Homeಚಳವಳಿಕೆಂಪು ಕೋಟೆ ದಾಂಧಲೆ ಪ್ರಕರಣ: ಆರೋಪಿ ದೀಪ್ ಸಿಧುಗೆ ಜಾಮೀನು ನೀಡಿದ ದೆಹಲಿ ಕೋರ್ಟ್

ಕೆಂಪು ಕೋಟೆ ದಾಂಧಲೆ ಪ್ರಕರಣ: ಆರೋಪಿ ದೀಪ್ ಸಿಧುಗೆ ಜಾಮೀನು ನೀಡಿದ ದೆಹಲಿ ಕೋರ್ಟ್

- Advertisement -
- Advertisement -

ಜನವರಿ 26 ರ ಗಣರಾಜ್ಯೋತ್ಸವದಂದು ಕೆಂಪು ಕೋಟೆ ಬಳಿ ನಡೆದ ದಾಂಧಲೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿ ನಟ ದೀಪ್ ಸಿಧುಗೆ ದೆಹಲಿ ನ್ಯಾಯಾಲಯ ಶುಕ್ರವಾರ ಜಾಮೀನು ನೀಡಿದೆ.

ನಟ ದೀಪ್ ಸಿಧು ಅವರ ಜಾಮೀನು ಅರ್ಜಿಯ ಕುರಿತ ಆದೇಶವನ್ನು ದೆಹಲಿ ನ್ಯಾಯಾಲಯ ಸೋಮವಾರ ಕಾಯ್ದಿರಿಸಿತ್ತು.ವಿಶೇಷ ನ್ಯಾಯಾಧೀಶ ನೀಲೋಫರ್ ಅಬಿದಾ ಪರ್ವೀನ್, ಸಿಧು ಅವರ ಜಾಮೀನು ಅರ್ಜಿಯ ಆದೇಶವನ್ನು ಏಪ್ರಿಲ್ 15 ರಂದು ಘೋಷಿಸಲಾಗುವುದು ಎಂದಿದ್ದರು.

ದೀಪ್ ಸಿಧು ಕೇವಲ ಅಲ್ಲಿ ಅವರು ಉಪಸ್ಥಿತರಿದ್ದ ಮಾತ್ರಕ್ಕೆ ಅವರು ಕಾನೂನುಬಾಹಿರ ಘಟನೆ ಭಾಗವಾಗಲು ಸಾಧ್ಯವಿಲ್ಲ. ಅವರು ರೈತ ಪ್ರತಿಭಟನೆಯ ಭಾಗವಾಗಿದ್ದ ಪ್ರಾಮಾಣಿಕ ಪ್ರಜೆ ಎಂದು ಸಿಧು ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನೂ ಓದಿ: ಕೆಂಪು ಕೋಟೆಯಲ್ಲಿ ಧ್ವಜ ಹಾರಾಟ – ಸುಳ್ಳು ಸುದ್ದಿ ಹರಡುತ್ತಿರುವ ಬಿಜೆಪಿ ಮತ್ತು ಮಾಧ್ಯಮಗಳು: ಭಾರಿ ಆಕ್ರೋಶ

ದೆಹಲಿ ಪೊಲೀಸರನ್ನು ಪ್ರತಿನಿಧಿಸುವ ಪಬ್ಲಿಕ್ ಪ್ರಾಸಿಕ್ಯೂಟರ್, ಸಿಧು ಹಿಂಸಾಚಾರವನ್ನು ಉಂಟುಮಾಡಲು ಮತ್ತು ರಾಷ್ಟ್ರಧ್ವಜವನ್ನು ಕಡೆಗಣಿಸುವ ಉದ್ದೇಶದಿಂದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಜೊತೆಗೆ ಕಾನೂನುಬಾಹಿರ ಘಟನೆಯ ಮುಖ್ಯ ಪ್ರಚೋದಕ ಅವರೆ ಆಗಿದ್ದಾರೆ ಎಂದು ನ್ಯಾಯಾಲಯದಲ್ಲಿ ವಾದಿಸಿದ್ದರು.

ಧಾರ್ಮಿಕ ಧ್ವಜವನ್ನು ಹಾರಿಸಲು ಕೆಂಪು ಕೋಟೆಯಲ್ಲಿ ಜನಸಮೂಹವನ್ನು ಪ್ರಚೋದಿಸಲಿಲ್ಲ ಮತ್ತು ಪ್ರತಿಭಟಿಸಲುತಮ್ಮ ಮೂಲಭೂತ ಹಕ್ಕು ಚಲಾಯಿಸಿದ್ದೇನೆ ಎಂದು ದೀಪ್ ಸಿಧು ಕಳೆದ ವಾರ ನ್ಯಾಯಾಲಯಕ್ಕೆ ತಿಳಿಸಿದ್ದರು.

“ಪ್ರತಿಭಟಿಸುವ ಹಕ್ಕು ಮೂಲಭೂತ ಹಕ್ಕು, ಅದಕ್ಕಾಗಿಯೇ ನಾನು ಅಲ್ಲಿದ್ದೆ. ನಾನು ಹಿಂಸಾಚಾರದಲ್ಲಿ ಪಾಲ್ಗೊಂಡಿಲ್ಲ, ಹಿಂಸಾಚಾರದಲ್ಲಿ ಪಾಲ್ಗೊಳ್ಳುವಂತೆ ನಾನು ಯಾರನ್ನೂ ಒತ್ತಾಯಿಸಲಿಲ್ಲ ”ಎಂದು ಸಿಧು ನ್ಯಾಯಾಲಯಕ್ಕೆ ಸಲ್ಲಿಸಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೂಲಭೂತ ಹಕ್ಕುಗಳು ಎಂದು ಪೊಲೀಸ್ ಅಧಿಕಾರಿಗಳಿಗೆ ಹಾನಿ ಮಾಡಬಹುದೆಂದು ಅರ್ಥವಲ್ಲ ಎಂದು ದೆಹಲಿ ಪೊಲೀಸರ ಪಬ್ಲಿಕ್ ಪ್ರಾಸಿಕ್ಯೂಟರ್ ವಾದಿಸಿದ್ದರು.

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಲಕ್ಷಾಂತರ ರೈತರು ಕಳೆದ 5 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದರ ಭಾಗವಾಗಿ ಜನವರಿ 26 ರಂದು ಬೃಹತ್ ಟ್ರ್ಯಾಕ್ಟರ್ ಪರೇಡ್ ನಡೆಸಲು ರೈತ ಒಕ್ಕೂಟ ಕರೆ ನೀಡಿತ್ತು. ಈ ಮೆರವಣಿಗೆಯಲ್ಲಿ ದೀಪ್ ಸಿಧುವಿನ ಪ್ರಚೋದಿತ ಗುಂಪೊಂದು ಉದ್ದೇಶಿತ ಮಾರ್ಗ ಬಿಟ್ಟು ಕೆಂಪುಕೋಟೆಗೆ ನುಗ್ಗಿ ಸಿಖ್ ಧಾರ್ಮಿಕ ಬಾವುಟವನ್ನು ಹಾರಿಸಿತ್ತು. ಇಲ್ಲಿ ರೈತರು ಮತ್ತು ಪೊಲೀಸರ ನಡುವೆ ಹಿಂಸಾತ್ಮಕ ಘಟನೆಗಳು ನಡೆದು ಇಬ್ಬರೂ ಗಾಯಗೊಂಡಿದ್ದರು.ಈ ಪ್ರಕರಣಕ್ಕೆ  ಸಂಬಂಧಿಸಿದಂತೆ ಫೆಬ್ರವರಿ 9 ರಂದು ದೀಪ್‌ ಸಿಧುನನ್ನು ಬಂಧಿಸಲಾಗಿತ್ತು.


ಇದನ್ನೂ ಓದಿ: ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳು: ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...