Homeಮುಖಪುಟಹನುಮಾನ್ ಚಾಲೀಸಾ ಪಠಿಸಿ, ಕೊರೊನಾ ಓಡಿಸಿ : ಸಂಸದೆ ಪ್ರಗ್ಯಾ ಠಾಕೂರ್ ಸಲಹೆ

ಹನುಮಾನ್ ಚಾಲೀಸಾ ಪಠಿಸಿ, ಕೊರೊನಾ ಓಡಿಸಿ : ಸಂಸದೆ ಪ್ರಗ್ಯಾ ಠಾಕೂರ್ ಸಲಹೆ

ದೇಶದ ಎಲ್ಲಾ ಹಿಂದೂಗಳು ಒಂದೇ ಧ್ವನಿಯಲ್ಲಿ '' ಹನುಮಾನ್ ಚಾಲಿಸಾ '' ಪಠಿಸಿದರೆ, ಆ ಶಕ್ತಿ ಖಂಡಿತವಾಗಿಯೂ ಕೆಲಸ ಮಾಡುತ್ತದೆ ಮತ್ತು ನಾವು ಕೊರೋನಾ ವೈರಸ್‌ನಿಂದ ಮುಕ್ತರಾಗುತ್ತೇವೆ ಎಂದು ಪ್ರಗ್ಯಾ ತಿಳಿಸಿದ್ದಾರೆ.

- Advertisement -
- Advertisement -

‘ಇಂದಿನಿಂದ ಅಗಸ್ಟ್ 5 ರವರೆಗೂ ಎಲ್ಲರೂ ಪ್ರತಿ ದಿನ ಐದು ಬಾರಿ ಹನುಮಾನ್ ಚಾಲೀಸಾ ಪಠಿಸಿ, ಇದರಿಂದ ಕೋವಿಡ್ ಬಿಕ್ಕಟ್ಟು ಜಗತ್ತಿನಿಂದ ದೂರವಾಗುತ್ತದೆ’ ಎಂದು ಬಿಜೆಪಿಯ ಸಂಸದೆ ಪ್ರಗ್ಯಾ ಠಾಕೂರ್ ಹೇಳಿದ್ದಾರೆ.

‘ಅಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿ ಪೂಜೆ ನಡೆಯಲಿದೆ. ಅಲ್ಲಿವರೆಗೂ ಪ್ರತಿದಿನ 5 ಸಲ ಹನುಮಾನ್ ಚಾಲೀಸಾ ಪಠಿಸಿ. ಅಗಸ್ಟ್ 5 ರಂದು ಭೂಮಿಪೂಜೆಯ ದಿನ ಮನೆಯಲ್ಲಿ ದೀಪ ಹಚ್ಚಿ, ಆರತಿ ಬೆಳಗಿ ರಾಮನನ್ನು ಪೂಜಿಸಿ’ ಎಂದು ಸಂಸದೆ ಸಲಹೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು ‘ಅಗಸ್ಟ್ 5 ಮಹತ್ವದ ದಿನವಾಗಲಿದೆ. ಅಂದು ಎಲ್ಲರೂ ಮನೆಯಲ್ಲಿ ದೀಪಾವಳಿ ಆಚರಿಸೋಣ’ ಎಂದಿದ್ದಾರೆ. ಒಂದೇ ಬಾರಿಗೆ ಎಲ್ಲರೂ ಹನುಮಾನ್ ಚಾಲೀಸಾ ಪಠಣ ಮಾಡಿದರೆ ವಿಶ್ವದ ಕೋರೊನಾ ಬಿಕ್ಕಟ್ಟು ದೂರವಾಗಲಿದೆ ಎಂದಿದ್ದಾರೆ.

“ನಾವೆಲ್ಲರೂ ಒಗ್ಗಟ್ಟಾಗಿ ಆಧ್ಯಾತ್ಮಿಕದ ಮೂಲಕ ಮಾರಣಾಂತಿಕ ಕೊರೋನಾ ವೈರಸ್ ಅನ್ನು ಜಗತ್ತಿನಿಂದ ತೊಡೆದು ಹಾಕಲು ಪ್ರಯತ್ನಿಸೋಣ. ಎಲ್ಲರಿಗೂ ಉತ್ತಮ ಆರೋಗ್ಯವನ್ನು ಬಯಸೋಣ. ಹೀಗಾಗಿ ಜುಲೈ 25 ರಿಂದ ಆಗಸ್ಟ್ 05ರವರೆಗೆ ಎಲ್ಲರೂ ತಮ್ಮ ಮನೆಗಳಲ್ಲಿ ದಿನಕ್ಕೆ ಐದು ಬಾರಿ ಹನುಮಾನ್ ಚಾಲಿಸಾ ಪಠಿಸಿ” ಎಂದು ಪ್ರಗ್ಯಾ ಟ್ವೀಟ್ ಮಾಡಿದ್ದಾರೆ.

“ದೇಶದ ಎಲ್ಲಾ ಹಿಂದೂಗಳು ಒಂದೇ ಧ್ವನಿಯಲ್ಲಿ ” ಹನುಮಾನ್ ಚಾಲಿಸಾ ” ಪಠಿಸಿದರೆ, ಆ ಶಕ್ತಿ ಖಂಡಿತವಾಗಿಯೂ ಕೆಲಸ ಮಾಡುತ್ತದೆ ಮತ್ತು ನಾವು ಕೊರೋನಾ ವೈರಸ್‌ನಿಂದ ಮುಕ್ತರಾಗುತ್ತೇವೆ. ಇದು ಭಗವಾನ್ ರಾಮನಿಗಾಗಿ ನಿಮ್ಮ ಪ್ರಾರ್ಥನೆಯಾಗಲಿದೆ. ಆಗಸ್ಟ್ 05 ರಂದು ಮನೆಯಲ್ಲೇ ದೀಪಗಳನ್ನು ಬೆಳಗಿಸಿ ರಾಮನಿಗೆ ಆರತಿ ಅರ್ಪಿಸುವ ಮೂಲಕ ನಿಮ್ಮ ಆಚರಣೆಯನ್ನು ಮುಕ್ತಾಯಗೊಳಿಸಿ” ಎಂದು ಅವರು ಕೇಳಿಕೊಂಡಿದ್ದಾರೆ.

“ಮಧ್ಯಪ್ರದೇಶದಲ್ಲಿ ಕೊರೋನಾ ಸೋಂಕನ್ನು ತಡೆಯುವ ಸಲುವಾಗಿ ಇಲ್ಲಿನ ಬಿಜೆಪಿ ಸರ್ಕಾರ ಆಗಸ್ಟ್ 04ರ ವರೆಗೆ ಲಾಕ್‌ಡೌನ್ ಘೋಷಿಸಿದೆ. ಲಾಕ್‌ಡೌನ್ 4ಕ್ಕೆ ಮುಗಿದರೂ ಹನುಮಾನ್ ಚಾಲಿಸಾ ಪಠಣ ಆಗಸ್ಟ್ 05 ರಂದು ಕೊನೆಗೊಳ್ಳಲಿದೆ. ಈ ದಿನ ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿ ಪೂಜೆ ನಡೆಯಲಿದ್ದು, ಆ ದಿನವನ್ನು ನಾವು ದೀಪಾವಳಿಯಂತೆ ಆಚರಿಸಲಿದ್ದೇವೆ” ಎಂದು ಪ್ರಜ್ಞಾ ಸಿಂಗ್ ಠಾಕೂರ್ ತಿಳಿಸಿದ್ದಾರೆ.

ಪ್ರಗ್ಯಾ ಠಾಕೂರ್ ಸಲಹೆಗೆ ಹಲವರು ವಿರೋಧ ವ್ಯಕ್ತಪಡಿಸಿ ಟೀಕಿಸಿದ್ದಾರೆ. ತಟ್ಟೆ ಜಾಗಟೆ ಬಡಿದಿದ್ದು ಆಯ್ತು, ದೀಪ ಹಚ್ಚಿದ್ದು ಆಯ್ತು, ಹೂವು ಸುರಿದಿದ್ದು ಮುಗೀತು.. ಈಗ ಹನುಮಾನ್ ಚಾಲೀಸಾ ಪಠಿಸಿದರೆ ಕೊರೊನಾ ಸಾಯುತ್ತದೆ ಎಂದು ಬಿಜೆಪಿ ಸಂಸದೆ ಹೇಳಿದ್ದಾರೆ. ಇದು ಕೆಲಸಕ್ಕೆ ಬರುವುದಿಲ್ಲ. ದೇಶದ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸುವುದು ಇಂದಿನ ತುರ್ತು ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಕೊರೊನಾ ರೋಗಿಗಳಿಗೆ ಹೆಚ್ಚಿನ ಶುಲ್ಕ ವಿಧಿಸಿದ ಆಸ್ಪತ್ರೆ: ಲೈಸೆನ್ಸ್ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...