Homeಕರ್ನಾಟಕಪದವೀಧರ ಭಾಷ ಶಿಕ್ಷಕರ ನೇಮಕಾತಿ: ಪದವಿಯಲ್ಲಿ ಆಂಗ್ಲಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದವರಿಗೂ ಅವಕಾಶ ನೀಡಲು ಒತ್ತಾಯ

ಪದವೀಧರ ಭಾಷ ಶಿಕ್ಷಕರ ನೇಮಕಾತಿ: ಪದವಿಯಲ್ಲಿ ಆಂಗ್ಲಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದವರಿಗೂ ಅವಕಾಶ ನೀಡಲು ಒತ್ತಾಯ

- Advertisement -
- Advertisement -

ಪದವೀಧರ ಭಾಷ ಶಿಕ್ಷಕರ ನೇಮಕಾತಿಗೆ ಸಂಭವಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯ ಗ್ಯಾಸೆಟಿಯರ್‌ನಲ್ಲಿ ಪ್ರಕಟಿಸಿರುವ ನೇಮಕಾತಿ ನಿಯಮಾವಳಿಯಲ್ಲಿ ಬದಲಾವಣೆ ಮಾಡಿ ಆಂಗ್ಲ ಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದವರಿಗೂ ಶಿಕ್ಷಕರ ಹುದ್ದೆಗೆ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.

ಪದವಿಯಲ್ಲಿ ಸಮಾಜಶಾಸ್ತ್ರ ಮತ್ತು ಆಂಗ್ಲ ಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದ ಅಭ್ಯರ್ಥಿಗಳು
ಪದವೀಧರ ಪ್ರಾಥಮಿಕ ಸಮಾಜ ವಿಜ್ಞಾನ ಶಿಕ್ಷಕರ ಹುದ್ದೆಗೆ ಸ್ಪರ್ಧಿಸಲು ಅರ್ಹರಾಗಿದ್ದಾರೆ. ಆದರೆ ಪದವೀಧರ ಪ್ರಾಥಮಿಕ ಆಂಗ್ಲ ಭಾಷೆ ಶಿಕ್ಷಕರ ಹುದ್ದೆಗೆ ಸ್ಪರ್ಧಿಸಲು ಅರ್ಹರಲ್ಲ ಎಂಬುದನ್ನು ಸುತ್ತೋಲೆಯಿಂದ ತೆಗೆಯಬೇಕು. ಅವರಿಗೂ ಶಿಕ್ಷಕ ಹುದ್ದೆಗೆ ಸ್ಪರ್ಧಿಸಲು ಅವಕಾಶ ನೀಡಿ ತಿದ್ದುಪಡಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

“ಭಾಷಾ ವಿಷಯಗಳನ್ನು ಹೊರತುಪಡಿಸಿ ಐಚ್ಚಿಕ ವಿಷಯವಾಗಿ 3 ವರ್ಷಗಳ ಪದವಿಯಲ್ಲಿ ಕನ್ನಡ/ಆಂಗ್ಲ/ಹಿಂದಿ/ಮರಾಠಿ/ಇತಿಹಾಸ/ಅರ್ಥಶಾಸ್ತ್ರ/ರಾಜ್ಯಶಾಸ್ತ್ರ/ಭೌಗೋಳಿಕ ವಿಷಯಗಳನ್ನು ಅಭ್ಯಾಸ ಮಾಡಿರಬೇಕು” ಎಂದು GPSTRನ ಹೊಸ C&R ನಿಯಮಾವಳಿಯಲ್ಲಿ ಪ್ರಕಟವಾಗಿದ್ದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಅಘಾತವಾಗಿದೆ” ಎಂದು ಉದ್ಯೋಗಾಕಾಂಕ್ಷಿ ಮೋಹನರಾಜ ಜಿ. ಹೇಳಿದ್ದಾರೆ.

ಇದನ್ನೂ ಓದಿ: 5 ವರ್ಷಗಳ ಕಾನೂನು ಪದವಿಯ 2 & 4ನೇ ಸೆಮಿಸ್ಟರ್‌ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು

“ಅಷ್ಟೆ ಅಲ್ಲದೆ ಪದವಿಯಲ್ಲಿ ಸಮಾಜಶಾಸ್ತ್ರ ಮತ್ತು ಆಂಗ್ಲವನ್ನು ಐಚ್ಚಿಕ ವಿಷಯವಾಗಿ ಓದಿದದವರು ಪದವೀಧರ ಪ್ರಾಥಮಿಕ ಸಮಾಜ ವಿಜ್ಞಾನ ಶಿಕ್ಷಕ ಹುದ್ದೆಗೆ ಅರ್ಹರು. ಆದರೆ ಆಂಗ್ಲ ಶಿಕ್ಷಕರಾಗಲು ಅರ್ಹರಲ್ಲ ಎಂಬ ಅವೈಜ್ಞಾನಿಕ ನಿಯಮ ಪ್ರಾಥಮಿಕ ಶಾಲೆಗಳು ಆಂಗ್ಲ ಶಿಕ್ಷಕರ ಕೊರತೆ ಎದುರಿಸಲು ಮುಖ್ಯ ಕಾರಣ. ಈ ಅವೈಜ್ಞಾನಿಕ ನಿಯಮವನ್ನು ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಮುಂದಾಗುವ ಮೊದಲೆ ಸಮಾಜಶಾಸ್ತ್ರ ಮತ್ತು ಆಂಗ್ಲ ವನ್ನು ಪದವಿಯಲ್ಲಿ ಅಭ್ಯಾಸಿಸಿದವರಿಗೆ ಪ್ರಾಥಮಿಕ ಆಂಗ್ಲ-ಭಾಷೆ ಶಿಕ್ಷಕ ಹುದ್ದೆಯ ಆರ್ಹರೆಂದು ಪರಿಗಣಿಸಿ ತಿದ್ದುಪಡಿ ಮಾಡಬೇಕು” ಎಂದು ಮೋಹನರಾಜ್ ಮನವಿ ಮಾಡಿದ್ದಾರೆ.

“ತಮ್ಮ 3 ವರ್ಷದ ಪದವಿಯಲ್ಲಿ ಐಚ್ಚಿಕ ವಿಷಯವಾಗಿ ಆಂಗ್ಲಭಾಷೆಯ ಜೊತೆಗೆ ಸಮಾಜಶಾಸ್ತ್ರ/ ಮನೋವಿಜ್ಞಾನ/ ಶಿಕ್ಷಣ/ಪತ್ರಿಕೋದ್ಯಮ ಅಭ್ಯಾಸಿದ ಲಕ್ಷಾಂತರ ವಿದ್ಯಾರ್ಥಿಗಳು ಇದ್ದು ಟಿಇಟಿ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದಿರುತ್ತಾರೆ. ಇಂತಹ ಅಭ್ಯರ್ಥಿಗಳಿಗೆ ಪದವಿ ಭಾಷಾ ಶಿಕ್ಷಕರ ನೇಮಕಾತಿ ಪರೀಕ್ಷೆಯನ್ನು ಬರೆಯಲು ಇಲಾಖಾ ನೇಮಾಕಾತಿ ನಿಯಮಗಳಲ್ಲಿ ಅವಕಾಶ ಸಿಗದೆ ಅವಕಾಶ ವಂಚಿತರಾಗುತ್ತಿದ್ದು. ಹಲವು ಬಾರಿ ಶಿಕ್ಷಣ ಸಚಿವರನ್ನು ಭೇಟಿಯಾಗಿ ಗಮನಕ್ಕೆ ತಂದಿದ್ದು ಶಿಕ್ಷಣ ಸಚಿವರು ಬದಲಾವಣೆ ಮಾಡುವ ಭರವಸೆ ನೀಡಿಯು ಕೂಡ ಯಾವುದೆ ಬದಲಾವಣೆಯಾಗಿಲ್ಲ. ಇದರಿಂದ ಲಕ್ಷಾಂತರ ಆಕಾಂಕ್ಷಿಗಳ ಪದವಿ ಮತ್ತು ತರಬೇತಿ ಪ್ರಯೋಜನಕ್ಕೆ ಬಾರದಂತಾಗಿದೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಪದವೀಧರ ಭಾಷ ಶಿಕ್ಷಕರ ನೇಮಕಾತಿ ನಿಯಮನಾವಳಿಗೆ ಮರುಪರಿಶೀಲನೆ ಮಾಡಿ ತಿದ್ದುಪಡಿ ತಂದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಪ್ರಯೋಜನವಾಗುವಂತೆ ಮಾಡಬೇಕು. 3 ವರ್ಷದ ಪದವಿಯಲ್ಲಿ ಐಚ್ಚಿಕ ವಿಷಯವಾಗಿ ಆಂಗ್ಲ ಭಾಷೆಯ ಜೊತೆಗೆ ಸಮಾಜಶಾಸ್ತ್ರ/ಮನೋವಿಜ್ಞಾನ/ಶಿಕ್ಷಣ/ಪತ್ರಿಕೋದ್ಯಮ ಅಭ್ಯಾಸ ಮಾಡಿದವರಿಗು ಅವಕಾಶ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...