Homeಮುಖಪುಟ‘ಜೈಶ್ರೀರಾಮ್’ ಹೇಳದೇ ಇದ್ದುದಕ್ಕೆ 10 ವರ್ಷದ ಬಾಲಕನನ್ನು ತೀವ್ರವಾಗಿ ಥಳಿಸಿದ ಬಿಜೆಪಿ ಕಾರ್ಯಕರ್ತ!

‘ಜೈಶ್ರೀರಾಮ್’ ಹೇಳದೇ ಇದ್ದುದಕ್ಕೆ 10 ವರ್ಷದ ಬಾಲಕನನ್ನು ತೀವ್ರವಾಗಿ ಥಳಿಸಿದ ಬಿಜೆಪಿ ಕಾರ್ಯಕರ್ತ!

- Advertisement -
- Advertisement -

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಫುಲಿಯಾದಲ್ಲಿ ಸೋಮವಾರ ಮಧ್ಯಾಹ್ನ ‘ಜೈ ಶ್ರೀ ರಾಮ್’ ಎಂದು ಜಪಿಸಲು ನಿರಾಕರಿಸಿದ್ದಕ್ಕಾಗಿ 10 ವರ್ಷದ ಬಾಲಕನನ್ನು ಬಿಜೆಪಿ ಕಾರ್ಯಕರ್ತರೊಬ್ಬರು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಟೆಲೆಗ್ರಾಫ್ ಇಂಡಿಯಾ ವರದಿ ಮಾಡಿದೆ.

ಇತ್ತೀಚೆಗೆ ತಾಯಿಯನ್ನು ಕಳೆದುಕೊಂಡ 4 ನೇ ತರಗತಿ ವಿದ್ಯಾರ್ಥಿ ಮಹಾದೇವ್ ಶರ್ಮಾಗೆ ಅನೇಕ ಗಾಯಗಳಾಗಿದ್ದು, ರಣಘಾಟ್ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು ಆರೋಪಿ ಫುಲಿಯಾಪರಾದ ಚಹಾ ಅಂಗಡಿಯ ಮಾಲೀಕ ಮಹಾದೇಬ್ ಪ್ರಮಣಿಕ್ ಅವರನ್ನು ಥಳಿಸಿದ್ದಾರೆ. ಪ್ರತಿಭಟನಾಕಾರರು ಪ್ರಮಣಿಕ್ ಬಂಧನಕ್ಕೆ ಒತ್ತಾಯಿಸಿ ಎನ್‌ಎಚ್-12 ಹೆದ್ದಾರಿಯನ್ನು ಬಂದ್ ಮಾಡಿದ್ದರು.

ಸು-ಮೋಟು ಆಧಾರದ ಮೇಲೆ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು. ಬಿಜೆಪಿಯ ಮಹಿಳಾ ವಿಭಾಗದ ಸ್ಥಳೀಯ ಮುಖ್ಯಸ್ಥೆ ಮಿಥು ಪ್ರಮಣಿಕ್ ಅವರ ಪತಿ ಮಹಾದೇವ್ ಪ್ರಮಣಿಕ್ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಲಕ ತೃಣಮೂಲ ಕಾಂಗ್ರೆಸ್ ಬೆಂಬಲಿಗನಾಗಿರುವ ಬಡಗಿಯೊಬ್ಬರ ಮಗ ಎಂದು ಪೊಲೀಸರು ಹೇಳಿದ್ದಾರೆ. “ಹುಡುಗ ಪ್ರಮಣಿಕ್ ಚಹಾ ಅಂಗಡಿ ಎದುರು ಹಾದುಹೋಗುತ್ತಿದ್ದ. ಹುಡುಗನ್ನು ಕರೆದ ಪ್ರಮಣಿಕ್, ಹುಡುಗನ ತಂದೆ ಟಿಎಂಸಿ ಬೆಂಬಲಿಸುತ್ತಿರುವುದನ್ನು ಉಲ್ಲೇಖಿಸಿ ನಿಂದಿಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಏಪ್ರಿಲ್ 17 ರಂದು ಇಲ್ಲಿ ನಡೆದ ಮತದಾನದ ಸಂದರ್ಭದಲ್ಲಿ ಬಾಲಕನ ತಂದೆ ಟಿಎಂಸಿ ಪರ ಕೆಲಸ ಮಾಡಿದ್ದಕ್ಕೆ ಪ್ರಮಣಿಕ್ ಕೆರಳಿದ್ದ ಎನ್ನಲಾಗಿದೆ.

“ಆರೋಪಿ ಹುಡುಗನಿಗೆ ಬೆದರಿಕೆ ಹಾಕಿ ಜೈಶ್ರೀರಾಮ್ ಎಂದು ಜಪಿಸಲು ಒತ್ತಾಯ ಮಾಡಿದ. ಹುಡುಗ ಅದನ್ನು ನಿರಾಕರಿಸಿದನು” ಎಂದು ಆ ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ ಎಂದು ಟೆಲೆಗ್ರಾಫ್ ಇಂಡಿಯಾ ವರದಿಯಲ್ಲಿ ಹೇಳಲಾಗಿದೆ.

ನಂತರ ಪ್ರಮಣಿಕ್ ಬಾಲಕನ ಮೇಲೆ ವಿಪರೀತವಾಗಿ ಹಲ್ಲೆ ನಡೆಸಿದ್ದಾನೆ. ಕೆಲವು ಗ್ರಾಮಸ್ಥರು ಸಹಾಯಕ್ಕಾಗಿ ಧಾವಿಸುವವರೆಗೂ ಬಾಲಕನಿಗೆ ಪ್ರಮಣಿಕ್ ಹೊಡೆದ ಎಂದು ವರದಿಯಾಗಿದೆ.
ಆಘಾತಕ್ಕೊಳಗಾಗಿದ್ದ ಬಾಲಕ ಆಸ್ಪತ್ರೆಯ ಹಾಸಿಗೆಯಿಂದ ಹೀಗೆ ಹೇಳಿದ್ದಾನೆ: “ಅವನು (ಪ್ರಮಣಿಕ್) ನಾನು‘ ಜೈ ಶ್ರೀ ರಾಮ್ ’ಎಂದು ಜಪಿಸಲು ಒತ್ತಾಯಿಸಿ ನನ್ನ ತಂದೆಯನ್ನು ನಿಂದಿಸುತ್ತಿದ್ದ. ನಾನು ನಿರಾಕರಿಸಿದಾಗ, ಅವನು ನನ್ನನ್ನು ಹೊಡೆಯಲು ಶುರು ಮಾಡಿದ ತದನಂತರ ನನ್ನನ್ನು ಒದೆಯತೊಡಗಿದ.. ಅದೃಷ್ಟವಶಾತ್, ಕೆಲವು ಸ್ಥಳೀಯರು ಸಹಾಯ ಮಾಡಲು ಧಾವಿಸಿದರು.”

ಬಾಲಕನ ಮುಖ, ತಲೆ ಮತ್ತು ಬೆನ್ನಿಗೆ ಗಾಯಗಳಾಗಿವೆ ಮತ್ತು ಸಿ.ಟಿ ಸ್ಕ್ಯಾನ್‌ಗೆ ಸೂಚಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. “ಹುಡುಗ ಆಘಾತದಲ್ಲಿದ್ದಾನೆ, ಆದರೆ ವೈದ್ಯಕೀಯವಾಗಿ ಆರೋಗ್ಯ ಸ್ಥಿರವಾಗಿದೆ” ಎಂದು ವೈದ್ಯರೊಬ್ಬರು ಹೇಳಿದ್ದಾರೆ.

ಸ್ಥಳೀಯ ತೃಣಮೂಲ ಯುವ ವಿಭಾಗದ ನಾಯಕ ಪೀಟರ್ ಮುಖರ್ಜಿ, “ಕೆಲವು ಗ್ರಾಮಸ್ಥರು ಹುಡುಗನನ್ನು ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ರಕ್ಷಿಸಿ ನನಗೆ ಮಾಹಿತಿ ನೀಡಿದರು. ನಾನು ತಕ್ಷಣ ಸ್ಥಳಕ್ಕೆ ಧಾವಿಸಿ ಆಸ್ಪತ್ರೆಗೆ ಕರೆದೊಯ್ದೆ. ಬಿಜೆಪಿ ಎಷ್ಟು ಕ್ರೂರವಾಗಬಹುದು ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿತು. ತಾಯಿಯನ್ನು ಕಳೆದುಕೊಂಡ 10 ವರ್ಷದ ಬಾಲಕನ್ನು ಅವರು ಬಿಡಲಿಲ್ಲ ಎಂದು ಊಹಿಸಲಾಗದು’ ಎಂದಿದ್ದಾರೆ.

ಆರೋಪಿ ಪತ್ನಿ ಬಿಜೆಪಿ ಮಹಿಳಾ ಮೋರ್ಚಾ ನಾಯಕಿ ಮಿಥು ಪ್ರಮಣಿಕ್, ಈ ದಾಳಿಯನ್ನು ಒಪ್ಪಿಕೊಂಡಿದ್ದಾರೆ, ಆದರೆ ಹುಡುಗ ಪ್ರಚೋದನೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
“ನನ್ನ ಪತಿ ಹುಡುಗನಿಗೆ ‘ಜೈ ಶ್ರೀ ರಾಮ್’ ಎಂದು ಜಪಿಸುವಂತೆ ಕೇಳಿದ್ದು ನಿಜ. ಆದರೆ ಹುಡುಗನು ಅವನಿಗೆ ತಿಳಿದಿರುವ ಕಾರಣ ಹಾಗೆ ಕೇಳಿದ್ದಾನೆ. ವಾಸ್ತವವಾಗಿ, ಅಂಗಡಿಯಲ್ಲಿದ್ದ ಕೆಲವು ಗ್ರಾಹಕರು, ಹುಡುಗ ನನ್ನ ಗಂಡ ‘ಜೈ ಬಾಂಗ್ಲಾ’ ಎಂದು ಜಪಿಸುವಂತೆ ಕೇಳಬೇಕು ಎಂದು ತಮಾಷೆ ಮಾಡಿದರು. ಆದರೆ ಆ ಹುಡುಗ ಕಲ್ಲು ಎತ್ತಿಕೊಂಡು ಅಂಗಡಿಯ ಮೇಲೆ ಎಸೆದು ಗಾಜಿನ ಪಾತ್ರೆಗಳನ್ನು ಒಡೆದ. ಇದು ನನ್ನ ಪತಿಗೆ ಕೋಪ ತರಿಸಿದ್ದರಿಂದ ಹೊಡೆದಿದ್ದಾನೆ’ ಎಂದು ಸಮರ್ಥಸಿಕೊಂಡಿದ್ದಾರೆ.

ಹುಡುಗನ ತಂದೆ, ಶ್ಯಾಮ್‌ಚಂದ್ ಶರ್ಮಾ, ತನ್ನ 10 ವರ್ಷದ ಮಗನನ್ನು ತನ್ನ ರಾಜಕೀಯ ಒಲವುಗಳಿಗಾಗಿ ಹಿಂಸಾಚಾರಕ್ಕೆ ಒಳಪಡಿಸಬಹುದೆಂದು ಊಹಿಸಿರಲಿಲ್ಲ ಎಂದಿದ್ದಾರೆ.

“ಚುನಾವಣೆಯ ದಿನದಂದು ಬಿಜೆಪಿ ಕಾರ್ಯಕರ್ತರು ಮತದಾರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದರು, ಅದನ್ನು ನಾನು ಪ್ರತಿಭಟಿಸಿದೆ. ಆದ್ದರಿಂದ, ಅವರು ನನ್ನ ಮಗನ ಮೇಲೆ ಹಲ್ಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡರು ಎಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ಈಗಾಗಲೇ ತನಿಖೆ ಆರಂಭಿಸಲಾಗಿದೆ ಎಂದು ಸಂತಪುರ ಪೊಲೀಸರು ತಿಳಿಸಿದ್ದಾರೆ. “ಪೊಲೀಸ್ ತಂಡ ಆರೋಪಿ ಮನೆಗೆ ಭೇಟಿ ನೀಡಿದೆ. ನಿಖರವಾಗಿ ಏನಾಯಿತು ಎಂದು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ. ಸಂಜೆಯವರೆಗೆ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿ: 2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು: ಡಾ.ಕಫೀಲ್ ಖಾನ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...