Homeಮುಖಪುಟನೇಮಕಾತಿ ಹಗರಣ: 5 ಲೆಫ್ಟಿನೆಂಟ್ ಕರ್ನಲ್‌ಗಳ ಸಹಿತ 17 ಸೇನಾಧಿಕಾರಿಗಳ ವಿರುದ್ದ ಪ್ರಕರಣ ದಾಖಲು

ನೇಮಕಾತಿ ಹಗರಣ: 5 ಲೆಫ್ಟಿನೆಂಟ್ ಕರ್ನಲ್‌ಗಳ ಸಹಿತ 17 ಸೇನಾಧಿಕಾರಿಗಳ ವಿರುದ್ದ ಪ್ರಕರಣ ದಾಖಲು

- Advertisement -
- Advertisement -

ಸಶಸ್ತ್ರ ಪಡೆಗಳ ನೇಮಕಾತಿಯಲ್ಲಿನ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ‘ಲೆಫ್ಟಿನೆಂಟ್‌ ಕರ್ನಲ್’ ಶ್ರೇಣಿಯ ಐವರು ಅಧಿಕಾರಿಗಳು ಮತ್ತು ಆರು ಖಾಸಗಿ ವ್ಯಕ್ತಿಗಳನ್ನು ಒಳಗೊಂಡಂತೆ 17 ಸೇನಾ ಅಧಿಕಾರಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಅಧಿಕಾರಿಗಳ ಮೇಲೆ ಭ್ರಷ್ಟಾಚಾರದ ಆರೋಪವಿದ್ದು, ಸಿಬಿಐ ಸೋಮವಾರ ದೇಶಾದ್ಯಂತ 30 ಸ್ಥಳಗಳಲ್ಲಿ ಈ ಬಗ್ಗೆ ಶೋಧ ನಡೆಸಿದೆ.

ವಾಯು ಸೇನಾ ರಕ್ಷಣಾ ದಳದ ಲೆಫ್ಟಿನೆಂಟ್ ಕರ್ನಲ್ ಎಂವಿಎಸ್ಎನ್ಎ ಭಗವಾನ್; ಕಪುರ್ಥಾಲಾದ ಸೇವಾ ಆಯ್ಕೆ ಕೇಂದ್ರದ ಲೆಫ್ಟಿನೆಂಟ್ ಕರ್ನಲ್ ಸುರೇಂದರ್ ಸಿಂಗ್; ಬರೇಲಿಯ 6 ಪರ್ವತ ವಿಭಾಗದ ಆರ್ಡನೆನ್ಸ್ ಘಟಕದ ಲೆಫ್ಟಿನೆಂಟ್ ಕರ್ನಲ್ ವೈ.ಎಸ್. ಚೌಹಾನ್, ಡಿಜಿ ನೇಮಕಾತಿ ನವದೆಹಲಿಯ ಜಂಟಿ ನಿರ್ದೇಶಕ ಲೆಫ್ಟಿನೆಂಟ್ ಕರ್ನಲ್ ಸುಖದೇವ್ ಅರೋರಾ, ಆಯ್ಕೆ ಕೇಂದ್ರ ದಕ್ಷಿಣ ಬೆಂಗಳೂರು ಗುಂಪು ಪರೀಕ್ಷಾ ಅಧಿಕಾರಿ (ಜಿಟಿಒ) ಲೆಫ್ಟಿನೆಂಟ್ ಕರ್ನಲ್ ವಿನಯ್ ಮತ್ತು ಕಪುರ್ಥಾಲ ಆಯ್ಕೆ ಕೇಂದ್ರ ಉತ್ತರ, ಜಿಟಿಒ ಮೇಜರ್ ಭಾವೇಶ್ ಕುಮಾರ್ ಸಿಬಿಐ ಪ್ರಕರಣ ದಾಖಲಿಸಿರುವ ಹಿರಿಯ ಅಧಿಕಾರಿಗಲಾಗಿದ್ದಾರೆ.

ಇದನ್ನೂ ಓದಿ: ಕಾನ್ಶಿರಾಮ್ ಜಯಂತಿ: JNU ಬಾಪ್ಸಾ ಅಧ್ಯಕ್ಷನ ಮೇಲೆ ABVP ಕಾರ್ಯಕರ್ತರಿಂದ ಹಲ್ಲೆ ಆರೋಪ

ಲೆಫ್ಟಿನೆಂಟ್ ಕರ್ನಲ್ ಎಂವಿಎಸ್ಎನ್ಎ ಭಗವಾನ್ ಅವರು ಈ ನೇಮಕಾತಿ ದಂಧೆಯ ಮಾಸ್ಟರ್ ಮೈಂಡ್ ಎಂದು ಆರೋಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಲವಾರು ಕೆಳಮಟ್ಟದ ಸೇನಾಧಿಕಾರಿಗಳು ಮತ್ತು ಆರೋಪಿತ ಅಧಿಕಾರಿಗಳ ಸಂಬಂಧಿಕರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

“ಕಪುರ್ಥಾಲಾ, ಬತಿಂಡಾ, ದೆಹಲಿ, ಕೈತಾಲ್, ಪಾಲ್ವಾಲ್, ಲಕ್ನೋ, ಬರೇಲಿ, ಗೋರಖ್‌ಪುರ, ವಿಶಾಖಪಟ್ಟಣಂ, ಜೈಪುರ, ಗುವಾಹಟಿ, ಜೋರ್ಹತ್ ಮತ್ತು ಚಿರಂಗೋನ್ ಒಟ್ಟು 13 ನಗರಗಳ ನಾಗರಿಕ ಪ್ರದೇಶಗಳು ಸೇರಿದಂತೆ, ಬೇಸ್ ಆಸ್ಪತ್ರೆ, ಕಂಟೋನ್ಮೆಂಟ್, ಇತರ ಸೇನಾ ಸಂಸ್ಥೆಗಳ 30 ಸ್ಥಳಗಳಲ್ಲಿ ಇಂದು ಹುಡುಕಾಟಗಳನ್ನು ನಡೆಸಲಾಯಿತು. ಇದು ಹಲವಾರು ದೋಷಾರೋಪಣೆ ದಾಖಲೆಗಳನ್ನು ಮರುಪಡೆಯಲು ಸಹಾಯವಾಯಿತು. ಹುಡುಕಾಟದ ಸಮಯದಲ್ಲಿ ಸಿಕ್ಕಿರುವ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ”ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ GST ಅಡಿಯಲ್ಲಿ ತರುವ ಪ್ರಸ್ತಾಪ ಇಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...