Homeರಾಷ್ಟ್ರೀಯಅಸ್ಸಾಮಿ ಮುಸ್ಲಿಮರನ್ನು ‘ವಿಶಿಷ್ಟ ಗುಂಪು’ ಎಂದು ಗುರುತಿಸಲು ಶಿಫಾರಸು!

ಅಸ್ಸಾಮಿ ಮುಸ್ಲಿಮರನ್ನು ‘ವಿಶಿಷ್ಟ ಗುಂಪು’ ಎಂದು ಗುರುತಿಸಲು ಶಿಫಾರಸು!

- Advertisement -
- Advertisement -

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ರಚಿಸಿದ ಸಮಿತಿಯು ರಾಜ್ಯದಲ್ಲಿನ ‘ಅಸ್ಸಾಮಿ ಮುಸ್ಲಿಮರನ್ನು’ ಒಂದು ವಿಶಿಷ್ಟ ಗುಂಪು ಎಂದು ಗುರುತಿಸಲು ಶಿಫಾರಸು ಮಾಡಿದೆ. ಕಳೆದ ಜುಲೈನಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಮುದಾಯದ ಸಾಮಾಜಿಕ-ಆರ್ಥಿಕ ಸಮಸ್ಯೆಗಳನ್ನು ಚರ್ಚಿಸಲು ವಿವಿಧ ಕ್ಷೇತ್ರಗಳ ಅಸ್ಸಾಮಿ ಮುಸ್ಲಿಂ ಸಮುದಾಯದ ಪ್ರತಿನಿಧಿಗಳನ್ನು ಭೇಟಿ ಮಾಡಿದ ನಂತರ ಈ ಸಮಿತಿಯನ್ನು ರಚಿಸಲಾಗಿತ್ತು. ಏಳು ಉಪಸಮಿತಿಗಳಾಗಿ ವಿಂಗಡಣೆಯಾದ ಸಮಿತಿಯು ತಿಂಗಳುಗಟ್ಟಲೆ ಚರ್ಚೆ ನಡೆಸಿ ಗುರುವಾರ ವರದಿ ಸಲ್ಲಿಸಿದೆ.

ಅಸ್ಸಾಮಿ ಮುಸ್ಲಿಮರಿಗೆ ಗುರುತಿನ ಕಾರ್ಡ್‌ಗಳನ್ನು ನೀಡುವುದರ ಜೊತೆಗೆ ಸಮುದಾಯವನ್ನು ‘ಗುರುತಿಸಲು ಮತ್ತು ದಾಖಲಿಸಲು’ ಜನಗಣತಿಯನ್ನು ನಡೆಸುವಂತೆ ಸಮಿತಿಯು ಸಲಹೆಗಳನ್ನು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಥಳೀಯ ಅಸ್ಸಾಮಿ ಮುಸ್ಲಿಂ ಸಮುದಾಯದಲ್ಲಿ ಮೂರು ಪ್ರಮುಖ ಗುಂಪುಗಲಿವೆ: ಗೋರಿಯಾಗಳು, ಮೊರಿಯಾಗಳು (ಉತ್ತರ ಅಸ್ಸಾಂನಿಂದ) ಮತ್ತು ದೇಶಿಗಳು (ದಕ್ಷಿಣ ಅಸ್ಸಾಂನಿಂದ).

ಇದನ್ನೂ ಓದಿ: ಅಸ್ಸಾಂ: ನಿರುದ್ಯೋಗದ ಬಗ್ಗೆ ಮಾತನಾಡಿ ಸದನದಿಂದ ಅಮಾನತುಗೊಂಡ ಶಾಸಕ ಅಖಿಲ್ ಗೊಗೊಯ್ 

ದೇಶಿಗಳು 13ನೇ ಶತಮಾನದ ಕೋಚ್ ರಾಜ್‌ಬೊಂಗ್‌ಶಿ ಮತ್ತು ಮೆಚ್‌ನಂತಹ ಸ್ಥಳೀಯ ಬುಡಕಟ್ಟು ಸಮುದಾಯಗಳಿಂದ ಮತಾಂತರಗೊಂಡವರಾಗಿದ್ದಾರೆ. ಗೋರಿಯಾಗಳು ಮತ್ತು ಮೊರಿಯಾಗಳು ತಮ್ಮ ವಂಶಾವಳಿಯನ್ನು ಅಹೋಮ್ ಆಳ್ವಿಕೆಯ ಸಮಯದಲ್ಲಿ ಈ ಪ್ರದೇಶಕ್ಕೆ ಬಂದ ಸೈನಿಕರು, ಕುಶಲಕರ್ಮಿಗಳು ಸೇರಿದಂತೆ ಇತ್ಯಾದಿ ಸಮುದಾಯಗಳಿಂದ ಗುರುತಿಸುತ್ತಾರೆ. ಜುಲ್ಹಾ ಮುಸಲ್ಮಾನರಂತಹ ಸಣ್ಣ ಗುಂಪುಗಳೂ ಈ ವರ್ಗಕ್ಕೆ ಸೇರುತ್ತವೆ.

ಈ ಗುಂಪುಗಳು ಪೂರ್ವ ಬಂಗಾಳ ಅಥವಾ ಬಾಂಗ್ಲಾದೇಶದಿಂದ ವಲಸೆ ಬಂದ ಬಂಗಾಳಿ-ಮಾತನಾಡುವ ಮುಸ್ಲಿಮರಿಂದ ತಮ್ಮನ್ನು ತಾವು ಭಿನ್ನವೆಂದು ಪರಿಗಣಿಸುತ್ತವೆ.

ಗುರುವಾರ ವರದಿಯನ್ನು ಅಂಗೀಕರಿಸಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಎಲ್ಲಾ ಶಿಫಾರಸುಗಳನ್ನು ಹಂತವಾರು ರೀತಿಯಲ್ಲಿ ಅನುಷ್ಠಾನಗೊಳಿಸಬಹುದು ಎಂದು ಹೇಳಿದ್ದಾರೆ. ‘ನಾವು ಅವುಗಳನ್ನು ಅಲ್ಪಾವಧಿ, ಮಧ್ಯಮ ಮತ್ತು ದೀರ್ಘಾವಧಿ ಎಂದು ವರ್ಗೀಕರಿಸಬಹುದು’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ವಿಸ್ ರಿವಾಲ್ವರ್ ಬಳಸಿ ಗರ್ಭಿಣಿ ಪತ್ನಿಯ ಹತ್ಯೆಗೈದ ಅಸ್ಸಾಂ ಪೊಲೀಸ್‌ ಪೇದೆ, ಬಂಧನ

ಸಮಿತಿಯು ವರದಿಯಲ್ಲಿ ಅಸ್ಸಾಮಿ ಮುಸ್ಲಿಮರ ವ್ಯಾಖ್ಯಾನವನ್ನು ಮುಂದಿಟ್ಟಿದೆ ಎಂದು ಅವರು ಹೇಳಿದ್ದಾರೆ. “ನಾವು ಸಮಿತಿ ನೀಡಿರುವ ವ್ಯಾಖ್ಯಾನವನ್ನು ಒಪ್ಪಿಕೊಂಡಿದ್ದೇವೆ…ಯಾವ ಗುಂಪಿಗೆ ಏನು ಕೆಲಸ ಮಾಡಬೇಕಾಗಿದೆ ಎಂದು ನಮ್ಮ ಗುರಿ ಸ್ಪಷ್ಟವಾಗಿರುತ್ತದೆ” ಎಂದು ಅವರು ಹೇಳಿದ್ದಾರೆ.

ನಮ್ಮ ಮುಂದಿನ ಹಂತವು ಈ ಗುಂಪುಗಳಿಗೆ, ಶಾಸಕಾಂಗದ ಕಾರ್ಯವಿಧಾನಗಳು, ಆಡಳಿತಾತ್ಮಕ ನಿರ್ಧಾರಗಳು ಮತ್ತು ಹಣಕಾಸಿನ ಬೆಂಬಲ ಒಳಗೊಂಡಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಸಮುದಾಯದ ಗುರುತಿನ ಹೊರತಾಗಿಯು, ಗುಂಪಿಗೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ತನ್ನ ವರದಿಯಲ್ಲಿ ಹೇಳಲಾಗಿದೆ. “ಸಂಸತ್ತು ಮತ್ತು ಅಸ್ಸಾಂ ವಿಧಾನಸಭೆಯಲ್ಲಿ ಅಸ್ಸಾಮಿ ಮುಸ್ಲಿಮರಿಗೆ ಪ್ರಾತಿನಿಧ್ಯವನ್ನು ಒದಗಿಸಲು ಸಂವಿಧಾನದ 333 ನೇ ವಿಧಿಯಂತೆಯೇ ಒಂದು ವಿಧಿಗೆ ಅದು ಕರೆ ನೀಡಿದೆ.

ಇದನ್ನೂ ಓದಿ: 10ನೇ ತರಗತಿವರೆಗೆ ಹಿಂದಿ ಕಡ್ಡಾಯಕ್ಕೆ ಅಮಿತ್ ಶಾ ಪ್ರಸ್ತಾಪ: ಪ್ರತಿಭಟನೆ ಎಚ್ಚರಿಕೆ ನೀಡಿದ ಅಸ್ಸಾಂ ವಿದ್ಯಾರ್ಥಿಗಳು

“ಭಾರತೀಯ ಸಂವಿಧಾನದ 169 ನೇ ವಿಧಿಯ ಪ್ರಕಾರ ಅಸ್ಸಾಂನಲ್ಲಿ ಮೇಲ್ಮನೆ (ವಿಧಾನ ಪರಿಷತ್ತು) ರಚಿಸಬಹುದು. ಲೆಜಿಸ್ಲೇಟಿವ್ ಕೌನ್ಸಿಲ್ ರಚನೆಯಾದ ನಂತರ, ಈ ಕೌನ್ಸಿಲ್‌ನಲ್ಲಿ ಅಸ್ಸಾಮಿ ಮುಸ್ಲಿಂ ಸಮುದಾಯಕ್ಕೆ ನಿರ್ದಿಷ್ಟ ಸಂಖ್ಯೆಯ ಸ್ಥಾನಗಳನ್ನು ಮೀಸಲಿಡಬಹುದು” ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಶಿಕ್ಷಣ, ರಾಜಕೀಯ ಪ್ರಾತಿನಿಧ್ಯ, ಆರೋಗ್ಯ, ಕೌಶಲ್ಯಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ವರದಿಯು ಸಲಹೆಗಳನ್ನು ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...