Homeಕರ್ನಾಟಕಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್‌ ಕಡಿತ: ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್‌ ಕಡಿತ: ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಹತ್ತಿಕ್ಕುವುದರ ಜೊತೆಗೆ, ಮನುಸ್ಮೃತಿಯ ಆಶಯವನ್ನು ಗಟ್ಟಿಗೊಳಿಸುವುದು ಈ ಸರ್ಕಾರಗಳ ಗುರಿಯಾಗಿದೆ ಎಂದು ವಿದ್ಯಾರ್ಥಿ ಸಂಘಟನೆಗಳು ಕಿಡಿಕಾರಿವೆ.

- Advertisement -
- Advertisement -

ಪಿಎಚ್‌ಡಿ ಹಾಗು ಎಂಫಿಲ್ ಅಧ್ಯಯನ ಕೈಗೊಳ್ಳುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ರಾಜ್ಯ ಅಲ್ಪಸಂಖ್ಯಾತ ಇಲಾಖೆ ಕಡಿತಗೊಳಿಸಿ ಆದೇಶ ಹೊರಡಿಸಿರುವುಕ್ಕೆ ಹಲವಾರು ವಿದ್ಯಾರ್ಥಿ ಸಂಘಟನೆ ಸೇರಿದಂತೆ, ರಾಜಕೀಯ ಪಕ್ಷಗಳು ವಿರೋಧಿಸಿದ್ದು ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಗಳೊಂದಿಗೆ ತಮ್ಮ ಹಕ್ಕುಗಳನ್ನು ಕೇಳುತ್ತಿರುವ ಸಮುದಾಯಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವುದೆ ಈ ಸರ್ಕಾರದ ಹುನ್ನಾರವಾಗಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ(KVS)ಯ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ ಆಕ್ರೋಶ ವ್ಯಕ್ತಪಡಿಸಿದ್ದು, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಫೆಲೋಶಿಪ್‌ ಅನ್ನು ಕಡಿತಗೊಳಿಸಿ ಹೊಡಿಸಿರುವ ಆದೇಶವನ್ನು ಹಿಂಪಡೆದು ಇನ್ನೂ ಹೆಚ್ಚಿನ ನೆರವನ್ನು ಸರ್ಕಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

“ಹೊಸ ಶಿಕ್ಷಣ ನೀತಿ ಸೇರಿದಂತೆ ಸರ್ಕಾರದ ಇತ್ತೀಚೆಗಿನ ಬೆಳವಣಿಗೆಯನ್ನು ನೋಡಿದರೆ ಶಿಕ್ಷಣದಿಂದ ಅಲ್ಪಸಂಖ್ಯಾತ ಹಾಗೂ ದಲಿತ ವಿದ್ಯಾರ್ಥಿಗಳನ್ನು ದೂರ ಇಡುವ ಎಲ್ಲಾ ಹುನ್ನಾರಗಳನ್ನು ಮಾಡುತ್ತಿದೆ. ರಾಜ್ಯ ಸರ್ಕಾರದ ಸಾಮಾಜ ಕಲ್ಯಾಣ ಇಲಾಖೆಯಲ್ಲಿ 19 ಸಾವಿರ ಕೋಟಿ ಉಳಿದಿದ್ದು ಅದನ್ನು ಬೇರೆ ಇಲಾಖೆಗೆ ವರ್ಗಾಯಿಸಲು ಹೊರಟಿದ್ದಾರೆ. ಅದೇ ಸಮಯದಲ್ಲಿ ದಲಿತ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಲ್ಯಾಪ್‌ಟಾಪ್ ನಿಲ್ಲಿಸಿದ್ದಾರೆ, ಸ್ಕಾಲರ್‌ಶಿಪ್‌ಗಳನ್ನು ಕಡಿಮೆ ಮಾಡುತ್ತಿದ್ದಾರೆ. ಇವೆಲ್ಲವೂ ಈ ಹುನ್ನಾರದ ಭಾಗವೆ ಆಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪಿಎಚ್‌‌ಡಿ, ಎಂಫಿಲ್ ಫೆಲೋಶಿಪ್ ಕಡಿತಗೊಳಿಸಿದ ಸರ್ಕಾರ!

“ಶಿಕ್ಷಣ ಪಡೆದುಕೊಂಡಿರುವ ದಲಿತ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಪ್ರಶ್ನೆ ಹಾಗೂ ಧ್ವನಿ ಎತ್ತುತ್ತಿದ್ದಾರೆ. ಇದಕ್ಕೆ ಸರಿಯಾದ ಉದಾಹರಣೆ ಜಾಮಿಯಾ ಮತ್ತು ಜೆಎನ್‌‌ಯು ಆಗಿದೆ. ಆದ್ದರಿಂದಲೇ ಇವರು ಈ ವಿಶ್ವವಿದ್ಯಾನಿಲಯಗಳನ್ನು ಗುರಿಯಾಗಿಸುತ್ತಿದ್ದಾರೆ. ಇಲ್ಲಿ ಅಧ್ಯಯನ ಮಾಡುತ್ತಿರುವ ಬಡ ಹಿನ್ನಲೆಯಲ್ಲಿರುವ ವಿದ್ಯಾರ್ಥಿಗಳು ಶಿಕ್ಷಿತರಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದಾರೆ. ಇಂತಹ ವಿದ್ಯಾರ್ಥಿಗಳನ್ನು ಹತ್ತಿಕ್ಕುವುದರ ಜೊತೆಗೆ, ಮನುಸ್ಮೃತಿಯ ಆಶಯವನ್ನು ಗಟ್ಟಿಗೊಳಿಸುವುದು ಈ ಸರ್ಕಾರಗಳ ಗುರಿಯಾಗಿದೆ” ಎಂದು ಸರೋವರ್‌ ಬೆಂಕಿಕೆರೆ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರ ಬಂದ ನಂತರದಲ್ಲಿ ವಿದ್ಯಾರ್ಥಿಗಳ ಹಕ್ಕುಗಳನ್ನು ದಮನ ಮಾಡುತ್ತಿರುವುದಲ್ಲದೆ ಅವರಿಗೆ ಸಿಗಬೇಕಾದ ಶೈಕ್ಷಣಿಕ ಪ್ರೋತ್ಸಾಹ ಧನವನ್ನೂ ಕಡಿತಗೊಳಿಸುತ್ತಿದೆ ಎಂದು ವಿದ್ಯಾರ್ಥಿ ಸಂಘಟನೆಯಾಗಿರುವ SFI ಹೇಳಿದ್ದು, “ಕಳೆದ 10 ತಿಂಗಳಿನಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್ ಹಣವನ್ನು ವಿದ್ಯಾರ್ಥಿಗಳಿಗೆ ತಲುಪಿಸಲು ಸರ್ಕಾರ ವಿಫಲವಾಗಿದೆ. ಈಗ ಏಕಾಏಕಿ ವರ್ಷಕ್ಕೆ ಒಂದು ಲಕ್ಷ ಮಾತ್ರ ನೀಡಲಾಗುವುದು ಎಂಬ ಸುತ್ತೋಲೆ ಹೊರಡಿಸಿರುವುದು ವಿದ್ಯಾರ್ಥಿಗಳಿಗೆ ಆತಂಕ ಉಂಟುಮಾಡಿದೆ” ಎಂದಿದೆ.

ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಲ್ಲಿ ಬಹಳ ಕಡಿಮೆ ಸಂಖ್ಯೆಯಲ್ಲಿದ್ದಾರೆ ರಾಜಕೀಯವಾಗಿ ಆರ್ಥಿಕವಾಗಿ ಸಾಮಾಜಿಕವಾಗಿ ಅವರನ್ನು ತುಳಿತಕ್ಕೆ ಒಳಪಡಿಸಿದಷ್ಟೇ ಅಲ್ಲದೇ, ಈಗ ಶೈಕ್ಷಣಿಕವಾಗಿಯೂ ಅವರನ್ನು ವಂಚಿಸುವ, ದುರ್ಬಲರನ್ನಾಗಿ ಮಾಡುವ ನಡೆ ಇದು ಎಂದಿರುವ SFI, “ಈ ಕೂಡಲೇ ಈ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಕೈ ಬಿಡಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾದ ಆರ್ಥಿಕ ಯೋಜನೆಗಳನ್ನು ಮುಂದುವರೆಸಬೇಕು” ಎಂದು ಅದು ಒತ್ತಾಯಿಸಿದೆ.

ಇದನ್ನೂ ಓದಿ: ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ಗೆ ಒಡಿಶಾ ಶಾಲಾ ವಿದ್ಯಾರ್ಥಿಗಳ ತಂಡ! 

ನಿರ್ದಿಷ್ಟ ಸಮುದಾಯದ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುವ ತಾರತಮ್ಯದ ಪರಮಾವಧಿ: SDPI ಖಂಡನೆ

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಫೆಲೋಶಿಪ್‌ ಮೊತ್ತವನ್ನು ರಾಜ್ಯ ಸರ್ಕಾರ ಕಡಿತಗೊಳಿಸಿರುವುದು‌ ಒಂದು ನಿರ್ದಿಷ್ಟ ಸಮುದಾಯದ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುವ ಉದ್ದೇಶವಾಗಿದ್ದು, ಇದು ತಾರತಮ್ಯದ ಪರಮಾವಧಿ ಎಂದು SDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದ್ದಕ್ಕಿದ್ದಂತೆ ಫೆಲೋಷಿಪ್ ಮೊತ್ತ ಕಡಿತಗೊಳಿಸುವುದಾಗಿ ಆದೇಶ ಮಾಡಿರುವುದು ಖೇದಕರ. ಬಿಜೆಪಿ ಸರ್ಕಾರ ಪ್ರಾರಂಭದಿಂದಲೂ ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನ ಕಡಿತಗೊಳಿಸುತ್ತಿದೆ. 2020–21ನೇ ಸಾಲಿನಲ್ಲಿ 44% ದಷ್ಟು ಅನುದಾನ ಕಡಿತಗೊಳಿಸಿದೆ. ಇದರ ಮುಂದುವರಿದ ಭಾಗವಾಗಿ ಉನ್ನತ ಶಿಕ್ಷಣದ ನೆರವನ್ನು ಕಡಿತ ಮಾಡಲಾಗಿದೆ” ಎಂದು ಅವರು ಹೇಳಿದ್ದಾರೆ.

“ವಿದ್ಯಾರ್ಥಿಗಳ‌ ಭವಿಷ್ಯದ ಜೊತೆ ಚೆಲ್ಲಾಟ ಮಾಡಿ ಖಜಾನೆ ತುಂಬಿಸಲು ಹೊರಟಿರುವ ಸರ್ಕಾರದ ಈ‌ ನಡೆ ಒಪ್ಪುವಂತದಲ್ಲ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಯೋಜನೆಗಳಲ್ಲಿ ತಾರತಮ್ಯವೆಸಗುವುದನ್ನು SDPI ಸಹಿಸುವುದಿಲ್ಲ. ಸರ್ಕಾರ ಈ ಕೊಡಲೇ ಎಚ್ಚೆತ್ತು ಕೊಂಡು ಬಾಕಿ ಉಳಿದಿರುವ ಫೆಲೋಶಿಪ್ ಹಣ ನೀಡುವುದರ ಜೊತೆ ಎಂದಿನಂತೆ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಆರ್ಥಿಕ ಸಹಾಯ ಮುಂದುವರಿಸ ಬೇಕು” ಎಂದು ಹನ್ನಾನ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಯಾರಿಗೂ ಹೊರೆಯಾಗಲಾರೆ ಎಂದು ನೇಣಿಗೆ ಕೊರಳೊಡ್ಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...