Homeಮುಖಪುಟಕೆಂಪುಕೋಟೆ ಪ್ರಕರಣ: ದೇಶದ್ರೋಹ ಪ್ರಕರಣ ದಾಖಲು - ತಲೆಮರೆಸಿಕೊಂಡ ನಟ ದೀಪು ಸಿಧು

ಕೆಂಪುಕೋಟೆ ಪ್ರಕರಣ: ದೇಶದ್ರೋಹ ಪ್ರಕರಣ ದಾಖಲು – ತಲೆಮರೆಸಿಕೊಂಡ ನಟ ದೀಪು ಸಿಧು

- Advertisement -
- Advertisement -

ಜನವರಿ 26ರ ಗಣರಾಜ್ಯೋತ್ಸವ ದಿನದಂದು ರೈತರು ಕೆಂಪುಕೋಟೆಯಲ್ಲಿ ಟ್ರ್ಯಾಕ್ಟರ್ ಪರೇಡ್ ನಡೆಸಿದ ಸಂದರ್ಭಧಲ್ಲಿ ಗಲಭೆಗೆ ಕಾರಣರಾದವರ ವಿರುದ್ಧ ದೆಹಲಿ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಾದ ಮಾಹಿತಿ ತಿಳಿಯುತ್ತಿದ್ದಂತೆಯೇ ಟ್ರ್ಯಾಕ್ಟರ್ ಪರೇಡ್ ನಡೆಯುವ ವೇಳೆ ಕೆಂಪುಕೋಟೆಯಲ್ಲಿ ಕಾಣಿಸಿಕೊಂಡಿದ್ದ ನಟ ದೀಪ್ ಸಿಧು ತಲೆಮರೆಸಿಕೊಂಡಿದ್ದಾರೆ ಎಂದು ದಿವೈರ್.ಇನ್ ವರದಿ ಮಾಡಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ಹೇಳಿಕೆಯನ್ನು ಉಲ್ಲೇಖಿಸಿ ದಿವೈರ್.ಇನ್ ವರದಿ ಮಾಡಿದ್ದು ಭಾರತೀಯ ದಂಡ ಸಂಹಿತೆ ಸೆಕ್ಷನ್ 124ಎ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ. ಮತ್ತು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಗಲಭೆ ಪ್ರಕರಣದಲ್ಲಿ ನಟ ದೀಪು ಸಿಧು ಮತ್ತು ಗ್ಯಾಂಗ್ ಸ್ಟಾರ್ ಲಖ ಸಿಧಾನ ಭಾಗಿಯಾಗಿದ್ದಾರೆಂಬುದನ್ನು FIRನಲ್ಲಿ ಉಲ್ಲೇಖಿಸಲಾಗಿದೆ. ಹಲವು ರೈತ ಸಂಘಟನೆಗಳು ಸಿಧು ಮತ್ತು ಸಿಧಾನ ಇಡೀ ರ್ಯಾಲಿಯನ್ನು ದಿಕ್ಕುತಪ್ಪಿಸಿದರು. ಟ್ರ್ಯಾಕ್ಟರ್ ಪರೇಡ್ ಅನ್ನು ಹೈಜಾಕ್ ಮಾಡಿದ್ದರು. ಗಲಭೆಗೆ ಸಿಧು ಪ್ರಚೋದಿಸಿದ್ದರು ಎಂದು ಆರೋಪಿಸಿದ್ದವು. ರೈತ ಸಂಘಟನೆಗಳ ಒತ್ತಡಕ್ಕೆ ಮಣಿದಿರುವ ಪೊಲೀಸರು ಎಫ್ಐಆರ್ ನಲ್ಲಿ ಸಿಧು ಮತ್ತು ಸಿಧಾನ ಹೆಸರನ್ನು ಉಲ್ಲೇಖಿಸಿದ್ದಾರೆ.

FIRನಲ್ಲಿ ಸಾರ್ವಜನಿಕ ಸ್ವತ್ತು ಹಾನಿ ತಡೆ ಕಾಯ್ದೆ, ಪುರಾತನ ಸ್ಮಾರಕ ಮತ್ತು ಭಾರತೀಯ ಪುರಾತತ್ವ ಸ್ಥಳ ಸಂರಕ್ಷಣಾ ಕಾಯ್ದೆ, ಶಸ್ತ್ರಾಸ್ತ್ರ ಕಾಯ್ದೆಯು ಸೇರಿದಂತೆ ಹಲವು ಕಾನೂನುಗಳಡಿ ಪ್ರಕರಣ ದಾಖಲಿಸಲಾಗಿದೆ. ಹತ್ಯಾಯತ್ನ, ರಾಬರಿ, ಡಕಾಯಿತಿ, ಸಾರ್ವಜನಿಕ ಅಧಿಕಾರಿ ಕರ್ತವ್ಯಕ್ಕೆ ಅಡ್ಡಿ ಕಲಂಗಳನ್ನು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

ಈ ನಡುವೆ ಸಿಂಘು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆಂದು ಎಎನ್ಐ ವರದಿ ಮಾಡಿದೆ. ರೈತರ ಪ್ರತಿಭಟನೆ ತೆರವುಗೊಳಿಸುವಂತೆ ಸ್ಥಳೀಯರು ಆಗ್ರಹಿಸುತ್ತಿದ್ದಾರೆ. ಸ್ಥಳೀಯರು ಬಿಜೆಪಿ ಬೆಂಬಲಿಗರು ಮತ್ತು ಆರ್.ಎಸ್.ಎಸ್. ಹಿನ್ನೆಲೆಯುಳ್ಳವರು ಎಂದು ವರದಿ ಹೇಳಿದೆ.

ಭಾರತೀಯ ಪುರಾತತ್ವ ಇಲಾಖೆ ಜನವರಿ 31ರವರೆಗೆ ಕೆಂಪುಕೋಟೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಆದರೆ ಕೆಂಪುಕೋಟೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಬಗ್ಗೆ ಯಾವುದೇ ಕಾರಣ ನೀಡಿಲ್ಲ ಎಂದು ವರದಿ ತಿಳಿಸಿದೆ.

ಮಹಾರಾಷ್ಟ್ರ ಮೂಲದ 55 ವರ್ಷದ ರೈತರೊಬ್ಬರು ಹರಿಯಣಾ-ರಾಜಸ್ಥಾನ ಗಡಿಯಲ್ಲಿ ಮೃತಪಟ್ಟಿದ್ದಾರೆ. ಶೀತದ ಕಾರಣದಿಂದ ಈ ಸಾವು ಉಂಟಾಗಿದೆ ಎಂದು ಸಂಯುಕ್ತ ಕಿಸಾನ್  ಮೋರ್ಚಾ ಹೇಳಿದೆ.


ಇದನ್ನೂ ಓದಿ: ಟ್ರಾಕ್ಟರ್‌ ರ್‍ಯಾಲಿಯ ಅಹಿತಕರ ಘಟನೆಯಲ್ಲಿ ಕೇಜ್ರಿವಾಲ್ ಕೈವಾಡ: BJP ಸಂಸದ ಗೌತಮ್ ಗಂಭೀರ್‌ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...