Homeಕರ್ನಾಟಕಪದವೀಧರ ಭಾಷ ಶಿಕ್ಷಕರ ನೇಮಕಾತಿ: ಪದವಿಯಲ್ಲಿ ಆಂಗ್ಲಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದವರಿಗೂ ಅವಕಾಶ ನೀಡಲು ಒತ್ತಾಯ

ಪದವೀಧರ ಭಾಷ ಶಿಕ್ಷಕರ ನೇಮಕಾತಿ: ಪದವಿಯಲ್ಲಿ ಆಂಗ್ಲಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದವರಿಗೂ ಅವಕಾಶ ನೀಡಲು ಒತ್ತಾಯ

- Advertisement -
- Advertisement -

ಪದವೀಧರ ಭಾಷ ಶಿಕ್ಷಕರ ನೇಮಕಾತಿಗೆ ಸಂಭವಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯ ಗ್ಯಾಸೆಟಿಯರ್‌ನಲ್ಲಿ ಪ್ರಕಟಿಸಿರುವ ನೇಮಕಾತಿ ನಿಯಮಾವಳಿಯಲ್ಲಿ ಬದಲಾವಣೆ ಮಾಡಿ ಆಂಗ್ಲ ಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದವರಿಗೂ ಶಿಕ್ಷಕರ ಹುದ್ದೆಗೆ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.

ಪದವಿಯಲ್ಲಿ ಸಮಾಜಶಾಸ್ತ್ರ ಮತ್ತು ಆಂಗ್ಲ ಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದ ಅಭ್ಯರ್ಥಿಗಳು
ಪದವೀಧರ ಪ್ರಾಥಮಿಕ ಸಮಾಜ ವಿಜ್ಞಾನ ಶಿಕ್ಷಕರ ಹುದ್ದೆಗೆ ಸ್ಪರ್ಧಿಸಲು ಅರ್ಹರಾಗಿದ್ದಾರೆ. ಆದರೆ ಪದವೀಧರ ಪ್ರಾಥಮಿಕ ಆಂಗ್ಲ ಭಾಷೆ ಶಿಕ್ಷಕರ ಹುದ್ದೆಗೆ ಸ್ಪರ್ಧಿಸಲು ಅರ್ಹರಲ್ಲ ಎಂಬುದನ್ನು ಸುತ್ತೋಲೆಯಿಂದ ತೆಗೆಯಬೇಕು. ಅವರಿಗೂ ಶಿಕ್ಷಕ ಹುದ್ದೆಗೆ ಸ್ಪರ್ಧಿಸಲು ಅವಕಾಶ ನೀಡಿ ತಿದ್ದುಪಡಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

“ಭಾಷಾ ವಿಷಯಗಳನ್ನು ಹೊರತುಪಡಿಸಿ ಐಚ್ಚಿಕ ವಿಷಯವಾಗಿ 3 ವರ್ಷಗಳ ಪದವಿಯಲ್ಲಿ ಕನ್ನಡ/ಆಂಗ್ಲ/ಹಿಂದಿ/ಮರಾಠಿ/ಇತಿಹಾಸ/ಅರ್ಥಶಾಸ್ತ್ರ/ರಾಜ್ಯಶಾಸ್ತ್ರ/ಭೌಗೋಳಿಕ ವಿಷಯಗಳನ್ನು ಅಭ್ಯಾಸ ಮಾಡಿರಬೇಕು” ಎಂದು GPSTRನ ಹೊಸ C&R ನಿಯಮಾವಳಿಯಲ್ಲಿ ಪ್ರಕಟವಾಗಿದ್ದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಅಘಾತವಾಗಿದೆ” ಎಂದು ಉದ್ಯೋಗಾಕಾಂಕ್ಷಿ ಮೋಹನರಾಜ ಜಿ. ಹೇಳಿದ್ದಾರೆ.

ಇದನ್ನೂ ಓದಿ: 5 ವರ್ಷಗಳ ಕಾನೂನು ಪದವಿಯ 2 & 4ನೇ ಸೆಮಿಸ್ಟರ್‌ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು

“ಅಷ್ಟೆ ಅಲ್ಲದೆ ಪದವಿಯಲ್ಲಿ ಸಮಾಜಶಾಸ್ತ್ರ ಮತ್ತು ಆಂಗ್ಲವನ್ನು ಐಚ್ಚಿಕ ವಿಷಯವಾಗಿ ಓದಿದದವರು ಪದವೀಧರ ಪ್ರಾಥಮಿಕ ಸಮಾಜ ವಿಜ್ಞಾನ ಶಿಕ್ಷಕ ಹುದ್ದೆಗೆ ಅರ್ಹರು. ಆದರೆ ಆಂಗ್ಲ ಶಿಕ್ಷಕರಾಗಲು ಅರ್ಹರಲ್ಲ ಎಂಬ ಅವೈಜ್ಞಾನಿಕ ನಿಯಮ ಪ್ರಾಥಮಿಕ ಶಾಲೆಗಳು ಆಂಗ್ಲ ಶಿಕ್ಷಕರ ಕೊರತೆ ಎದುರಿಸಲು ಮುಖ್ಯ ಕಾರಣ. ಈ ಅವೈಜ್ಞಾನಿಕ ನಿಯಮವನ್ನು ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಮುಂದಾಗುವ ಮೊದಲೆ ಸಮಾಜಶಾಸ್ತ್ರ ಮತ್ತು ಆಂಗ್ಲ ವನ್ನು ಪದವಿಯಲ್ಲಿ ಅಭ್ಯಾಸಿಸಿದವರಿಗೆ ಪ್ರಾಥಮಿಕ ಆಂಗ್ಲ-ಭಾಷೆ ಶಿಕ್ಷಕ ಹುದ್ದೆಯ ಆರ್ಹರೆಂದು ಪರಿಗಣಿಸಿ ತಿದ್ದುಪಡಿ ಮಾಡಬೇಕು” ಎಂದು ಮೋಹನರಾಜ್ ಮನವಿ ಮಾಡಿದ್ದಾರೆ.

“ತಮ್ಮ 3 ವರ್ಷದ ಪದವಿಯಲ್ಲಿ ಐಚ್ಚಿಕ ವಿಷಯವಾಗಿ ಆಂಗ್ಲಭಾಷೆಯ ಜೊತೆಗೆ ಸಮಾಜಶಾಸ್ತ್ರ/ ಮನೋವಿಜ್ಞಾನ/ ಶಿಕ್ಷಣ/ಪತ್ರಿಕೋದ್ಯಮ ಅಭ್ಯಾಸಿದ ಲಕ್ಷಾಂತರ ವಿದ್ಯಾರ್ಥಿಗಳು ಇದ್ದು ಟಿಇಟಿ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದಿರುತ್ತಾರೆ. ಇಂತಹ ಅಭ್ಯರ್ಥಿಗಳಿಗೆ ಪದವಿ ಭಾಷಾ ಶಿಕ್ಷಕರ ನೇಮಕಾತಿ ಪರೀಕ್ಷೆಯನ್ನು ಬರೆಯಲು ಇಲಾಖಾ ನೇಮಾಕಾತಿ ನಿಯಮಗಳಲ್ಲಿ ಅವಕಾಶ ಸಿಗದೆ ಅವಕಾಶ ವಂಚಿತರಾಗುತ್ತಿದ್ದು. ಹಲವು ಬಾರಿ ಶಿಕ್ಷಣ ಸಚಿವರನ್ನು ಭೇಟಿಯಾಗಿ ಗಮನಕ್ಕೆ ತಂದಿದ್ದು ಶಿಕ್ಷಣ ಸಚಿವರು ಬದಲಾವಣೆ ಮಾಡುವ ಭರವಸೆ ನೀಡಿಯು ಕೂಡ ಯಾವುದೆ ಬದಲಾವಣೆಯಾಗಿಲ್ಲ. ಇದರಿಂದ ಲಕ್ಷಾಂತರ ಆಕಾಂಕ್ಷಿಗಳ ಪದವಿ ಮತ್ತು ತರಬೇತಿ ಪ್ರಯೋಜನಕ್ಕೆ ಬಾರದಂತಾಗಿದೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಪದವೀಧರ ಭಾಷ ಶಿಕ್ಷಕರ ನೇಮಕಾತಿ ನಿಯಮನಾವಳಿಗೆ ಮರುಪರಿಶೀಲನೆ ಮಾಡಿ ತಿದ್ದುಪಡಿ ತಂದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಪ್ರಯೋಜನವಾಗುವಂತೆ ಮಾಡಬೇಕು. 3 ವರ್ಷದ ಪದವಿಯಲ್ಲಿ ಐಚ್ಚಿಕ ವಿಷಯವಾಗಿ ಆಂಗ್ಲ ಭಾಷೆಯ ಜೊತೆಗೆ ಸಮಾಜಶಾಸ್ತ್ರ/ಮನೋವಿಜ್ಞಾನ/ಶಿಕ್ಷಣ/ಪತ್ರಿಕೋದ್ಯಮ ಅಭ್ಯಾಸ ಮಾಡಿದವರಿಗು ಅವಕಾಶ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...