Homeರಾಷ್ಟ್ರೀಯಅಸ್ಸಾಮಿ ಮುಸ್ಲಿಮರನ್ನು ‘ವಿಶಿಷ್ಟ ಗುಂಪು’ ಎಂದು ಗುರುತಿಸಲು ಶಿಫಾರಸು!

ಅಸ್ಸಾಮಿ ಮುಸ್ಲಿಮರನ್ನು ‘ವಿಶಿಷ್ಟ ಗುಂಪು’ ಎಂದು ಗುರುತಿಸಲು ಶಿಫಾರಸು!

- Advertisement -
- Advertisement -

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ರಚಿಸಿದ ಸಮಿತಿಯು ರಾಜ್ಯದಲ್ಲಿನ ‘ಅಸ್ಸಾಮಿ ಮುಸ್ಲಿಮರನ್ನು’ ಒಂದು ವಿಶಿಷ್ಟ ಗುಂಪು ಎಂದು ಗುರುತಿಸಲು ಶಿಫಾರಸು ಮಾಡಿದೆ. ಕಳೆದ ಜುಲೈನಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಮುದಾಯದ ಸಾಮಾಜಿಕ-ಆರ್ಥಿಕ ಸಮಸ್ಯೆಗಳನ್ನು ಚರ್ಚಿಸಲು ವಿವಿಧ ಕ್ಷೇತ್ರಗಳ ಅಸ್ಸಾಮಿ ಮುಸ್ಲಿಂ ಸಮುದಾಯದ ಪ್ರತಿನಿಧಿಗಳನ್ನು ಭೇಟಿ ಮಾಡಿದ ನಂತರ ಈ ಸಮಿತಿಯನ್ನು ರಚಿಸಲಾಗಿತ್ತು. ಏಳು ಉಪಸಮಿತಿಗಳಾಗಿ ವಿಂಗಡಣೆಯಾದ ಸಮಿತಿಯು ತಿಂಗಳುಗಟ್ಟಲೆ ಚರ್ಚೆ ನಡೆಸಿ ಗುರುವಾರ ವರದಿ ಸಲ್ಲಿಸಿದೆ.

ಅಸ್ಸಾಮಿ ಮುಸ್ಲಿಮರಿಗೆ ಗುರುತಿನ ಕಾರ್ಡ್‌ಗಳನ್ನು ನೀಡುವುದರ ಜೊತೆಗೆ ಸಮುದಾಯವನ್ನು ‘ಗುರುತಿಸಲು ಮತ್ತು ದಾಖಲಿಸಲು’ ಜನಗಣತಿಯನ್ನು ನಡೆಸುವಂತೆ ಸಮಿತಿಯು ಸಲಹೆಗಳನ್ನು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಥಳೀಯ ಅಸ್ಸಾಮಿ ಮುಸ್ಲಿಂ ಸಮುದಾಯದಲ್ಲಿ ಮೂರು ಪ್ರಮುಖ ಗುಂಪುಗಲಿವೆ: ಗೋರಿಯಾಗಳು, ಮೊರಿಯಾಗಳು (ಉತ್ತರ ಅಸ್ಸಾಂನಿಂದ) ಮತ್ತು ದೇಶಿಗಳು (ದಕ್ಷಿಣ ಅಸ್ಸಾಂನಿಂದ).

ಇದನ್ನೂ ಓದಿ: ಅಸ್ಸಾಂ: ನಿರುದ್ಯೋಗದ ಬಗ್ಗೆ ಮಾತನಾಡಿ ಸದನದಿಂದ ಅಮಾನತುಗೊಂಡ ಶಾಸಕ ಅಖಿಲ್ ಗೊಗೊಯ್ 

ದೇಶಿಗಳು 13ನೇ ಶತಮಾನದ ಕೋಚ್ ರಾಜ್‌ಬೊಂಗ್‌ಶಿ ಮತ್ತು ಮೆಚ್‌ನಂತಹ ಸ್ಥಳೀಯ ಬುಡಕಟ್ಟು ಸಮುದಾಯಗಳಿಂದ ಮತಾಂತರಗೊಂಡವರಾಗಿದ್ದಾರೆ. ಗೋರಿಯಾಗಳು ಮತ್ತು ಮೊರಿಯಾಗಳು ತಮ್ಮ ವಂಶಾವಳಿಯನ್ನು ಅಹೋಮ್ ಆಳ್ವಿಕೆಯ ಸಮಯದಲ್ಲಿ ಈ ಪ್ರದೇಶಕ್ಕೆ ಬಂದ ಸೈನಿಕರು, ಕುಶಲಕರ್ಮಿಗಳು ಸೇರಿದಂತೆ ಇತ್ಯಾದಿ ಸಮುದಾಯಗಳಿಂದ ಗುರುತಿಸುತ್ತಾರೆ. ಜುಲ್ಹಾ ಮುಸಲ್ಮಾನರಂತಹ ಸಣ್ಣ ಗುಂಪುಗಳೂ ಈ ವರ್ಗಕ್ಕೆ ಸೇರುತ್ತವೆ.

ಈ ಗುಂಪುಗಳು ಪೂರ್ವ ಬಂಗಾಳ ಅಥವಾ ಬಾಂಗ್ಲಾದೇಶದಿಂದ ವಲಸೆ ಬಂದ ಬಂಗಾಳಿ-ಮಾತನಾಡುವ ಮುಸ್ಲಿಮರಿಂದ ತಮ್ಮನ್ನು ತಾವು ಭಿನ್ನವೆಂದು ಪರಿಗಣಿಸುತ್ತವೆ.

ಗುರುವಾರ ವರದಿಯನ್ನು ಅಂಗೀಕರಿಸಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಎಲ್ಲಾ ಶಿಫಾರಸುಗಳನ್ನು ಹಂತವಾರು ರೀತಿಯಲ್ಲಿ ಅನುಷ್ಠಾನಗೊಳಿಸಬಹುದು ಎಂದು ಹೇಳಿದ್ದಾರೆ. ‘ನಾವು ಅವುಗಳನ್ನು ಅಲ್ಪಾವಧಿ, ಮಧ್ಯಮ ಮತ್ತು ದೀರ್ಘಾವಧಿ ಎಂದು ವರ್ಗೀಕರಿಸಬಹುದು’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ವಿಸ್ ರಿವಾಲ್ವರ್ ಬಳಸಿ ಗರ್ಭಿಣಿ ಪತ್ನಿಯ ಹತ್ಯೆಗೈದ ಅಸ್ಸಾಂ ಪೊಲೀಸ್‌ ಪೇದೆ, ಬಂಧನ

ಸಮಿತಿಯು ವರದಿಯಲ್ಲಿ ಅಸ್ಸಾಮಿ ಮುಸ್ಲಿಮರ ವ್ಯಾಖ್ಯಾನವನ್ನು ಮುಂದಿಟ್ಟಿದೆ ಎಂದು ಅವರು ಹೇಳಿದ್ದಾರೆ. “ನಾವು ಸಮಿತಿ ನೀಡಿರುವ ವ್ಯಾಖ್ಯಾನವನ್ನು ಒಪ್ಪಿಕೊಂಡಿದ್ದೇವೆ…ಯಾವ ಗುಂಪಿಗೆ ಏನು ಕೆಲಸ ಮಾಡಬೇಕಾಗಿದೆ ಎಂದು ನಮ್ಮ ಗುರಿ ಸ್ಪಷ್ಟವಾಗಿರುತ್ತದೆ” ಎಂದು ಅವರು ಹೇಳಿದ್ದಾರೆ.

ನಮ್ಮ ಮುಂದಿನ ಹಂತವು ಈ ಗುಂಪುಗಳಿಗೆ, ಶಾಸಕಾಂಗದ ಕಾರ್ಯವಿಧಾನಗಳು, ಆಡಳಿತಾತ್ಮಕ ನಿರ್ಧಾರಗಳು ಮತ್ತು ಹಣಕಾಸಿನ ಬೆಂಬಲ ಒಳಗೊಂಡಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಸಮುದಾಯದ ಗುರುತಿನ ಹೊರತಾಗಿಯು, ಗುಂಪಿಗೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ತನ್ನ ವರದಿಯಲ್ಲಿ ಹೇಳಲಾಗಿದೆ. “ಸಂಸತ್ತು ಮತ್ತು ಅಸ್ಸಾಂ ವಿಧಾನಸಭೆಯಲ್ಲಿ ಅಸ್ಸಾಮಿ ಮುಸ್ಲಿಮರಿಗೆ ಪ್ರಾತಿನಿಧ್ಯವನ್ನು ಒದಗಿಸಲು ಸಂವಿಧಾನದ 333 ನೇ ವಿಧಿಯಂತೆಯೇ ಒಂದು ವಿಧಿಗೆ ಅದು ಕರೆ ನೀಡಿದೆ.

ಇದನ್ನೂ ಓದಿ: 10ನೇ ತರಗತಿವರೆಗೆ ಹಿಂದಿ ಕಡ್ಡಾಯಕ್ಕೆ ಅಮಿತ್ ಶಾ ಪ್ರಸ್ತಾಪ: ಪ್ರತಿಭಟನೆ ಎಚ್ಚರಿಕೆ ನೀಡಿದ ಅಸ್ಸಾಂ ವಿದ್ಯಾರ್ಥಿಗಳು

“ಭಾರತೀಯ ಸಂವಿಧಾನದ 169 ನೇ ವಿಧಿಯ ಪ್ರಕಾರ ಅಸ್ಸಾಂನಲ್ಲಿ ಮೇಲ್ಮನೆ (ವಿಧಾನ ಪರಿಷತ್ತು) ರಚಿಸಬಹುದು. ಲೆಜಿಸ್ಲೇಟಿವ್ ಕೌನ್ಸಿಲ್ ರಚನೆಯಾದ ನಂತರ, ಈ ಕೌನ್ಸಿಲ್‌ನಲ್ಲಿ ಅಸ್ಸಾಮಿ ಮುಸ್ಲಿಂ ಸಮುದಾಯಕ್ಕೆ ನಿರ್ದಿಷ್ಟ ಸಂಖ್ಯೆಯ ಸ್ಥಾನಗಳನ್ನು ಮೀಸಲಿಡಬಹುದು” ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಶಿಕ್ಷಣ, ರಾಜಕೀಯ ಪ್ರಾತಿನಿಧ್ಯ, ಆರೋಗ್ಯ, ಕೌಶಲ್ಯಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ವರದಿಯು ಸಲಹೆಗಳನ್ನು ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...