Homeಮುಖಪುಟಮೋದಿ ತನ್ನ ತಪ್ಪು ಒಪ್ಪಿಕೊಂಡರೆ ದೇಶದ ಪುನರ್‌‌ನಿರ್ಮಾಣ ಪ್ರಾರಂಭ: ರಾಹುಲ್ ಗಾಂಧಿ

ಮೋದಿ ತನ್ನ ತಪ್ಪು ಒಪ್ಪಿಕೊಂಡರೆ ದೇಶದ ಪುನರ್‌‌ನಿರ್ಮಾಣ ಪ್ರಾರಂಭ: ರಾಹುಲ್ ಗಾಂಧಿ

ಕೊರೊನಾ ಸಾಂಕ್ರಾಮಿಕ ಸಮಯ ಜಾಗತಿಕ ಬಡತನದ ಹೆಚ್ಚಳದಲ್ಲಿ ಭಾರತವು 57.3% ರಷ್ಟು ಪಾಲನ್ನು ಹೊಂದಿದೆ ಎಂದು ವಿಶ್ವ ಬ್ಯಾಂಕ್‌ ವರದಿ ನೀಡಿತ್ತು.

- Advertisement -
- Advertisement -

ಪ್ರಧಾನಿ ಮೋದಿ ಕೊರೊನಾ ಸಾಂಕ್ರಮಿಕವನ್ನು ನಿರ್ವಹಿಸುವಲ್ಲಿ ಆಗಿರುವ ತನ್ನ ತಪ್ಪುಗಳನ್ನು ಒಪ್ಪಿಕೊಂಡು, ತಜ್ಞರ ಸಹಾಯವನ್ನು ಪಡೆದಾಗ ನಮ್ಮ ದೇಶದ ಪುನರ್‌‌ನಿರ್ಮಾಣ ಪ್ರಾರಂಭವಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ಸಮಯ ಜಾಗತಿಕ ಬಡತನದ ಹೆಚ್ಚಳದಲ್ಲಿ ಭಾರತವು 57.3% ರಷ್ಟು ಪಾಲನ್ನು ಹೊಂದಿದೆ ಎಂದು ವಿಶ್ವ ಬ್ಯಾಂಕ್‌ ವರದಿ ನೀಡಿತ್ತು. ಈ ಅಂಕಿ ಅಂಶಗಳನ್ನು ಅವರು ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಭ್ರಷ್ಟಾಚಾರಿಗಳ ಮೇಲೆ ನಂಬಿಕೆಯೆ ಹೊರತು ರಾಮನ ಮೇಲಲ್ಲ: AAP ಸಂಸದ

ತನ್ನ ಟ್ವೀಟ್‌ನಲ್ಲಿ, ವಿಶ್ವಬ್ಯಾಂಕ್‌ ಬಡನದ ಕುರಿತು ನೀಡಿದ್ದ ವರದಿಯ ಚಿತ್ರವನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, “ಇದು ಭಾರತ ಸರ್ಕಾರವು ಸಾಂಕ್ರಮಿಕವನ್ನು ಕೆಟ್ಟದಾಗಿ ನಿರ್ವಹಿಸಿರುವುದರ ಫಲಿತಾಂಶವಾಗಿದೆ. ಆದರೆ ನಾವೀಗ ಭವಿಷ್ಯದತ್ತ ಗಮನ ಹರಿಸಬೇಕಾಗಿದೆ. ಪ್ರಧಾನಿ ತನ್ನ ತಪ್ಪುಗಳನ್ನು ಒಪ್ಪಿಕೊಂಡು, ತಜ್ಞರ ಸಹಾಯವನ್ನು ಪಡೆದಾಗ ನಮ್ಮ ದೇಶದ ಪುನರ್‌‌ನಿರ್ಮಾಣ ಪ್ರಾರಂಭವಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

ರಾಹುಲ್ ಗಾಂಧಿ, “ಎಲ್ಲವನ್ನೂ ನಿರಾಕರಿಸಿ ಬದುಕುವುದರಿಂದ ಯಾವ ಸಮಸ್ಯೆಯು ಪರಿಹಾರವಾಗುವುದಿಲ್ಲ” ಎಂದು ಹೇಳಿದ್ದಾರೆ.

ವಿಶ್ವಬ್ಯಾಂಕ್‌ ತನ್ನ ವರದಿಯಲ್ಲಿ, ಜಾಗತಿಕವಾಗಿ ಬಡತನ ರೇಖೆಗಿಂತ ಕೆಳಗಿರುವ ಹಾಗೂ ಮಧ್ಯಮ ಆದಾಯದ ಗುಂಪಿನಿಂದ ಹೊರಗುಳಿದ ಜನರ ಅಂದಾಜು ಅಂಕಿ ಅಂಶವನ್ನು ನೀಡಿದೆ. ಇದರಲ್ಲಿ ಹೆಚ್ಚಿನ ಕೊಡುಗೆ ಭಾರತದ್ದೆ ಆಗಿದೆ ಎಂದು ಅದು ಉಲ್ಲೇಖಿಸಿದೆ.

ವರದಿಯ ಪ್ರಕಾರ ಸಾಂಕ್ರಮಿಕದ ಸಮಯದಲ್ಲಿ ಜಗತ್ತಿನ 13.1 ಕೋಟಿ ಜನರು ಬಡತನ ರೇಖೆಗಿಂತ ಕೆಳಗಿದ್ದು, ಇದರಲ್ಲಿ 7.5 ಕೋಟಿ ಜನರು ಭಾರತದ ಜನರೆ ಆಗಿದ್ದಾರೆ(57.3%). ಹಾಗೆಯೆ ಸಾಂಕ್ರಮಿಕದ ಸಮಯದಲ್ಲಿ ಜಗತ್ತಿನ 5.4 ಕೋಟಿ ಜನರು ಮಧ್ಯಮ ಆದಾಯದ ಗುಂಪಿನಿಂದ ಹೊರಹೋಗಿದ್ದಾರೆ. ಇದರಲ್ಲಿ 3.5 ಕೋಟಿ ಜನರು ಭಾರತೀಯರಾಗಿದ್ದಾರೆ(59.3%).

ಇದನ್ನೂ ಓದಿ: ಕೋವಿಡ್ 2ನೇ ಅಲೆಯಿಂದ ಆರ್ಥಿಕತೆಗೆ 2 ಲಕ್ಷ ಕೋಟಿ ರೂ ನಷ್ಟ: RBI ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...