Homeರಾಷ್ಟ್ರೀಯಅಸ್ಸಾಮಿ ಮುಸ್ಲಿಮರನ್ನು ‘ವಿಶಿಷ್ಟ ಗುಂಪು’ ಎಂದು ಗುರುತಿಸಲು ಶಿಫಾರಸು!

ಅಸ್ಸಾಮಿ ಮುಸ್ಲಿಮರನ್ನು ‘ವಿಶಿಷ್ಟ ಗುಂಪು’ ಎಂದು ಗುರುತಿಸಲು ಶಿಫಾರಸು!

- Advertisement -
- Advertisement -

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ರಚಿಸಿದ ಸಮಿತಿಯು ರಾಜ್ಯದಲ್ಲಿನ ‘ಅಸ್ಸಾಮಿ ಮುಸ್ಲಿಮರನ್ನು’ ಒಂದು ವಿಶಿಷ್ಟ ಗುಂಪು ಎಂದು ಗುರುತಿಸಲು ಶಿಫಾರಸು ಮಾಡಿದೆ. ಕಳೆದ ಜುಲೈನಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಮುದಾಯದ ಸಾಮಾಜಿಕ-ಆರ್ಥಿಕ ಸಮಸ್ಯೆಗಳನ್ನು ಚರ್ಚಿಸಲು ವಿವಿಧ ಕ್ಷೇತ್ರಗಳ ಅಸ್ಸಾಮಿ ಮುಸ್ಲಿಂ ಸಮುದಾಯದ ಪ್ರತಿನಿಧಿಗಳನ್ನು ಭೇಟಿ ಮಾಡಿದ ನಂತರ ಈ ಸಮಿತಿಯನ್ನು ರಚಿಸಲಾಗಿತ್ತು. ಏಳು ಉಪಸಮಿತಿಗಳಾಗಿ ವಿಂಗಡಣೆಯಾದ ಸಮಿತಿಯು ತಿಂಗಳುಗಟ್ಟಲೆ ಚರ್ಚೆ ನಡೆಸಿ ಗುರುವಾರ ವರದಿ ಸಲ್ಲಿಸಿದೆ.

ಅಸ್ಸಾಮಿ ಮುಸ್ಲಿಮರಿಗೆ ಗುರುತಿನ ಕಾರ್ಡ್‌ಗಳನ್ನು ನೀಡುವುದರ ಜೊತೆಗೆ ಸಮುದಾಯವನ್ನು ‘ಗುರುತಿಸಲು ಮತ್ತು ದಾಖಲಿಸಲು’ ಜನಗಣತಿಯನ್ನು ನಡೆಸುವಂತೆ ಸಮಿತಿಯು ಸಲಹೆಗಳನ್ನು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಥಳೀಯ ಅಸ್ಸಾಮಿ ಮುಸ್ಲಿಂ ಸಮುದಾಯದಲ್ಲಿ ಮೂರು ಪ್ರಮುಖ ಗುಂಪುಗಲಿವೆ: ಗೋರಿಯಾಗಳು, ಮೊರಿಯಾಗಳು (ಉತ್ತರ ಅಸ್ಸಾಂನಿಂದ) ಮತ್ತು ದೇಶಿಗಳು (ದಕ್ಷಿಣ ಅಸ್ಸಾಂನಿಂದ).

ಇದನ್ನೂ ಓದಿ: ಅಸ್ಸಾಂ: ನಿರುದ್ಯೋಗದ ಬಗ್ಗೆ ಮಾತನಾಡಿ ಸದನದಿಂದ ಅಮಾನತುಗೊಂಡ ಶಾಸಕ ಅಖಿಲ್ ಗೊಗೊಯ್ 

ದೇಶಿಗಳು 13ನೇ ಶತಮಾನದ ಕೋಚ್ ರಾಜ್‌ಬೊಂಗ್‌ಶಿ ಮತ್ತು ಮೆಚ್‌ನಂತಹ ಸ್ಥಳೀಯ ಬುಡಕಟ್ಟು ಸಮುದಾಯಗಳಿಂದ ಮತಾಂತರಗೊಂಡವರಾಗಿದ್ದಾರೆ. ಗೋರಿಯಾಗಳು ಮತ್ತು ಮೊರಿಯಾಗಳು ತಮ್ಮ ವಂಶಾವಳಿಯನ್ನು ಅಹೋಮ್ ಆಳ್ವಿಕೆಯ ಸಮಯದಲ್ಲಿ ಈ ಪ್ರದೇಶಕ್ಕೆ ಬಂದ ಸೈನಿಕರು, ಕುಶಲಕರ್ಮಿಗಳು ಸೇರಿದಂತೆ ಇತ್ಯಾದಿ ಸಮುದಾಯಗಳಿಂದ ಗುರುತಿಸುತ್ತಾರೆ. ಜುಲ್ಹಾ ಮುಸಲ್ಮಾನರಂತಹ ಸಣ್ಣ ಗುಂಪುಗಳೂ ಈ ವರ್ಗಕ್ಕೆ ಸೇರುತ್ತವೆ.

ಈ ಗುಂಪುಗಳು ಪೂರ್ವ ಬಂಗಾಳ ಅಥವಾ ಬಾಂಗ್ಲಾದೇಶದಿಂದ ವಲಸೆ ಬಂದ ಬಂಗಾಳಿ-ಮಾತನಾಡುವ ಮುಸ್ಲಿಮರಿಂದ ತಮ್ಮನ್ನು ತಾವು ಭಿನ್ನವೆಂದು ಪರಿಗಣಿಸುತ್ತವೆ.

ಗುರುವಾರ ವರದಿಯನ್ನು ಅಂಗೀಕರಿಸಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಎಲ್ಲಾ ಶಿಫಾರಸುಗಳನ್ನು ಹಂತವಾರು ರೀತಿಯಲ್ಲಿ ಅನುಷ್ಠಾನಗೊಳಿಸಬಹುದು ಎಂದು ಹೇಳಿದ್ದಾರೆ. ‘ನಾವು ಅವುಗಳನ್ನು ಅಲ್ಪಾವಧಿ, ಮಧ್ಯಮ ಮತ್ತು ದೀರ್ಘಾವಧಿ ಎಂದು ವರ್ಗೀಕರಿಸಬಹುದು’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ವಿಸ್ ರಿವಾಲ್ವರ್ ಬಳಸಿ ಗರ್ಭಿಣಿ ಪತ್ನಿಯ ಹತ್ಯೆಗೈದ ಅಸ್ಸಾಂ ಪೊಲೀಸ್‌ ಪೇದೆ, ಬಂಧನ

ಸಮಿತಿಯು ವರದಿಯಲ್ಲಿ ಅಸ್ಸಾಮಿ ಮುಸ್ಲಿಮರ ವ್ಯಾಖ್ಯಾನವನ್ನು ಮುಂದಿಟ್ಟಿದೆ ಎಂದು ಅವರು ಹೇಳಿದ್ದಾರೆ. “ನಾವು ಸಮಿತಿ ನೀಡಿರುವ ವ್ಯಾಖ್ಯಾನವನ್ನು ಒಪ್ಪಿಕೊಂಡಿದ್ದೇವೆ…ಯಾವ ಗುಂಪಿಗೆ ಏನು ಕೆಲಸ ಮಾಡಬೇಕಾಗಿದೆ ಎಂದು ನಮ್ಮ ಗುರಿ ಸ್ಪಷ್ಟವಾಗಿರುತ್ತದೆ” ಎಂದು ಅವರು ಹೇಳಿದ್ದಾರೆ.

ನಮ್ಮ ಮುಂದಿನ ಹಂತವು ಈ ಗುಂಪುಗಳಿಗೆ, ಶಾಸಕಾಂಗದ ಕಾರ್ಯವಿಧಾನಗಳು, ಆಡಳಿತಾತ್ಮಕ ನಿರ್ಧಾರಗಳು ಮತ್ತು ಹಣಕಾಸಿನ ಬೆಂಬಲ ಒಳಗೊಂಡಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಸಮುದಾಯದ ಗುರುತಿನ ಹೊರತಾಗಿಯು, ಗುಂಪಿಗೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ತನ್ನ ವರದಿಯಲ್ಲಿ ಹೇಳಲಾಗಿದೆ. “ಸಂಸತ್ತು ಮತ್ತು ಅಸ್ಸಾಂ ವಿಧಾನಸಭೆಯಲ್ಲಿ ಅಸ್ಸಾಮಿ ಮುಸ್ಲಿಮರಿಗೆ ಪ್ರಾತಿನಿಧ್ಯವನ್ನು ಒದಗಿಸಲು ಸಂವಿಧಾನದ 333 ನೇ ವಿಧಿಯಂತೆಯೇ ಒಂದು ವಿಧಿಗೆ ಅದು ಕರೆ ನೀಡಿದೆ.

ಇದನ್ನೂ ಓದಿ: 10ನೇ ತರಗತಿವರೆಗೆ ಹಿಂದಿ ಕಡ್ಡಾಯಕ್ಕೆ ಅಮಿತ್ ಶಾ ಪ್ರಸ್ತಾಪ: ಪ್ರತಿಭಟನೆ ಎಚ್ಚರಿಕೆ ನೀಡಿದ ಅಸ್ಸಾಂ ವಿದ್ಯಾರ್ಥಿಗಳು

“ಭಾರತೀಯ ಸಂವಿಧಾನದ 169 ನೇ ವಿಧಿಯ ಪ್ರಕಾರ ಅಸ್ಸಾಂನಲ್ಲಿ ಮೇಲ್ಮನೆ (ವಿಧಾನ ಪರಿಷತ್ತು) ರಚಿಸಬಹುದು. ಲೆಜಿಸ್ಲೇಟಿವ್ ಕೌನ್ಸಿಲ್ ರಚನೆಯಾದ ನಂತರ, ಈ ಕೌನ್ಸಿಲ್‌ನಲ್ಲಿ ಅಸ್ಸಾಮಿ ಮುಸ್ಲಿಂ ಸಮುದಾಯಕ್ಕೆ ನಿರ್ದಿಷ್ಟ ಸಂಖ್ಯೆಯ ಸ್ಥಾನಗಳನ್ನು ಮೀಸಲಿಡಬಹುದು” ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಶಿಕ್ಷಣ, ರಾಜಕೀಯ ಪ್ರಾತಿನಿಧ್ಯ, ಆರೋಗ್ಯ, ಕೌಶಲ್ಯಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ವರದಿಯು ಸಲಹೆಗಳನ್ನು ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...