Homeಮುಖಪುಟಹನುಮಾನ್ ಚಾಲೀಸಾ ಪಠಿಸಿ, ಕೊರೊನಾ ಓಡಿಸಿ : ಸಂಸದೆ ಪ್ರಗ್ಯಾ ಠಾಕೂರ್ ಸಲಹೆ

ಹನುಮಾನ್ ಚಾಲೀಸಾ ಪಠಿಸಿ, ಕೊರೊನಾ ಓಡಿಸಿ : ಸಂಸದೆ ಪ್ರಗ್ಯಾ ಠಾಕೂರ್ ಸಲಹೆ

ದೇಶದ ಎಲ್ಲಾ ಹಿಂದೂಗಳು ಒಂದೇ ಧ್ವನಿಯಲ್ಲಿ '' ಹನುಮಾನ್ ಚಾಲಿಸಾ '' ಪಠಿಸಿದರೆ, ಆ ಶಕ್ತಿ ಖಂಡಿತವಾಗಿಯೂ ಕೆಲಸ ಮಾಡುತ್ತದೆ ಮತ್ತು ನಾವು ಕೊರೋನಾ ವೈರಸ್‌ನಿಂದ ಮುಕ್ತರಾಗುತ್ತೇವೆ ಎಂದು ಪ್ರಗ್ಯಾ ತಿಳಿಸಿದ್ದಾರೆ.

- Advertisement -
- Advertisement -

‘ಇಂದಿನಿಂದ ಅಗಸ್ಟ್ 5 ರವರೆಗೂ ಎಲ್ಲರೂ ಪ್ರತಿ ದಿನ ಐದು ಬಾರಿ ಹನುಮಾನ್ ಚಾಲೀಸಾ ಪಠಿಸಿ, ಇದರಿಂದ ಕೋವಿಡ್ ಬಿಕ್ಕಟ್ಟು ಜಗತ್ತಿನಿಂದ ದೂರವಾಗುತ್ತದೆ’ ಎಂದು ಬಿಜೆಪಿಯ ಸಂಸದೆ ಪ್ರಗ್ಯಾ ಠಾಕೂರ್ ಹೇಳಿದ್ದಾರೆ.

‘ಅಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿ ಪೂಜೆ ನಡೆಯಲಿದೆ. ಅಲ್ಲಿವರೆಗೂ ಪ್ರತಿದಿನ 5 ಸಲ ಹನುಮಾನ್ ಚಾಲೀಸಾ ಪಠಿಸಿ. ಅಗಸ್ಟ್ 5 ರಂದು ಭೂಮಿಪೂಜೆಯ ದಿನ ಮನೆಯಲ್ಲಿ ದೀಪ ಹಚ್ಚಿ, ಆರತಿ ಬೆಳಗಿ ರಾಮನನ್ನು ಪೂಜಿಸಿ’ ಎಂದು ಸಂಸದೆ ಸಲಹೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು ‘ಅಗಸ್ಟ್ 5 ಮಹತ್ವದ ದಿನವಾಗಲಿದೆ. ಅಂದು ಎಲ್ಲರೂ ಮನೆಯಲ್ಲಿ ದೀಪಾವಳಿ ಆಚರಿಸೋಣ’ ಎಂದಿದ್ದಾರೆ. ಒಂದೇ ಬಾರಿಗೆ ಎಲ್ಲರೂ ಹನುಮಾನ್ ಚಾಲೀಸಾ ಪಠಣ ಮಾಡಿದರೆ ವಿಶ್ವದ ಕೋರೊನಾ ಬಿಕ್ಕಟ್ಟು ದೂರವಾಗಲಿದೆ ಎಂದಿದ್ದಾರೆ.

“ನಾವೆಲ್ಲರೂ ಒಗ್ಗಟ್ಟಾಗಿ ಆಧ್ಯಾತ್ಮಿಕದ ಮೂಲಕ ಮಾರಣಾಂತಿಕ ಕೊರೋನಾ ವೈರಸ್ ಅನ್ನು ಜಗತ್ತಿನಿಂದ ತೊಡೆದು ಹಾಕಲು ಪ್ರಯತ್ನಿಸೋಣ. ಎಲ್ಲರಿಗೂ ಉತ್ತಮ ಆರೋಗ್ಯವನ್ನು ಬಯಸೋಣ. ಹೀಗಾಗಿ ಜುಲೈ 25 ರಿಂದ ಆಗಸ್ಟ್ 05ರವರೆಗೆ ಎಲ್ಲರೂ ತಮ್ಮ ಮನೆಗಳಲ್ಲಿ ದಿನಕ್ಕೆ ಐದು ಬಾರಿ ಹನುಮಾನ್ ಚಾಲಿಸಾ ಪಠಿಸಿ” ಎಂದು ಪ್ರಗ್ಯಾ ಟ್ವೀಟ್ ಮಾಡಿದ್ದಾರೆ.

“ದೇಶದ ಎಲ್ಲಾ ಹಿಂದೂಗಳು ಒಂದೇ ಧ್ವನಿಯಲ್ಲಿ ” ಹನುಮಾನ್ ಚಾಲಿಸಾ ” ಪಠಿಸಿದರೆ, ಆ ಶಕ್ತಿ ಖಂಡಿತವಾಗಿಯೂ ಕೆಲಸ ಮಾಡುತ್ತದೆ ಮತ್ತು ನಾವು ಕೊರೋನಾ ವೈರಸ್‌ನಿಂದ ಮುಕ್ತರಾಗುತ್ತೇವೆ. ಇದು ಭಗವಾನ್ ರಾಮನಿಗಾಗಿ ನಿಮ್ಮ ಪ್ರಾರ್ಥನೆಯಾಗಲಿದೆ. ಆಗಸ್ಟ್ 05 ರಂದು ಮನೆಯಲ್ಲೇ ದೀಪಗಳನ್ನು ಬೆಳಗಿಸಿ ರಾಮನಿಗೆ ಆರತಿ ಅರ್ಪಿಸುವ ಮೂಲಕ ನಿಮ್ಮ ಆಚರಣೆಯನ್ನು ಮುಕ್ತಾಯಗೊಳಿಸಿ” ಎಂದು ಅವರು ಕೇಳಿಕೊಂಡಿದ್ದಾರೆ.

“ಮಧ್ಯಪ್ರದೇಶದಲ್ಲಿ ಕೊರೋನಾ ಸೋಂಕನ್ನು ತಡೆಯುವ ಸಲುವಾಗಿ ಇಲ್ಲಿನ ಬಿಜೆಪಿ ಸರ್ಕಾರ ಆಗಸ್ಟ್ 04ರ ವರೆಗೆ ಲಾಕ್‌ಡೌನ್ ಘೋಷಿಸಿದೆ. ಲಾಕ್‌ಡೌನ್ 4ಕ್ಕೆ ಮುಗಿದರೂ ಹನುಮಾನ್ ಚಾಲಿಸಾ ಪಠಣ ಆಗಸ್ಟ್ 05 ರಂದು ಕೊನೆಗೊಳ್ಳಲಿದೆ. ಈ ದಿನ ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿ ಪೂಜೆ ನಡೆಯಲಿದ್ದು, ಆ ದಿನವನ್ನು ನಾವು ದೀಪಾವಳಿಯಂತೆ ಆಚರಿಸಲಿದ್ದೇವೆ” ಎಂದು ಪ್ರಜ್ಞಾ ಸಿಂಗ್ ಠಾಕೂರ್ ತಿಳಿಸಿದ್ದಾರೆ.

ಪ್ರಗ್ಯಾ ಠಾಕೂರ್ ಸಲಹೆಗೆ ಹಲವರು ವಿರೋಧ ವ್ಯಕ್ತಪಡಿಸಿ ಟೀಕಿಸಿದ್ದಾರೆ. ತಟ್ಟೆ ಜಾಗಟೆ ಬಡಿದಿದ್ದು ಆಯ್ತು, ದೀಪ ಹಚ್ಚಿದ್ದು ಆಯ್ತು, ಹೂವು ಸುರಿದಿದ್ದು ಮುಗೀತು.. ಈಗ ಹನುಮಾನ್ ಚಾಲೀಸಾ ಪಠಿಸಿದರೆ ಕೊರೊನಾ ಸಾಯುತ್ತದೆ ಎಂದು ಬಿಜೆಪಿ ಸಂಸದೆ ಹೇಳಿದ್ದಾರೆ. ಇದು ಕೆಲಸಕ್ಕೆ ಬರುವುದಿಲ್ಲ. ದೇಶದ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸುವುದು ಇಂದಿನ ತುರ್ತು ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಕೊರೊನಾ ರೋಗಿಗಳಿಗೆ ಹೆಚ್ಚಿನ ಶುಲ್ಕ ವಿಧಿಸಿದ ಆಸ್ಪತ್ರೆ: ಲೈಸೆನ್ಸ್ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...