Homeಅಂತರಾಷ್ಟ್ರೀಯಪಾಕಿಸ್ತಾನದಲ್ಲಿ ಮೂಲಭೂತವಾದಿ ಮುಸ್ಲಿಮರಿಂದ ಧ್ವಂಸಗೊಂಡಿದ್ದ ಹಿಂದೂ ದೇವಾಲಯ ಪುನರ್‌ನಿರ್ಮಾಣ: ಮುಖ್ಯ ನ್ಯಾಯಮೂರ್ತಿಗಳಿಂದ ಉದ್ಘಾಟನೆ

ಪಾಕಿಸ್ತಾನದಲ್ಲಿ ಮೂಲಭೂತವಾದಿ ಮುಸ್ಲಿಮರಿಂದ ಧ್ವಂಸಗೊಂಡಿದ್ದ ಹಿಂದೂ ದೇವಾಲಯ ಪುನರ್‌ನಿರ್ಮಾಣ: ಮುಖ್ಯ ನ್ಯಾಯಮೂರ್ತಿಗಳಿಂದ ಉದ್ಘಾಟನೆ

2020ರ ಡಿಸೆಂಬರ್‌ 30 ರಂದು ಶ್ರೀ ಪರಮ್ ಹನ್ಸ್ ಮಹಾರಾಜ್ ದೇವಾಲಯವನ್ನು ಜಮೈತ್ ಉಲೆಮಾ ಎ ಇಸ್ಲಾಂ ಫಜ್ಲ್ ಮೂಲಭೂತವಾದಿ ಪಕ್ಷದ ಸದಸ್ಯರ ನೇತೃತ್ವದಲ್ಲಿ ಗುಂಪೊಂದು ಧ್ವಂಸಗೊಳಿಸಿ, ಬೆಂಕಿ ಹಚ್ಚಿತ್ತು.

- Advertisement -
- Advertisement -

ಕಳೆದ ವರ್ಷದ ಡಿಸೆಂಬರ್‌ನಲ್ಲಿ ಪಾಕಿಸ್ತಾನದ ಖೈಬರ್ ಪಾಖ್ತುನ್‌‌‌ಖ್ವಾ ಪ್ರಾಂತ್ಯದಲ್ಲಿ ಮೂಲಭೂತವಾದಿ ಮುಸ್ಲಿಮರಿಂದ ಧ್ವಂಸಗೊಂಡಿದ್ದ ಶತಮಾನಗಳಷ್ಟು ಹಳೆಯದಾದ ಹಿಂದೂ ದೇವಾಲಯವನ್ನು ಪುನರ್ ನಿರ್ಮಾಣ ಮಾಡಲಾಗಿದೆ. ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್‌ರವರು ನೂತನ ದೇವಾಲಯಗಳ ಉದ್ಘಾಟನೆ ನೆರವೇರಿಸಿದ್ದಾರೆ.

2020ರ ಡಿಸೆಂಬರ್‌ 30 ರಂದು ಶ್ರೀ ಪರಮ್ ಹನ್ಸ್ ಮಹಾರಾಜ್ ದೇವಾಲಯವನ್ನು ಜಮೈತ್ ಉಲೆಮಾ ಎ ಇಸ್ಲಾಂ ಫಜ್ಲ್ ಮೂಲಭೂತವಾದಿ ಪಕ್ಷದ ಸದಸ್ಯರ ನೇತೃತ್ವದಲ್ಲಿ ಗುಂಪೊಂದು ಧ್ವಂಸಗೊಳಿಸಿ, ಬೆಂಕಿ ಹಚ್ಚಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಪಾಕಿಸ್ತಾನ ಪೊಲೀಸರು 350 ಕ್ಕೂ ಹೆಚ್ಚು ಜನರ ಮೇಲೆ ಎಫ್‌ಐಆರ್‌ ದಾಖಲಿಸಿದ್ದು 55ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.

ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್ ದಾಳಿಯ ಬಗ್ಗೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ, ಪ್ರಕರಣದ ವಿಚಾರಣೆ ನಡೆಸಿದ್ದರು. ದಾಳಿಯನ್ನು ತೀವ್ರವಾಗಿ ಖಂಡಿಸಿದ್ದ ಅವರು ಎರಡು ವಾರಗಳ ಅವಧಿಯಲ್ಲಿ ದೇವಾಲಯ ಪುನರ್‌ನಿರ್ಮಾಣಕ್ಕೆ ಮುಂದಾಗಬೇಕೆಂದು ಪ್ರಾಂತೀಯ ಸರ್ಕಾರಕ್ಕೆ ಆದೇಶಿಸಿದ್ದರು. ಈ ಘಟನೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಕೆಟ್ಟ ಹೆಸರು ತಂದಿದ್ದು ದಾಳಿಕೋರರಿಂದಲೇ ದೇವಾಲಯ ನಿರ್ಮಾಣದ ಹಣ ವಸೂಲಿ ಮಾಡಬೇಕೆಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದ್ದರು.

ಸೋಮವಾರ ನಡೆದ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್‌ ರವರು ಭಾಗವಹಿಸಿದ್ದರು. ದೀಪಾವಳಿ ಹಬ್ಬದೊಂದಿಗೆ ಅದ್ದೂರಿಯಾಗಿ ದೇವಾಲಯದಲ್ಲಿ ಪೂಜೆಗಳು ಜರುಗಿವೆ. ಪಾಕಿಸ್ತಾನದಲ್ಲಿರುವ ಹಿಂದೂ ಧರ್ಮೀಯರೊಂದಿಗೆ ಐಕ್ಯಮತ್ಯ ಘೋಷಿಸುತ್ತೇವೆ ಎಂದು ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದ್ದಾರೆ.

ಈ ವೇಳೆ ಮಾತನಾಡಿರುವ ಅವರು, “ಪಾಕಿಸ್ತಾನದ ಸುಪ್ರೀಂ ಕೋರ್ಟ್ ಯಾವಾಗಲೂ ಅಲ್ಪಸಂಖ್ಯಾತರರ ಹಕ್ಕುಗಳನ್ನು ರಕ್ಷಿಸುವ ಕ್ರಮಗಳನ್ನು ಕೈಗೊಂಡಿದೆ. ಮುಂದೆಯೂ ಅದನ್ನು ಕಾಪಾಡಲಿದೆ. ನಮ್ಮ ಸಂವಿಧಾನದ ಪ್ರಕಾರ ಹಿಂದೂಗಳು ಇತರ ಧರ್ಮೀಯರು ಹೊಂದಿರುವ ಎಲ್ಲಾ ಧಾರ್ಮಿಕ ಹಕ್ಕುಗಳನ್ನು ಹೊಂದಿದ್ದಾರೆ” ಎಂದಿದ್ದಾರೆ ಎಂದು ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಪಾಕಿಸ್ತಾನದಲ್ಲಿ ಮತ್ತೊಬ್ಬರ ಧಾರ್ಮಿಕ ಹಕ್ಕುಗಳ ಮೇಲೆ ದಾಳಿ ನಡೆಸುವ ಅಧಿಕಾರ ಯಾರಿಗೂ ಇಲ್ಲ. ಸುಪ್ರೀಂ ಕೋರ್ಟ್ ಎಲ್ಲಾ ಅಲ್ಪಸಂಖ್ಯಾತರ ಧಾರ್ಮಿಕ ಸ್ವಾತಂತ್ರ್ಯವನ್ನು ರಕ್ಷಿಸುತ್ತದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಪಾಕಿಸ್ತಾನ್ ಹಿಂದೂ ಕೌನ್ಸಿಲ್ ಮತ್ತು ಹಿಂದೂ ಸಮುದಾಯದ ಭಕ್ತಾದಿಗಳು ಮುಖ್ಯ ನ್ಯಾಯಮೂರ್ತಿಗಳಿಗೆ ಪೇಟ ತೊಡಿಸಿ, ಡಿಜಿಟಲ್ ಕುರಾನ್ ಅನ್ನು ಉಡುಗೊರೆಯಾಗಿ ನೀಡಿ ಗೌರವಿಸಿದ್ದಾರೆ.

ಸರ್ಕಾರವು ಹಾನಿಗೊಳಗಾದ ದೇವಾಲಯ ಮತ್ತು ಸಮಾಧಿಯನ್ನು ಆದಷ್ಟು ಕಡಿಮೆ ಸಮಯದಲ್ಲಿ ಪುನರ್‌ ನಿರ್ಮಿಸುವುದಾಗಿ ಭರವಸೆ ನೀಡುತ್ತೇವೆ. ಪ್ರಾಂತ್ಯದಲ್ಲಿ ಧಾರ್ಮಿಕ ಸಹಿಷ್ಣುತೆಯನ್ನು ಕಾಪಾಡಲಾಗುವುದು ಎಂದು ಖೈಬರ್ ಪಾಖ್ತುನ್‌‌ಟ್ವಾ ಮುಖ್ಯಮಂತ್ರಿ ಮಹಮೂದ್ ಖಾನ್ ಈ ಹಿಂದೆ ಹೇಳಿದ್ದರು.


ಇದನ್ನೂ ಓದಿ: ಇರುಳಿಗರ ನೋವಿಗೆ ಕೊನೆ ಯಾವಾಗ? ವ್ಯಕ್ತಿ ಸಾವಿನ ಬಳಿಕ ಸ್ಥಳಕ್ಕೆ ಅಧಿಕಾರಿಗಳು ದೌಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...