Homeಕರ್ನಾಟಕಮುಂಬೈನಲ್ಲಿ ಪೊಲೀಸರ ವಶಕ್ಕೆ ಡಿಕೆಶಿ, ಬೆಂಗಳೂರಲ್ಲಿ ಧರಣಿ: ಸುಪ್ರಿಂ ಮೋರೆ ಹೋದ ಅತೃಪ್ತರು

ಮುಂಬೈನಲ್ಲಿ ಪೊಲೀಸರ ವಶಕ್ಕೆ ಡಿಕೆಶಿ, ಬೆಂಗಳೂರಲ್ಲಿ ಧರಣಿ: ಸುಪ್ರಿಂ ಮೋರೆ ಹೋದ ಅತೃಪ್ತರು

- Advertisement -
- Advertisement -

ಮುಂಬೈನಲ್ಲಿ ರೆನಾಸನ್ಸ್ ಹೊಟೆಲ್ ಮುಂದೆ ಡಿ.ಕೆ ಶಿವಕುಮಾರ್ ಬೆಳಿಗ್ಗೆಯಿಂದ ಪಟ್ಟು ಬಿಡದೇ ನಿಂತಿದ್ದಾರೆ. ಹೋಟೆಲ್ ಒಳಗೆ ಹೋಗಲು ಮಹಾರಾಷ್ಟ್ರ ಪೊಲೀಸರು ತಡೆ ಒಡ್ಡಿದ್ದಾರೆ ಮಾತ್ರವಲ್ಲ ಅವರನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಮೈತ್ರಿ ಪಕ್ಷಗಳು ಧರಣಿಯಲ್ಲಿ ನಿರತವಾಗಿವೆ.

ಸ್ಪೀಕರ್ ರಮೇಶ ಕುಮಾರ್ ಬೇಕೆಂತಲೇ ರಾಜಿನಾಮೆ ಸ್ವೀಕಾರವನ್ನು ತಡೆಹಿಡಿಯುತ್ತಿದ್ದಾರೆ ಎಂದು ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು ಈಗ ಸ್ಪೀಕರ್ ನಡೆ ವಿರೋಧಿಸಿ ರಾಜ್ಯಪಾಲರ ಬಳಿ ಒಂದು ಗಂಟೆ ಸಮಾಲೋಚನೆ ನಡೆಸಿದ್ದಾರೆ. ಈ ಕುರಿತು ಮಾತನಾಡಿರುವ ಯಡಿಯೂರಪ್ಪ, ರಾಜ್ಯಪಾಲರಿಗೆ ವಸ್ತು ಸ್ಥಿತಿಯನ್ನು ವಿವರಿಸಿದ್ದೇವೆ, ಸರ್ಕಾರದ ಬಲ 103ಕ್ಕೆ ಕುಸಿದಿದೆ, ಸ್ಪೀಕರ್ ಅವರು ಶಾಸಕರ ರಾಜೀನಾಮೆಗಳನ್ನು ತ್ವರಿತವಾಗಿ ಅಂಗೀಕರಿಸಲು ಸೂಚಿಸಬೇಕು ಎಂದು ಮನವಿ ಮಾಡಿದ್ದಾಗಿ ಹೇಳಿದ್ದಾರೆ. ಆದರೆ ಸರ್ಕಾರಕ್ಕೆ ಬಹುಮತ ಸಾಬೀತುಪಡಿಸಲು ನಿರ್ದೇಶನ ಮಾಡುವಂತೆ ಮನವಿ ಮಾಡಿಲ್ಲ, ಆ ಪ್ರಶ್ನೆ ಈಗ ಉದ್ಭವಿಸುವುದಿಲ್ಲ ಎಂದಿದ್ದಾರೆ.

ಈ ನಡವೆ ಅತೃಪ್ತ ಶಾಸಕರು ಸುಪ್ರಿಂಕೋರ್ಟ್ ಮೊರೆ ಹೋಗಿದ್ದು , ಸ್ಪೀಕರ್ ತಮ್ಮ ರಾಜಿನಾಮೆ ಅಂಗೀಕರಿಸಲು ವಿಳಂಬ ಮಾಡುತ್ತಿದ್ದು, ಸುಪ್ರಿಂಕೋರ್ಟ್ ಈ ವಿಷಯವನ್ನು ಬೇಗನೆ ಎತ್ತಿಕೊಂಡು ಸ್ಪೀಕರ್ ಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದಾರೆ. ಹಿರಿಯ ವಕೀಲ ಮುಕುಲ್ ರೋಹಟಗಿ ಮೂಲಕ ಅರ್ಜಿ ಸಲ್ಲಿಸಿರುವ ಅತೃಪ್ತರು ಸ್ಪೀಕರ್ ರಮೇಶಕುಮಾರ್ ಸಾಂವಿಧಾನಿಕ ಕರ್ತವ್ಯವನ್ನು ನಿಭಾಯಿಸದೇ ಪಕ್ಷಪಾತ ತೋರುತ್ತಿದ್ದಾರೆಂದು ಅರ್ಜಿಯಲ್ಲಿ ದೂರಿದ್ದಾರೆ.

ಬೆಂಗಳೂರಿನಲ್ಲಿ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು ಕೂಡ ಸ್ಪೀಕರ್ ರಮೇಶ್‍ಕುಮಾರ್ ಬೇಕೆಂತಲೇ ರಾಜೀನಾಮೆ ಅಂಗೀಕಾರವನ್ನು ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಅಜಾದ್, ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಮೈತ್ರಿ ಪಕ್ಷಗಳು ಮೋದಿ ಮತ್ತು ಅಮಿತ್ ಶಾ ತಮ್ಮ ಶಾಸಕರನ್ನು ಮುಂಬೈಯಲ್ಲಿ ಕೂಡಿಟ್ಟಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ.

ಈ ನಡುವೆ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ತಂದೆಯ ರಾಜೀನಾಮೆ ಪತ್ರವನ್ನು ಮತ್ತೊಮ್ಮೆ ಸ್ಪೀಕರ್  ರವರಿಗೆ ಸಲ್ಲಿಸಿ ಬಂದಿದ್ದಾರೆ, ಶಿವರಾಮ್ ಹೆಬ್ಬಾರ್ ರಾಜಿನಾಮೆ ಪತ್ರ ಕ್ರಮಬದ್ಧವಾಗಿಲ್ಲ ಎಂದು ಸ್ಪೀಕರ್ ನಿನ್ನೆ ಹೇಳಿದ್ದರು.

ಅತೃಪ್ತ ಶಾಸಕರ ರಾಜಿನಾಮೆಗೂ ನಮಗೂ ಸಂಬಂಧವಿಲ್ಲ ಎನ್ನುತ್ತಲೇ ಬಂದಿರುವ ಬಿಜೆಪಿ ನಾಯಕರು ಸತತವಾಗಿ ಅವರ ಸಂಪರ್ಕದಲ್ಲಿರುವುದು, ಅವರಿಗೆ ರಕ್ಷಣೆ ಮತ್ತು ಬೆಂಬಲ ನೀಡುತ್ತಿರುವುದು ಪದೇ ಪದೇ ಬಯಲಾಗುತ್ತಿದೆ. ನಿನ್ನೆ ರಾತ್ರಿ ಬಿಜೆಪಿಯ ಆರ್ ಅಶೋಕ್, ಮಾಜಿ ಸ್ಪೀಕರ್ ಬೋಪಯ್ಯ ಮುಂಬೈ ಹೊಟೆಲ್‍ನಲ್ಲಿ ಅತೃಪ್ತ ಶಾಸಕರನ್ನು ಭೇಟಿಯಾಗಿ ಅವರಿಂದ ಬಿಜೆಪಿಗೆ ಬೆಂಬಲದ ಪತ್ರಗಳನ್ನು ಪಡೆದಿದ್ದಾರೆ ಎನ್ನಲಾಗಿದೆ.

ಸಂಜೆವರೆಗೂ ಈ ಎಲ್ಲ ಹೈಡ್ರಾಮಾಗಳು ಮುಂದುವರೆಯುವ ಲಕ್ಷಣಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...