Homeಕರ್ನಾಟಕಪದವೀಧರ ಭಾಷ ಶಿಕ್ಷಕರ ನೇಮಕಾತಿ: ಪದವಿಯಲ್ಲಿ ಆಂಗ್ಲಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದವರಿಗೂ ಅವಕಾಶ ನೀಡಲು ಒತ್ತಾಯ

ಪದವೀಧರ ಭಾಷ ಶಿಕ್ಷಕರ ನೇಮಕಾತಿ: ಪದವಿಯಲ್ಲಿ ಆಂಗ್ಲಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದವರಿಗೂ ಅವಕಾಶ ನೀಡಲು ಒತ್ತಾಯ

- Advertisement -
- Advertisement -

ಪದವೀಧರ ಭಾಷ ಶಿಕ್ಷಕರ ನೇಮಕಾತಿಗೆ ಸಂಭವಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯ ಗ್ಯಾಸೆಟಿಯರ್‌ನಲ್ಲಿ ಪ್ರಕಟಿಸಿರುವ ನೇಮಕಾತಿ ನಿಯಮಾವಳಿಯಲ್ಲಿ ಬದಲಾವಣೆ ಮಾಡಿ ಆಂಗ್ಲ ಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದವರಿಗೂ ಶಿಕ್ಷಕರ ಹುದ್ದೆಗೆ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.

ಪದವಿಯಲ್ಲಿ ಸಮಾಜಶಾಸ್ತ್ರ ಮತ್ತು ಆಂಗ್ಲ ಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದ ಅಭ್ಯರ್ಥಿಗಳು
ಪದವೀಧರ ಪ್ರಾಥಮಿಕ ಸಮಾಜ ವಿಜ್ಞಾನ ಶಿಕ್ಷಕರ ಹುದ್ದೆಗೆ ಸ್ಪರ್ಧಿಸಲು ಅರ್ಹರಾಗಿದ್ದಾರೆ. ಆದರೆ ಪದವೀಧರ ಪ್ರಾಥಮಿಕ ಆಂಗ್ಲ ಭಾಷೆ ಶಿಕ್ಷಕರ ಹುದ್ದೆಗೆ ಸ್ಪರ್ಧಿಸಲು ಅರ್ಹರಲ್ಲ ಎಂಬುದನ್ನು ಸುತ್ತೋಲೆಯಿಂದ ತೆಗೆಯಬೇಕು. ಅವರಿಗೂ ಶಿಕ್ಷಕ ಹುದ್ದೆಗೆ ಸ್ಪರ್ಧಿಸಲು ಅವಕಾಶ ನೀಡಿ ತಿದ್ದುಪಡಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

“ಭಾಷಾ ವಿಷಯಗಳನ್ನು ಹೊರತುಪಡಿಸಿ ಐಚ್ಚಿಕ ವಿಷಯವಾಗಿ 3 ವರ್ಷಗಳ ಪದವಿಯಲ್ಲಿ ಕನ್ನಡ/ಆಂಗ್ಲ/ಹಿಂದಿ/ಮರಾಠಿ/ಇತಿಹಾಸ/ಅರ್ಥಶಾಸ್ತ್ರ/ರಾಜ್ಯಶಾಸ್ತ್ರ/ಭೌಗೋಳಿಕ ವಿಷಯಗಳನ್ನು ಅಭ್ಯಾಸ ಮಾಡಿರಬೇಕು” ಎಂದು GPSTRನ ಹೊಸ C&R ನಿಯಮಾವಳಿಯಲ್ಲಿ ಪ್ರಕಟವಾಗಿದ್ದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಅಘಾತವಾಗಿದೆ” ಎಂದು ಉದ್ಯೋಗಾಕಾಂಕ್ಷಿ ಮೋಹನರಾಜ ಜಿ. ಹೇಳಿದ್ದಾರೆ.

ಇದನ್ನೂ ಓದಿ: 5 ವರ್ಷಗಳ ಕಾನೂನು ಪದವಿಯ 2 & 4ನೇ ಸೆಮಿಸ್ಟರ್‌ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು

“ಅಷ್ಟೆ ಅಲ್ಲದೆ ಪದವಿಯಲ್ಲಿ ಸಮಾಜಶಾಸ್ತ್ರ ಮತ್ತು ಆಂಗ್ಲವನ್ನು ಐಚ್ಚಿಕ ವಿಷಯವಾಗಿ ಓದಿದದವರು ಪದವೀಧರ ಪ್ರಾಥಮಿಕ ಸಮಾಜ ವಿಜ್ಞಾನ ಶಿಕ್ಷಕ ಹುದ್ದೆಗೆ ಅರ್ಹರು. ಆದರೆ ಆಂಗ್ಲ ಶಿಕ್ಷಕರಾಗಲು ಅರ್ಹರಲ್ಲ ಎಂಬ ಅವೈಜ್ಞಾನಿಕ ನಿಯಮ ಪ್ರಾಥಮಿಕ ಶಾಲೆಗಳು ಆಂಗ್ಲ ಶಿಕ್ಷಕರ ಕೊರತೆ ಎದುರಿಸಲು ಮುಖ್ಯ ಕಾರಣ. ಈ ಅವೈಜ್ಞಾನಿಕ ನಿಯಮವನ್ನು ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಮುಂದಾಗುವ ಮೊದಲೆ ಸಮಾಜಶಾಸ್ತ್ರ ಮತ್ತು ಆಂಗ್ಲ ವನ್ನು ಪದವಿಯಲ್ಲಿ ಅಭ್ಯಾಸಿಸಿದವರಿಗೆ ಪ್ರಾಥಮಿಕ ಆಂಗ್ಲ-ಭಾಷೆ ಶಿಕ್ಷಕ ಹುದ್ದೆಯ ಆರ್ಹರೆಂದು ಪರಿಗಣಿಸಿ ತಿದ್ದುಪಡಿ ಮಾಡಬೇಕು” ಎಂದು ಮೋಹನರಾಜ್ ಮನವಿ ಮಾಡಿದ್ದಾರೆ.

“ತಮ್ಮ 3 ವರ್ಷದ ಪದವಿಯಲ್ಲಿ ಐಚ್ಚಿಕ ವಿಷಯವಾಗಿ ಆಂಗ್ಲಭಾಷೆಯ ಜೊತೆಗೆ ಸಮಾಜಶಾಸ್ತ್ರ/ ಮನೋವಿಜ್ಞಾನ/ ಶಿಕ್ಷಣ/ಪತ್ರಿಕೋದ್ಯಮ ಅಭ್ಯಾಸಿದ ಲಕ್ಷಾಂತರ ವಿದ್ಯಾರ್ಥಿಗಳು ಇದ್ದು ಟಿಇಟಿ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದಿರುತ್ತಾರೆ. ಇಂತಹ ಅಭ್ಯರ್ಥಿಗಳಿಗೆ ಪದವಿ ಭಾಷಾ ಶಿಕ್ಷಕರ ನೇಮಕಾತಿ ಪರೀಕ್ಷೆಯನ್ನು ಬರೆಯಲು ಇಲಾಖಾ ನೇಮಾಕಾತಿ ನಿಯಮಗಳಲ್ಲಿ ಅವಕಾಶ ಸಿಗದೆ ಅವಕಾಶ ವಂಚಿತರಾಗುತ್ತಿದ್ದು. ಹಲವು ಬಾರಿ ಶಿಕ್ಷಣ ಸಚಿವರನ್ನು ಭೇಟಿಯಾಗಿ ಗಮನಕ್ಕೆ ತಂದಿದ್ದು ಶಿಕ್ಷಣ ಸಚಿವರು ಬದಲಾವಣೆ ಮಾಡುವ ಭರವಸೆ ನೀಡಿಯು ಕೂಡ ಯಾವುದೆ ಬದಲಾವಣೆಯಾಗಿಲ್ಲ. ಇದರಿಂದ ಲಕ್ಷಾಂತರ ಆಕಾಂಕ್ಷಿಗಳ ಪದವಿ ಮತ್ತು ತರಬೇತಿ ಪ್ರಯೋಜನಕ್ಕೆ ಬಾರದಂತಾಗಿದೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಪದವೀಧರ ಭಾಷ ಶಿಕ್ಷಕರ ನೇಮಕಾತಿ ನಿಯಮನಾವಳಿಗೆ ಮರುಪರಿಶೀಲನೆ ಮಾಡಿ ತಿದ್ದುಪಡಿ ತಂದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಪ್ರಯೋಜನವಾಗುವಂತೆ ಮಾಡಬೇಕು. 3 ವರ್ಷದ ಪದವಿಯಲ್ಲಿ ಐಚ್ಚಿಕ ವಿಷಯವಾಗಿ ಆಂಗ್ಲ ಭಾಷೆಯ ಜೊತೆಗೆ ಸಮಾಜಶಾಸ್ತ್ರ/ಮನೋವಿಜ್ಞಾನ/ಶಿಕ್ಷಣ/ಪತ್ರಿಕೋದ್ಯಮ ಅಭ್ಯಾಸ ಮಾಡಿದವರಿಗು ಅವಕಾಶ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...