Homeಮುಖಪುಟಬಂಡಾಯ ಶಾಸಕರು ಕೊಳೆತ ಎಲೆಗಳಿಂದಂತೆ, ಅವು ಉದುರಲೇಬೇಕು: ಉದ್ಧವ್ ಠಾಕ್ರೆ

ಬಂಡಾಯ ಶಾಸಕರು ಕೊಳೆತ ಎಲೆಗಳಿಂದಂತೆ, ಅವು ಉದುರಲೇಬೇಕು: ಉದ್ಧವ್ ಠಾಕ್ರೆ

- Advertisement -
- Advertisement -

ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಶಿವಸೇನೆಯ ಬಂಡಾಯ ನಾಯಕರನ್ನು ಮರದ ಕೊಳೆತ ಎಲೆಗಳಿಗೆ ಹೋಲಿಸಿದ್ದಾರೆ. ಬಂಡಾಯ ಎದ್ದಿರುವವರನ್ನು ಜನರು ಬೆಂಬಲಿಸುತ್ತಾರೆಯೇ ಎಂಬುದನ್ನು ತಿಳಿಯಲು ಚುನಾವಣೆ ನಡೆಯಲಿ ಎಂದು ಆಶಿಸಿದ್ದಾರೆ.

ಕಳೆದ ತಿಂಗಳು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಶಿವಸೇನಾ ಮುಖವಾಣಿ ‘ಸಾಮ್ನಾ’ಕ್ಕೆ ನೀಡಿರುವ ಮೊದಲ ಮೊದಲ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದಾರೆ. ‘ಪಕ್ಷದ ಕೆಲವು ನಾಯಕರನ್ನು ಹೆಚ್ಚು ನಂಬಿರುವುದು ತಪ್ಪು’ ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಒಳಗೊಂಡ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವು ಕಳೆದ ತಿಂಗಳು ಪಥನಗೊಂಡಿತು. ಶಿವಸೇನಾ ಶಾಸಕ ಏಕನಾಥ್ ಶಿಂಧೆ ಮತ್ತು ಇತರ 39 ಶಾಸಕರು ಪಕ್ಷದ ನಾಯಕತ್ವದ ವಿರುದ್ಧ ಬಂಡಾಯ ಎದ್ದಿದ್ದರಿಂದ ಉದ್ಧವ್‌ ನೇತೃತ್ವದ ಸರ್ಕಾರ ಉರುಳಿಬಿದ್ದಿತು.

ನಂತರ ಶಿಂಧೆ ಅವರು ಮುಖ್ಯಮಂತ್ರಿಯಾಗಿ ಮತ್ತು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

“ಈ ದಂಗೆಕೋರರು ಮರದ ಕೊಳೆತ ಎಲೆಗಳಂತಿದ್ದಾರೆ. ಅವುಗಳು ಉದುರಲೇಬೇಕು. ಹೊಸ ಎಲೆಗಳು ಬಂದರೆ ಮರಕ್ಕೆ ಒಳ್ಳೆಯದು” ಎಂದು ಉದ್ಧವ್‌ ಠಾಕ್ರೆ ತಿಳಿಸಿದ್ದಾರೆ.

ತಾವು ನಿಜವಾದ ಶಿವಸೇನೆಯನ್ನು ಪ್ರತಿನಿಧಿಸುತ್ತೇವೆ ಎಂಬ ಬಂಡಾಯ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಠಾಕ್ರೆ, ‘ಚುನಾವಣೆ ನಡೆಯಲಿ. ಜನರು ಯಾರನ್ನು ಆಯ್ಕೆ ಮಾಡುತ್ತಾರೆ ಎಂಬುದನ್ನು ನೋಡೋಣ’ ಎಂದು ತಿಳಿಸಿದ್ದಾರೆ.

“ಜನರು ನಮಗೆ ಮತ ಹಾಕುತ್ತಾರೋ ಅಥವಾ ಅವರನ್ನು ಬೆಂಬಲಿಸುತ್ತಾರೋ ಎಂಬುದು ಒಮ್ಮೆ ಸ್ಪಷ್ಟವಾಗುತ್ತದೆ” ಎಂದು ಮಾಜಿ ಸಿಎಂ ತಿಳಿಸಿದ್ದಾರೆ.

ಬಂಡಾಯಕ್ಕೆ ಯಾರನ್ನು ದೂಷಿಸಬಹುದು ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, “ನಾನು ಕೆಲವು ಸೇನಾ ಕಾರ್ಯಕರ್ತರು ಮತ್ತು ಮುಖಂಡರ ಮೇಲೆ ಹೆಚ್ಚು ನಂಬಿಕೆ ಇಟ್ಟಿರುವಂತೆ ತೋರುತ್ತಿದೆ. ಇಷ್ಟು ದಿನ ಅವರನ್ನು ನಂಬಿದ್ದು ನನ್ನ ತಪ್ಪು. ಬಿಜೆಪಿಯು ಶಿವಸೇನೆಯನ್ನು ಒಡೆಯಲು ಪ್ರಯತ್ನಿಸುತ್ತಿಲ್ಲ. ಆದರೆ ಇತರ ಪಕ್ಷಗಳ ಶ್ರೇಷ್ಠ ನಾಯಕರನ್ನು ತನ್ನೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

“ಕಾಂಗ್ರೆಸ್‌ನವರಾದ ಸರ್ದಾರ್ ಪಟೇಲ್ ಅವರನ್ನು ಹೇಗೆ ತಮ್ಮವರೆಂದು ಬಿಂಬಿಸಲು ಯತ್ನಿಸಿದರೋ, ಹಾಗೆಯೇ ಶಿವಸೇನೆಯನ್ನು ಸ್ಥಾಪಿಸಿದ ನನ್ನ ತಂದೆ ಬಾಳಾಸಾಹೇಬ್ ಠಾಕ್ರೆಯವರನ್ನು ತಮ್ಮವರೆಂದು ಬಿಂಬಿಸಿಕೊಳ್ಳಲು ಯತ್ನಿಸಿದ್ದಾರೆ” ಎಂದು ದೂರಿದ್ದಾರೆ.

ಇದನ್ನೂ ಓದಿರಿ: ಕೇರಳ: ಎದೆನೋವು ಎಂದರೂ ಬಿಡದೆ ಥಳಿಸಿದ ಪೊಲೀಸರು; ಕಸ್ಟಡಿ ಚಿತ್ರಹಿಂಸೆಗೆ ವ್ಯಕ್ತಿ ಬಲಿ

“ಈ ಜನರು ನಂಬಲರ್ಹರಲ್ಲ ಎಂದು ತೋರುತ್ತಿದೆ. ಅವರು ಮೂಲತಃ ಸೇನಾ ಕಾರ್ಯಕರ್ತರ ನಡುವೆ ಆಂತರಿಕ ಕಲಹವನ್ನು ಉಂಟುಮಾಡುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮಹಾ ವಿಕಾಸ್ ಅಘಾಡಿ ಮೈತ್ರಿಯು ರಾಜಕೀಯದಲ್ಲಿ ಪ್ರಯತ್ನಿಸಲು ಯೋಗ್ಯವಾಗಿದೆ ಎಂಬ ಸೂಚನೆಯನ್ನೂ ಅವರು ನೀಡಿದ್ದಾರೆ.

“ಜನರ ಪ್ರಕಾರ ಅದು ತಪ್ಪು ಹೆಜ್ಜೆಯಾಗಿದ್ದರೆ, ಅವರು ನಮ್ಮ ಮೈತ್ರಿ ವಿರುದ್ಧ ಬಂಡೇಳುತ್ತಿದ್ದರು. ಮಹಾ ವಿಕಾಸ್ ಅಘಾಡಿಯಲ್ಲಿ ನಾವು ಪರಸ್ಪರ ಗೌರವವನ್ನು ಹೊಂದಿದ್ದೇವೆ” ಎಂದು ಉದ್ಧವ್‌ ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...