Homeಕರ್ನಾಟಕ'ಶೇ.56 ರ ಮೀಸಲಾತಿ ಅನುಸಾರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು..'; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

‘ಶೇ.56 ರ ಮೀಸಲಾತಿ ಅನುಸಾರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು..’; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

- Advertisement -
- Advertisement -

“ಚಾಲ್ತಿಯಲ್ಲಿರುವ ಶೇ.50ರ ಮೀಸಲಾತಿಯ ಅನ್ವಯ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸುವ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಆದರೆ, ಶೇ.56 ಕ್ಕೆ ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಅಧಿಸೂಚನೆ ಹೊರಡಿಸಬಾರದು” ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ ಎಂದು ‘ಕನ್ನಡ ಬಾರ್‌ ಅಂಡ್‌ ಬೆಂಚ್’ ವರದಿ ಮಾಡಿದೆ.

ನೇಮಕಾತಿಯಲ್ಲಿ ಮಧ್ಯಂತರ ವ್ಯವಸ್ಥೆಗೆ ಸಂಬಂಧಿಸಿದಂತೆ ಹಾಗೂ ಅಗತ್ಯಬಿದ್ದರೆ ಸೂಕ್ತ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಮಂಗಳವಾರ ಕೋರ್ಟ್‌ ಅನುಮತಿ ನೀಡಿದೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯಿದೆ-2022ರ ಅನ್ವಯ ಶೇ. 50ಕ್ಕೂ ಹೆಚ್ಚು ಮೀಸಲಾತಿ ನೀಡುವುದಕ್ಕೆ ಆಕ್ಷೇಪಿಸಿ ಡಾ. ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ಕುಮಾರ್ ಮಿತ್ರಾ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು, ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

“ಮೀಸಲಾತಿ ಪ್ರಮಾಣ ಹೆಚ್ಚಿಸಿರುವ ಮಧ್ಯಪ್ರದೇಶ ಸರ್ಕಾರದ ಆದೇಶ ಪ್ರಶ್ನಿಸಿರುವ ಅರ್ಜಿ ಸುಪ್ರೀಂ ಕೋರ್ಟ್‌ಗೆ ವರ್ಗಾವಣೆಯಾಗಿದೆ; ಅದರ ವಿಚಾರಣೆಯು ಈ ತಿಂಗಳು ನಡೆಯಲಿದೆ. ನಾವು ಸರ್ವೋಚ್ಚ ನ್ಯಾಯಾಲಯದ ಆದೇಶಕ್ಕಾಗಿ ಕಾಯಲಾಗುತ್ತಿದೆ ಎಂದು ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ತಿಳಿಸಿದ್ದಾರೆ. ನೇಮಕಾತಿಯಲ್ಲಿ ಮಧ್ಯಂತರ ವ್ಯವಸ್ಥೆಗೆ ಸಂಬಂಧಿಸಿದಂತೆ ಅಡ್ವೊಕೇಟ್‌ ಜನರಲ್‌ ಅವರು ಸೂಚನೆ ಪಡೆಯಲು, ಅಗತ್ಯಬಿದ್ದರೆ ಸೂಕ್ತ ಅರ್ಜಿ ಸಲ್ಲಿಸಲು ಕಾಲಾವಕಾಶ ಕೋರಿದ್ದಾರೆ. ಇದಕ್ಕೆ ನ್ಯಾಯಾಲಯ ಅನುಮತಿ ನೀಡಿದೆ” ಎಂದು ನ್ಯಾಯಮೂರ್ತಿಗಳು ಆದೇಶಿಸಿ, ವಿಚಾರಣೆಯನ್ನು ಫೆಬ್ರವರಿ 12ಕ್ಕೆ ಮುಂದೂಡಿದರು.

ಇದಕ್ಕೂ ಮುನ್ನ ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್ ಜನರಲ್, “ಮೀಸಲಾತಿ ಹೆಚ್ಚಿಸಿರುವ ಮಧ್ಯಪ್ರದೇಶದ ರಿಟ್‌ ಅರ್ಜಿಯು ಸುಪ್ರೀಂ ಕೋರ್ಟ್‌ಗೆ ವರ್ಗಾವಣೆಯಾಗಿದೆ. ಇದರ ವಿಚಾರಣೆಯನ್ನು ಇದೇ ಜನವರಿಯಲ್ಲಿ ನಡೆಸಲಾಗುವುದು ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ. ಶೇ.50ರ ಮೀಸಲಾತಿಯಲ್ಲಿ ನೇಮಕಾತಿ ಮುಂದುವರಿಸುತ್ತೇವೆ. ನ್ಯಾಯಾಲಯ ಹಾಲಿ ಅರ್ಜಿಗಳನ್ನು ನಿರ್ಧರಿಸುವವರೆಗೆ ಹೆಚ್ಚುವರಿ ಶೇ. 6 ಮೀಸಲಾತಿ ಅನ್ವಯಿಸುವುದಿಲ್ಲ. ಆಯ್ಕೆ ಪ್ರಕ್ರಿಯೆ ಮುಂದುವರಿಸಲು ಅವಕಾಶ ನೀಡಬೇಕು. ಶೇ.56ರ ಮೀಸಲಾತಿ ಪ್ರಕಾರ ನೇಮಕಾತಿ ನಡೆಸುತ್ತೇವೆ. ಶೇ.50ಕ್ಕೆ ಮಾತ್ರ ಆದೇಶ ನೀಡಿ, ಉಳಿದ ಶೇ.6ಕ್ಕೆ ನ್ಯಾಯಾಲಯ ನಿರ್ಧಾರ ಮಾಡಿದ ಬಳಿಕ ಆದೇಶ ನೀಡಲಾಗುವುದು” ಎಂದರು.

“ಬೇಕಿದ್ದರೆ ಹಿಂದಿನ ಅಧಿಸೂಚನೆಯಡಿ ಶೇ.50ರ ಮೀಸಲಾತಿ ಅಡಿಯಲ್ಲಿ ನೇಮಕಾತಿ ನಡೆಸಬಹುದು. ಇದರಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಮೀಸಲಾತಿ ಹೆಚ್ಚಿಸಿ, ನೇಮಕಾತಿ ನಡೆಸುವುದಾದರೆ ನೇಮಕಾತಿಯನ್ನೇ ಮಾಡಲು ಸರ್ಕಾರಕ್ಕೆ ಸಾಧ್ಯವಾಗುವುದಿಲ್ಲ. ಅದು ಸರ್ಕಾರಕ್ಕೆ ಇರುವ ಆಯ್ಕೆಯಾಗಿದೆ. ಶೇ.50 ಮೀರಿದ ಹೆಚ್ಚುವರಿ ಮೀಸಲಾತಿ ಅನ್ವಯ ನೇಮಕಾತಿಗೆ ಅನುಮತಿ ಸಾಧ್ಯವಿಲ್ಲ. ಆದರೂ, ಸರ್ಕಾರ ನೇಮಕಾತಿ ನಡೆಸಲೇಬೇಕಿದೆ” ಎಂದು ಪೀಠವು ಸರ್ಕಾರಕ್ಕೆ ಪ್ರತಿಕ್ರಿಯಿಸಿದೆ.

“ಶೇ.94ರಷ್ಟು ನೇಮಕಾತಿಗೆ ಅಧಿಸೂಚನೆ ಹೊರಡಿಸುತ್ತೇವೆ. ಶೇಕಡ 6ರಷ್ಟು ನೇಮಕಾತಿ ಮಾಡುವುದಿಲ್ಲ. ಅಂತಿಮ ತೀರ್ಪಿನ ನಂತರ ಶೇ. 6% ನೇಮಕಾತಿಯನ್ನು ನ್ಯಾಯಾಲಯದ ಆದೇಶದಂತೆ ಕೈಗೊಳ್ಳುವುದಾಗಿ ಅಫಿಡವಿಟ್‌ ಸಲ್ಲಿಸಿದಲ್ಲಿ ಪರಿಶೀಲಿಸಲಾಗುವುದು” ಕೋರ್ಟ್‌ ಹೇಳಿತು.

ಅರ್ಜಿದಾರರ ಪರ ವಕೀಲ ರಂಗನಾಥ್‌ ಜೋಯಿಷ್‌ ವಾದ ಮಂಡಿಸಿ, “ಶೇ.50 ಮೀಸಲಾತಿ ಮೀರಿರುವುದಕ್ಕೆ ಈ ಹಿಂದೆ ಸುಪ್ರೀಂ ಕೋರ್ಟ್‌ ಅನುಮತಿ ನೀಡಿಲ್ಲ. ಶೇ.50 ಮೀರಿ ಮೀಸಲಾತಿ ನೀಡುತ್ತೇವೆ. ಬಳಿಕ ಅದನ್ನು ಸರಿಪಡಿಸಲಾಗುವುದು ಎಂದು ಸರ್ಕಾರ ಹೇಳುತ್ತಿದೆ. ಅಕ್ರಮ ನೇಮಕಾತಿ ಮಾಡಿ, ಆನಂತರ ಅದನ್ನು ಸರಿಪಡಿಸುವ ಯತ್ನವನ್ನು ಸರ್ಕಾರ ಮಾಡುತ್ತಿದೆ” ಎಂದರು.

“ಕಾಯಿದೆ ಸೆಕ್ಷನ್‌ 6ರ ಅಡಿ ನಿಯಮ ರೂಪಿಸಬೇಕು. ಕಾಯಿದೆಯ ಅನ್ವಯ ಮೀಸಲಾತಿ ಹೆಚ್ಚಿಸಿದರೂ ಅದನ್ನು ಜಾರಿಗೊಳಿಸಲು ನಿಯಮ ರೂಪಿಸಲೇಬೇಕು. ನಿಯಮ ರೂಪಿಸದೇ ಅಧಿಸೂಚನೆ ಹೇಗೆ ಪ್ರಕಟಿಸಲಾಗುತ್ತದೆ” ಎಂದು ಪ್ರಶ್ನಿಸಿದರು.

ಅರ್ಜಿದಾರರ ಪರ ವಾದಿಸಿದ ಮತ್ತೋರ್ವ ವಕೀಲ ನಚಿಕೇತ್‌ ಜೋಶಿ, “ಹಾಲಿ ಅರ್ಜಿ ಇತ್ಯರ್ಥವಾಗುವವರೆಗೆ ಮೀಸಲಾತಿ ಹೆಚ್ಚಿಸಿರುವುದನ್ನು ಆಧರಿಸಿ ನೇಮಕಾತಿ, ಆಯ್ಕೆ ಮಾಡುವ ಸಂಬಂಧ ಯಾವುದೇ ಅಧಿಸೂಚನೆ ಹೊರಡಿಸಕೂಡದು ಎಂದು ಹೈಕೋರ್ಟ್‌ ಈ ಹಿಂದೆಯೇ ಆದೇಶ ಮಾಡಿತ್ತು. ಇದರ ಮರುಪರಿಶೀಲನೆ, ಮಾರ್ಪಾಡು ಅಥವಾ ಪ್ರಶ್ನಿಸಲಾಗಿಲ್ಲ. ಈಗ ಮಧ್ಯಂತರ ಅರ್ಜಿಯ ಮೂಲಕ ಇದರ ಮಾರ್ಪಾಡಿಗೆ ಮನವಿ ಮಾಡಲಾಗಿದೆ. ಶೇ.50ರ ಮೀಸಲಾತಿಯ ಪ್ರಕಾರ ನೇಮಕಾತಿ ನಡೆಯಲಿ, ಉಳಿದ ಶೇ.6-7ಕ್ಕೆ ನ್ಯಾಯಾಲಯ ರಿಟ್‌ ನಿರ್ಧರಿಸಿದ ಬಳಿಕ ನೇಮಕಾತಿ ನಡೆಸಬಹುದು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...