HomeಮುಖಪುಟElection Results 2021 Live Updates: ಚೇತರಿಸಿದ ಅಸ್ಸಾಂ ಕಾಂಗ್ರೆಸ್‌‌; BJP ಗೆ ಗೆಲುವಿನಲ್ಲೂ ಹಿನ್ನಡೆ

Election Results 2021 Live Updates: ಚೇತರಿಸಿದ ಅಸ್ಸಾಂ ಕಾಂಗ್ರೆಸ್‌‌; BJP ಗೆ ಗೆಲುವಿನಲ್ಲೂ ಹಿನ್ನಡೆ

- Advertisement -
- Advertisement -

Election Results 2021 Live Updates | Assembly election 2021 result | latest election results | latest election news | NaanuGauri

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಆಡಳಿತ ಪಕ್ಷಗಳ ಮೈತ್ರಿಕೂಟ ಮುನ್ನಡೆ ಸಾಧಿಸುತ್ತಿದ್ದರೂ, ಕಾಂಗ್ರೆಸ್ ಚೇತರಿಸಿಕೊಳ್ಳುತ್ತಿದೆ. ಬಿಜೆಪಿ ಮೈತ್ರಿಕೂಟ ಇದುವರೆಗೂ 72 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದು ಮೈತ್ರಿ ಕೂಟದ ಕಳೆದ ಬಾರಿಗಿಂತ ಒಂದು ಸ್ಥಾನವು ಕಡಿಮೆಯಾಗಿದೆ. ಕಾಂಗ್ರೆಸ್‌ ಮೈತ್ರಿಕೂಟ 52 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಮೈತ್ರಿಕೂಟದಲ್ಲಿ ಬಿಜೆಪಿಯೊಂದೆ 57 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 60 ಸ್ಥಾನಗಳಲ್ಲಿ ಗೆಲುವು ಪಡೆದಿತ್ತು. ಕಾಂಗ್ರೆಸ್ ಈ ಬಾರಿ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಬಾರಿ ಪಕ್ಷವು 26 ಸ್ಥಾನಗಳನ್ನು ಪಡೆದಿತ್ತು.

ರಾಜ್ಯದಲ್ಲಿ ಇದುವರೆಗೂ ಬಿಜೆಪಿ ಮೈತ್ರಿಕೂಟದಲ್ಲಿ ಬಿಜೆಪಿ ಪಕ್ಷವೊಂದೆ 57 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಅದರ ಮೈತ್ರಿ ಪಕ್ಷಗಳಾದ
AGP ► 10 ಮುನ್ನಡೆ
UPPL ►5 ಮುನ್ನಡೆ ಸಾಧಿಸಿದೆ.

ಕಾಂಗ್ರಸ್ ಮೈತ್ರಿಕೂಟದಲ್ಲಿ ಪಕ್ಷವು 30 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಮೈತ್ರಿಪಕ್ಷಗಳಾದ
AIUDF ► 17 ಮುನ್ನಡೆ.
BPF ► 4 ಮುನ್ನಡೆ.
CPIM ► 1 ಮುನ್ನಡೆ ಸಾಧಿಸಿದೆ.

ಇದುವರೆಗೂ ರಾಜ್ಯದ ಫಲಿತಾಂಶ ಹೀಗಿದೆ.

ಅಸ್ಸಾಂ

126 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

BJP ಮೈತ್ರಿ ► 72 ಮುನ್ನಡೆ. Wins ► 19
ಕಾಂಗ್ರೆಸ್ ಮೈತ್ರಿ ► 52 ಮುನ್ನಡೆ. Wins ► 7
ಇತರೆ ► 2 ಮುನ್ನಡೆ.


ಕೇರಳ

ಕೇರಳದ ಇದುವರೆಗಿನ ರಾಜಕೀಯ ಇತಿಹಾಸವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರವು ಬದಲಾಯಿಸುವತ್ತ ಹೊರಟಿದೆ. ರಾಜ್ಯದಲ್ಲಿ ಸತತವಾಗಿ ಅಧಿಕಾರ ಹಿಡಿಯುವತ್ತ ಎಡರಂಗ ಸರ್ಕಾರ ಮುನ್ನುಗ್ಗುತ್ತಿದೆ. ಆದರೆ ಈ ಹಿಂದೆ ಇದ್ದ ಒಂದು ಕ್ಷೇತ್ರವನ್ನು ಕೂಡಾ ಬಿಜೆಪಿ ಕಳೆದುಕೊಂಡಿದೆ.

ಆರಂಭದಲ್ಲಿ ಕೇರಳದ ಪಾಲಕ್ಕಾಡ್, ಕಾಸರಗೋಡ್‌, ನೇಮಂನಲ್ಲಿ ಬಿಜೆಪಿ ಮುನ್ನಡೆಯಲ್ಲಿತ್ತು. ಇದೀಗ ಎಲ್ಲಾ ಕ್ಷೇತ್ರದಲ್ಲೂ ಬಿಜೆಪಿ ಮುಗ್ಗರಿಸಿದೆ.

ಮುಖ್ಯಮಂತ್ರಿ ಪಿಣರಾಯಿ ಈ ಹಿಂದೆ ಬಿಜೆಪಿಗೆ ಇರುವ ಒಂದು ಕ್ಷೇತ್ರವನ್ನು ಕೂಡಾ ‘ಕ್ಲೋಸ್’ ಮಾಡುವುದಾಗಿ ಹೇಳಿದ್ದರು.

ಈ ವರೆಗೆ ಕೇರಳದಲ್ಲಿ ಸಿಪಿಐ(ಎಂ) 62, ಸಿಪಿಐ 17, ಕಾಂಗ್ರೆಸ್‌ 21, ಮುಸ್ಲಿಂ ಲೀಗ್‌ 14, ಜೆಡಿ(ಎಸ್) 2 ಸ್ಥಾನಗಳಲ್ಲಿ ಮತ್ತು ಇತರೆ 24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ರಾಜ್ಯದ 140 ಸ್ಥಾನಗಳ ಮತ ಎಣಿಕೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

ಸಿಪಿಎಂ ನೇತೃತ್ವದ LDF ► 100 ಮುನ್ನಡೆ. Wins ► 47
ಕಾಂಗ್ರೆಸ್ ನೇತೃತ್ವದ UDF ► 40 ಮುನ್ನಡೆ. Wins ► 10
ಬಿಜೆಪಿ ನೇತೃತ್ವದ NDA ► 0
ಇತರೆ ► 0


ತಮಿಳುನಾಡು

ತಮಿಳುನಾಡಿನಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಮಾಹಿತಿಯಂತೆ ವಿರೋಧ ಪಕ್ಷವಾದ ಡಿಎಂಕೆ ದಶಕಗಳ ನಂತರ ಅಧಿಕಾರ ಹಿಡಿಯುವತ್ತ ಹೊರಟಿದೆ. ಇದುವರೆಗಿನ ಮಾಹಿತಿಯಂತೆ ಡಿಎಂಕೆ ಒಕ್ಕೂಟವು 151 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

ಈ ಒಕ್ಕೂಟದಲ್ಲಿ ಡಿಎಂಕೆ ಒಂದೇ ಪಕ್ಷ 118 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಮೈತ್ರಿಪಕ್ಷಗಳಾದ ಕಾಂಗ್ರೆಸ್► 16
VCK► 5
DMK MDMK►4
DMK OTH►4
CPIM►2
CPI►2
ಮುಸ್ಲಿಂಲೀಗ್►0

ಆಡಳಿತ ಪಕ್ಷವಾದ AIADMK ಒಕ್ಕೂಟ 82 ಸ್ಥಾಗಳಲ್ಲಿ ಮಾತ್ರವೆ ಮುನ್ನಡೆ ಸಾಧಿಸಿದೆ. ಈ ಒಕ್ಕೂಟದಲ್ಲಿ AIADMK 73 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಉಳಿದಂತೆ ಮೈತ್ರಿ ಪಕ್ಷಗಳಾದ,
BJP► 3
PMK►5
AIADMK OTH► 1

ಕಮಲ ಹಾಸನ್ ಪಕ್ಷವಾದ ಮಕ್ಕಳ್ ನೀಡಿ ಮಯ್ಯಂ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರವೆ ಮುನ್ನಡೆ ಸಾಧಿಸಿದೆ.

ಇಲ್ಲಿವರೆಗಿನ ಫಲಿತಾಂಶ ಹೀಗಿದೆ.

234 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

DMK ಒಕ್ಕೂಟ ► 151 ಮುನ್ನಡೆ. Wins ► 22
AIADMK ಒಕ್ಕೂಟ ► 82 ಮುನ್ನಡೆ.( ಬಿಜೆಪಿ 3 ಕ್ಷೇತ್ರಗಳಲ್ಲಿ ಮುನ್ನಡೆ) Wins ► 6
ಕಮಲ್ ಹಾಸನ್ MNM ► 1 ಮುನ್ನಡೆ.


ಪಶ್ಚಿಮಬಂಗಾಳ

ಬಂಗಾಳದಲ್ಲಿ ಅಧಿಕಾರ ಹಿಡಿಯುವ ಭಾರಿ ನಿರೀಕ್ಷೆಯಲ್ಲಿದ್ದ ಬಿಜೆಪಿ ಮುಗ್ಗರಿಸುತ್ತಿದೆ. ಆಡಳಿತ ಪಕ್ಷ ಟಿಎಂಸಿ ಬಿಜೆಪಿಗಿಂತ ಎರಡು ಪಟ್ಟು ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಬಂಗಳಾದಲ್ಲಿ ಎಡಪಕ್ಷಗಳು ತಮ್ಮ ಅಸ್ತಿತ್ವ ತೋರುವಲ್ಲಿ ಎಡವಿದೆ.

ರಾಜ್ಯದ ಎಲ್ಲಾ 292 ಕ್ಷೇತ್ರಗಳಲ್ಲಿ ಎಣಿಕೆ ಪ್ರಾರಂಭವಾಗಿದೆ.

TMC ►  210 ಮುನ್ನಡೆ. Wins ► 66
BJP ►  79 ಮುನ್ನಡೆ. Wins ► 16
Cong & Left ► 2 ಮುನ್ನಡೆ.
ಇತರೆ ► 2 ಮುನ್ನಡೆ. Wins ► 1


 

ಪುದುಚೇರಿ

30 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಇದುವರೆಗೂ 20 ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

BJP ಮೈತ್ರಿ ► 12 ಮುನ್ನಡೆ. Wins ► 8
ಕಾಂಗ್ರೆಸ್ ಮೈತ್ರಿ ► 6 ಮುನ್ನಡೆ. Wins ► 3
ಇತರೆ ► 2 ಮುನ್ನಡೆ. Wins ► 1


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...