Homeಕರ್ನಾಟಕ'ಶೇ.56 ರ ಮೀಸಲಾತಿ ಅನುಸಾರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು..'; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

‘ಶೇ.56 ರ ಮೀಸಲಾತಿ ಅನುಸಾರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು..’; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

- Advertisement -
- Advertisement -

“ಚಾಲ್ತಿಯಲ್ಲಿರುವ ಶೇ.50ರ ಮೀಸಲಾತಿಯ ಅನ್ವಯ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸುವ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಆದರೆ, ಶೇ.56 ಕ್ಕೆ ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಅಧಿಸೂಚನೆ ಹೊರಡಿಸಬಾರದು” ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ ಎಂದು ‘ಕನ್ನಡ ಬಾರ್‌ ಅಂಡ್‌ ಬೆಂಚ್’ ವರದಿ ಮಾಡಿದೆ.

ನೇಮಕಾತಿಯಲ್ಲಿ ಮಧ್ಯಂತರ ವ್ಯವಸ್ಥೆಗೆ ಸಂಬಂಧಿಸಿದಂತೆ ಹಾಗೂ ಅಗತ್ಯಬಿದ್ದರೆ ಸೂಕ್ತ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಮಂಗಳವಾರ ಕೋರ್ಟ್‌ ಅನುಮತಿ ನೀಡಿದೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯಿದೆ-2022ರ ಅನ್ವಯ ಶೇ. 50ಕ್ಕೂ ಹೆಚ್ಚು ಮೀಸಲಾತಿ ನೀಡುವುದಕ್ಕೆ ಆಕ್ಷೇಪಿಸಿ ಡಾ. ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ಕುಮಾರ್ ಮಿತ್ರಾ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು, ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

“ಮೀಸಲಾತಿ ಪ್ರಮಾಣ ಹೆಚ್ಚಿಸಿರುವ ಮಧ್ಯಪ್ರದೇಶ ಸರ್ಕಾರದ ಆದೇಶ ಪ್ರಶ್ನಿಸಿರುವ ಅರ್ಜಿ ಸುಪ್ರೀಂ ಕೋರ್ಟ್‌ಗೆ ವರ್ಗಾವಣೆಯಾಗಿದೆ; ಅದರ ವಿಚಾರಣೆಯು ಈ ತಿಂಗಳು ನಡೆಯಲಿದೆ. ನಾವು ಸರ್ವೋಚ್ಚ ನ್ಯಾಯಾಲಯದ ಆದೇಶಕ್ಕಾಗಿ ಕಾಯಲಾಗುತ್ತಿದೆ ಎಂದು ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ತಿಳಿಸಿದ್ದಾರೆ. ನೇಮಕಾತಿಯಲ್ಲಿ ಮಧ್ಯಂತರ ವ್ಯವಸ್ಥೆಗೆ ಸಂಬಂಧಿಸಿದಂತೆ ಅಡ್ವೊಕೇಟ್‌ ಜನರಲ್‌ ಅವರು ಸೂಚನೆ ಪಡೆಯಲು, ಅಗತ್ಯಬಿದ್ದರೆ ಸೂಕ್ತ ಅರ್ಜಿ ಸಲ್ಲಿಸಲು ಕಾಲಾವಕಾಶ ಕೋರಿದ್ದಾರೆ. ಇದಕ್ಕೆ ನ್ಯಾಯಾಲಯ ಅನುಮತಿ ನೀಡಿದೆ” ಎಂದು ನ್ಯಾಯಮೂರ್ತಿಗಳು ಆದೇಶಿಸಿ, ವಿಚಾರಣೆಯನ್ನು ಫೆಬ್ರವರಿ 12ಕ್ಕೆ ಮುಂದೂಡಿದರು.

ಇದಕ್ಕೂ ಮುನ್ನ ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್ ಜನರಲ್, “ಮೀಸಲಾತಿ ಹೆಚ್ಚಿಸಿರುವ ಮಧ್ಯಪ್ರದೇಶದ ರಿಟ್‌ ಅರ್ಜಿಯು ಸುಪ್ರೀಂ ಕೋರ್ಟ್‌ಗೆ ವರ್ಗಾವಣೆಯಾಗಿದೆ. ಇದರ ವಿಚಾರಣೆಯನ್ನು ಇದೇ ಜನವರಿಯಲ್ಲಿ ನಡೆಸಲಾಗುವುದು ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ. ಶೇ.50ರ ಮೀಸಲಾತಿಯಲ್ಲಿ ನೇಮಕಾತಿ ಮುಂದುವರಿಸುತ್ತೇವೆ. ನ್ಯಾಯಾಲಯ ಹಾಲಿ ಅರ್ಜಿಗಳನ್ನು ನಿರ್ಧರಿಸುವವರೆಗೆ ಹೆಚ್ಚುವರಿ ಶೇ. 6 ಮೀಸಲಾತಿ ಅನ್ವಯಿಸುವುದಿಲ್ಲ. ಆಯ್ಕೆ ಪ್ರಕ್ರಿಯೆ ಮುಂದುವರಿಸಲು ಅವಕಾಶ ನೀಡಬೇಕು. ಶೇ.56ರ ಮೀಸಲಾತಿ ಪ್ರಕಾರ ನೇಮಕಾತಿ ನಡೆಸುತ್ತೇವೆ. ಶೇ.50ಕ್ಕೆ ಮಾತ್ರ ಆದೇಶ ನೀಡಿ, ಉಳಿದ ಶೇ.6ಕ್ಕೆ ನ್ಯಾಯಾಲಯ ನಿರ್ಧಾರ ಮಾಡಿದ ಬಳಿಕ ಆದೇಶ ನೀಡಲಾಗುವುದು” ಎಂದರು.

“ಬೇಕಿದ್ದರೆ ಹಿಂದಿನ ಅಧಿಸೂಚನೆಯಡಿ ಶೇ.50ರ ಮೀಸಲಾತಿ ಅಡಿಯಲ್ಲಿ ನೇಮಕಾತಿ ನಡೆಸಬಹುದು. ಇದರಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಮೀಸಲಾತಿ ಹೆಚ್ಚಿಸಿ, ನೇಮಕಾತಿ ನಡೆಸುವುದಾದರೆ ನೇಮಕಾತಿಯನ್ನೇ ಮಾಡಲು ಸರ್ಕಾರಕ್ಕೆ ಸಾಧ್ಯವಾಗುವುದಿಲ್ಲ. ಅದು ಸರ್ಕಾರಕ್ಕೆ ಇರುವ ಆಯ್ಕೆಯಾಗಿದೆ. ಶೇ.50 ಮೀರಿದ ಹೆಚ್ಚುವರಿ ಮೀಸಲಾತಿ ಅನ್ವಯ ನೇಮಕಾತಿಗೆ ಅನುಮತಿ ಸಾಧ್ಯವಿಲ್ಲ. ಆದರೂ, ಸರ್ಕಾರ ನೇಮಕಾತಿ ನಡೆಸಲೇಬೇಕಿದೆ” ಎಂದು ಪೀಠವು ಸರ್ಕಾರಕ್ಕೆ ಪ್ರತಿಕ್ರಿಯಿಸಿದೆ.

“ಶೇ.94ರಷ್ಟು ನೇಮಕಾತಿಗೆ ಅಧಿಸೂಚನೆ ಹೊರಡಿಸುತ್ತೇವೆ. ಶೇಕಡ 6ರಷ್ಟು ನೇಮಕಾತಿ ಮಾಡುವುದಿಲ್ಲ. ಅಂತಿಮ ತೀರ್ಪಿನ ನಂತರ ಶೇ. 6% ನೇಮಕಾತಿಯನ್ನು ನ್ಯಾಯಾಲಯದ ಆದೇಶದಂತೆ ಕೈಗೊಳ್ಳುವುದಾಗಿ ಅಫಿಡವಿಟ್‌ ಸಲ್ಲಿಸಿದಲ್ಲಿ ಪರಿಶೀಲಿಸಲಾಗುವುದು” ಕೋರ್ಟ್‌ ಹೇಳಿತು.

ಅರ್ಜಿದಾರರ ಪರ ವಕೀಲ ರಂಗನಾಥ್‌ ಜೋಯಿಷ್‌ ವಾದ ಮಂಡಿಸಿ, “ಶೇ.50 ಮೀಸಲಾತಿ ಮೀರಿರುವುದಕ್ಕೆ ಈ ಹಿಂದೆ ಸುಪ್ರೀಂ ಕೋರ್ಟ್‌ ಅನುಮತಿ ನೀಡಿಲ್ಲ. ಶೇ.50 ಮೀರಿ ಮೀಸಲಾತಿ ನೀಡುತ್ತೇವೆ. ಬಳಿಕ ಅದನ್ನು ಸರಿಪಡಿಸಲಾಗುವುದು ಎಂದು ಸರ್ಕಾರ ಹೇಳುತ್ತಿದೆ. ಅಕ್ರಮ ನೇಮಕಾತಿ ಮಾಡಿ, ಆನಂತರ ಅದನ್ನು ಸರಿಪಡಿಸುವ ಯತ್ನವನ್ನು ಸರ್ಕಾರ ಮಾಡುತ್ತಿದೆ” ಎಂದರು.

“ಕಾಯಿದೆ ಸೆಕ್ಷನ್‌ 6ರ ಅಡಿ ನಿಯಮ ರೂಪಿಸಬೇಕು. ಕಾಯಿದೆಯ ಅನ್ವಯ ಮೀಸಲಾತಿ ಹೆಚ್ಚಿಸಿದರೂ ಅದನ್ನು ಜಾರಿಗೊಳಿಸಲು ನಿಯಮ ರೂಪಿಸಲೇಬೇಕು. ನಿಯಮ ರೂಪಿಸದೇ ಅಧಿಸೂಚನೆ ಹೇಗೆ ಪ್ರಕಟಿಸಲಾಗುತ್ತದೆ” ಎಂದು ಪ್ರಶ್ನಿಸಿದರು.

ಅರ್ಜಿದಾರರ ಪರ ವಾದಿಸಿದ ಮತ್ತೋರ್ವ ವಕೀಲ ನಚಿಕೇತ್‌ ಜೋಶಿ, “ಹಾಲಿ ಅರ್ಜಿ ಇತ್ಯರ್ಥವಾಗುವವರೆಗೆ ಮೀಸಲಾತಿ ಹೆಚ್ಚಿಸಿರುವುದನ್ನು ಆಧರಿಸಿ ನೇಮಕಾತಿ, ಆಯ್ಕೆ ಮಾಡುವ ಸಂಬಂಧ ಯಾವುದೇ ಅಧಿಸೂಚನೆ ಹೊರಡಿಸಕೂಡದು ಎಂದು ಹೈಕೋರ್ಟ್‌ ಈ ಹಿಂದೆಯೇ ಆದೇಶ ಮಾಡಿತ್ತು. ಇದರ ಮರುಪರಿಶೀಲನೆ, ಮಾರ್ಪಾಡು ಅಥವಾ ಪ್ರಶ್ನಿಸಲಾಗಿಲ್ಲ. ಈಗ ಮಧ್ಯಂತರ ಅರ್ಜಿಯ ಮೂಲಕ ಇದರ ಮಾರ್ಪಾಡಿಗೆ ಮನವಿ ಮಾಡಲಾಗಿದೆ. ಶೇ.50ರ ಮೀಸಲಾತಿಯ ಪ್ರಕಾರ ನೇಮಕಾತಿ ನಡೆಯಲಿ, ಉಳಿದ ಶೇ.6-7ಕ್ಕೆ ನ್ಯಾಯಾಲಯ ರಿಟ್‌ ನಿರ್ಧರಿಸಿದ ಬಳಿಕ ನೇಮಕಾತಿ ನಡೆಸಬಹುದು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...