Homeಮುಖಪುಟದಲಿತ ಎಂಬ ಕಾರಣಕ್ಕೆ ಮನೆ ಬಾಡಿಗೆಗೆ ನೀಡಲು ನಿರಾಕರಣೆ: ಮಾಲಿಕರ ವಿರುದ್ಧ ಪ್ರಕರಣ

ದಲಿತ ಎಂಬ ಕಾರಣಕ್ಕೆ ಮನೆ ಬಾಡಿಗೆಗೆ ನೀಡಲು ನಿರಾಕರಣೆ: ಮಾಲಿಕರ ವಿರುದ್ಧ ಪ್ರಕರಣ

- Advertisement -
- Advertisement -

ತಮಿಳುನಾಡಿನ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ವ್ಯಕ್ತಿಯೊಬ್ಬರಿಗೆ ಮನೆ ಬಾಡಿಗೆ ನೀಡಲು ನಿರಾಕರಿಸಿದ ಆರೋಪದ ಮೇಲೆ ಮಹಿಳೆಯೊಬ್ಬರ ಮೇಲೆ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ದಿಂಡಿಗಲ್‌ನ ಒಟ್ಟನ್‌ಛತ್ರಂನಲ್ಲಿ ನಡೆದಿದೆ.

ಅರಸಪಿಳ್ಳೈಪಟ್ಟಿ ಗ್ರಾಮದ ಮಧುರೈ ವೀರನ್ ಎಂಬ ದಲಿತ ಸಮುದಾಯದ ವ್ಯಕ್ತಿಯೊಬ್ಬರು ಸೆಪ್ಟೆಂಬರ್ 14ರಂದು ಲಕ್ಷ್ಮಿ ಮತ್ತು ವೇಲುಸಾಮಿ ದಂಪತಿಗಳ ಒಡೆತನದ ಕಟ್ಟಡದ ಮನೆಯನ್ನು ಬಾಡಿಗೆಗೆ ಪಡೆಯಲು ಸಂಪರ್ಕಿಸಿದ್ದರು ಎಂದು ಪೊಲೀಸರು ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವೇಲುಸಾಮಿ ದಂಪತಿ ಬಾಡಿಗೆ ಮನೆ ತೋರಿಸಲು ವೀರನ್‌ ಮತ್ತು ಅವರ ಜೊತೆಯಲ್ಲಿದ್ದ ಇಬ್ಬರನ್ನು ಬಾಡಿಗೆ ಮನೆಗೆ ಕರೆದೊಯ್ದಿದ್ದಾರೆ. ಮನೆ ಮಾಲೀಕ ಲಕ್ಷ್ಮಿ ವೀರನ್ ಅವರ ಜಾತಿ ವಿವರಗಳನ್ನು ಕೇಳಿದ್ದಾರೆ. ವೀರನ್‌ ತನ್ನ ಸಮುದಾಯದ ಬಗ್ಗೆ ಹೇಳಿದಾಗ ಅವರಿಗೆ ಮನೆ ಬಾಡಿಗೆಗೆ ನೀಡಲು ನಿರಾಕರಿಸಿದ್ದಾರೆ. ಇಷ್ಟೆ ಅಲ್ಲದೆ, ದಲಿತರಿಗೆ ಮನೆ ನೀಡಿದರೆ ಕುಲದೇವತೆಗೆ ಅಪಚಾರವಾಗುತ್ತದೆ ಎಂದಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

“ಎಸ್‌ಟಿ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಹಿನ್ನೆಲೆಯ ವ್ಯಕ್ತಿಗಳಿಗೂ ಫ್ಲಾಟ್ ನೀಡುವುದಿಲ್ಲ ಎಂದು ಮಹಿಳೆ ಹೇಳಿದರು. ಮನೆ ಮಾಲೀಕ ವೇಲುಸಾಮಿ, ಒಟ್ಟನ್‌ಛತ್ರಂ ಮಾರುಕಟ್ಟೆಯಲ್ಲಿ ತರಕಾರಿ ಸಗಟು ಅಂಗಡಿ ನಡೆಸುತ್ತಿದ್ದು, ದಲಿತ ಜನರ ದುಡಿಮೆಯಿಂದ ಲಕ್ಷಗಟ್ಟಲೆ ಲಾಭ ಗಳಿಸಿದ್ದಾರೆ. ಆದರೆ, ಅವರ ಪತ್ನಿ ದಲಿತ ಸಮುದಾಯದವರಿಗೆ ಮನೆ ಬಾಡಿಗೆ ನೀಡಲು ಸಾಧ್ಯವಿಲ್ಲ ಎನ್ನುತ್ತಾರೆ. ಈ ಮನಸ್ಥಿತಿ ಮೊದಲು ಬದಲಾಗಬೇಕು” ಎಂದು ವೀರನ್ ಜೊತೆಗಿದ್ದ ಇಬ್ಬರು ವ್ಯಕ್ತಿಗಳಲ್ಲಿ ಒಬ್ಬರಾದ ವಿಸಿಕೆ ಜಿಲ್ಲಾ ಕಾರ್ಯಾಧ್ಯಕ್ಷ ಜಾನ್ಸನ್ ಕ್ರಿಸ್ಟೋಫರ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: MSP ಸಿಗದುದ್ದಕ್ಕೆ ಮೋದಿ ಕಾರಣ ಎಂಬ ಪತ್ರ ಬರೆದಿಟ್ಟು ಸಾವಿಗೆ ಶರಣಾದ ರೈತ

ವೀರನ್ ನೀಡಿದ ದೂರಿನ ಮೇರೆಗೆ ಮನೆ ಮಾಲೀಕ ಲಕ್ಷ್ಮಿ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುರಿತು ವಿಚಾರಣೆ ನಡೆಸಲು ಪೊಲೀಸರು ಮನೆ ಮಾಲೀಕನ ಮನೆಗೆ ಹೋದಾಗ, ಅವರು ಪರಾರಿಯಾಗಿದ್ದು, ಅವರ ಪತ್ತೆಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಲಿತರು, ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಬಾಡಿಗೆ ಮನೆ ಕೊಡಲು ಒಪ್ಪದ ಹಲವಾರು ಪ್ರಕರಣಗಳು ಕರ್ನಾಟಕದ ನಾನಾ ಭಾಗಗಳಲ್ಲಿ ವರದಿಯಾಗುತ್ತಲೇ ಇವೆ. ಶಿಕ್ಷಕರೊಬ್ಬರು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಮನೆ ಬಾಡಿಗೆ ನೀಡಲು ಹಲವು ಮನೆ ಮಾಲೀಕರು ನಿರಾಕರಿಸಿದ್ದ ಘಟನೆ ನಾಲ್ಕೈದು ವರ್ಷಗಳ ಹಿಂದೆ ಮೈಸೂರಿನ ನಂಜನಗೂಡಿನಲ್ಲಿ ವರದಿಯಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...