Homeಮುಖಪುಟದಲಿತ ಎಂಬ ಕಾರಣಕ್ಕೆ ಮನೆ ಬಾಡಿಗೆಗೆ ನೀಡಲು ನಿರಾಕರಣೆ: ಮಾಲಿಕರ ವಿರುದ್ಧ ಪ್ರಕರಣ

ದಲಿತ ಎಂಬ ಕಾರಣಕ್ಕೆ ಮನೆ ಬಾಡಿಗೆಗೆ ನೀಡಲು ನಿರಾಕರಣೆ: ಮಾಲಿಕರ ವಿರುದ್ಧ ಪ್ರಕರಣ

- Advertisement -
- Advertisement -

ತಮಿಳುನಾಡಿನ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ವ್ಯಕ್ತಿಯೊಬ್ಬರಿಗೆ ಮನೆ ಬಾಡಿಗೆ ನೀಡಲು ನಿರಾಕರಿಸಿದ ಆರೋಪದ ಮೇಲೆ ಮಹಿಳೆಯೊಬ್ಬರ ಮೇಲೆ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ದಿಂಡಿಗಲ್‌ನ ಒಟ್ಟನ್‌ಛತ್ರಂನಲ್ಲಿ ನಡೆದಿದೆ.

ಅರಸಪಿಳ್ಳೈಪಟ್ಟಿ ಗ್ರಾಮದ ಮಧುರೈ ವೀರನ್ ಎಂಬ ದಲಿತ ಸಮುದಾಯದ ವ್ಯಕ್ತಿಯೊಬ್ಬರು ಸೆಪ್ಟೆಂಬರ್ 14ರಂದು ಲಕ್ಷ್ಮಿ ಮತ್ತು ವೇಲುಸಾಮಿ ದಂಪತಿಗಳ ಒಡೆತನದ ಕಟ್ಟಡದ ಮನೆಯನ್ನು ಬಾಡಿಗೆಗೆ ಪಡೆಯಲು ಸಂಪರ್ಕಿಸಿದ್ದರು ಎಂದು ಪೊಲೀಸರು ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವೇಲುಸಾಮಿ ದಂಪತಿ ಬಾಡಿಗೆ ಮನೆ ತೋರಿಸಲು ವೀರನ್‌ ಮತ್ತು ಅವರ ಜೊತೆಯಲ್ಲಿದ್ದ ಇಬ್ಬರನ್ನು ಬಾಡಿಗೆ ಮನೆಗೆ ಕರೆದೊಯ್ದಿದ್ದಾರೆ. ಮನೆ ಮಾಲೀಕ ಲಕ್ಷ್ಮಿ ವೀರನ್ ಅವರ ಜಾತಿ ವಿವರಗಳನ್ನು ಕೇಳಿದ್ದಾರೆ. ವೀರನ್‌ ತನ್ನ ಸಮುದಾಯದ ಬಗ್ಗೆ ಹೇಳಿದಾಗ ಅವರಿಗೆ ಮನೆ ಬಾಡಿಗೆಗೆ ನೀಡಲು ನಿರಾಕರಿಸಿದ್ದಾರೆ. ಇಷ್ಟೆ ಅಲ್ಲದೆ, ದಲಿತರಿಗೆ ಮನೆ ನೀಡಿದರೆ ಕುಲದೇವತೆಗೆ ಅಪಚಾರವಾಗುತ್ತದೆ ಎಂದಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

“ಎಸ್‌ಟಿ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಹಿನ್ನೆಲೆಯ ವ್ಯಕ್ತಿಗಳಿಗೂ ಫ್ಲಾಟ್ ನೀಡುವುದಿಲ್ಲ ಎಂದು ಮಹಿಳೆ ಹೇಳಿದರು. ಮನೆ ಮಾಲೀಕ ವೇಲುಸಾಮಿ, ಒಟ್ಟನ್‌ಛತ್ರಂ ಮಾರುಕಟ್ಟೆಯಲ್ಲಿ ತರಕಾರಿ ಸಗಟು ಅಂಗಡಿ ನಡೆಸುತ್ತಿದ್ದು, ದಲಿತ ಜನರ ದುಡಿಮೆಯಿಂದ ಲಕ್ಷಗಟ್ಟಲೆ ಲಾಭ ಗಳಿಸಿದ್ದಾರೆ. ಆದರೆ, ಅವರ ಪತ್ನಿ ದಲಿತ ಸಮುದಾಯದವರಿಗೆ ಮನೆ ಬಾಡಿಗೆ ನೀಡಲು ಸಾಧ್ಯವಿಲ್ಲ ಎನ್ನುತ್ತಾರೆ. ಈ ಮನಸ್ಥಿತಿ ಮೊದಲು ಬದಲಾಗಬೇಕು” ಎಂದು ವೀರನ್ ಜೊತೆಗಿದ್ದ ಇಬ್ಬರು ವ್ಯಕ್ತಿಗಳಲ್ಲಿ ಒಬ್ಬರಾದ ವಿಸಿಕೆ ಜಿಲ್ಲಾ ಕಾರ್ಯಾಧ್ಯಕ್ಷ ಜಾನ್ಸನ್ ಕ್ರಿಸ್ಟೋಫರ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: MSP ಸಿಗದುದ್ದಕ್ಕೆ ಮೋದಿ ಕಾರಣ ಎಂಬ ಪತ್ರ ಬರೆದಿಟ್ಟು ಸಾವಿಗೆ ಶರಣಾದ ರೈತ

ವೀರನ್ ನೀಡಿದ ದೂರಿನ ಮೇರೆಗೆ ಮನೆ ಮಾಲೀಕ ಲಕ್ಷ್ಮಿ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುರಿತು ವಿಚಾರಣೆ ನಡೆಸಲು ಪೊಲೀಸರು ಮನೆ ಮಾಲೀಕನ ಮನೆಗೆ ಹೋದಾಗ, ಅವರು ಪರಾರಿಯಾಗಿದ್ದು, ಅವರ ಪತ್ತೆಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಲಿತರು, ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಬಾಡಿಗೆ ಮನೆ ಕೊಡಲು ಒಪ್ಪದ ಹಲವಾರು ಪ್ರಕರಣಗಳು ಕರ್ನಾಟಕದ ನಾನಾ ಭಾಗಗಳಲ್ಲಿ ವರದಿಯಾಗುತ್ತಲೇ ಇವೆ. ಶಿಕ್ಷಕರೊಬ್ಬರು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಮನೆ ಬಾಡಿಗೆ ನೀಡಲು ಹಲವು ಮನೆ ಮಾಲೀಕರು ನಿರಾಕರಿಸಿದ್ದ ಘಟನೆ ನಾಲ್ಕೈದು ವರ್ಷಗಳ ಹಿಂದೆ ಮೈಸೂರಿನ ನಂಜನಗೂಡಿನಲ್ಲಿ ವರದಿಯಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...