Homeಮುಖಪುಟಯೇಸುವಿನ ಜೀವನ ಬೋಧನೆ ಸ್ಮರಿಸುತ್ತೇವೆ: ಪ್ರಧಾನಿ ಮೋದಿ ಟ್ವೀಟ್‌

ಯೇಸುವಿನ ಜೀವನ ಬೋಧನೆ ಸ್ಮರಿಸುತ್ತೇವೆ: ಪ್ರಧಾನಿ ಮೋದಿ ಟ್ವೀಟ್‌

ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕೀಯ ನಾಯಕರು ಕ್ರಿಸ್ಮಸ್ ಹಬ್ಬದ ಶುಭಕೋರಿದ್ದಾರೆ.

- Advertisement -
- Advertisement -

ಕೋವಿಡ್‌ ಕಾರಣದಿಂದಾಗಿ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಬಂಧ ಹೇರಿರುವುದರ ನಡುವೆ ಕ್ರಿಸ್ಮಸ್ ಆಚರಣೆಯಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಕ್ರಿಸ್ಮಸ್ ಹಬ್ಬದ ಶುಭಕೋರಿದ್ದಾರೆ.

ಟ್ವೀಟ್ ಮೂಲಕ ಶುಭಕೋರಿರುವ ಪ್ರಧಾನಿ ಮೋದಿ, “ಎಲ್ಲರಿಗೂ ಕ್ರಿಸ್‌ಮಸ್ ಶುಭಾಶಯಗಳು! ಸೇವೆ, ದಯೆ ಮತ್ತು ನಮ್ರತೆಗೆ ಹೆಚ್ಚಿನ ಒತ್ತು ನೀಡಿದ ಯೇಸು ಕ್ರಿಸ್ತನ ಜೀವನ, ಉದಾತ್ತ ಬೋಧನೆಗಳನ್ನು ನಾವು ಸ್ಮರಿಸುತ್ತೇವೆ. ಎಲ್ಲರೂ ಆರೋಗ್ಯವಂತರಾಗಿ ಮತ್ತು ಸಮೃದ್ಧರಾಗಿರಲಿ. ನಮ್ಮ ಸುತ್ತಮುತ್ತ ಸಾಮರಸ್ಯವಿರಲಿ” ಎಂದು ತಿಳಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಟ್ವೀಟ್‌ ಮಾಡಿದ್ದು, “ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಕಾಮನೆಗಳು. ಎಲ್ಲರಿಗೂ ಸಂತಸ, ಉತ್ತಮ ಆರೋಗ್ಯ, ಯಶಸ್ಸು ದೊರೆಯಲಿ, ಸಾಂಕ್ರಾಮಿಕದ ಸಂಕಷ್ಟಗಳೆಲ್ಲ ಪರಿಹಾರವಾಗಲಿ ಎಂದು ದೇವರಲ್ಲಿ ವಿಶೇಷವಾಗಿ ಪ್ರಾರ್ಥಿಸೋಣ. ಎಲ್ಲರೂ ಕೋವಿಡ್-ಸೂಕ್ತ ನಡವಳಿಕೆಗಳನ್ನು ಪಾಲಿಸುತ್ತಾ ಹಬ್ಬವನ್ನಾಚರಿಸೋಣ” ಎಂದಿದ್ದಾರೆ.

ಬಿಜೆಪಿ ಕರ್ನಾಟಕ ಟ್ವೀಟರ್‌ ಅಕೌಂಟ್ ಮೂಲಕವೂ ಕ್ರಿಸ್ಮಸ್ ಹಬ್ಬದ ಶುಭಕೋರಲಾಗಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, “ಶಾಂತಿ, ಪ್ರೀತಿ, ದಯೆ ಮತ್ತು ಕ್ಷಮಾ ಗುಣಗಳಿಂದ ಮಾಡುವ ಜನರ ಸೇವೆಯಿಂದ ದೇವರನ್ನು ಕಾಣಲು ಸಾಧ್ಯ ಎಂಬ ಜೀಸಸ್ ಕ್ರೈಸ್ತನ ಅರ್ಥಪೂರ್ಣ ಸಂದೇಶ ನಮ್ಮ ದಾರಿಗೆ ಬೆಳಕಾಗಿ ನಮ್ಮನ್ನು ಮುನ್ನಡೆಸಲಿ. ನಾಡಿನ ಕ್ರೈಸ್ತ ಬಂಧುಗಳಿಗೆ ಹಾರ್ದಿಕ ಶುಭಾಶಯಗಳು” ಎಂದು ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಕ್ರಿಸ್ಮಸ್‌ ಶುಭಕೋರಿದ್ದಾರೆ.

ಓಮೈಕ್ರಾನ್‌ ರೂಪಾಂತರದ ತಳಿಯ ಸೋಂಕು ಹೆಚ್ಚಿತ್ತಿರುವ ನಡುವೆ ಕ್ರಿಸ್ಮಸ್ ಹಬ್ಬ ಬಂದಿದೆ. ಇದರಿಂದಾಗಿ ಹಲವೆಡೆ ನಿರ್ಬಂಧಗಳನ್ನು ಹಾಕಲಾಗಿದೆ.

ರಾತ್ರಿ 9ರಿಂದ ಬೆಳಿಗ್ಗೆ 6ರವರೆಗೆ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಭೆಗಳನ್ನು ನಡೆಸದಿರಲು ಮಹಾರಾಷ್ಟ್ರ ಸರ್ಕಾರ ಸೂಚಿಸಿದೆ. ಹರಿಯಾಣ ಮತ್ತು ದೆಹಲಿಯಲ್ಲೂ ನಿರ್ಬಂಧಗಳನ್ನು ಹೇರಲಾಗಿದೆ. ಆದರೆ ದೆಹಲಿಯಲ್ಲಿ ಪೂಜಾ ಸ್ಥಳಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

ರಜೆ ದಿನದ ಪ್ರವಾಸವನ್ನು ಕೈಗೊಳ್ಳಲು ಕೋವಿಡ್ ಅಡ್ಡಿಯಾಗಿದೆ. ವಿಶ್ವದಾದ್ಯಂತ 2,300ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಟ್ರ್ಯಾಕಿಂಗ್ ವೆಬ್‌ಸೈಟ್ Flightaware.com ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.


ಇದನ್ನೂ ಓದಿರಿ: ಶಾಲೆಗೆ ನುಗ್ಗಿ ಕ್ರಿಸ್‌ಮಸ್ ಆಚರಿಸದಂತೆ ಬೆದರಿಸಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....