Homeಕರ್ನಾಟಕನಮ್ಮ ಶಾಸಕರಿಗೆ ಕುಮಾರಸ್ವಾಮಿ ಆಫರ್, ಧಮಕಿ ಬಗ್ಗೆ ಮಾಹಿತಿ ಬಂದಿದೆ: ಡಿಸಿಎಂ ಡಿ.ಕೆ ಶಿವಕುಮಾರ್

ನಮ್ಮ ಶಾಸಕರಿಗೆ ಕುಮಾರಸ್ವಾಮಿ ಆಫರ್, ಧಮಕಿ ಬಗ್ಗೆ ಮಾಹಿತಿ ಬಂದಿದೆ: ಡಿಸಿಎಂ ಡಿ.ಕೆ ಶಿವಕುಮಾರ್

- Advertisement -
- Advertisement -

“ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಕುಮಾರಸ್ವಾಮಿ ಯಾರಿಗೆ ಫೋನ್ ಮಾಡಿ ಏನು ಮಾತನಾಡುತ್ತಿದ್ದಾರೆ, ಯಾರಿಗೆ ಧಮಕಿ ಹಾಕುತ್ತಿದ್ದಾರೆ ಎಲ್ಲವೂ ನಮಗೆ ತಿಳಿಯುತ್ತಿದೆ. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು ಅವರು ತಮ್ಮ ಮನೆ ಸರಿಪಡಿಸಿಕೊಳ್ಳಲಿ. ಈಗ ಇದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದರು.

ವಿರೋಧ ಪಕ್ಷಗಳು ಅಡ್ಡ ಮತದಾನದ ಪ್ರಯತ್ನ ಮಾಡುತ್ತಿವೆಯಾ? ಎಂದು ಕೇಳಿದಾಗ, “ಸುಮ್ಮನೆ ಐದನೇ ಅಭ್ಯರ್ಥಿ ಕಣಕ್ಕಿಳಿಸುತ್ತಾರಾ? ಒಂದು ಪ್ರಯತ್ನ ಮಾಡೋಣ ಎಂದು ಹಾಕಿದ್ದಾರೆ. ಮತದಾನದ ದಿನ ಎಲ್ಲವೂ ಗೊತ್ತಾಗಲಿದೆ” ಎಂದು ಹೇಳಿದರು.

ವಿರೋಧ ಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುತ್ತೀರಾ? ಎಂದು ಕೇಳಿದಾಗ, “ನಮಗೆ ಅದರ ಅಗತ್ಯವಿಲ್ಲ. ಜನ ನಮಗೆ 136 ಸೀಟುಗಳನ್ನು ನೀಡಿದ್ದಾರೆ. 2 ಕ್ಷೇತ್ರದ ಪಕ್ಷೇತರರು ನಮ್ಮ ಜತೆಗಿದ್ದಾರೆ. ನಮ್ಮ ಜತೆ ಇರುವ ಬೇರೆಯವರ ಬಗ್ಗೆ ಈಗ ಮಾತನಾಡುವುದಿಲ್ಲ. ಮತದಾನದ ನಂತರ ಮಾತನಾಡುತ್ತೇವೆ” ಎಂದು ತಿಳಿಸಿದರು.

ಶಾಸಕರಾದ ಸೋಮಶೇಖರ್, ಗೋಪಾಲಯ್ಯ ಜೊತೆ ವೈಯಕ್ತಿಕ ಬಾಂಧವ್ಯವಿದೆ:

ಸೋಮಶೇಖರ್ ಅವರ ಜೊತೆ ವಿಮಾನ ಪ್ರಯಾಣ ಹಾಗೂ ಗೋಪಾಲಯ್ಯ ಅವರ ಭೇಟಿ ವಿಚಾರವಾಗಿ ಕೇಳಿದಾಗ, “ಸೋಮಶೇಖರ್ ಹಾಗೂ ಗೋಪಾಲಯ್ಯ ಅವರ ಜೊತೆ ವೈಯಕ್ತಿಕ ಸ್ನೇಹ, ಸಂಬಂಧಗಳಿವೆ ಎಂದರು. ಸೋಮಶೇಖರ್ ಅವರು ಪದೇ ಪದೆ ನಿಮ್ಮ ಜೊತೆ ಗುರುತಿಸಿಕೊಳ್ಳುತ್ತಿದ್ದಾರೆ ಎಂದು ಕೇಳಿದಾಗ, “ಗುರುತಿಸಿಕೊಳ್ಳುವುದಲ್ಲ. ಅವರು ಕೇವಲ ಮೂರು ವರ್ಷ ಮಾತ್ರ ಬೇರೆ ಕಡೆ ಹೋಗಿದ್ದಾರೆ. ಆದರೆ 35 ವರ್ಷಗಳಿಂದ ನಾವು ರಾಜಕೀಯವಾಗಿ ಜೊತೆಗಿದ್ದೇವೆ” ಎಂದು ಹೇಳಿದರು.

ಕಮಲನಾಥ್ ಸೇರಿದಂತೆ ಯಾರೂ ಬಿಜೆಪಿ ಸೇರಲ್ಲ:

“ಬಿಜೆಪಿ ಬರೀ ಸುಳ್ಳನ್ನು ಪ್ರಚಾರ ಮಾಡಿಕೊಂಡೆ ಇರುತ್ತದೆ. ಕಮಲನಾಥ್ ಅವರು ಬಹಳ ಹಿರಿಯ ನಾಯಕರು. ಅವರು ಈಗಷ್ಟೇ ಚುನಾವಣೆ ಮುಗಿಸಿದ್ದಾರೆ. ಅವರು ಎಲ್ಲೂ ಬಿಜೆಪಿ ಸೇರುವುದಾಗಿ ಹೇಳಿಲ್ಲ. ಆದರೂ ಅವರು ಬಿಜೆಪಿ ಸೇರುತ್ತಾರೆ ಎಂದು ಸುಳ್ಳು ಹರಡುತ್ತಿದ್ದಾರೆ. ಬೇರೆಯವರ ಹೆಸರೂ ಸೇರಿಸಿದ್ದಾರೆ. ಕಮಲನಾಥ್ ಅವರು 50 ವರ್ಷಗಳ ರಾಜಕಾರಣದಲ್ಲಿ ಗಾಂಧಿ ಕುಟುಂಬದ ಜೊತೆ ಒಡನಾಟ ಇಟ್ಟುಕೊಂಡು ಪಕ್ಷ ಕಟ್ಟಿದ್ದಾರೆ. ಇಂತಹವರು ಬಿಜೆಪಿ ಸೇರುತ್ತಾರೆ ಎಂದು ಸುಳ್ಳು ಹೇಳಿ ಅವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

“ಕಳೆದ 35 ವರ್ಷಗಳಿಂದ ನನಗೆ ಕಮಲನಾಥ್ ಅವರು ಪರಿಚಯವಿದ್ದಾರೆ. ಅವರು ಸಿದ್ಧಾಂತ, ಮೌಲ್ಯಗಳ ವ್ಯಕ್ತಿ. ಸಿದ್ಧಾಂತ ಬಿಟ್ಟು ಈ ವಯಸ್ಸಿನಲ್ಲಿ ಕಾಂಗ್ರೆಸ್ ಯಾಕೆ ತೊರೆಯುತ್ತಾರೆ? ಇನ್ನು ಮನೀಶ್ ತಿವಾರಿ ಅವರೂ ಕೂಡ ಕಾಂಗ್ರೆಸ್ ಪಕ್ಷದ ಪ್ರಮುಖ ಸಂಘಟಕರು. ಇವರೆಲ್ಲರೂ ಕಾಂಗ್ರೆಸ್ ಪಕ್ಷದ ನಾಯಕರು. ಕಮಲನಾಥ್ ಅವರೂ ಸೇರಿದಂತೆ ಯಾರೊಬ್ಬರು ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ. ಕಾಂಗ್ರೆಸ್ ಪಕ್ಷ ಯಾವುದೇ ಒಬ್ಬ ನಾಯಕ ಮೇಲೆ ಅವಲಂಬಿತವಾಗಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಕಾರ್ಯಕರ್ತರ ಬುನಾದಿ ಇದೆ. ಗಾಂಧಿ ಕುಟುಂಬ ಇರುವವರೆಗೂ ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿರಲಿದೆ. ಕಾಂಗ್ರೆಸ್ ಪಕ್ಷ ಇರುವವರೆಗೂ ದೇಶ ಒಗ್ಗಟ್ಟಾಗಿರಲಿದೆ” ಎಂದರು.

ಬಿಜೆಪಿ ಬಲಿಷ್ಠವಾಗಿದ್ದರೆ ಕಾಂಗ್ರೆಸ್ ನಾಯಕರನ್ನು ಯಾಕೆ ಸೆಳೆಯುತ್ತಿದ್ದಾರೆ?

“ಬಿಜೆಪಿ ಬಲಿಷ್ಠವಾಗಿದ್ದರೆ ಕಾಂಗ್ರೆಸ್ ನಾಯಕರನ್ನು ಸೆಳೆಯುತ್ತಿರುವುದೇಕೆ? ಬಿಜೆಪಿ ದುರ್ಬಲವಾಗಿರುವುದಕ್ಕೆ ಕಾಂಗ್ರೆಸ್ ನಾಯಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಧಾನ ಮಂತ್ರಿಗಳು ಈ ಚುನಾವಣೆಯಲ್ಲಿ 370 ಕ್ಷೇತ್ರ ಗೆಲ್ಲುವುದಾಗಿ ಹೇಳಿದ್ದಾರೆ. ಬಿಜೆಪಿ ಅಷ್ಟು ಕ್ಷೇತ್ರ ಗೆಲ್ಲುವುದು ನಿಜವೇ ಆದರೆ ಕಾಂಗ್ರೆಸ್ ನಾಯಕರನ್ನು ಯಾಕೆ ಸೆಳೆಯುತ್ತಿದ್ದಾರೆ? ಯಾರು ಗೆಲ್ಲಬೇಕು ಎಂದು ಜನ ತೀರ್ಮಾನಿಸಲಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಹೈಕಮಾಂಡ್ ತೀರ್ಮಾನ ಎಲ್ಲರೂ ಪಾಲಿಸಬೇಕು:

ಸಚಿವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಕೇಳಿದಾಗ, “ಲೋಕಸಭೆ ಚುನಾವಣೆಯಲ್ಲಿ ಯಾರು ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ. ಪಕ್ಷದ ತೀರ್ಮಾನವನ್ನು ನಾನು ಸೇರಿದಂತೆ ಎಲ್ಲರೂ ಪಾಲಿಸಬೇಕು. ನಾವೆಲ್ಲ ಒಟ್ಟಾಗಿ ಕೆಲಸ ಮಾಡಿ ಹೆಚ್ಚಿನ ಕ್ಷೇತ್ರದಲ್ಲಿ ಪಕ್ಷ ಗೆಲ್ಲುವಂತೆ ಮಾಡಬೇಕು” ಎಂದು ಹೇಳಿದರು.

ಕುವೆಂಪು ಅವರ ತತ್ವ ಸಿದ್ಧಾಂತ ಪಾಲನೆ, ಪ್ರಚಾರ ಮಾಡುತ್ತಿರುವವರು ನಾವು :

ಶಾಲೆಗಳಲ್ಲಿ ಘೋಷವಾಕ್ಯ ಬದಲಾವಣೆ ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ನನಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಾವು ಕುವೆಂಪು ಅವರ ಆಚಾರ, ವಿಚಾರ ಪ್ರಚಾರ ಮಾಡುತ್ತಿದ್ದೇವೆ. ಕುವೆಂಪು ಅವರ “ಭಾರತ ಜನನಿಯ ತನುಜಾತೆ…”, “ಸರ್ವಜನಾಂಗದ ಶಾಂತಿಯ ತೋಟ…” ಸಂದೇಶವನ್ನು ಪ್ರತಿನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಜ್ಯದ ಜನರಿಗೆ ಹೇಳುತ್ತಾ ಬಂದಿದ್ದೇವೆ. ಕುವೆಂಪು ಅವರ ತತ್ವ ಸಿದ್ಧಾಂತಗಳನ್ನು ನಾವು ಪಾಲಿಸಿ ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಹೀಗಾಗಿ ಎಲ್ಲದರಲ್ಲೂ ತಪ್ಪು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಜನರ ಬದುಕಿನ ಬಗ್ಗೆ ಯೋಚಿಸುವುದಿಲ್ಲ, ಭಾವನೆ ಬಗ್ಗೆ ಮಾತ್ರ ಆಲೋಚಿಸಿ ಸಮಾಜ ಕೆಡಿಸುವ ಕೆಲಸ ಮಾಡುತ್ತಾರೆ” ಎಂದರು.

ಬರ ನಿರ್ವಹಣೆಗೆ ಅಗತ್ಯ ಕ್ರಮ:

ಬರದಿಂದಾಗಿ ನೀರಿನ ಕೊರತೆ ವಿಚಾರವಾಗಿ ಕೇಳಿದಾಗ, “ಬರ ಪರಿಸ್ಥಿತಿಯಿಂದಾಗ ನೀರಿನ ಅಭಾವ ಹೆಚ್ಚಿದೆ. 200 ತಾಲೂಕುಗಳಲ್ಲಿ ಅಂತರ್ಜಲ ನೀರಿನ ಮಟ್ಟ ಕುಸಿದಿದೆ. ಬೆಂಗಳೂರಿನ 110 ಹಳ್ಳಿಗಳಿಗೆ ಸೇರಿದಂತೆ ಕುಡಿಯುವ ನೀರು ಪೂರೈಸಲು ನಮ್ಮ ಸರ್ಕಾರ ಬಜೆಟ್ ನಲ್ಲಿ ಅಗತ್ಯ ಕ್ರಮ ಕೈಗೊಂಡಿದೆ. ಇನ್ನು ಬೆಂಗಳೂರಿಗೆ ಹೆಚ್ಚುವರಿಯಾಗಿ 6 ಟಿಎಂಸಿ ನೀರನ್ನು ಬಳಸಲು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ರಾಜ್ಯದ ಇತರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳಿಗೆ ಹಣ ನೀಡಲಾಗಿದೆ. ಕೆಲವು ಶಾಸಕರು ಈಗಾಗಲೇ ಇರುವ ಕೊಳವೆ ಬಾವಿಗಳನ್ನು ಇನ್ನು 500 ಅಡಿಗಳಷ್ಟು ಆಳಕ್ಕೆ ಕೊರೆಸಿದರೆ ಹೊಸ ಕೊಳವೆಬಾವಿ ಕೊರೆಯುವ ಅಗತ್ಯವಿಲ್ಲ ಎಂದು ಸಲಹೆ ನೀಡಿದ್ದಾರೆ. ಈ ಅವಕಾಶದ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ” ಎಂದು ತಿಳಿಸಿದರು.

ತಮಿಳುನಾಡಿನಲ್ಲಿ ಕಮಲ್ ಹಾಸನ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಸೇರಲು ಮುಂದಾಗಿದ್ದು ಇದರಿಂದ ಮೈತ್ರಿಗೆ ಅನುಕೂಲವಾಗುತ್ತದೆಯೇ ಎಂದು ಕೇಳಿದಾಗ, “ಖಂಡಿತವಾಗಿಯೂ ಅನುಕೂಲವಾಗುತ್ತದೆ. ನಮ್ಮ ಜೊತೆ ಕೈಜೋಡಿಸುವವರಿಗೆ ನಾವು ಸ್ವಾಗತಿಸುತ್ತೇವೆ” ಎಂದರು.

ಇದನ್ನೂ ಓದಿ : ವಿಧಾನಸಭೆ ಅಧಿವೇಶನ: ‘ಗ್ರಾಮ ಸ್ವರಾಜ್, ಪಂಚಾಯತ್ ರಾಜ್ ತಿದ್ದುಪಡಿ’ ಸೇರಿ 2 ವಿಧೇಯಕ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...