Homeಕರ್ನಾಟಕ'ಶೇ.56 ರ ಮೀಸಲಾತಿ ಅನುಸಾರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು..'; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

‘ಶೇ.56 ರ ಮೀಸಲಾತಿ ಅನುಸಾರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು..’; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

- Advertisement -
- Advertisement -

“ಚಾಲ್ತಿಯಲ್ಲಿರುವ ಶೇ.50ರ ಮೀಸಲಾತಿಯ ಅನ್ವಯ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸುವ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಆದರೆ, ಶೇ.56 ಕ್ಕೆ ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಅಧಿಸೂಚನೆ ಹೊರಡಿಸಬಾರದು” ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ ಎಂದು ‘ಕನ್ನಡ ಬಾರ್‌ ಅಂಡ್‌ ಬೆಂಚ್’ ವರದಿ ಮಾಡಿದೆ.

ನೇಮಕಾತಿಯಲ್ಲಿ ಮಧ್ಯಂತರ ವ್ಯವಸ್ಥೆಗೆ ಸಂಬಂಧಿಸಿದಂತೆ ಹಾಗೂ ಅಗತ್ಯಬಿದ್ದರೆ ಸೂಕ್ತ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಮಂಗಳವಾರ ಕೋರ್ಟ್‌ ಅನುಮತಿ ನೀಡಿದೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯಿದೆ-2022ರ ಅನ್ವಯ ಶೇ. 50ಕ್ಕೂ ಹೆಚ್ಚು ಮೀಸಲಾತಿ ನೀಡುವುದಕ್ಕೆ ಆಕ್ಷೇಪಿಸಿ ಡಾ. ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ಕುಮಾರ್ ಮಿತ್ರಾ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು, ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

“ಮೀಸಲಾತಿ ಪ್ರಮಾಣ ಹೆಚ್ಚಿಸಿರುವ ಮಧ್ಯಪ್ರದೇಶ ಸರ್ಕಾರದ ಆದೇಶ ಪ್ರಶ್ನಿಸಿರುವ ಅರ್ಜಿ ಸುಪ್ರೀಂ ಕೋರ್ಟ್‌ಗೆ ವರ್ಗಾವಣೆಯಾಗಿದೆ; ಅದರ ವಿಚಾರಣೆಯು ಈ ತಿಂಗಳು ನಡೆಯಲಿದೆ. ನಾವು ಸರ್ವೋಚ್ಚ ನ್ಯಾಯಾಲಯದ ಆದೇಶಕ್ಕಾಗಿ ಕಾಯಲಾಗುತ್ತಿದೆ ಎಂದು ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ತಿಳಿಸಿದ್ದಾರೆ. ನೇಮಕಾತಿಯಲ್ಲಿ ಮಧ್ಯಂತರ ವ್ಯವಸ್ಥೆಗೆ ಸಂಬಂಧಿಸಿದಂತೆ ಅಡ್ವೊಕೇಟ್‌ ಜನರಲ್‌ ಅವರು ಸೂಚನೆ ಪಡೆಯಲು, ಅಗತ್ಯಬಿದ್ದರೆ ಸೂಕ್ತ ಅರ್ಜಿ ಸಲ್ಲಿಸಲು ಕಾಲಾವಕಾಶ ಕೋರಿದ್ದಾರೆ. ಇದಕ್ಕೆ ನ್ಯಾಯಾಲಯ ಅನುಮತಿ ನೀಡಿದೆ” ಎಂದು ನ್ಯಾಯಮೂರ್ತಿಗಳು ಆದೇಶಿಸಿ, ವಿಚಾರಣೆಯನ್ನು ಫೆಬ್ರವರಿ 12ಕ್ಕೆ ಮುಂದೂಡಿದರು.

ಇದಕ್ಕೂ ಮುನ್ನ ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್ ಜನರಲ್, “ಮೀಸಲಾತಿ ಹೆಚ್ಚಿಸಿರುವ ಮಧ್ಯಪ್ರದೇಶದ ರಿಟ್‌ ಅರ್ಜಿಯು ಸುಪ್ರೀಂ ಕೋರ್ಟ್‌ಗೆ ವರ್ಗಾವಣೆಯಾಗಿದೆ. ಇದರ ವಿಚಾರಣೆಯನ್ನು ಇದೇ ಜನವರಿಯಲ್ಲಿ ನಡೆಸಲಾಗುವುದು ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ. ಶೇ.50ರ ಮೀಸಲಾತಿಯಲ್ಲಿ ನೇಮಕಾತಿ ಮುಂದುವರಿಸುತ್ತೇವೆ. ನ್ಯಾಯಾಲಯ ಹಾಲಿ ಅರ್ಜಿಗಳನ್ನು ನಿರ್ಧರಿಸುವವರೆಗೆ ಹೆಚ್ಚುವರಿ ಶೇ. 6 ಮೀಸಲಾತಿ ಅನ್ವಯಿಸುವುದಿಲ್ಲ. ಆಯ್ಕೆ ಪ್ರಕ್ರಿಯೆ ಮುಂದುವರಿಸಲು ಅವಕಾಶ ನೀಡಬೇಕು. ಶೇ.56ರ ಮೀಸಲಾತಿ ಪ್ರಕಾರ ನೇಮಕಾತಿ ನಡೆಸುತ್ತೇವೆ. ಶೇ.50ಕ್ಕೆ ಮಾತ್ರ ಆದೇಶ ನೀಡಿ, ಉಳಿದ ಶೇ.6ಕ್ಕೆ ನ್ಯಾಯಾಲಯ ನಿರ್ಧಾರ ಮಾಡಿದ ಬಳಿಕ ಆದೇಶ ನೀಡಲಾಗುವುದು” ಎಂದರು.

“ಬೇಕಿದ್ದರೆ ಹಿಂದಿನ ಅಧಿಸೂಚನೆಯಡಿ ಶೇ.50ರ ಮೀಸಲಾತಿ ಅಡಿಯಲ್ಲಿ ನೇಮಕಾತಿ ನಡೆಸಬಹುದು. ಇದರಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಮೀಸಲಾತಿ ಹೆಚ್ಚಿಸಿ, ನೇಮಕಾತಿ ನಡೆಸುವುದಾದರೆ ನೇಮಕಾತಿಯನ್ನೇ ಮಾಡಲು ಸರ್ಕಾರಕ್ಕೆ ಸಾಧ್ಯವಾಗುವುದಿಲ್ಲ. ಅದು ಸರ್ಕಾರಕ್ಕೆ ಇರುವ ಆಯ್ಕೆಯಾಗಿದೆ. ಶೇ.50 ಮೀರಿದ ಹೆಚ್ಚುವರಿ ಮೀಸಲಾತಿ ಅನ್ವಯ ನೇಮಕಾತಿಗೆ ಅನುಮತಿ ಸಾಧ್ಯವಿಲ್ಲ. ಆದರೂ, ಸರ್ಕಾರ ನೇಮಕಾತಿ ನಡೆಸಲೇಬೇಕಿದೆ” ಎಂದು ಪೀಠವು ಸರ್ಕಾರಕ್ಕೆ ಪ್ರತಿಕ್ರಿಯಿಸಿದೆ.

“ಶೇ.94ರಷ್ಟು ನೇಮಕಾತಿಗೆ ಅಧಿಸೂಚನೆ ಹೊರಡಿಸುತ್ತೇವೆ. ಶೇಕಡ 6ರಷ್ಟು ನೇಮಕಾತಿ ಮಾಡುವುದಿಲ್ಲ. ಅಂತಿಮ ತೀರ್ಪಿನ ನಂತರ ಶೇ. 6% ನೇಮಕಾತಿಯನ್ನು ನ್ಯಾಯಾಲಯದ ಆದೇಶದಂತೆ ಕೈಗೊಳ್ಳುವುದಾಗಿ ಅಫಿಡವಿಟ್‌ ಸಲ್ಲಿಸಿದಲ್ಲಿ ಪರಿಶೀಲಿಸಲಾಗುವುದು” ಕೋರ್ಟ್‌ ಹೇಳಿತು.

ಅರ್ಜಿದಾರರ ಪರ ವಕೀಲ ರಂಗನಾಥ್‌ ಜೋಯಿಷ್‌ ವಾದ ಮಂಡಿಸಿ, “ಶೇ.50 ಮೀಸಲಾತಿ ಮೀರಿರುವುದಕ್ಕೆ ಈ ಹಿಂದೆ ಸುಪ್ರೀಂ ಕೋರ್ಟ್‌ ಅನುಮತಿ ನೀಡಿಲ್ಲ. ಶೇ.50 ಮೀರಿ ಮೀಸಲಾತಿ ನೀಡುತ್ತೇವೆ. ಬಳಿಕ ಅದನ್ನು ಸರಿಪಡಿಸಲಾಗುವುದು ಎಂದು ಸರ್ಕಾರ ಹೇಳುತ್ತಿದೆ. ಅಕ್ರಮ ನೇಮಕಾತಿ ಮಾಡಿ, ಆನಂತರ ಅದನ್ನು ಸರಿಪಡಿಸುವ ಯತ್ನವನ್ನು ಸರ್ಕಾರ ಮಾಡುತ್ತಿದೆ” ಎಂದರು.

“ಕಾಯಿದೆ ಸೆಕ್ಷನ್‌ 6ರ ಅಡಿ ನಿಯಮ ರೂಪಿಸಬೇಕು. ಕಾಯಿದೆಯ ಅನ್ವಯ ಮೀಸಲಾತಿ ಹೆಚ್ಚಿಸಿದರೂ ಅದನ್ನು ಜಾರಿಗೊಳಿಸಲು ನಿಯಮ ರೂಪಿಸಲೇಬೇಕು. ನಿಯಮ ರೂಪಿಸದೇ ಅಧಿಸೂಚನೆ ಹೇಗೆ ಪ್ರಕಟಿಸಲಾಗುತ್ತದೆ” ಎಂದು ಪ್ರಶ್ನಿಸಿದರು.

ಅರ್ಜಿದಾರರ ಪರ ವಾದಿಸಿದ ಮತ್ತೋರ್ವ ವಕೀಲ ನಚಿಕೇತ್‌ ಜೋಶಿ, “ಹಾಲಿ ಅರ್ಜಿ ಇತ್ಯರ್ಥವಾಗುವವರೆಗೆ ಮೀಸಲಾತಿ ಹೆಚ್ಚಿಸಿರುವುದನ್ನು ಆಧರಿಸಿ ನೇಮಕಾತಿ, ಆಯ್ಕೆ ಮಾಡುವ ಸಂಬಂಧ ಯಾವುದೇ ಅಧಿಸೂಚನೆ ಹೊರಡಿಸಕೂಡದು ಎಂದು ಹೈಕೋರ್ಟ್‌ ಈ ಹಿಂದೆಯೇ ಆದೇಶ ಮಾಡಿತ್ತು. ಇದರ ಮರುಪರಿಶೀಲನೆ, ಮಾರ್ಪಾಡು ಅಥವಾ ಪ್ರಶ್ನಿಸಲಾಗಿಲ್ಲ. ಈಗ ಮಧ್ಯಂತರ ಅರ್ಜಿಯ ಮೂಲಕ ಇದರ ಮಾರ್ಪಾಡಿಗೆ ಮನವಿ ಮಾಡಲಾಗಿದೆ. ಶೇ.50ರ ಮೀಸಲಾತಿಯ ಪ್ರಕಾರ ನೇಮಕಾತಿ ನಡೆಯಲಿ, ಉಳಿದ ಶೇ.6-7ಕ್ಕೆ ನ್ಯಾಯಾಲಯ ರಿಟ್‌ ನಿರ್ಧರಿಸಿದ ಬಳಿಕ ನೇಮಕಾತಿ ನಡೆಸಬಹುದು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...