Homeಮುಖಪುಟ‘ಜೈಶ್ರೀರಾಮ್’ ಹೇಳದೇ ಇದ್ದುದಕ್ಕೆ 10 ವರ್ಷದ ಬಾಲಕನನ್ನು ತೀವ್ರವಾಗಿ ಥಳಿಸಿದ ಬಿಜೆಪಿ ಕಾರ್ಯಕರ್ತ!

‘ಜೈಶ್ರೀರಾಮ್’ ಹೇಳದೇ ಇದ್ದುದಕ್ಕೆ 10 ವರ್ಷದ ಬಾಲಕನನ್ನು ತೀವ್ರವಾಗಿ ಥಳಿಸಿದ ಬಿಜೆಪಿ ಕಾರ್ಯಕರ್ತ!

- Advertisement -
- Advertisement -

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಫುಲಿಯಾದಲ್ಲಿ ಸೋಮವಾರ ಮಧ್ಯಾಹ್ನ ‘ಜೈ ಶ್ರೀ ರಾಮ್’ ಎಂದು ಜಪಿಸಲು ನಿರಾಕರಿಸಿದ್ದಕ್ಕಾಗಿ 10 ವರ್ಷದ ಬಾಲಕನನ್ನು ಬಿಜೆಪಿ ಕಾರ್ಯಕರ್ತರೊಬ್ಬರು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಟೆಲೆಗ್ರಾಫ್ ಇಂಡಿಯಾ ವರದಿ ಮಾಡಿದೆ.

ಇತ್ತೀಚೆಗೆ ತಾಯಿಯನ್ನು ಕಳೆದುಕೊಂಡ 4 ನೇ ತರಗತಿ ವಿದ್ಯಾರ್ಥಿ ಮಹಾದೇವ್ ಶರ್ಮಾಗೆ ಅನೇಕ ಗಾಯಗಳಾಗಿದ್ದು, ರಣಘಾಟ್ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು ಆರೋಪಿ ಫುಲಿಯಾಪರಾದ ಚಹಾ ಅಂಗಡಿಯ ಮಾಲೀಕ ಮಹಾದೇಬ್ ಪ್ರಮಣಿಕ್ ಅವರನ್ನು ಥಳಿಸಿದ್ದಾರೆ. ಪ್ರತಿಭಟನಾಕಾರರು ಪ್ರಮಣಿಕ್ ಬಂಧನಕ್ಕೆ ಒತ್ತಾಯಿಸಿ ಎನ್‌ಎಚ್-12 ಹೆದ್ದಾರಿಯನ್ನು ಬಂದ್ ಮಾಡಿದ್ದರು.

ಸು-ಮೋಟು ಆಧಾರದ ಮೇಲೆ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು. ಬಿಜೆಪಿಯ ಮಹಿಳಾ ವಿಭಾಗದ ಸ್ಥಳೀಯ ಮುಖ್ಯಸ್ಥೆ ಮಿಥು ಪ್ರಮಣಿಕ್ ಅವರ ಪತಿ ಮಹಾದೇವ್ ಪ್ರಮಣಿಕ್ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಲಕ ತೃಣಮೂಲ ಕಾಂಗ್ರೆಸ್ ಬೆಂಬಲಿಗನಾಗಿರುವ ಬಡಗಿಯೊಬ್ಬರ ಮಗ ಎಂದು ಪೊಲೀಸರು ಹೇಳಿದ್ದಾರೆ. “ಹುಡುಗ ಪ್ರಮಣಿಕ್ ಚಹಾ ಅಂಗಡಿ ಎದುರು ಹಾದುಹೋಗುತ್ತಿದ್ದ. ಹುಡುಗನ್ನು ಕರೆದ ಪ್ರಮಣಿಕ್, ಹುಡುಗನ ತಂದೆ ಟಿಎಂಸಿ ಬೆಂಬಲಿಸುತ್ತಿರುವುದನ್ನು ಉಲ್ಲೇಖಿಸಿ ನಿಂದಿಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಏಪ್ರಿಲ್ 17 ರಂದು ಇಲ್ಲಿ ನಡೆದ ಮತದಾನದ ಸಂದರ್ಭದಲ್ಲಿ ಬಾಲಕನ ತಂದೆ ಟಿಎಂಸಿ ಪರ ಕೆಲಸ ಮಾಡಿದ್ದಕ್ಕೆ ಪ್ರಮಣಿಕ್ ಕೆರಳಿದ್ದ ಎನ್ನಲಾಗಿದೆ.

“ಆರೋಪಿ ಹುಡುಗನಿಗೆ ಬೆದರಿಕೆ ಹಾಕಿ ಜೈಶ್ರೀರಾಮ್ ಎಂದು ಜಪಿಸಲು ಒತ್ತಾಯ ಮಾಡಿದ. ಹುಡುಗ ಅದನ್ನು ನಿರಾಕರಿಸಿದನು” ಎಂದು ಆ ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ ಎಂದು ಟೆಲೆಗ್ರಾಫ್ ಇಂಡಿಯಾ ವರದಿಯಲ್ಲಿ ಹೇಳಲಾಗಿದೆ.

ನಂತರ ಪ್ರಮಣಿಕ್ ಬಾಲಕನ ಮೇಲೆ ವಿಪರೀತವಾಗಿ ಹಲ್ಲೆ ನಡೆಸಿದ್ದಾನೆ. ಕೆಲವು ಗ್ರಾಮಸ್ಥರು ಸಹಾಯಕ್ಕಾಗಿ ಧಾವಿಸುವವರೆಗೂ ಬಾಲಕನಿಗೆ ಪ್ರಮಣಿಕ್ ಹೊಡೆದ ಎಂದು ವರದಿಯಾಗಿದೆ.
ಆಘಾತಕ್ಕೊಳಗಾಗಿದ್ದ ಬಾಲಕ ಆಸ್ಪತ್ರೆಯ ಹಾಸಿಗೆಯಿಂದ ಹೀಗೆ ಹೇಳಿದ್ದಾನೆ: “ಅವನು (ಪ್ರಮಣಿಕ್) ನಾನು‘ ಜೈ ಶ್ರೀ ರಾಮ್ ’ಎಂದು ಜಪಿಸಲು ಒತ್ತಾಯಿಸಿ ನನ್ನ ತಂದೆಯನ್ನು ನಿಂದಿಸುತ್ತಿದ್ದ. ನಾನು ನಿರಾಕರಿಸಿದಾಗ, ಅವನು ನನ್ನನ್ನು ಹೊಡೆಯಲು ಶುರು ಮಾಡಿದ ತದನಂತರ ನನ್ನನ್ನು ಒದೆಯತೊಡಗಿದ.. ಅದೃಷ್ಟವಶಾತ್, ಕೆಲವು ಸ್ಥಳೀಯರು ಸಹಾಯ ಮಾಡಲು ಧಾವಿಸಿದರು.”

ಬಾಲಕನ ಮುಖ, ತಲೆ ಮತ್ತು ಬೆನ್ನಿಗೆ ಗಾಯಗಳಾಗಿವೆ ಮತ್ತು ಸಿ.ಟಿ ಸ್ಕ್ಯಾನ್‌ಗೆ ಸೂಚಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. “ಹುಡುಗ ಆಘಾತದಲ್ಲಿದ್ದಾನೆ, ಆದರೆ ವೈದ್ಯಕೀಯವಾಗಿ ಆರೋಗ್ಯ ಸ್ಥಿರವಾಗಿದೆ” ಎಂದು ವೈದ್ಯರೊಬ್ಬರು ಹೇಳಿದ್ದಾರೆ.

ಸ್ಥಳೀಯ ತೃಣಮೂಲ ಯುವ ವಿಭಾಗದ ನಾಯಕ ಪೀಟರ್ ಮುಖರ್ಜಿ, “ಕೆಲವು ಗ್ರಾಮಸ್ಥರು ಹುಡುಗನನ್ನು ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ರಕ್ಷಿಸಿ ನನಗೆ ಮಾಹಿತಿ ನೀಡಿದರು. ನಾನು ತಕ್ಷಣ ಸ್ಥಳಕ್ಕೆ ಧಾವಿಸಿ ಆಸ್ಪತ್ರೆಗೆ ಕರೆದೊಯ್ದೆ. ಬಿಜೆಪಿ ಎಷ್ಟು ಕ್ರೂರವಾಗಬಹುದು ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿತು. ತಾಯಿಯನ್ನು ಕಳೆದುಕೊಂಡ 10 ವರ್ಷದ ಬಾಲಕನ್ನು ಅವರು ಬಿಡಲಿಲ್ಲ ಎಂದು ಊಹಿಸಲಾಗದು’ ಎಂದಿದ್ದಾರೆ.

ಆರೋಪಿ ಪತ್ನಿ ಬಿಜೆಪಿ ಮಹಿಳಾ ಮೋರ್ಚಾ ನಾಯಕಿ ಮಿಥು ಪ್ರಮಣಿಕ್, ಈ ದಾಳಿಯನ್ನು ಒಪ್ಪಿಕೊಂಡಿದ್ದಾರೆ, ಆದರೆ ಹುಡುಗ ಪ್ರಚೋದನೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
“ನನ್ನ ಪತಿ ಹುಡುಗನಿಗೆ ‘ಜೈ ಶ್ರೀ ರಾಮ್’ ಎಂದು ಜಪಿಸುವಂತೆ ಕೇಳಿದ್ದು ನಿಜ. ಆದರೆ ಹುಡುಗನು ಅವನಿಗೆ ತಿಳಿದಿರುವ ಕಾರಣ ಹಾಗೆ ಕೇಳಿದ್ದಾನೆ. ವಾಸ್ತವವಾಗಿ, ಅಂಗಡಿಯಲ್ಲಿದ್ದ ಕೆಲವು ಗ್ರಾಹಕರು, ಹುಡುಗ ನನ್ನ ಗಂಡ ‘ಜೈ ಬಾಂಗ್ಲಾ’ ಎಂದು ಜಪಿಸುವಂತೆ ಕೇಳಬೇಕು ಎಂದು ತಮಾಷೆ ಮಾಡಿದರು. ಆದರೆ ಆ ಹುಡುಗ ಕಲ್ಲು ಎತ್ತಿಕೊಂಡು ಅಂಗಡಿಯ ಮೇಲೆ ಎಸೆದು ಗಾಜಿನ ಪಾತ್ರೆಗಳನ್ನು ಒಡೆದ. ಇದು ನನ್ನ ಪತಿಗೆ ಕೋಪ ತರಿಸಿದ್ದರಿಂದ ಹೊಡೆದಿದ್ದಾನೆ’ ಎಂದು ಸಮರ್ಥಸಿಕೊಂಡಿದ್ದಾರೆ.

ಹುಡುಗನ ತಂದೆ, ಶ್ಯಾಮ್‌ಚಂದ್ ಶರ್ಮಾ, ತನ್ನ 10 ವರ್ಷದ ಮಗನನ್ನು ತನ್ನ ರಾಜಕೀಯ ಒಲವುಗಳಿಗಾಗಿ ಹಿಂಸಾಚಾರಕ್ಕೆ ಒಳಪಡಿಸಬಹುದೆಂದು ಊಹಿಸಿರಲಿಲ್ಲ ಎಂದಿದ್ದಾರೆ.

“ಚುನಾವಣೆಯ ದಿನದಂದು ಬಿಜೆಪಿ ಕಾರ್ಯಕರ್ತರು ಮತದಾರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದರು, ಅದನ್ನು ನಾನು ಪ್ರತಿಭಟಿಸಿದೆ. ಆದ್ದರಿಂದ, ಅವರು ನನ್ನ ಮಗನ ಮೇಲೆ ಹಲ್ಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡರು ಎಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ಈಗಾಗಲೇ ತನಿಖೆ ಆರಂಭಿಸಲಾಗಿದೆ ಎಂದು ಸಂತಪುರ ಪೊಲೀಸರು ತಿಳಿಸಿದ್ದಾರೆ. “ಪೊಲೀಸ್ ತಂಡ ಆರೋಪಿ ಮನೆಗೆ ಭೇಟಿ ನೀಡಿದೆ. ನಿಖರವಾಗಿ ಏನಾಯಿತು ಎಂದು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ. ಸಂಜೆಯವರೆಗೆ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿ: 2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು: ಡಾ.ಕಫೀಲ್ ಖಾನ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...