Homeಕರ್ನಾಟಕಭಾರೀ ಮಳೆಗೆ ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

ಭಾರೀ ಮಳೆಗೆ ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

- Advertisement -
- Advertisement -

ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ. ಒಂದೇ ದಿನದಲ್ಲಿ 204.4 ಮಿ.ಮೀ.ಗಿಂತಲೂ ಅಧಿಕ ಮಳೆ ಸುರಿದಿದ್ದು ಹಲವು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದೆ. ಕೋಡಿ, ಮರವಂತೆಯಲ್ಲಿ ಕಡಲ್ಕೂರೆತ ಮುಂದುವರಿದಿದೆ. ಮಲ್ಪೆ, ಪಡುಕರೆ, ಪಡುಬಿದ್ರಿ, ಕಾಪು, ಕೋಡಿ ಸೀ ವಾಕ್‌ನಲ್ಲಿ ಅಲೆಗಳು ಹೆಚ್ಚಾಗಿದ್ದು, ಬೃಹತ್ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಹಲವೆಡೆ ಕೃಷಿ ಭೂಮಿ ಸಹಿತ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಗಾಳಿ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಒಟ್ಟು 41 ಮನೆಗಳಿಗೆ ಹಾನಿಯಾಗಿದೆ. 230ಕ್ಕೂ ಅಧಿಕ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, 24 ಟ್ರಾನ್ಸ್‌ಫಾರ್ಮರ್‌ಗಳಿಗೆ ಹಾನಿಯಾಗಿದೆ. ಬೃಹತ್ ಮರಗಳು ಬುಡ ಸಹಿತ ಧರೆಗುರುಳಿವೆ. ಈ ಹಿನ್ನೆಲೆಯಲ್ಲಿ ಅಲ್ಲಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.

ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಶಂಕರನಾರಾಯಣ, ಈ ಕಾಪು ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಮೆಸ್ಕಾಂ ಇಲಾಖೆಗೆ ಹಾನಿಯಾಗಿದ್ದು, ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿದೆ.

ಮಳೆಗೆ ನದಿಗಳು ತುಂಬಿ ಹರಿಯುತ್ತಿದ್ದು, ಹಲವಾರು ಹಳ್ಳ-ಕೊಳ್ಳಗಳಲ್ಲಿ ನೀರು ನುಗ್ಗಿದೆ. ಹಾಗಾಗಿ ಜಲಾವೃತಗೊಳ್ಳುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ತಗ್ಗು ಹಾಗೂ ಅಪಾಯಕಾರಿ ಪ್ರದೇಶಗಳಿಂದ ಜನಸಾಮಾನ್ಯರು ದೂರವಿರಲು ಎಚ್ಚರಿಕೆ ನೀಡಲಾಗಿದೆ.

ಏನಿವು ಅಲರ್ಟ್‌ಗಳು?

ಮಳೆಗಾಲದಲ್ಲಿ ಅಥವಾ ಯಾವುದೇ ಅನಿರೀಕ್ಷಿತ ಚಂಡಮಾರುತಗಳು ಬೀಸುವ ಸಂದರ್ಭದಲ್ಲಿ ಜನಸಾಮಾನ್ಯರ ಸುರಕ್ಷತೆಯ ದೃಷ್ಟಿಯಿಂದ ಭಾರತೀಯ ಹವಾಮಾನ ಇಲಾಖೆಯು ಹಸಿರು, ಹಳದಿ ಕಿತ್ತಳೆ ಮತ್ತು ಕೆಂಪು  ಅಲರ್ಟ್‌ಗಳನ್ನು ಹೊರಡಿಸುತ್ತದೆ. ಅವುಗಳ ಅರ್ಥವೇನು? ಅವು ಏನನ್ನು ಸೂಚಿಸುತ್ತವೆ ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ

ನಮ್ಮ ದೇಶದಲ್ಲಿ ಭಾರತೀಯ ಹವಾಮಾನ ಇಲಾಖೆ (IMD)ಯು ಈ ಎಚ್ಚರಿಕೆಗಳನ್ನು ನೀಡುತ್ತದೆ ಮತ್ತು ವಿಭಿನ್ನ ಸಂದೇಶಗಳನ್ನು ವಿವರಿಸಲು 4 ವಿಭಿನ್ನ ಬಣ್ಣದ ಕೋಡ್‌ಗಳನ್ನು ಬಳಸುತ್ತದೆ. ಹಸಿರು, ಹಳದಿ, ಕಿತ್ತಳೆ ಮತ್ತು ಕೆಂಪು ಬಣ್ಣದ ಎಚ್ಚರಿಕೆಗಳನ್ನು ನೀಡುತ್ತದೆ.

1. ಹಸಿರು ಎಚ್ಚರಿಕೆ (ಗ್ರೀನ್ ಅಲರ್ಟ್)

ಗ್ರೀನ್ ಅಲರ್ಟ್ ಎಂದರೆ ಸಾಮಾನ್ಯವಾಗಿ ಹವಾಮಾನ ಪರಿಸ್ಥಿತಿಗಳು ಉತ್ತಮವಾಗಿವೆ ಎಂದರ್ಥ. ಬಹುತೇಕ ಸಮಯದಲ್ಲಿ ಈ ಅಲರ್ಟ್ ಜಾರಿಯಲ್ಲಿರುತ್ತದೆ. ಅಲ್ಲದೆ ಈ ಎಚ್ಚರಿಕೆಯ ಸಮಯದಲ್ಲಿ ಭಾರತೀಯ ಹವಾಮಾನ ಇಲಾಖೆಯು ನಾಗರೀಕರಿಗೆ ಯಾವುದೇ ಸಲಹೆಯನ್ನು ನೀಡುವುದಿಲ್ಲ.

2. ಹಳದಿ ಎಚ್ಚರಿಕೆ (ಯೆಲ್ಲೋ ಅಲರ್ಟ್)

ಹವಾಮಾನ ಇಲಾಖೆಯು ಜನರಿಗೆ ಎಚ್ಚರಿಕೆ ನೀಡಲು ಹಳದಿ ಅಲರ್ಟ್ ಅನ್ನು ನೀಡುತ್ತದೆ. 7.5 ರಿಂದ 15 ಮಿಮೀ ವರೆಗೆ ಭಾರೀ ಮಳೆಯಾಗಲಿದ್ದು, ಇದು ಮುಂದಿನ 1 ಅಥವಾ 2 ಗಂಟೆಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎಂದಾಗ ಇದನ್ನು ಹೊರಡಿಸುತ್ತದೆ. ಅಂದರೆ ಇದು ಕೇವಲ ಮುಂದೊದಗಬಹುದಾದ ಅಪಾಯದ ಬಗ್ಗೆ ಎಚ್ಚರವಿರಲಿ ಎಂದರ್ಥ. ಹಳದಿ ಎಚ್ಚರಿಕೆಯ ಸಮಯದಲ್ಲಿ ಹವಾಮಾನವನ್ನು ನಿರಂತರವಾಗಿ ಮತ್ತು ನಿಕಟವಾಗಿ ಮೇಲ್ವಿಚಾರಣೆ ಮಾಡಲಾಗುತ್ತದೆ.

3. ಕಿತ್ತಳೆ ಎಚ್ಚರಿಕೆ (ಆರೆಂಜ್ ಅಲರ್ಟ್)

ಹವಾಮಾನವು ಹದಗೆಟ್ಟಾಗ, ಹಳದಿ ಎಚ್ಚರಿಕೆಯನ್ನು ಆರೆಂಜ್ ಅಲರ್ಟ್ ಆಗಿ ಬದಲಾಯಿಸಲಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳುತ್ತದೆ. “ಈ ಚಂಡಮಾರುತವು ಹವಾಮಾನ ಪರಿಸ್ಥಿತಿಗಳು ಹದಗೆಡಲು ಕಾರಣವಾಗಬಹುದು. ಇದು ರಸ್ತೆ ಮತ್ತು ವಾಯು ಸಾರಿಗೆಗೆ ಹಾನಿಯನ್ನುಂಟುಮಾಡುತ್ತದೆ ಮತ್ತು ಜೀವ ಮತ್ತು ಆಸ್ತಿ ನಷ್ಟವನ್ನು ಉಂಟುಮಾಡಬಹುದು” ಎಂಬುದನ್ನು ಆರೆಂಜ್ ಅಲರ್ಟ್ ವಿವರಿಸುತ್ತದೆ.

ಹೀಗಾಗಿ ಆರೆಂಜ್ ಅಲರ್ಟ್ ಘೋಷಿಸಿದ ಸಮಯದಲ್ಲಿ ಜನರು ತಮ್ಮ ಮನೆಗಳಲ್ಲಿಯೇ ಇರುವಂತೆ ಸೂಚಿಸಲಾಗುತ್ತದೆ. ಅಂತಹ ಪರಿಸ್ಥಿತಿಗಳಲ್ಲಿ ಗಾಳಿಯ ವೇಗ ಗಂಟೆಗೆ 65 ರಿಂದ 75 ಕಿಮೀ ಇದ್ದು, 15 ರಿಂದ 33 ಮಿಮೀ ಮತ್ತು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಆರೆಂಜ್ ಅಲರ್ಟ್ ಘೋಷಿಸಿದಾಗ ಮಳೆ ಪೀಡಿತ ಪ್ರದೇಶದಲ್ಲಿ ಅಪಾಯಕಾರಿ ಪ್ರವಾಹದ ಸಾಧ್ಯತೆಯಿರುವುದರಿಂದ ಪೀಡಿತ ಪ್ರದೇಶದಿಂದ ಜನರನ್ನು ಸ್ಥಳಾಂತರಿಸಲು ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಸ್ಥಳೀಯ ಆಡಳಿತಗಳಿಗೆ ಸೂಚಿಸಲಾಗುತ್ತದೆ.

4. ಕೆಂಪು ಎಚ್ಚರಿಕೆ (ರೆಡ್ ಅಲರ್ಟ್)

ರೆಡ್ ಅಲರ್ಟ್ ಎಂದರೆ ಅಪಾಯಕಾರಿ ಪರಿಸ್ಥಿತಿ ಎಂದರ್ಥ. ಇದು ಅಂತಿಮ ಎಚ್ಚರಿಕೆಯಾಗಿದೆ. ಈ ಸಮಯದಲ್ಲಿ ಜನರು ಹೊರಗಡೆ ಹೋಗದಂತೆ ಸೂಚಿಸಲಾಗುತ್ತದೆ. ಚಂಡಮಾರುತವು ಗಂಟೆಗೆ 130 ಕಿಮೀ ಗಾಳಿಯ ವೇಗದ ತೀವ್ರತೆಯೊಂದಿಗೆ ಬೀಸಿದಾಗ ಮತ್ತು ತೀವ್ರ ಮಳೆ ಬಂದಾಗ ಭಾರತೀಯ ಹವಾಮಾನ ಇಲಾಖೆಯು ಕೆಂಪು ಎಚ್ಚರಿಕೆ ನೀಡುತ್ತದೆ. ಆ ಪ್ರದೇಶದ ಆಡಳಿತವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗುತ್ತದೆ.

ಹವಾಮಾನವು ಅಪಾಯಕಾರಿ ಮಟ್ಟಕ್ಕೆ ತಲುಪಿದಾಗ ಮತ್ತು ಭಾರೀ ಹಾನಿಯ ಅಪಾಯವಿದ್ದರೆ, ಆಗ ರೆಡ್ ಅಲರ್ಟ್ ನೀಡಲಾಗುವುದು ಎಂದು ಹವಾಮಾನ ಇಲಾಖೆ ಹೇಳಿದೆ. 30 ಮಿ.ಮೀ.ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಮತ್ತು ಕನಿಷ್ಠ 2 ಗಂಟೆಗಳ ಕಾಲ ಇದು ಮುಂದುವರಿಯುವ ಸಾಧ್ಯತೆ ಇದ್ದಾಗ ಮಾತ್ರ ಈ ರೀತಿಯ ಎಚ್ಚರಿಕೆಯನ್ನು ಘೋಷಿಸಲಾಗುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದ ಅಪಾಯವು ಹಲವಾರು ಪಟ್ಟು ಹೆಚ್ಚಾಗುವುದರಿಂದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಲಾಗುತ್ತದೆ.

ಈ ಎಚ್ಚರಿಕೆಗಳನ್ನು ಟಿವಿ, ರೆಡಿಯೋ ಸೇರಿದಂತೆ ಹಲವು ಮಾಧ್ಯಮಗಳ ಮೂಲಕ ಹವಾಮಾನ ಇಲಾಖೆ ಹೊರಡಿಸುತ್ತದೆ. ಇವುಗಳನ್ನು ಜನರು ಪಾಲಿಸುವುದು ಸುರಕ್ಷತೆಯ ದೃಷ್ಟಿಯಿಂದ ಒಳ್ಳೆಯದು. ಅಲ್ಲದೆ ಇದರಿಂದ ತೀವ್ರ ಮಳೆ ಸಂದರ್ಭದಲ್ಲಿ ಹೆಚ್ಚಿನ ಜೀವ ಹಾನಿಯಾಗದಂತೆ ತಡೆಯಲು ಸ್ಥಳೀಯ ಆಡಳಿತಗಳಿಗೆ ಸಹಕಾರಿಯಾಗುತ್ತದೆ.

ಇದನ್ನೂ ಓದಿ: ಧರ್ಮಸ್ಥಳದ ’ನಿರ್ಭಯಾ’ ಪ್ರಕರಣ: ಪರಮ ಪಾಪಿಗಳ ಪಾರು ಮಾಡಲು ಫಿಕ್ಸ್ ಮಾಡಲಾಗಿದ್ದ ಸಂತೋಷ್ ರಾವ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....