Homeಮುಖಪುಟಛತ್ತೀಸ್‌ಗಡ ಸರ್ಕಾರದಲ್ಲಿ ಬಂಡಾಯ: ಕಾಂಗ್ರೆಸ್‌ಗೆ ಹೊಸ ತಲೆ ನೋವು!

ಛತ್ತೀಸ್‌ಗಡ ಸರ್ಕಾರದಲ್ಲಿ ಬಂಡಾಯ: ಕಾಂಗ್ರೆಸ್‌ಗೆ ಹೊಸ ತಲೆ ನೋವು!

- Advertisement -
- Advertisement -

ಇತ್ತೀಚೆಗಷ್ಟೇ ಪಂಜಾಬ್‌ ಕಾಂಗ್ರೆಸ್‌ನಲ್ಲಿ ಉಂಟಾಗಿದ್ದ ಬಂಡಾಯವನ್ನು ಶಮನಗೊಳಿಸಿದ್ದ ಕಾಂಗ್ರೆಸ್‌ನ ಕೇಂದ್ರ ನಾಯಕತ್ವಕ್ಕೆ ಇದೀಗ ಹೊಸ ತಲೆನೋವು ಶುರುವಾಗಿದೆ. ಛತ್ತೀಸ್‌ಗಡದ ಮುಖ್ಯಮಂತ್ರಿ ಬದಲಾವಣೆಗೆ ಅಲ್ಲಿನ ಆರೋಗ್ಯ ಸಚಿವ ಟಿಎಸ್‌‌ ಸಿಂಗ್ ದಿಯೋ ಒತ್ತಾಯಿಸುತ್ತಿದ್ದಾರೆ. ಒಂದು ವೇಳೆ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗದೆ ಇದ್ದರೆ ಅವರು ಸರ್ಕಾರದಿಂದ ಮಾತ್ರವಲ್ಲ, ಪಕ್ಷವನ್ನೂ ತೊರೆಯಲಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಛತ್ತೀಸ್‌ಗಡದಲ್ಲಿ ಭೂಪೇಶ್‌ ಬಘೇಲ್‌ ನೇತೃತ್ವದ ಕಾಂಗ್ರೆಸ್‌‌‌ ಸರ್ಕಾರ ರಚನೆಯಾಗಿ ಜೂನ್‌ ತಿಂಗಳಿಗೆ ಎರಡು ವರ್ಷಗಳು ತುಂಬಿದೆ. “ಸರ್ಕಾರ ರಚೆನೆಯಾಗುವ ವೇಳೆಗೆ ಎರಡುವರೆ ವರ್ಷಗಳ ನಂತರ ಅಧಿಕಾರವನ್ನು ಹಸ್ತಾಂತರ ಮಾಡುವ ಬಗ್ಗೆ ಒಪ್ಪಂದವಾಗಿತ್ತು. ಮುಖ್ಯಮಂತ್ರಿ ಭೂಪೇಶ್‌ ಅವರೇ ಅದಕ್ಕೆ ಒಪ್ಪಿಕೊಂಡಿದ್ದರು” ಎಂದು ಬಂಡಾಯವೆದ್ದಿರುವ ಕಾಂಗ್ರೆಸ್ ನಾಯಕ ಟಿಎಸ್‌‌ ಸಿಂಗ್ ದಿಯೋ ಪ್ರತಿಪಾದಿಸುತ್ತಿದ್ದಾರೆ.

ಒಂದು ವೇಳೆ ಟಿಎಸ್‌‌ ಸಿಂಗ್ ದಿಯೋ ಅವರಿಗೆ ಅಧಿಕಾರ ಹಸ್ತಾಂತರವಾಗದಿದ್ದರೆ ಅವರು ಸರ್ಕಾರವನ್ನು ಮಾತ್ರವಲ್ಲ, ಕಾಂಗ್ರೆಸ್ ಪಕ್ಷವನ್ನೇ ತೊರೆಯಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಯುವಕನ ಮೇಲೆ ಹಲ್ಲೆಗೈದು, ಮೊಬೈಲ್ ಹೊಡೆದುಹಾಕಿದ ಜಿಲ್ಲಾಧಿಕಾರಿ: ಕ್ರಮಕ್ಕೆ ಮುಂದಾದ ಛತ್ತೀಸ್‌ ಘಡ ಸಿಎಂ

ಆದರೆ ಅವರು ಬಿಜೆಪಿ ಸೇರುವುದಿಲ್ಲವಾದರೂ, ಭೂಪೇಶ್ ಅವರ ಅಡಿಯಲ್ಲಿ ಮಾತ್ರ ಕೆಲಸ ಮಾಡಲು ಸಾಧ್ಯವಿಲ್ಲ. ಪರಿಸ್ಥಿತಿ ಕೈಮೀರುವ ಹಂತದಲ್ಲಿದೆ ಎಂದು ಮೂಲಗಳು ತಿಳಿಸಿದೆ ಎಂದು ವರದಿಯಾಗಿದೆ. ಆದರೆ ಇಬ್ಬರು ನಾಯಕರು ಕೂಡಾ ತಮ್ಮ ಮುಂದಿನ ಯೋಜನೆ ಏನು ಎಂದು ಇದುವರೆಗೂ ಯಾವುದೆ ಮಾಹಿತಿಯನ್ನು ಅಧೀಕೃತವಾಗಿ ಬಿಟ್ಟುಕೊಟ್ಟಿಲ್ಲ.

ಅದಾ‌ಗ್ಯೂ ಇಬ್ಬರೂ ನಾಯಕರೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಭೂಪೇಶ್‌ ಅವರು ರಾಹುಲ್ ಗಾಂಧಿಯನ್ನು ಭೇಟಿಯಾಗುವ ಸಮಯದಲ್ಲಿ ದಿಯೋ ಅವರು ಕೂಡಾ ಇರಲಿದ್ದಾರೆಯೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, “ರಾಹುಲ್ ಗಾಂಧಿ ಜೊತೆಗೆ ಮಾತ್ರ ನಮ್ಮ ಸಭೆ ನಡೆಯಲಿದೆ ಎಂದು ನನಗೆ ಸಿಕ್ಕ ಮಾಹಿತಿ” ಎಂದು ಹೇಳಿದ್ದಾರೆ.

2018 ರಲ್ಲಿ ಛತ್ತೀಸ್‌ಗಡ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ನಂತರ, ಮುಖ್ಯಮಂತ್ರಿ ರೇಸ್‌ನಲ್ಲಿ ಟಿಎಸ್‌‌ ಸಿಂಗ್ ದಿಯೋ ದೇವ ಮತ್ತು ತಾಮ್ರಧ್ವಾಜ್ ಸಾಹು ಮತ್ತು ಭೂಪೇಶ್‌ ಬಘೇಲ್‌ ಇದ್ದರು. ಅಂತಿಮವಾಗಿ ಭೂಪೇಶ್‌ ಮುಖ್ಯಮಂತ್ರಿಯಾಗಿ, ಉಳಿದ ಇಬ್ಬರಿಗೆ ಮಂತ್ರಿ ಸ್ಥಾನಗಳನ್ನು ನೀಡಲಾಗಿತ್ತು.

ಆದಾಗ್ಯೂ ಪಕ್ಷದ ನಾಯಕತ್ವವು ಕೇಳಿದರೆ ತನ್ನ ಸ್ಥಾನದಿಂದ ತಕ್ಷಣವೇ ಕೆಳಗಿಳಿಯುವುದಾಗಿ ಮುಖ್ಯಮಂತ್ರಿ ಭೂಪೇಶ್‌ ಹೇಳುತ್ತಲೆ ಬಂದಿದ್ದಾರೆ.

ಇದನ್ನೂ ಓದಿ: ಬಾಬಾ ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಿಸಿದ ಛತ್ತೀಸ್‌ಗಢ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...