Homeಮುಖಪುಟಹನುಮಾನ್ ಚಾಲೀಸಾ ಪಠಿಸಿ, ಕೊರೊನಾ ಓಡಿಸಿ : ಸಂಸದೆ ಪ್ರಗ್ಯಾ ಠಾಕೂರ್ ಸಲಹೆ

ಹನುಮಾನ್ ಚಾಲೀಸಾ ಪಠಿಸಿ, ಕೊರೊನಾ ಓಡಿಸಿ : ಸಂಸದೆ ಪ್ರಗ್ಯಾ ಠಾಕೂರ್ ಸಲಹೆ

ದೇಶದ ಎಲ್ಲಾ ಹಿಂದೂಗಳು ಒಂದೇ ಧ್ವನಿಯಲ್ಲಿ '' ಹನುಮಾನ್ ಚಾಲಿಸಾ '' ಪಠಿಸಿದರೆ, ಆ ಶಕ್ತಿ ಖಂಡಿತವಾಗಿಯೂ ಕೆಲಸ ಮಾಡುತ್ತದೆ ಮತ್ತು ನಾವು ಕೊರೋನಾ ವೈರಸ್‌ನಿಂದ ಮುಕ್ತರಾಗುತ್ತೇವೆ ಎಂದು ಪ್ರಗ್ಯಾ ತಿಳಿಸಿದ್ದಾರೆ.

- Advertisement -
- Advertisement -

‘ಇಂದಿನಿಂದ ಅಗಸ್ಟ್ 5 ರವರೆಗೂ ಎಲ್ಲರೂ ಪ್ರತಿ ದಿನ ಐದು ಬಾರಿ ಹನುಮಾನ್ ಚಾಲೀಸಾ ಪಠಿಸಿ, ಇದರಿಂದ ಕೋವಿಡ್ ಬಿಕ್ಕಟ್ಟು ಜಗತ್ತಿನಿಂದ ದೂರವಾಗುತ್ತದೆ’ ಎಂದು ಬಿಜೆಪಿಯ ಸಂಸದೆ ಪ್ರಗ್ಯಾ ಠಾಕೂರ್ ಹೇಳಿದ್ದಾರೆ.

‘ಅಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿ ಪೂಜೆ ನಡೆಯಲಿದೆ. ಅಲ್ಲಿವರೆಗೂ ಪ್ರತಿದಿನ 5 ಸಲ ಹನುಮಾನ್ ಚಾಲೀಸಾ ಪಠಿಸಿ. ಅಗಸ್ಟ್ 5 ರಂದು ಭೂಮಿಪೂಜೆಯ ದಿನ ಮನೆಯಲ್ಲಿ ದೀಪ ಹಚ್ಚಿ, ಆರತಿ ಬೆಳಗಿ ರಾಮನನ್ನು ಪೂಜಿಸಿ’ ಎಂದು ಸಂಸದೆ ಸಲಹೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು ‘ಅಗಸ್ಟ್ 5 ಮಹತ್ವದ ದಿನವಾಗಲಿದೆ. ಅಂದು ಎಲ್ಲರೂ ಮನೆಯಲ್ಲಿ ದೀಪಾವಳಿ ಆಚರಿಸೋಣ’ ಎಂದಿದ್ದಾರೆ. ಒಂದೇ ಬಾರಿಗೆ ಎಲ್ಲರೂ ಹನುಮಾನ್ ಚಾಲೀಸಾ ಪಠಣ ಮಾಡಿದರೆ ವಿಶ್ವದ ಕೋರೊನಾ ಬಿಕ್ಕಟ್ಟು ದೂರವಾಗಲಿದೆ ಎಂದಿದ್ದಾರೆ.

“ನಾವೆಲ್ಲರೂ ಒಗ್ಗಟ್ಟಾಗಿ ಆಧ್ಯಾತ್ಮಿಕದ ಮೂಲಕ ಮಾರಣಾಂತಿಕ ಕೊರೋನಾ ವೈರಸ್ ಅನ್ನು ಜಗತ್ತಿನಿಂದ ತೊಡೆದು ಹಾಕಲು ಪ್ರಯತ್ನಿಸೋಣ. ಎಲ್ಲರಿಗೂ ಉತ್ತಮ ಆರೋಗ್ಯವನ್ನು ಬಯಸೋಣ. ಹೀಗಾಗಿ ಜುಲೈ 25 ರಿಂದ ಆಗಸ್ಟ್ 05ರವರೆಗೆ ಎಲ್ಲರೂ ತಮ್ಮ ಮನೆಗಳಲ್ಲಿ ದಿನಕ್ಕೆ ಐದು ಬಾರಿ ಹನುಮಾನ್ ಚಾಲಿಸಾ ಪಠಿಸಿ” ಎಂದು ಪ್ರಗ್ಯಾ ಟ್ವೀಟ್ ಮಾಡಿದ್ದಾರೆ.

“ದೇಶದ ಎಲ್ಲಾ ಹಿಂದೂಗಳು ಒಂದೇ ಧ್ವನಿಯಲ್ಲಿ ” ಹನುಮಾನ್ ಚಾಲಿಸಾ ” ಪಠಿಸಿದರೆ, ಆ ಶಕ್ತಿ ಖಂಡಿತವಾಗಿಯೂ ಕೆಲಸ ಮಾಡುತ್ತದೆ ಮತ್ತು ನಾವು ಕೊರೋನಾ ವೈರಸ್‌ನಿಂದ ಮುಕ್ತರಾಗುತ್ತೇವೆ. ಇದು ಭಗವಾನ್ ರಾಮನಿಗಾಗಿ ನಿಮ್ಮ ಪ್ರಾರ್ಥನೆಯಾಗಲಿದೆ. ಆಗಸ್ಟ್ 05 ರಂದು ಮನೆಯಲ್ಲೇ ದೀಪಗಳನ್ನು ಬೆಳಗಿಸಿ ರಾಮನಿಗೆ ಆರತಿ ಅರ್ಪಿಸುವ ಮೂಲಕ ನಿಮ್ಮ ಆಚರಣೆಯನ್ನು ಮುಕ್ತಾಯಗೊಳಿಸಿ” ಎಂದು ಅವರು ಕೇಳಿಕೊಂಡಿದ್ದಾರೆ.

“ಮಧ್ಯಪ್ರದೇಶದಲ್ಲಿ ಕೊರೋನಾ ಸೋಂಕನ್ನು ತಡೆಯುವ ಸಲುವಾಗಿ ಇಲ್ಲಿನ ಬಿಜೆಪಿ ಸರ್ಕಾರ ಆಗಸ್ಟ್ 04ರ ವರೆಗೆ ಲಾಕ್‌ಡೌನ್ ಘೋಷಿಸಿದೆ. ಲಾಕ್‌ಡೌನ್ 4ಕ್ಕೆ ಮುಗಿದರೂ ಹನುಮಾನ್ ಚಾಲಿಸಾ ಪಠಣ ಆಗಸ್ಟ್ 05 ರಂದು ಕೊನೆಗೊಳ್ಳಲಿದೆ. ಈ ದಿನ ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿ ಪೂಜೆ ನಡೆಯಲಿದ್ದು, ಆ ದಿನವನ್ನು ನಾವು ದೀಪಾವಳಿಯಂತೆ ಆಚರಿಸಲಿದ್ದೇವೆ” ಎಂದು ಪ್ರಜ್ಞಾ ಸಿಂಗ್ ಠಾಕೂರ್ ತಿಳಿಸಿದ್ದಾರೆ.

ಪ್ರಗ್ಯಾ ಠಾಕೂರ್ ಸಲಹೆಗೆ ಹಲವರು ವಿರೋಧ ವ್ಯಕ್ತಪಡಿಸಿ ಟೀಕಿಸಿದ್ದಾರೆ. ತಟ್ಟೆ ಜಾಗಟೆ ಬಡಿದಿದ್ದು ಆಯ್ತು, ದೀಪ ಹಚ್ಚಿದ್ದು ಆಯ್ತು, ಹೂವು ಸುರಿದಿದ್ದು ಮುಗೀತು.. ಈಗ ಹನುಮಾನ್ ಚಾಲೀಸಾ ಪಠಿಸಿದರೆ ಕೊರೊನಾ ಸಾಯುತ್ತದೆ ಎಂದು ಬಿಜೆಪಿ ಸಂಸದೆ ಹೇಳಿದ್ದಾರೆ. ಇದು ಕೆಲಸಕ್ಕೆ ಬರುವುದಿಲ್ಲ. ದೇಶದ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸುವುದು ಇಂದಿನ ತುರ್ತು ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಕೊರೊನಾ ರೋಗಿಗಳಿಗೆ ಹೆಚ್ಚಿನ ಶುಲ್ಕ ವಿಧಿಸಿದ ಆಸ್ಪತ್ರೆ: ಲೈಸೆನ್ಸ್ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...