Homeಕರ್ನಾಟಕಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್‌ ಕಡಿತ: ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್‌ ಕಡಿತ: ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಹತ್ತಿಕ್ಕುವುದರ ಜೊತೆಗೆ, ಮನುಸ್ಮೃತಿಯ ಆಶಯವನ್ನು ಗಟ್ಟಿಗೊಳಿಸುವುದು ಈ ಸರ್ಕಾರಗಳ ಗುರಿಯಾಗಿದೆ ಎಂದು ವಿದ್ಯಾರ್ಥಿ ಸಂಘಟನೆಗಳು ಕಿಡಿಕಾರಿವೆ.

- Advertisement -
- Advertisement -

ಪಿಎಚ್‌ಡಿ ಹಾಗು ಎಂಫಿಲ್ ಅಧ್ಯಯನ ಕೈಗೊಳ್ಳುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ರಾಜ್ಯ ಅಲ್ಪಸಂಖ್ಯಾತ ಇಲಾಖೆ ಕಡಿತಗೊಳಿಸಿ ಆದೇಶ ಹೊರಡಿಸಿರುವುಕ್ಕೆ ಹಲವಾರು ವಿದ್ಯಾರ್ಥಿ ಸಂಘಟನೆ ಸೇರಿದಂತೆ, ರಾಜಕೀಯ ಪಕ್ಷಗಳು ವಿರೋಧಿಸಿದ್ದು ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಗಳೊಂದಿಗೆ ತಮ್ಮ ಹಕ್ಕುಗಳನ್ನು ಕೇಳುತ್ತಿರುವ ಸಮುದಾಯಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವುದೆ ಈ ಸರ್ಕಾರದ ಹುನ್ನಾರವಾಗಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ(KVS)ಯ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ ಆಕ್ರೋಶ ವ್ಯಕ್ತಪಡಿಸಿದ್ದು, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಫೆಲೋಶಿಪ್‌ ಅನ್ನು ಕಡಿತಗೊಳಿಸಿ ಹೊಡಿಸಿರುವ ಆದೇಶವನ್ನು ಹಿಂಪಡೆದು ಇನ್ನೂ ಹೆಚ್ಚಿನ ನೆರವನ್ನು ಸರ್ಕಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

“ಹೊಸ ಶಿಕ್ಷಣ ನೀತಿ ಸೇರಿದಂತೆ ಸರ್ಕಾರದ ಇತ್ತೀಚೆಗಿನ ಬೆಳವಣಿಗೆಯನ್ನು ನೋಡಿದರೆ ಶಿಕ್ಷಣದಿಂದ ಅಲ್ಪಸಂಖ್ಯಾತ ಹಾಗೂ ದಲಿತ ವಿದ್ಯಾರ್ಥಿಗಳನ್ನು ದೂರ ಇಡುವ ಎಲ್ಲಾ ಹುನ್ನಾರಗಳನ್ನು ಮಾಡುತ್ತಿದೆ. ರಾಜ್ಯ ಸರ್ಕಾರದ ಸಾಮಾಜ ಕಲ್ಯಾಣ ಇಲಾಖೆಯಲ್ಲಿ 19 ಸಾವಿರ ಕೋಟಿ ಉಳಿದಿದ್ದು ಅದನ್ನು ಬೇರೆ ಇಲಾಖೆಗೆ ವರ್ಗಾಯಿಸಲು ಹೊರಟಿದ್ದಾರೆ. ಅದೇ ಸಮಯದಲ್ಲಿ ದಲಿತ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಲ್ಯಾಪ್‌ಟಾಪ್ ನಿಲ್ಲಿಸಿದ್ದಾರೆ, ಸ್ಕಾಲರ್‌ಶಿಪ್‌ಗಳನ್ನು ಕಡಿಮೆ ಮಾಡುತ್ತಿದ್ದಾರೆ. ಇವೆಲ್ಲವೂ ಈ ಹುನ್ನಾರದ ಭಾಗವೆ ಆಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪಿಎಚ್‌‌ಡಿ, ಎಂಫಿಲ್ ಫೆಲೋಶಿಪ್ ಕಡಿತಗೊಳಿಸಿದ ಸರ್ಕಾರ!

“ಶಿಕ್ಷಣ ಪಡೆದುಕೊಂಡಿರುವ ದಲಿತ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಪ್ರಶ್ನೆ ಹಾಗೂ ಧ್ವನಿ ಎತ್ತುತ್ತಿದ್ದಾರೆ. ಇದಕ್ಕೆ ಸರಿಯಾದ ಉದಾಹರಣೆ ಜಾಮಿಯಾ ಮತ್ತು ಜೆಎನ್‌‌ಯು ಆಗಿದೆ. ಆದ್ದರಿಂದಲೇ ಇವರು ಈ ವಿಶ್ವವಿದ್ಯಾನಿಲಯಗಳನ್ನು ಗುರಿಯಾಗಿಸುತ್ತಿದ್ದಾರೆ. ಇಲ್ಲಿ ಅಧ್ಯಯನ ಮಾಡುತ್ತಿರುವ ಬಡ ಹಿನ್ನಲೆಯಲ್ಲಿರುವ ವಿದ್ಯಾರ್ಥಿಗಳು ಶಿಕ್ಷಿತರಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದಾರೆ. ಇಂತಹ ವಿದ್ಯಾರ್ಥಿಗಳನ್ನು ಹತ್ತಿಕ್ಕುವುದರ ಜೊತೆಗೆ, ಮನುಸ್ಮೃತಿಯ ಆಶಯವನ್ನು ಗಟ್ಟಿಗೊಳಿಸುವುದು ಈ ಸರ್ಕಾರಗಳ ಗುರಿಯಾಗಿದೆ” ಎಂದು ಸರೋವರ್‌ ಬೆಂಕಿಕೆರೆ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರ ಬಂದ ನಂತರದಲ್ಲಿ ವಿದ್ಯಾರ್ಥಿಗಳ ಹಕ್ಕುಗಳನ್ನು ದಮನ ಮಾಡುತ್ತಿರುವುದಲ್ಲದೆ ಅವರಿಗೆ ಸಿಗಬೇಕಾದ ಶೈಕ್ಷಣಿಕ ಪ್ರೋತ್ಸಾಹ ಧನವನ್ನೂ ಕಡಿತಗೊಳಿಸುತ್ತಿದೆ ಎಂದು ವಿದ್ಯಾರ್ಥಿ ಸಂಘಟನೆಯಾಗಿರುವ SFI ಹೇಳಿದ್ದು, “ಕಳೆದ 10 ತಿಂಗಳಿನಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್ ಹಣವನ್ನು ವಿದ್ಯಾರ್ಥಿಗಳಿಗೆ ತಲುಪಿಸಲು ಸರ್ಕಾರ ವಿಫಲವಾಗಿದೆ. ಈಗ ಏಕಾಏಕಿ ವರ್ಷಕ್ಕೆ ಒಂದು ಲಕ್ಷ ಮಾತ್ರ ನೀಡಲಾಗುವುದು ಎಂಬ ಸುತ್ತೋಲೆ ಹೊರಡಿಸಿರುವುದು ವಿದ್ಯಾರ್ಥಿಗಳಿಗೆ ಆತಂಕ ಉಂಟುಮಾಡಿದೆ” ಎಂದಿದೆ.

ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಲ್ಲಿ ಬಹಳ ಕಡಿಮೆ ಸಂಖ್ಯೆಯಲ್ಲಿದ್ದಾರೆ ರಾಜಕೀಯವಾಗಿ ಆರ್ಥಿಕವಾಗಿ ಸಾಮಾಜಿಕವಾಗಿ ಅವರನ್ನು ತುಳಿತಕ್ಕೆ ಒಳಪಡಿಸಿದಷ್ಟೇ ಅಲ್ಲದೇ, ಈಗ ಶೈಕ್ಷಣಿಕವಾಗಿಯೂ ಅವರನ್ನು ವಂಚಿಸುವ, ದುರ್ಬಲರನ್ನಾಗಿ ಮಾಡುವ ನಡೆ ಇದು ಎಂದಿರುವ SFI, “ಈ ಕೂಡಲೇ ಈ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಕೈ ಬಿಡಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾದ ಆರ್ಥಿಕ ಯೋಜನೆಗಳನ್ನು ಮುಂದುವರೆಸಬೇಕು” ಎಂದು ಅದು ಒತ್ತಾಯಿಸಿದೆ.

ಇದನ್ನೂ ಓದಿ: ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ಗೆ ಒಡಿಶಾ ಶಾಲಾ ವಿದ್ಯಾರ್ಥಿಗಳ ತಂಡ! 

ನಿರ್ದಿಷ್ಟ ಸಮುದಾಯದ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುವ ತಾರತಮ್ಯದ ಪರಮಾವಧಿ: SDPI ಖಂಡನೆ

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಫೆಲೋಶಿಪ್‌ ಮೊತ್ತವನ್ನು ರಾಜ್ಯ ಸರ್ಕಾರ ಕಡಿತಗೊಳಿಸಿರುವುದು‌ ಒಂದು ನಿರ್ದಿಷ್ಟ ಸಮುದಾಯದ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುವ ಉದ್ದೇಶವಾಗಿದ್ದು, ಇದು ತಾರತಮ್ಯದ ಪರಮಾವಧಿ ಎಂದು SDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದ್ದಕ್ಕಿದ್ದಂತೆ ಫೆಲೋಷಿಪ್ ಮೊತ್ತ ಕಡಿತಗೊಳಿಸುವುದಾಗಿ ಆದೇಶ ಮಾಡಿರುವುದು ಖೇದಕರ. ಬಿಜೆಪಿ ಸರ್ಕಾರ ಪ್ರಾರಂಭದಿಂದಲೂ ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನ ಕಡಿತಗೊಳಿಸುತ್ತಿದೆ. 2020–21ನೇ ಸಾಲಿನಲ್ಲಿ 44% ದಷ್ಟು ಅನುದಾನ ಕಡಿತಗೊಳಿಸಿದೆ. ಇದರ ಮುಂದುವರಿದ ಭಾಗವಾಗಿ ಉನ್ನತ ಶಿಕ್ಷಣದ ನೆರವನ್ನು ಕಡಿತ ಮಾಡಲಾಗಿದೆ” ಎಂದು ಅವರು ಹೇಳಿದ್ದಾರೆ.

“ವಿದ್ಯಾರ್ಥಿಗಳ‌ ಭವಿಷ್ಯದ ಜೊತೆ ಚೆಲ್ಲಾಟ ಮಾಡಿ ಖಜಾನೆ ತುಂಬಿಸಲು ಹೊರಟಿರುವ ಸರ್ಕಾರದ ಈ‌ ನಡೆ ಒಪ್ಪುವಂತದಲ್ಲ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಯೋಜನೆಗಳಲ್ಲಿ ತಾರತಮ್ಯವೆಸಗುವುದನ್ನು SDPI ಸಹಿಸುವುದಿಲ್ಲ. ಸರ್ಕಾರ ಈ ಕೊಡಲೇ ಎಚ್ಚೆತ್ತು ಕೊಂಡು ಬಾಕಿ ಉಳಿದಿರುವ ಫೆಲೋಶಿಪ್ ಹಣ ನೀಡುವುದರ ಜೊತೆ ಎಂದಿನಂತೆ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಆರ್ಥಿಕ ಸಹಾಯ ಮುಂದುವರಿಸ ಬೇಕು” ಎಂದು ಹನ್ನಾನ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಯಾರಿಗೂ ಹೊರೆಯಾಗಲಾರೆ ಎಂದು ನೇಣಿಗೆ ಕೊರಳೊಡ್ಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...