Homeಮುಖಪುಟಯೇಸುವಿನ ಜೀವನ ಬೋಧನೆ ಸ್ಮರಿಸುತ್ತೇವೆ: ಪ್ರಧಾನಿ ಮೋದಿ ಟ್ವೀಟ್‌

ಯೇಸುವಿನ ಜೀವನ ಬೋಧನೆ ಸ್ಮರಿಸುತ್ತೇವೆ: ಪ್ರಧಾನಿ ಮೋದಿ ಟ್ವೀಟ್‌

ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕೀಯ ನಾಯಕರು ಕ್ರಿಸ್ಮಸ್ ಹಬ್ಬದ ಶುಭಕೋರಿದ್ದಾರೆ.

- Advertisement -
- Advertisement -

ಕೋವಿಡ್‌ ಕಾರಣದಿಂದಾಗಿ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಬಂಧ ಹೇರಿರುವುದರ ನಡುವೆ ಕ್ರಿಸ್ಮಸ್ ಆಚರಣೆಯಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಕ್ರಿಸ್ಮಸ್ ಹಬ್ಬದ ಶುಭಕೋರಿದ್ದಾರೆ.

ಟ್ವೀಟ್ ಮೂಲಕ ಶುಭಕೋರಿರುವ ಪ್ರಧಾನಿ ಮೋದಿ, “ಎಲ್ಲರಿಗೂ ಕ್ರಿಸ್‌ಮಸ್ ಶುಭಾಶಯಗಳು! ಸೇವೆ, ದಯೆ ಮತ್ತು ನಮ್ರತೆಗೆ ಹೆಚ್ಚಿನ ಒತ್ತು ನೀಡಿದ ಯೇಸು ಕ್ರಿಸ್ತನ ಜೀವನ, ಉದಾತ್ತ ಬೋಧನೆಗಳನ್ನು ನಾವು ಸ್ಮರಿಸುತ್ತೇವೆ. ಎಲ್ಲರೂ ಆರೋಗ್ಯವಂತರಾಗಿ ಮತ್ತು ಸಮೃದ್ಧರಾಗಿರಲಿ. ನಮ್ಮ ಸುತ್ತಮುತ್ತ ಸಾಮರಸ್ಯವಿರಲಿ” ಎಂದು ತಿಳಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಟ್ವೀಟ್‌ ಮಾಡಿದ್ದು, “ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಕಾಮನೆಗಳು. ಎಲ್ಲರಿಗೂ ಸಂತಸ, ಉತ್ತಮ ಆರೋಗ್ಯ, ಯಶಸ್ಸು ದೊರೆಯಲಿ, ಸಾಂಕ್ರಾಮಿಕದ ಸಂಕಷ್ಟಗಳೆಲ್ಲ ಪರಿಹಾರವಾಗಲಿ ಎಂದು ದೇವರಲ್ಲಿ ವಿಶೇಷವಾಗಿ ಪ್ರಾರ್ಥಿಸೋಣ. ಎಲ್ಲರೂ ಕೋವಿಡ್-ಸೂಕ್ತ ನಡವಳಿಕೆಗಳನ್ನು ಪಾಲಿಸುತ್ತಾ ಹಬ್ಬವನ್ನಾಚರಿಸೋಣ” ಎಂದಿದ್ದಾರೆ.

ಬಿಜೆಪಿ ಕರ್ನಾಟಕ ಟ್ವೀಟರ್‌ ಅಕೌಂಟ್ ಮೂಲಕವೂ ಕ್ರಿಸ್ಮಸ್ ಹಬ್ಬದ ಶುಭಕೋರಲಾಗಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, “ಶಾಂತಿ, ಪ್ರೀತಿ, ದಯೆ ಮತ್ತು ಕ್ಷಮಾ ಗುಣಗಳಿಂದ ಮಾಡುವ ಜನರ ಸೇವೆಯಿಂದ ದೇವರನ್ನು ಕಾಣಲು ಸಾಧ್ಯ ಎಂಬ ಜೀಸಸ್ ಕ್ರೈಸ್ತನ ಅರ್ಥಪೂರ್ಣ ಸಂದೇಶ ನಮ್ಮ ದಾರಿಗೆ ಬೆಳಕಾಗಿ ನಮ್ಮನ್ನು ಮುನ್ನಡೆಸಲಿ. ನಾಡಿನ ಕ್ರೈಸ್ತ ಬಂಧುಗಳಿಗೆ ಹಾರ್ದಿಕ ಶುಭಾಶಯಗಳು” ಎಂದು ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಕ್ರಿಸ್ಮಸ್‌ ಶುಭಕೋರಿದ್ದಾರೆ.

ಓಮೈಕ್ರಾನ್‌ ರೂಪಾಂತರದ ತಳಿಯ ಸೋಂಕು ಹೆಚ್ಚಿತ್ತಿರುವ ನಡುವೆ ಕ್ರಿಸ್ಮಸ್ ಹಬ್ಬ ಬಂದಿದೆ. ಇದರಿಂದಾಗಿ ಹಲವೆಡೆ ನಿರ್ಬಂಧಗಳನ್ನು ಹಾಕಲಾಗಿದೆ.

ರಾತ್ರಿ 9ರಿಂದ ಬೆಳಿಗ್ಗೆ 6ರವರೆಗೆ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಭೆಗಳನ್ನು ನಡೆಸದಿರಲು ಮಹಾರಾಷ್ಟ್ರ ಸರ್ಕಾರ ಸೂಚಿಸಿದೆ. ಹರಿಯಾಣ ಮತ್ತು ದೆಹಲಿಯಲ್ಲೂ ನಿರ್ಬಂಧಗಳನ್ನು ಹೇರಲಾಗಿದೆ. ಆದರೆ ದೆಹಲಿಯಲ್ಲಿ ಪೂಜಾ ಸ್ಥಳಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

ರಜೆ ದಿನದ ಪ್ರವಾಸವನ್ನು ಕೈಗೊಳ್ಳಲು ಕೋವಿಡ್ ಅಡ್ಡಿಯಾಗಿದೆ. ವಿಶ್ವದಾದ್ಯಂತ 2,300ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಟ್ರ್ಯಾಕಿಂಗ್ ವೆಬ್‌ಸೈಟ್ Flightaware.com ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.


ಇದನ್ನೂ ಓದಿರಿ: ಶಾಲೆಗೆ ನುಗ್ಗಿ ಕ್ರಿಸ್‌ಮಸ್ ಆಚರಿಸದಂತೆ ಬೆದರಿಸಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...