್ಪರ ಗೌರವವನ್ನು ಹೊಂದಿದ್ದೇವೆ” ಎಂದು ಉದ್ಧವ್‌ ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...