Homeಮುಖಪುಟಐಪಿಎಲ್‌ನ ಚೀನಾದ ಪ್ರಾಯೋಜಕತ್ವವನ್ನು ಮರುಪರಿಶೀಲಿಸಿ: ಸ್ವದೇಶಿ ಜಾಗರಣ ಮಂಚ್

ಐಪಿಎಲ್‌ನ ಚೀನಾದ ಪ್ರಾಯೋಜಕತ್ವವನ್ನು ಮರುಪರಿಶೀಲಿಸಿ: ಸ್ವದೇಶಿ ಜಾಗರಣ ಮಂಚ್

ಪ್ರಾಯೋಜಕತ್ವವನ್ನು ಬದಲಿಸುವ ನಿರ್ಧಾರ ತೆಗೆದುಕೊಳ್ಳದಿದ್ದರೆ ಭಾರತೀಯರು ಈ ಪ್ರಮುಖ ಕ್ರಿಕೆಟ್ ಸರಣಿಯನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.

- Advertisement -
- Advertisement -

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅನ್ನು ಪ್ರಾಯೋಜಿಸಲು ಚೀನಾದ ಪ್ರಮುಖ ಕಂಪನಿ VIVOಗೆ ಅವಕಾಶ ನೀಡುವ ನಿರ್ಧಾರವನ್ನು ಗಡಿ ಸಂಘರ್ಷದ ಹಿನ್ನೆಲೆಯಲ್ಲಿ ಮರುಪರಿಶೀಲಿಸಬೇಕು ಎಂದು ಸ್ವದೇಶಿ ಜಾಗರಣ ಮಂಚ್ (ಎಸ್‌ಜೆಎಂ) ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ಒತ್ತಾಯಿಸಿದೆ.

ಚೀನಾದ ಸರಕುಗಳನ್ನು ಬಹಿಷ್ಕರಿಸುವ ಅಭಿಯಾನದಲ್ಲಿ ಮುಂಚೂಣಿಯಲ್ಲಿದ್ದ ರಾಷ್ಟ್ರೀಯ ಸ್ವಯಂ ಸೇವಾಸಂಘದ (ಆರ್‌ಎಸ್‌ಎಸ್) ಅಂಗಸಂಸ್ಥೆಯಾದ ಎಸ್‌ಜೆಎಂ, ಚೀನಾದ ಪ್ರಾಯೋಜಕತ್ವವನ್ನು ಅನುಮತಿಸುವ ಬಿಸಿಸಿಐ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದೆ.

ಪ್ರಾಯೋಜಕತ್ವವನ್ನು ಬದಲಿಸುವ ನಿರ್ಧಾರ ತೆಗೆದುಕೊಳ್ಳದಿದ್ದರೆ ಭಾರತೀಯರು ಈ ಪ್ರಮುಖ ಕ್ರಿಕೆಟ್ ಸರಣಿಯನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.

ಎಸ್‌ಜೆಎಂನ ರಾಷ್ಟ್ರೀಯ ಸಹ-ಸಂಚಾಲಕ ಅಶ್ವನಿ ಮಹಾಜನ್ ‘ಬಿಸಿಸಿಐ ನಿರ್ಧಾರವು ಪ್ರಸ್ತುತ ರಾಷ್ಟ್ರದ ಪರಿಸ್ಥಿತಿಗೆ ವಿರುದ್ಧವಾಗಿದೆ’ ಎಂದಿದ್ದಾರೆ.

“ಚೀನೀ ಸರಕುಗಳನ್ನು ಬಹಿಷ್ಕರಿಸುವ ಕರೆ ಇನ್ನು ಮುಂದೆ ಕೇವಲ ಎಸ್‌ಜೆಎಂನ ಕರೆಯಲ್ಲ. ಇದು ಭಾರತ ಮತ್ತು ಚೀನಾ ನಡುವೆ ಏನಾಯಿತು ಎಂಬುದರ ಹಿನ್ನೆಲೆಯಲ್ಲಿ ಸಾಮಾನ್ಯ ನಾಗರಿಕರ ಕರೆ” ಎಂದು ಅವರು ಹೇಳಿದರು.

ಕ್ರಿಕೆಟ್ ಮಂಡಳಿ ರಾಷ್ಟ್ರದ ವಿಷಯದಲ್ಲಿ ಸೂಕ್ಷ್ಮವಾಗಿರಬೇಕು, ಮತ್ತು ಅದು ಭದ್ರತಾ ಕಾಳಜಿಗಳನ್ನು ಹೊಂದಿರಬೇಕು ಎಂದು ಮಹಾಜನ್ ಹೇಳಿದರು.

“ಇಡೀ ಜಗತ್ತು ಚೀನಾವನ್ನು ಬಹಿಷ್ಕರಿಸುತ್ತಿದೆ, ಆದರೆ ಐಪಿಎಲ್ ಅವರಿಗೆ ಆಶ್ರಯ ನೀಡುತ್ತಿದೆ. ರಾಷ್ಟ್ರಕ್ಕಿಂತ ಯಾವುದು ದೊಡ್ಡದಲ್ಲ ಎಂದು ಅವರು ಅರ್ಥಮಾಡಿಕೊಳ್ಳಬೇಕು” ಎಂದಿದ್ದಾರೆ.

ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ನಡೆದ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು.

ಆರ್‌ಎಸ್‌ಎಸ್ ಮತ್ತು ಅದರ ಅಂಗಸಂಸ್ಥೆಗಳು ಚೀನಾವನ್ನು ಎದುರಿಸಲು ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳನ್ನು ಮರುಪರಿಶೀಲಿಸುವ ಅಭಿಯಾನವನ್ನು ತೀವ್ರಗೊಳಿಸಿವೆ.

ಚೀನಾದ ಸರಕುಗಳನ್ನು ಬಹಿಷ್ಕರಿಸುವ ಬೇಡಿಕೆಗೆ ಬೆಂಬಲ ನೀಡಿ, ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ಭೈಯಾಜಿ ಜೋಶಿ ಕಳೆದ ತಿಂಗಳು ಆರ್‌ಎಸ್‌ಎಸ್ ಪ್ರಕಟಣೆಯೊಂದಕ್ಕೆ ಮಾತನಾಡುತ್ತಾ, ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಅಭಿಯಾನವು ಸ್ವಾಭಾವಿಕವಾಗಿ ಸಂಭವಿಸಿದೆ ಎಂದಿದ್ದರು. ಪ್ರತಿಪಕ್ಷಗಳು ಕೂಡ ಬಿಸಿಸಿಐ ನಿರ್ಧಾರವನ್ನು ಟೀಕಿಸಿವೆ.


ಇದನ್ನೂ ಓದಿ: VIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...