Homeಕರ್ನಾಟಕಮುಂಬೈನಲ್ಲಿ ಪೊಲೀಸರ ವಶಕ್ಕೆ ಡಿಕೆಶಿ, ಬೆಂಗಳೂರಲ್ಲಿ ಧರಣಿ: ಸುಪ್ರಿಂ ಮೋರೆ ಹೋದ ಅತೃಪ್ತರು

ಮುಂಬೈನಲ್ಲಿ ಪೊಲೀಸರ ವಶಕ್ಕೆ ಡಿಕೆಶಿ, ಬೆಂಗಳೂರಲ್ಲಿ ಧರಣಿ: ಸುಪ್ರಿಂ ಮೋರೆ ಹೋದ ಅತೃಪ್ತರು

- Advertisement -
- Advertisement -

ಮುಂಬೈನಲ್ಲಿ ರೆನಾಸನ್ಸ್ ಹೊಟೆಲ್ ಮುಂದೆ ಡಿ.ಕೆ ಶಿವಕುಮಾರ್ ಬೆಳಿಗ್ಗೆಯಿಂದ ಪಟ್ಟು ಬಿಡದೇ ನಿಂತಿದ್ದಾರೆ. ಹೋಟೆಲ್ ಒಳಗೆ ಹೋಗಲು ಮಹಾರಾಷ್ಟ್ರ ಪೊಲೀಸರು ತಡೆ ಒಡ್ಡಿದ್ದಾರೆ ಮಾತ್ರವಲ್ಲ ಅವರನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಮೈತ್ರಿ ಪಕ್ಷಗಳು ಧರಣಿಯಲ್ಲಿ ನಿರತವಾಗಿವೆ.

ಸ್ಪೀಕರ್ ರಮೇಶ ಕುಮಾರ್ ಬೇಕೆಂತಲೇ ರಾಜಿನಾಮೆ ಸ್ವೀಕಾರವನ್ನು ತಡೆಹಿಡಿಯುತ್ತಿದ್ದಾರೆ ಎಂದು ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು ಈಗ ಸ್ಪೀಕರ್ ನಡೆ ವಿರೋಧಿಸಿ ರಾಜ್ಯಪಾಲರ ಬಳಿ ಒಂದು ಗಂಟೆ ಸಮಾಲೋಚನೆ ನಡೆಸಿದ್ದಾರೆ. ಈ ಕುರಿತು ಮಾತನಾಡಿರುವ ಯಡಿಯೂರಪ್ಪ, ರಾಜ್ಯಪಾಲರಿಗೆ ವಸ್ತು ಸ್ಥಿತಿಯನ್ನು ವಿವರಿಸಿದ್ದೇವೆ, ಸರ್ಕಾರದ ಬಲ 103ಕ್ಕೆ ಕುಸಿದಿದೆ, ಸ್ಪೀಕರ್ ಅವರು ಶಾಸಕರ ರಾಜೀನಾಮೆಗಳನ್ನು ತ್ವರಿತವಾಗಿ ಅಂಗೀಕರಿಸಲು ಸೂಚಿಸಬೇಕು ಎಂದು ಮನವಿ ಮಾಡಿದ್ದಾಗಿ ಹೇಳಿದ್ದಾರೆ. ಆದರೆ ಸರ್ಕಾರಕ್ಕೆ ಬಹುಮತ ಸಾಬೀತುಪಡಿಸಲು ನಿರ್ದೇಶನ ಮಾಡುವಂತೆ ಮನವಿ ಮಾಡಿಲ್ಲ, ಆ ಪ್ರಶ್ನೆ ಈಗ ಉದ್ಭವಿಸುವುದಿಲ್ಲ ಎಂದಿದ್ದಾರೆ.

ಈ ನಡವೆ ಅತೃಪ್ತ ಶಾಸಕರು ಸುಪ್ರಿಂಕೋರ್ಟ್ ಮೊರೆ ಹೋಗಿದ್ದು , ಸ್ಪೀಕರ್ ತಮ್ಮ ರಾಜಿನಾಮೆ ಅಂಗೀಕರಿಸಲು ವಿಳಂಬ ಮಾಡುತ್ತಿದ್ದು, ಸುಪ್ರಿಂಕೋರ್ಟ್ ಈ ವಿಷಯವನ್ನು ಬೇಗನೆ ಎತ್ತಿಕೊಂಡು ಸ್ಪೀಕರ್ ಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದಾರೆ. ಹಿರಿಯ ವಕೀಲ ಮುಕುಲ್ ರೋಹಟಗಿ ಮೂಲಕ ಅರ್ಜಿ ಸಲ್ಲಿಸಿರುವ ಅತೃಪ್ತರು ಸ್ಪೀಕರ್ ರಮೇಶಕುಮಾರ್ ಸಾಂವಿಧಾನಿಕ ಕರ್ತವ್ಯವನ್ನು ನಿಭಾಯಿಸದೇ ಪಕ್ಷಪಾತ ತೋರುತ್ತಿದ್ದಾರೆಂದು ಅರ್ಜಿಯಲ್ಲಿ ದೂರಿದ್ದಾರೆ.

ಬೆಂಗಳೂರಿನಲ್ಲಿ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು ಕೂಡ ಸ್ಪೀಕರ್ ರಮೇಶ್‍ಕುಮಾರ್ ಬೇಕೆಂತಲೇ ರಾಜೀನಾಮೆ ಅಂಗೀಕಾರವನ್ನು ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಅಜಾದ್, ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಮೈತ್ರಿ ಪಕ್ಷಗಳು ಮೋದಿ ಮತ್ತು ಅಮಿತ್ ಶಾ ತಮ್ಮ ಶಾಸಕರನ್ನು ಮುಂಬೈಯಲ್ಲಿ ಕೂಡಿಟ್ಟಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ.

ಈ ನಡುವೆ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ತಂದೆಯ ರಾಜೀನಾಮೆ ಪತ್ರವನ್ನು ಮತ್ತೊಮ್ಮೆ ಸ್ಪೀಕರ್  ರವರಿಗೆ ಸಲ್ಲಿಸಿ ಬಂದಿದ್ದಾರೆ, ಶಿವರಾಮ್ ಹೆಬ್ಬಾರ್ ರಾಜಿನಾಮೆ ಪತ್ರ ಕ್ರಮಬದ್ಧವಾಗಿಲ್ಲ ಎಂದು ಸ್ಪೀಕರ್ ನಿನ್ನೆ ಹೇಳಿದ್ದರು.

ಅತೃಪ್ತ ಶಾಸಕರ ರಾಜಿನಾಮೆಗೂ ನಮಗೂ ಸಂಬಂಧವಿಲ್ಲ ಎನ್ನುತ್ತಲೇ ಬಂದಿರುವ ಬಿಜೆಪಿ ನಾಯಕರು ಸತತವಾಗಿ ಅವರ ಸಂಪರ್ಕದಲ್ಲಿರುವುದು, ಅವರಿಗೆ ರಕ್ಷಣೆ ಮತ್ತು ಬೆಂಬಲ ನೀಡುತ್ತಿರುವುದು ಪದೇ ಪದೇ ಬಯಲಾಗುತ್ತಿದೆ. ನಿನ್ನೆ ರಾತ್ರಿ ಬಿಜೆಪಿಯ ಆರ್ ಅಶೋಕ್, ಮಾಜಿ ಸ್ಪೀಕರ್ ಬೋಪಯ್ಯ ಮುಂಬೈ ಹೊಟೆಲ್‍ನಲ್ಲಿ ಅತೃಪ್ತ ಶಾಸಕರನ್ನು ಭೇಟಿಯಾಗಿ ಅವರಿಂದ ಬಿಜೆಪಿಗೆ ಬೆಂಬಲದ ಪತ್ರಗಳನ್ನು ಪಡೆದಿದ್ದಾರೆ ಎನ್ನಲಾಗಿದೆ.

ಸಂಜೆವರೆಗೂ ಈ ಎಲ್ಲ ಹೈಡ್ರಾಮಾಗಳು ಮುಂದುವರೆಯುವ ಲಕ್ಷಣಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...