Homeಕರ್ನಾಟಕಮುಂಬೈನಲ್ಲಿ ಪೊಲೀಸರ ವಶಕ್ಕೆ ಡಿಕೆಶಿ, ಬೆಂಗಳೂರಲ್ಲಿ ಧರಣಿ: ಸುಪ್ರಿಂ ಮೋರೆ ಹೋದ ಅತೃಪ್ತರು

ಮುಂಬೈನಲ್ಲಿ ಪೊಲೀಸರ ವಶಕ್ಕೆ ಡಿಕೆಶಿ, ಬೆಂಗಳೂರಲ್ಲಿ ಧರಣಿ: ಸುಪ್ರಿಂ ಮೋರೆ ಹೋದ ಅತೃಪ್ತರು

- Advertisement -
- Advertisement -

ಮುಂಬೈನಲ್ಲಿ ರೆನಾಸನ್ಸ್ ಹೊಟೆಲ್ ಮುಂದೆ ಡಿ.ಕೆ ಶಿವಕುಮಾರ್ ಬೆಳಿಗ್ಗೆಯಿಂದ ಪಟ್ಟು ಬಿಡದೇ ನಿಂತಿದ್ದಾರೆ. ಹೋಟೆಲ್ ಒಳಗೆ ಹೋಗಲು ಮಹಾರಾಷ್ಟ್ರ ಪೊಲೀಸರು ತಡೆ ಒಡ್ಡಿದ್ದಾರೆ ಮಾತ್ರವಲ್ಲ ಅವರನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಮೈತ್ರಿ ಪಕ್ಷಗಳು ಧರಣಿಯಲ್ಲಿ ನಿರತವಾಗಿವೆ.

ಸ್ಪೀಕರ್ ರಮೇಶ ಕುಮಾರ್ ಬೇಕೆಂತಲೇ ರಾಜಿನಾಮೆ ಸ್ವೀಕಾರವನ್ನು ತಡೆಹಿಡಿಯುತ್ತಿದ್ದಾರೆ ಎಂದು ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು ಈಗ ಸ್ಪೀಕರ್ ನಡೆ ವಿರೋಧಿಸಿ ರಾಜ್ಯಪಾಲರ ಬಳಿ ಒಂದು ಗಂಟೆ ಸಮಾಲೋಚನೆ ನಡೆಸಿದ್ದಾರೆ. ಈ ಕುರಿತು ಮಾತನಾಡಿರುವ ಯಡಿಯೂರಪ್ಪ, ರಾಜ್ಯಪಾಲರಿಗೆ ವಸ್ತು ಸ್ಥಿತಿಯನ್ನು ವಿವರಿಸಿದ್ದೇವೆ, ಸರ್ಕಾರದ ಬಲ 103ಕ್ಕೆ ಕುಸಿದಿದೆ, ಸ್ಪೀಕರ್ ಅವರು ಶಾಸಕರ ರಾಜೀನಾಮೆಗಳನ್ನು ತ್ವರಿತವಾಗಿ ಅಂಗೀಕರಿಸಲು ಸೂಚಿಸಬೇಕು ಎಂದು ಮನವಿ ಮಾಡಿದ್ದಾಗಿ ಹೇಳಿದ್ದಾರೆ. ಆದರೆ ಸರ್ಕಾರಕ್ಕೆ ಬಹುಮತ ಸಾಬೀತುಪಡಿಸಲು ನಿರ್ದೇಶನ ಮಾಡುವಂತೆ ಮನವಿ ಮಾಡಿಲ್ಲ, ಆ ಪ್ರಶ್ನೆ ಈಗ ಉದ್ಭವಿಸುವುದಿಲ್ಲ ಎಂದಿದ್ದಾರೆ.

ಈ ನಡವೆ ಅತೃಪ್ತ ಶಾಸಕರು ಸುಪ್ರಿಂಕೋರ್ಟ್ ಮೊರೆ ಹೋಗಿದ್ದು , ಸ್ಪೀಕರ್ ತಮ್ಮ ರಾಜಿನಾಮೆ ಅಂಗೀಕರಿಸಲು ವಿಳಂಬ ಮಾಡುತ್ತಿದ್ದು, ಸುಪ್ರಿಂಕೋರ್ಟ್ ಈ ವಿಷಯವನ್ನು ಬೇಗನೆ ಎತ್ತಿಕೊಂಡು ಸ್ಪೀಕರ್ ಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದಾರೆ. ಹಿರಿಯ ವಕೀಲ ಮುಕುಲ್ ರೋಹಟಗಿ ಮೂಲಕ ಅರ್ಜಿ ಸಲ್ಲಿಸಿರುವ ಅತೃಪ್ತರು ಸ್ಪೀಕರ್ ರಮೇಶಕುಮಾರ್ ಸಾಂವಿಧಾನಿಕ ಕರ್ತವ್ಯವನ್ನು ನಿಭಾಯಿಸದೇ ಪಕ್ಷಪಾತ ತೋರುತ್ತಿದ್ದಾರೆಂದು ಅರ್ಜಿಯಲ್ಲಿ ದೂರಿದ್ದಾರೆ.

ಬೆಂಗಳೂರಿನಲ್ಲಿ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು ಕೂಡ ಸ್ಪೀಕರ್ ರಮೇಶ್‍ಕುಮಾರ್ ಬೇಕೆಂತಲೇ ರಾಜೀನಾಮೆ ಅಂಗೀಕಾರವನ್ನು ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಅಜಾದ್, ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಮೈತ್ರಿ ಪಕ್ಷಗಳು ಮೋದಿ ಮತ್ತು ಅಮಿತ್ ಶಾ ತಮ್ಮ ಶಾಸಕರನ್ನು ಮುಂಬೈಯಲ್ಲಿ ಕೂಡಿಟ್ಟಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ.

ಈ ನಡುವೆ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ತಂದೆಯ ರಾಜೀನಾಮೆ ಪತ್ರವನ್ನು ಮತ್ತೊಮ್ಮೆ ಸ್ಪೀಕರ್  ರವರಿಗೆ ಸಲ್ಲಿಸಿ ಬಂದಿದ್ದಾರೆ, ಶಿವರಾಮ್ ಹೆಬ್ಬಾರ್ ರಾಜಿನಾಮೆ ಪತ್ರ ಕ್ರಮಬದ್ಧವಾಗಿಲ್ಲ ಎಂದು ಸ್ಪೀಕರ್ ನಿನ್ನೆ ಹೇಳಿದ್ದರು.

ಅತೃಪ್ತ ಶಾಸಕರ ರಾಜಿನಾಮೆಗೂ ನಮಗೂ ಸಂಬಂಧವಿಲ್ಲ ಎನ್ನುತ್ತಲೇ ಬಂದಿರುವ ಬಿಜೆಪಿ ನಾಯಕರು ಸತತವಾಗಿ ಅವರ ಸಂಪರ್ಕದಲ್ಲಿರುವುದು, ಅವರಿಗೆ ರಕ್ಷಣೆ ಮತ್ತು ಬೆಂಬಲ ನೀಡುತ್ತಿರುವುದು ಪದೇ ಪದೇ ಬಯಲಾಗುತ್ತಿದೆ. ನಿನ್ನೆ ರಾತ್ರಿ ಬಿಜೆಪಿಯ ಆರ್ ಅಶೋಕ್, ಮಾಜಿ ಸ್ಪೀಕರ್ ಬೋಪಯ್ಯ ಮುಂಬೈ ಹೊಟೆಲ್‍ನಲ್ಲಿ ಅತೃಪ್ತ ಶಾಸಕರನ್ನು ಭೇಟಿಯಾಗಿ ಅವರಿಂದ ಬಿಜೆಪಿಗೆ ಬೆಂಬಲದ ಪತ್ರಗಳನ್ನು ಪಡೆದಿದ್ದಾರೆ ಎನ್ನಲಾಗಿದೆ.

ಸಂಜೆವರೆಗೂ ಈ ಎಲ್ಲ ಹೈಡ್ರಾಮಾಗಳು ಮುಂದುವರೆಯುವ ಲಕ್ಷಣಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...