Homeರಾಷ್ಟ್ರೀಯಅಸ್ಸಾಮಿ ಮುಸ್ಲಿಮರನ್ನು ‘ವಿಶಿಷ್ಟ ಗುಂಪು’ ಎಂದು ಗುರುತಿಸಲು ಶಿಫಾರಸು!

ಅಸ್ಸಾಮಿ ಮುಸ್ಲಿಮರನ್ನು ‘ವಿಶಿಷ್ಟ ಗುಂಪು’ ಎಂದು ಗುರುತಿಸಲು ಶಿಫಾರಸು!

- Advertisement -
- Advertisement -

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ರಚಿಸಿದ ಸಮಿತಿಯು ರಾಜ್ಯದಲ್ಲಿನ ‘ಅಸ್ಸಾಮಿ ಮುಸ್ಲಿಮರನ್ನು’ ಒಂದು ವಿಶಿಷ್ಟ ಗುಂಪು ಎಂದು ಗುರುತಿಸಲು ಶಿಫಾರಸು ಮಾಡಿದೆ. ಕಳೆದ ಜುಲೈನಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಮುದಾಯದ ಸಾಮಾಜಿಕ-ಆರ್ಥಿಕ ಸಮಸ್ಯೆಗಳನ್ನು ಚರ್ಚಿಸಲು ವಿವಿಧ ಕ್ಷೇತ್ರಗಳ ಅಸ್ಸಾಮಿ ಮುಸ್ಲಿಂ ಸಮುದಾಯದ ಪ್ರತಿನಿಧಿಗಳನ್ನು ಭೇಟಿ ಮಾಡಿದ ನಂತರ ಈ ಸಮಿತಿಯನ್ನು ರಚಿಸಲಾಗಿತ್ತು. ಏಳು ಉಪಸಮಿತಿಗಳಾಗಿ ವಿಂಗಡಣೆಯಾದ ಸಮಿತಿಯು ತಿಂಗಳುಗಟ್ಟಲೆ ಚರ್ಚೆ ನಡೆಸಿ ಗುರುವಾರ ವರದಿ ಸಲ್ಲಿಸಿದೆ.

ಅಸ್ಸಾಮಿ ಮುಸ್ಲಿಮರಿಗೆ ಗುರುತಿನ ಕಾರ್ಡ್‌ಗಳನ್ನು ನೀಡುವುದರ ಜೊತೆಗೆ ಸಮುದಾಯವನ್ನು ‘ಗುರುತಿಸಲು ಮತ್ತು ದಾಖಲಿಸಲು’ ಜನಗಣತಿಯನ್ನು ನಡೆಸುವಂತೆ ಸಮಿತಿಯು ಸಲಹೆಗಳನ್ನು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಥಳೀಯ ಅಸ್ಸಾಮಿ ಮುಸ್ಲಿಂ ಸಮುದಾಯದಲ್ಲಿ ಮೂರು ಪ್ರಮುಖ ಗುಂಪುಗಲಿವೆ: ಗೋರಿಯಾಗಳು, ಮೊರಿಯಾಗಳು (ಉತ್ತರ ಅಸ್ಸಾಂನಿಂದ) ಮತ್ತು ದೇಶಿಗಳು (ದಕ್ಷಿಣ ಅಸ್ಸಾಂನಿಂದ).

ಇದನ್ನೂ ಓದಿ: ಅಸ್ಸಾಂ: ನಿರುದ್ಯೋಗದ ಬಗ್ಗೆ ಮಾತನಾಡಿ ಸದನದಿಂದ ಅಮಾನತುಗೊಂಡ ಶಾಸಕ ಅಖಿಲ್ ಗೊಗೊಯ್ 

ದೇಶಿಗಳು 13ನೇ ಶತಮಾನದ ಕೋಚ್ ರಾಜ್‌ಬೊಂಗ್‌ಶಿ ಮತ್ತು ಮೆಚ್‌ನಂತಹ ಸ್ಥಳೀಯ ಬುಡಕಟ್ಟು ಸಮುದಾಯಗಳಿಂದ ಮತಾಂತರಗೊಂಡವರಾಗಿದ್ದಾರೆ. ಗೋರಿಯಾಗಳು ಮತ್ತು ಮೊರಿಯಾಗಳು ತಮ್ಮ ವಂಶಾವಳಿಯನ್ನು ಅಹೋಮ್ ಆಳ್ವಿಕೆಯ ಸಮಯದಲ್ಲಿ ಈ ಪ್ರದೇಶಕ್ಕೆ ಬಂದ ಸೈನಿಕರು, ಕುಶಲಕರ್ಮಿಗಳು ಸೇರಿದಂತೆ ಇತ್ಯಾದಿ ಸಮುದಾಯಗಳಿಂದ ಗುರುತಿಸುತ್ತಾರೆ. ಜುಲ್ಹಾ ಮುಸಲ್ಮಾನರಂತಹ ಸಣ್ಣ ಗುಂಪುಗಳೂ ಈ ವರ್ಗಕ್ಕೆ ಸೇರುತ್ತವೆ.

ಈ ಗುಂಪುಗಳು ಪೂರ್ವ ಬಂಗಾಳ ಅಥವಾ ಬಾಂಗ್ಲಾದೇಶದಿಂದ ವಲಸೆ ಬಂದ ಬಂಗಾಳಿ-ಮಾತನಾಡುವ ಮುಸ್ಲಿಮರಿಂದ ತಮ್ಮನ್ನು ತಾವು ಭಿನ್ನವೆಂದು ಪರಿಗಣಿಸುತ್ತವೆ.

ಗುರುವಾರ ವರದಿಯನ್ನು ಅಂಗೀಕರಿಸಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಎಲ್ಲಾ ಶಿಫಾರಸುಗಳನ್ನು ಹಂತವಾರು ರೀತಿಯಲ್ಲಿ ಅನುಷ್ಠಾನಗೊಳಿಸಬಹುದು ಎಂದು ಹೇಳಿದ್ದಾರೆ. ‘ನಾವು ಅವುಗಳನ್ನು ಅಲ್ಪಾವಧಿ, ಮಧ್ಯಮ ಮತ್ತು ದೀರ್ಘಾವಧಿ ಎಂದು ವರ್ಗೀಕರಿಸಬಹುದು’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ವಿಸ್ ರಿವಾಲ್ವರ್ ಬಳಸಿ ಗರ್ಭಿಣಿ ಪತ್ನಿಯ ಹತ್ಯೆಗೈದ ಅಸ್ಸಾಂ ಪೊಲೀಸ್‌ ಪೇದೆ, ಬಂಧನ

ಸಮಿತಿಯು ವರದಿಯಲ್ಲಿ ಅಸ್ಸಾಮಿ ಮುಸ್ಲಿಮರ ವ್ಯಾಖ್ಯಾನವನ್ನು ಮುಂದಿಟ್ಟಿದೆ ಎಂದು ಅವರು ಹೇಳಿದ್ದಾರೆ. “ನಾವು ಸಮಿತಿ ನೀಡಿರುವ ವ್ಯಾಖ್ಯಾನವನ್ನು ಒಪ್ಪಿಕೊಂಡಿದ್ದೇವೆ…ಯಾವ ಗುಂಪಿಗೆ ಏನು ಕೆಲಸ ಮಾಡಬೇಕಾಗಿದೆ ಎಂದು ನಮ್ಮ ಗುರಿ ಸ್ಪಷ್ಟವಾಗಿರುತ್ತದೆ” ಎಂದು ಅವರು ಹೇಳಿದ್ದಾರೆ.

ನಮ್ಮ ಮುಂದಿನ ಹಂತವು ಈ ಗುಂಪುಗಳಿಗೆ, ಶಾಸಕಾಂಗದ ಕಾರ್ಯವಿಧಾನಗಳು, ಆಡಳಿತಾತ್ಮಕ ನಿರ್ಧಾರಗಳು ಮತ್ತು ಹಣಕಾಸಿನ ಬೆಂಬಲ ಒಳಗೊಂಡಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಸಮುದಾಯದ ಗುರುತಿನ ಹೊರತಾಗಿಯು, ಗುಂಪಿಗೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ತನ್ನ ವರದಿಯಲ್ಲಿ ಹೇಳಲಾಗಿದೆ. “ಸಂಸತ್ತು ಮತ್ತು ಅಸ್ಸಾಂ ವಿಧಾನಸಭೆಯಲ್ಲಿ ಅಸ್ಸಾಮಿ ಮುಸ್ಲಿಮರಿಗೆ ಪ್ರಾತಿನಿಧ್ಯವನ್ನು ಒದಗಿಸಲು ಸಂವಿಧಾನದ 333 ನೇ ವಿಧಿಯಂತೆಯೇ ಒಂದು ವಿಧಿಗೆ ಅದು ಕರೆ ನೀಡಿದೆ.

ಇದನ್ನೂ ಓದಿ: 10ನೇ ತರಗತಿವರೆಗೆ ಹಿಂದಿ ಕಡ್ಡಾಯಕ್ಕೆ ಅಮಿತ್ ಶಾ ಪ್ರಸ್ತಾಪ: ಪ್ರತಿಭಟನೆ ಎಚ್ಚರಿಕೆ ನೀಡಿದ ಅಸ್ಸಾಂ ವಿದ್ಯಾರ್ಥಿಗಳು

“ಭಾರತೀಯ ಸಂವಿಧಾನದ 169 ನೇ ವಿಧಿಯ ಪ್ರಕಾರ ಅಸ್ಸಾಂನಲ್ಲಿ ಮೇಲ್ಮನೆ (ವಿಧಾನ ಪರಿಷತ್ತು) ರಚಿಸಬಹುದು. ಲೆಜಿಸ್ಲೇಟಿವ್ ಕೌನ್ಸಿಲ್ ರಚನೆಯಾದ ನಂತರ, ಈ ಕೌನ್ಸಿಲ್‌ನಲ್ಲಿ ಅಸ್ಸಾಮಿ ಮುಸ್ಲಿಂ ಸಮುದಾಯಕ್ಕೆ ನಿರ್ದಿಷ್ಟ ಸಂಖ್ಯೆಯ ಸ್ಥಾನಗಳನ್ನು ಮೀಸಲಿಡಬಹುದು” ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಶಿಕ್ಷಣ, ರಾಜಕೀಯ ಪ್ರಾತಿನಿಧ್ಯ, ಆರೋಗ್ಯ, ಕೌಶಲ್ಯಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ವರದಿಯು ಸಲಹೆಗಳನ್ನು ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...