Homeರಾಷ್ಟ್ರೀಯಅಸ್ಸಾಮಿ ಮುಸ್ಲಿಮರನ್ನು ‘ವಿಶಿಷ್ಟ ಗುಂಪು’ ಎಂದು ಗುರುತಿಸಲು ಶಿಫಾರಸು!

ಅಸ್ಸಾಮಿ ಮುಸ್ಲಿಮರನ್ನು ‘ವಿಶಿಷ್ಟ ಗುಂಪು’ ಎಂದು ಗುರುತಿಸಲು ಶಿಫಾರಸು!

- Advertisement -
- Advertisement -

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ರಚಿಸಿದ ಸಮಿತಿಯು ರಾಜ್ಯದಲ್ಲಿನ ‘ಅಸ್ಸಾಮಿ ಮುಸ್ಲಿಮರನ್ನು’ ಒಂದು ವಿಶಿಷ್ಟ ಗುಂಪು ಎಂದು ಗುರುತಿಸಲು ಶಿಫಾರಸು ಮಾಡಿದೆ. ಕಳೆದ ಜುಲೈನಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಮುದಾಯದ ಸಾಮಾಜಿಕ-ಆರ್ಥಿಕ ಸಮಸ್ಯೆಗಳನ್ನು ಚರ್ಚಿಸಲು ವಿವಿಧ ಕ್ಷೇತ್ರಗಳ ಅಸ್ಸಾಮಿ ಮುಸ್ಲಿಂ ಸಮುದಾಯದ ಪ್ರತಿನಿಧಿಗಳನ್ನು ಭೇಟಿ ಮಾಡಿದ ನಂತರ ಈ ಸಮಿತಿಯನ್ನು ರಚಿಸಲಾಗಿತ್ತು. ಏಳು ಉಪಸಮಿತಿಗಳಾಗಿ ವಿಂಗಡಣೆಯಾದ ಸಮಿತಿಯು ತಿಂಗಳುಗಟ್ಟಲೆ ಚರ್ಚೆ ನಡೆಸಿ ಗುರುವಾರ ವರದಿ ಸಲ್ಲಿಸಿದೆ.

ಅಸ್ಸಾಮಿ ಮುಸ್ಲಿಮರಿಗೆ ಗುರುತಿನ ಕಾರ್ಡ್‌ಗಳನ್ನು ನೀಡುವುದರ ಜೊತೆಗೆ ಸಮುದಾಯವನ್ನು ‘ಗುರುತಿಸಲು ಮತ್ತು ದಾಖಲಿಸಲು’ ಜನಗಣತಿಯನ್ನು ನಡೆಸುವಂತೆ ಸಮಿತಿಯು ಸಲಹೆಗಳನ್ನು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಥಳೀಯ ಅಸ್ಸಾಮಿ ಮುಸ್ಲಿಂ ಸಮುದಾಯದಲ್ಲಿ ಮೂರು ಪ್ರಮುಖ ಗುಂಪುಗಲಿವೆ: ಗೋರಿಯಾಗಳು, ಮೊರಿಯಾಗಳು (ಉತ್ತರ ಅಸ್ಸಾಂನಿಂದ) ಮತ್ತು ದೇಶಿಗಳು (ದಕ್ಷಿಣ ಅಸ್ಸಾಂನಿಂದ).

ಇದನ್ನೂ ಓದಿ: ಅಸ್ಸಾಂ: ನಿರುದ್ಯೋಗದ ಬಗ್ಗೆ ಮಾತನಾಡಿ ಸದನದಿಂದ ಅಮಾನತುಗೊಂಡ ಶಾಸಕ ಅಖಿಲ್ ಗೊಗೊಯ್ 

ದೇಶಿಗಳು 13ನೇ ಶತಮಾನದ ಕೋಚ್ ರಾಜ್‌ಬೊಂಗ್‌ಶಿ ಮತ್ತು ಮೆಚ್‌ನಂತಹ ಸ್ಥಳೀಯ ಬುಡಕಟ್ಟು ಸಮುದಾಯಗಳಿಂದ ಮತಾಂತರಗೊಂಡವರಾಗಿದ್ದಾರೆ. ಗೋರಿಯಾಗಳು ಮತ್ತು ಮೊರಿಯಾಗಳು ತಮ್ಮ ವಂಶಾವಳಿಯನ್ನು ಅಹೋಮ್ ಆಳ್ವಿಕೆಯ ಸಮಯದಲ್ಲಿ ಈ ಪ್ರದೇಶಕ್ಕೆ ಬಂದ ಸೈನಿಕರು, ಕುಶಲಕರ್ಮಿಗಳು ಸೇರಿದಂತೆ ಇತ್ಯಾದಿ ಸಮುದಾಯಗಳಿಂದ ಗುರುತಿಸುತ್ತಾರೆ. ಜುಲ್ಹಾ ಮುಸಲ್ಮಾನರಂತಹ ಸಣ್ಣ ಗುಂಪುಗಳೂ ಈ ವರ್ಗಕ್ಕೆ ಸೇರುತ್ತವೆ.

ಈ ಗುಂಪುಗಳು ಪೂರ್ವ ಬಂಗಾಳ ಅಥವಾ ಬಾಂಗ್ಲಾದೇಶದಿಂದ ವಲಸೆ ಬಂದ ಬಂಗಾಳಿ-ಮಾತನಾಡುವ ಮುಸ್ಲಿಮರಿಂದ ತಮ್ಮನ್ನು ತಾವು ಭಿನ್ನವೆಂದು ಪರಿಗಣಿಸುತ್ತವೆ.

ಗುರುವಾರ ವರದಿಯನ್ನು ಅಂಗೀಕರಿಸಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಎಲ್ಲಾ ಶಿಫಾರಸುಗಳನ್ನು ಹಂತವಾರು ರೀತಿಯಲ್ಲಿ ಅನುಷ್ಠಾನಗೊಳಿಸಬಹುದು ಎಂದು ಹೇಳಿದ್ದಾರೆ. ‘ನಾವು ಅವುಗಳನ್ನು ಅಲ್ಪಾವಧಿ, ಮಧ್ಯಮ ಮತ್ತು ದೀರ್ಘಾವಧಿ ಎಂದು ವರ್ಗೀಕರಿಸಬಹುದು’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ವಿಸ್ ರಿವಾಲ್ವರ್ ಬಳಸಿ ಗರ್ಭಿಣಿ ಪತ್ನಿಯ ಹತ್ಯೆಗೈದ ಅಸ್ಸಾಂ ಪೊಲೀಸ್‌ ಪೇದೆ, ಬಂಧನ

ಸಮಿತಿಯು ವರದಿಯಲ್ಲಿ ಅಸ್ಸಾಮಿ ಮುಸ್ಲಿಮರ ವ್ಯಾಖ್ಯಾನವನ್ನು ಮುಂದಿಟ್ಟಿದೆ ಎಂದು ಅವರು ಹೇಳಿದ್ದಾರೆ. “ನಾವು ಸಮಿತಿ ನೀಡಿರುವ ವ್ಯಾಖ್ಯಾನವನ್ನು ಒಪ್ಪಿಕೊಂಡಿದ್ದೇವೆ…ಯಾವ ಗುಂಪಿಗೆ ಏನು ಕೆಲಸ ಮಾಡಬೇಕಾಗಿದೆ ಎಂದು ನಮ್ಮ ಗುರಿ ಸ್ಪಷ್ಟವಾಗಿರುತ್ತದೆ” ಎಂದು ಅವರು ಹೇಳಿದ್ದಾರೆ.

ನಮ್ಮ ಮುಂದಿನ ಹಂತವು ಈ ಗುಂಪುಗಳಿಗೆ, ಶಾಸಕಾಂಗದ ಕಾರ್ಯವಿಧಾನಗಳು, ಆಡಳಿತಾತ್ಮಕ ನಿರ್ಧಾರಗಳು ಮತ್ತು ಹಣಕಾಸಿನ ಬೆಂಬಲ ಒಳಗೊಂಡಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಸಮುದಾಯದ ಗುರುತಿನ ಹೊರತಾಗಿಯು, ಗುಂಪಿಗೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ತನ್ನ ವರದಿಯಲ್ಲಿ ಹೇಳಲಾಗಿದೆ. “ಸಂಸತ್ತು ಮತ್ತು ಅಸ್ಸಾಂ ವಿಧಾನಸಭೆಯಲ್ಲಿ ಅಸ್ಸಾಮಿ ಮುಸ್ಲಿಮರಿಗೆ ಪ್ರಾತಿನಿಧ್ಯವನ್ನು ಒದಗಿಸಲು ಸಂವಿಧಾನದ 333 ನೇ ವಿಧಿಯಂತೆಯೇ ಒಂದು ವಿಧಿಗೆ ಅದು ಕರೆ ನೀಡಿದೆ.

ಇದನ್ನೂ ಓದಿ: 10ನೇ ತರಗತಿವರೆಗೆ ಹಿಂದಿ ಕಡ್ಡಾಯಕ್ಕೆ ಅಮಿತ್ ಶಾ ಪ್ರಸ್ತಾಪ: ಪ್ರತಿಭಟನೆ ಎಚ್ಚರಿಕೆ ನೀಡಿದ ಅಸ್ಸಾಂ ವಿದ್ಯಾರ್ಥಿಗಳು

“ಭಾರತೀಯ ಸಂವಿಧಾನದ 169 ನೇ ವಿಧಿಯ ಪ್ರಕಾರ ಅಸ್ಸಾಂನಲ್ಲಿ ಮೇಲ್ಮನೆ (ವಿಧಾನ ಪರಿಷತ್ತು) ರಚಿಸಬಹುದು. ಲೆಜಿಸ್ಲೇಟಿವ್ ಕೌನ್ಸಿಲ್ ರಚನೆಯಾದ ನಂತರ, ಈ ಕೌನ್ಸಿಲ್‌ನಲ್ಲಿ ಅಸ್ಸಾಮಿ ಮುಸ್ಲಿಂ ಸಮುದಾಯಕ್ಕೆ ನಿರ್ದಿಷ್ಟ ಸಂಖ್ಯೆಯ ಸ್ಥಾನಗಳನ್ನು ಮೀಸಲಿಡಬಹುದು” ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಶಿಕ್ಷಣ, ರಾಜಕೀಯ ಪ್ರಾತಿನಿಧ್ಯ, ಆರೋಗ್ಯ, ಕೌಶಲ್ಯಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ವರದಿಯು ಸಲಹೆಗಳನ್ನು ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...