Homeಮುಖಪುಟ‘ಜೈಶ್ರೀರಾಮ್’ ಹೇಳದೇ ಇದ್ದುದಕ್ಕೆ 10 ವರ್ಷದ ಬಾಲಕನನ್ನು ತೀವ್ರವಾಗಿ ಥಳಿಸಿದ ಬಿಜೆಪಿ ಕಾರ್ಯಕರ್ತ!

‘ಜೈಶ್ರೀರಾಮ್’ ಹೇಳದೇ ಇದ್ದುದಕ್ಕೆ 10 ವರ್ಷದ ಬಾಲಕನನ್ನು ತೀವ್ರವಾಗಿ ಥಳಿಸಿದ ಬಿಜೆಪಿ ಕಾರ್ಯಕರ್ತ!

- Advertisement -
- Advertisement -

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಫುಲಿಯಾದಲ್ಲಿ ಸೋಮವಾರ ಮಧ್ಯಾಹ್ನ ‘ಜೈ ಶ್ರೀ ರಾಮ್’ ಎಂದು ಜಪಿಸಲು ನಿರಾಕರಿಸಿದ್ದಕ್ಕಾಗಿ 10 ವರ್ಷದ ಬಾಲಕನನ್ನು ಬಿಜೆಪಿ ಕಾರ್ಯಕರ್ತರೊಬ್ಬರು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಟೆಲೆಗ್ರಾಫ್ ಇಂಡಿಯಾ ವರದಿ ಮಾಡಿದೆ.

ಇತ್ತೀಚೆಗೆ ತಾಯಿಯನ್ನು ಕಳೆದುಕೊಂಡ 4 ನೇ ತರಗತಿ ವಿದ್ಯಾರ್ಥಿ ಮಹಾದೇವ್ ಶರ್ಮಾಗೆ ಅನೇಕ ಗಾಯಗಳಾಗಿದ್ದು, ರಣಘಾಟ್ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು ಆರೋಪಿ ಫುಲಿಯಾಪರಾದ ಚಹಾ ಅಂಗಡಿಯ ಮಾಲೀಕ ಮಹಾದೇಬ್ ಪ್ರಮಣಿಕ್ ಅವರನ್ನು ಥಳಿಸಿದ್ದಾರೆ. ಪ್ರತಿಭಟನಾಕಾರರು ಪ್ರಮಣಿಕ್ ಬಂಧನಕ್ಕೆ ಒತ್ತಾಯಿಸಿ ಎನ್‌ಎಚ್-12 ಹೆದ್ದಾರಿಯನ್ನು ಬಂದ್ ಮಾಡಿದ್ದರು.

ಸು-ಮೋಟು ಆಧಾರದ ಮೇಲೆ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು. ಬಿಜೆಪಿಯ ಮಹಿಳಾ ವಿಭಾಗದ ಸ್ಥಳೀಯ ಮುಖ್ಯಸ್ಥೆ ಮಿಥು ಪ್ರಮಣಿಕ್ ಅವರ ಪತಿ ಮಹಾದೇವ್ ಪ್ರಮಣಿಕ್ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಲಕ ತೃಣಮೂಲ ಕಾಂಗ್ರೆಸ್ ಬೆಂಬಲಿಗನಾಗಿರುವ ಬಡಗಿಯೊಬ್ಬರ ಮಗ ಎಂದು ಪೊಲೀಸರು ಹೇಳಿದ್ದಾರೆ. “ಹುಡುಗ ಪ್ರಮಣಿಕ್ ಚಹಾ ಅಂಗಡಿ ಎದುರು ಹಾದುಹೋಗುತ್ತಿದ್ದ. ಹುಡುಗನ್ನು ಕರೆದ ಪ್ರಮಣಿಕ್, ಹುಡುಗನ ತಂದೆ ಟಿಎಂಸಿ ಬೆಂಬಲಿಸುತ್ತಿರುವುದನ್ನು ಉಲ್ಲೇಖಿಸಿ ನಿಂದಿಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಏಪ್ರಿಲ್ 17 ರಂದು ಇಲ್ಲಿ ನಡೆದ ಮತದಾನದ ಸಂದರ್ಭದಲ್ಲಿ ಬಾಲಕನ ತಂದೆ ಟಿಎಂಸಿ ಪರ ಕೆಲಸ ಮಾಡಿದ್ದಕ್ಕೆ ಪ್ರಮಣಿಕ್ ಕೆರಳಿದ್ದ ಎನ್ನಲಾಗಿದೆ.

“ಆರೋಪಿ ಹುಡುಗನಿಗೆ ಬೆದರಿಕೆ ಹಾಕಿ ಜೈಶ್ರೀರಾಮ್ ಎಂದು ಜಪಿಸಲು ಒತ್ತಾಯ ಮಾಡಿದ. ಹುಡುಗ ಅದನ್ನು ನಿರಾಕರಿಸಿದನು” ಎಂದು ಆ ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ ಎಂದು ಟೆಲೆಗ್ರಾಫ್ ಇಂಡಿಯಾ ವರದಿಯಲ್ಲಿ ಹೇಳಲಾಗಿದೆ.

ನಂತರ ಪ್ರಮಣಿಕ್ ಬಾಲಕನ ಮೇಲೆ ವಿಪರೀತವಾಗಿ ಹಲ್ಲೆ ನಡೆಸಿದ್ದಾನೆ. ಕೆಲವು ಗ್ರಾಮಸ್ಥರು ಸಹಾಯಕ್ಕಾಗಿ ಧಾವಿಸುವವರೆಗೂ ಬಾಲಕನಿಗೆ ಪ್ರಮಣಿಕ್ ಹೊಡೆದ ಎಂದು ವರದಿಯಾಗಿದೆ.
ಆಘಾತಕ್ಕೊಳಗಾಗಿದ್ದ ಬಾಲಕ ಆಸ್ಪತ್ರೆಯ ಹಾಸಿಗೆಯಿಂದ ಹೀಗೆ ಹೇಳಿದ್ದಾನೆ: “ಅವನು (ಪ್ರಮಣಿಕ್) ನಾನು‘ ಜೈ ಶ್ರೀ ರಾಮ್ ’ಎಂದು ಜಪಿಸಲು ಒತ್ತಾಯಿಸಿ ನನ್ನ ತಂದೆಯನ್ನು ನಿಂದಿಸುತ್ತಿದ್ದ. ನಾನು ನಿರಾಕರಿಸಿದಾಗ, ಅವನು ನನ್ನನ್ನು ಹೊಡೆಯಲು ಶುರು ಮಾಡಿದ ತದನಂತರ ನನ್ನನ್ನು ಒದೆಯತೊಡಗಿದ.. ಅದೃಷ್ಟವಶಾತ್, ಕೆಲವು ಸ್ಥಳೀಯರು ಸಹಾಯ ಮಾಡಲು ಧಾವಿಸಿದರು.”

ಬಾಲಕನ ಮುಖ, ತಲೆ ಮತ್ತು ಬೆನ್ನಿಗೆ ಗಾಯಗಳಾಗಿವೆ ಮತ್ತು ಸಿ.ಟಿ ಸ್ಕ್ಯಾನ್‌ಗೆ ಸೂಚಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. “ಹುಡುಗ ಆಘಾತದಲ್ಲಿದ್ದಾನೆ, ಆದರೆ ವೈದ್ಯಕೀಯವಾಗಿ ಆರೋಗ್ಯ ಸ್ಥಿರವಾಗಿದೆ” ಎಂದು ವೈದ್ಯರೊಬ್ಬರು ಹೇಳಿದ್ದಾರೆ.

ಸ್ಥಳೀಯ ತೃಣಮೂಲ ಯುವ ವಿಭಾಗದ ನಾಯಕ ಪೀಟರ್ ಮುಖರ್ಜಿ, “ಕೆಲವು ಗ್ರಾಮಸ್ಥರು ಹುಡುಗನನ್ನು ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ರಕ್ಷಿಸಿ ನನಗೆ ಮಾಹಿತಿ ನೀಡಿದರು. ನಾನು ತಕ್ಷಣ ಸ್ಥಳಕ್ಕೆ ಧಾವಿಸಿ ಆಸ್ಪತ್ರೆಗೆ ಕರೆದೊಯ್ದೆ. ಬಿಜೆಪಿ ಎಷ್ಟು ಕ್ರೂರವಾಗಬಹುದು ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿತು. ತಾಯಿಯನ್ನು ಕಳೆದುಕೊಂಡ 10 ವರ್ಷದ ಬಾಲಕನ್ನು ಅವರು ಬಿಡಲಿಲ್ಲ ಎಂದು ಊಹಿಸಲಾಗದು’ ಎಂದಿದ್ದಾರೆ.

ಆರೋಪಿ ಪತ್ನಿ ಬಿಜೆಪಿ ಮಹಿಳಾ ಮೋರ್ಚಾ ನಾಯಕಿ ಮಿಥು ಪ್ರಮಣಿಕ್, ಈ ದಾಳಿಯನ್ನು ಒಪ್ಪಿಕೊಂಡಿದ್ದಾರೆ, ಆದರೆ ಹುಡುಗ ಪ್ರಚೋದನೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
“ನನ್ನ ಪತಿ ಹುಡುಗನಿಗೆ ‘ಜೈ ಶ್ರೀ ರಾಮ್’ ಎಂದು ಜಪಿಸುವಂತೆ ಕೇಳಿದ್ದು ನಿಜ. ಆದರೆ ಹುಡುಗನು ಅವನಿಗೆ ತಿಳಿದಿರುವ ಕಾರಣ ಹಾಗೆ ಕೇಳಿದ್ದಾನೆ. ವಾಸ್ತವವಾಗಿ, ಅಂಗಡಿಯಲ್ಲಿದ್ದ ಕೆಲವು ಗ್ರಾಹಕರು, ಹುಡುಗ ನನ್ನ ಗಂಡ ‘ಜೈ ಬಾಂಗ್ಲಾ’ ಎಂದು ಜಪಿಸುವಂತೆ ಕೇಳಬೇಕು ಎಂದು ತಮಾಷೆ ಮಾಡಿದರು. ಆದರೆ ಆ ಹುಡುಗ ಕಲ್ಲು ಎತ್ತಿಕೊಂಡು ಅಂಗಡಿಯ ಮೇಲೆ ಎಸೆದು ಗಾಜಿನ ಪಾತ್ರೆಗಳನ್ನು ಒಡೆದ. ಇದು ನನ್ನ ಪತಿಗೆ ಕೋಪ ತರಿಸಿದ್ದರಿಂದ ಹೊಡೆದಿದ್ದಾನೆ’ ಎಂದು ಸಮರ್ಥಸಿಕೊಂಡಿದ್ದಾರೆ.

ಹುಡುಗನ ತಂದೆ, ಶ್ಯಾಮ್‌ಚಂದ್ ಶರ್ಮಾ, ತನ್ನ 10 ವರ್ಷದ ಮಗನನ್ನು ತನ್ನ ರಾಜಕೀಯ ಒಲವುಗಳಿಗಾಗಿ ಹಿಂಸಾಚಾರಕ್ಕೆ ಒಳಪಡಿಸಬಹುದೆಂದು ಊಹಿಸಿರಲಿಲ್ಲ ಎಂದಿದ್ದಾರೆ.

“ಚುನಾವಣೆಯ ದಿನದಂದು ಬಿಜೆಪಿ ಕಾರ್ಯಕರ್ತರು ಮತದಾರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದರು, ಅದನ್ನು ನಾನು ಪ್ರತಿಭಟಿಸಿದೆ. ಆದ್ದರಿಂದ, ಅವರು ನನ್ನ ಮಗನ ಮೇಲೆ ಹಲ್ಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡರು ಎಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ಈಗಾಗಲೇ ತನಿಖೆ ಆರಂಭಿಸಲಾಗಿದೆ ಎಂದು ಸಂತಪುರ ಪೊಲೀಸರು ತಿಳಿಸಿದ್ದಾರೆ. “ಪೊಲೀಸ್ ತಂಡ ಆರೋಪಿ ಮನೆಗೆ ಭೇಟಿ ನೀಡಿದೆ. ನಿಖರವಾಗಿ ಏನಾಯಿತು ಎಂದು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ. ಸಂಜೆಯವರೆಗೆ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿ: 2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು: ಡಾ.ಕಫೀಲ್ ಖಾನ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...