Homeಮುಖಪುಟ‘ಜೈಶ್ರೀರಾಮ್’ ಹೇಳದೇ ಇದ್ದುದಕ್ಕೆ 10 ವರ್ಷದ ಬಾಲಕನನ್ನು ತೀವ್ರವಾಗಿ ಥಳಿಸಿದ ಬಿಜೆಪಿ ಕಾರ್ಯಕರ್ತ!

‘ಜೈಶ್ರೀರಾಮ್’ ಹೇಳದೇ ಇದ್ದುದಕ್ಕೆ 10 ವರ್ಷದ ಬಾಲಕನನ್ನು ತೀವ್ರವಾಗಿ ಥಳಿಸಿದ ಬಿಜೆಪಿ ಕಾರ್ಯಕರ್ತ!

- Advertisement -
- Advertisement -

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಫುಲಿಯಾದಲ್ಲಿ ಸೋಮವಾರ ಮಧ್ಯಾಹ್ನ ‘ಜೈ ಶ್ರೀ ರಾಮ್’ ಎಂದು ಜಪಿಸಲು ನಿರಾಕರಿಸಿದ್ದಕ್ಕಾಗಿ 10 ವರ್ಷದ ಬಾಲಕನನ್ನು ಬಿಜೆಪಿ ಕಾರ್ಯಕರ್ತರೊಬ್ಬರು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಟೆಲೆಗ್ರಾಫ್ ಇಂಡಿಯಾ ವರದಿ ಮಾಡಿದೆ.

ಇತ್ತೀಚೆಗೆ ತಾಯಿಯನ್ನು ಕಳೆದುಕೊಂಡ 4 ನೇ ತರಗತಿ ವಿದ್ಯಾರ್ಥಿ ಮಹಾದೇವ್ ಶರ್ಮಾಗೆ ಅನೇಕ ಗಾಯಗಳಾಗಿದ್ದು, ರಣಘಾಟ್ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು ಆರೋಪಿ ಫುಲಿಯಾಪರಾದ ಚಹಾ ಅಂಗಡಿಯ ಮಾಲೀಕ ಮಹಾದೇಬ್ ಪ್ರಮಣಿಕ್ ಅವರನ್ನು ಥಳಿಸಿದ್ದಾರೆ. ಪ್ರತಿಭಟನಾಕಾರರು ಪ್ರಮಣಿಕ್ ಬಂಧನಕ್ಕೆ ಒತ್ತಾಯಿಸಿ ಎನ್‌ಎಚ್-12 ಹೆದ್ದಾರಿಯನ್ನು ಬಂದ್ ಮಾಡಿದ್ದರು.

ಸು-ಮೋಟು ಆಧಾರದ ಮೇಲೆ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು. ಬಿಜೆಪಿಯ ಮಹಿಳಾ ವಿಭಾಗದ ಸ್ಥಳೀಯ ಮುಖ್ಯಸ್ಥೆ ಮಿಥು ಪ್ರಮಣಿಕ್ ಅವರ ಪತಿ ಮಹಾದೇವ್ ಪ್ರಮಣಿಕ್ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಲಕ ತೃಣಮೂಲ ಕಾಂಗ್ರೆಸ್ ಬೆಂಬಲಿಗನಾಗಿರುವ ಬಡಗಿಯೊಬ್ಬರ ಮಗ ಎಂದು ಪೊಲೀಸರು ಹೇಳಿದ್ದಾರೆ. “ಹುಡುಗ ಪ್ರಮಣಿಕ್ ಚಹಾ ಅಂಗಡಿ ಎದುರು ಹಾದುಹೋಗುತ್ತಿದ್ದ. ಹುಡುಗನ್ನು ಕರೆದ ಪ್ರಮಣಿಕ್, ಹುಡುಗನ ತಂದೆ ಟಿಎಂಸಿ ಬೆಂಬಲಿಸುತ್ತಿರುವುದನ್ನು ಉಲ್ಲೇಖಿಸಿ ನಿಂದಿಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಏಪ್ರಿಲ್ 17 ರಂದು ಇಲ್ಲಿ ನಡೆದ ಮತದಾನದ ಸಂದರ್ಭದಲ್ಲಿ ಬಾಲಕನ ತಂದೆ ಟಿಎಂಸಿ ಪರ ಕೆಲಸ ಮಾಡಿದ್ದಕ್ಕೆ ಪ್ರಮಣಿಕ್ ಕೆರಳಿದ್ದ ಎನ್ನಲಾಗಿದೆ.

“ಆರೋಪಿ ಹುಡುಗನಿಗೆ ಬೆದರಿಕೆ ಹಾಕಿ ಜೈಶ್ರೀರಾಮ್ ಎಂದು ಜಪಿಸಲು ಒತ್ತಾಯ ಮಾಡಿದ. ಹುಡುಗ ಅದನ್ನು ನಿರಾಕರಿಸಿದನು” ಎಂದು ಆ ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ ಎಂದು ಟೆಲೆಗ್ರಾಫ್ ಇಂಡಿಯಾ ವರದಿಯಲ್ಲಿ ಹೇಳಲಾಗಿದೆ.

ನಂತರ ಪ್ರಮಣಿಕ್ ಬಾಲಕನ ಮೇಲೆ ವಿಪರೀತವಾಗಿ ಹಲ್ಲೆ ನಡೆಸಿದ್ದಾನೆ. ಕೆಲವು ಗ್ರಾಮಸ್ಥರು ಸಹಾಯಕ್ಕಾಗಿ ಧಾವಿಸುವವರೆಗೂ ಬಾಲಕನಿಗೆ ಪ್ರಮಣಿಕ್ ಹೊಡೆದ ಎಂದು ವರದಿಯಾಗಿದೆ.
ಆಘಾತಕ್ಕೊಳಗಾಗಿದ್ದ ಬಾಲಕ ಆಸ್ಪತ್ರೆಯ ಹಾಸಿಗೆಯಿಂದ ಹೀಗೆ ಹೇಳಿದ್ದಾನೆ: “ಅವನು (ಪ್ರಮಣಿಕ್) ನಾನು‘ ಜೈ ಶ್ರೀ ರಾಮ್ ’ಎಂದು ಜಪಿಸಲು ಒತ್ತಾಯಿಸಿ ನನ್ನ ತಂದೆಯನ್ನು ನಿಂದಿಸುತ್ತಿದ್ದ. ನಾನು ನಿರಾಕರಿಸಿದಾಗ, ಅವನು ನನ್ನನ್ನು ಹೊಡೆಯಲು ಶುರು ಮಾಡಿದ ತದನಂತರ ನನ್ನನ್ನು ಒದೆಯತೊಡಗಿದ.. ಅದೃಷ್ಟವಶಾತ್, ಕೆಲವು ಸ್ಥಳೀಯರು ಸಹಾಯ ಮಾಡಲು ಧಾವಿಸಿದರು.”

ಬಾಲಕನ ಮುಖ, ತಲೆ ಮತ್ತು ಬೆನ್ನಿಗೆ ಗಾಯಗಳಾಗಿವೆ ಮತ್ತು ಸಿ.ಟಿ ಸ್ಕ್ಯಾನ್‌ಗೆ ಸೂಚಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. “ಹುಡುಗ ಆಘಾತದಲ್ಲಿದ್ದಾನೆ, ಆದರೆ ವೈದ್ಯಕೀಯವಾಗಿ ಆರೋಗ್ಯ ಸ್ಥಿರವಾಗಿದೆ” ಎಂದು ವೈದ್ಯರೊಬ್ಬರು ಹೇಳಿದ್ದಾರೆ.

ಸ್ಥಳೀಯ ತೃಣಮೂಲ ಯುವ ವಿಭಾಗದ ನಾಯಕ ಪೀಟರ್ ಮುಖರ್ಜಿ, “ಕೆಲವು ಗ್ರಾಮಸ್ಥರು ಹುಡುಗನನ್ನು ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ರಕ್ಷಿಸಿ ನನಗೆ ಮಾಹಿತಿ ನೀಡಿದರು. ನಾನು ತಕ್ಷಣ ಸ್ಥಳಕ್ಕೆ ಧಾವಿಸಿ ಆಸ್ಪತ್ರೆಗೆ ಕರೆದೊಯ್ದೆ. ಬಿಜೆಪಿ ಎಷ್ಟು ಕ್ರೂರವಾಗಬಹುದು ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿತು. ತಾಯಿಯನ್ನು ಕಳೆದುಕೊಂಡ 10 ವರ್ಷದ ಬಾಲಕನ್ನು ಅವರು ಬಿಡಲಿಲ್ಲ ಎಂದು ಊಹಿಸಲಾಗದು’ ಎಂದಿದ್ದಾರೆ.

ಆರೋಪಿ ಪತ್ನಿ ಬಿಜೆಪಿ ಮಹಿಳಾ ಮೋರ್ಚಾ ನಾಯಕಿ ಮಿಥು ಪ್ರಮಣಿಕ್, ಈ ದಾಳಿಯನ್ನು ಒಪ್ಪಿಕೊಂಡಿದ್ದಾರೆ, ಆದರೆ ಹುಡುಗ ಪ್ರಚೋದನೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
“ನನ್ನ ಪತಿ ಹುಡುಗನಿಗೆ ‘ಜೈ ಶ್ರೀ ರಾಮ್’ ಎಂದು ಜಪಿಸುವಂತೆ ಕೇಳಿದ್ದು ನಿಜ. ಆದರೆ ಹುಡುಗನು ಅವನಿಗೆ ತಿಳಿದಿರುವ ಕಾರಣ ಹಾಗೆ ಕೇಳಿದ್ದಾನೆ. ವಾಸ್ತವವಾಗಿ, ಅಂಗಡಿಯಲ್ಲಿದ್ದ ಕೆಲವು ಗ್ರಾಹಕರು, ಹುಡುಗ ನನ್ನ ಗಂಡ ‘ಜೈ ಬಾಂಗ್ಲಾ’ ಎಂದು ಜಪಿಸುವಂತೆ ಕೇಳಬೇಕು ಎಂದು ತಮಾಷೆ ಮಾಡಿದರು. ಆದರೆ ಆ ಹುಡುಗ ಕಲ್ಲು ಎತ್ತಿಕೊಂಡು ಅಂಗಡಿಯ ಮೇಲೆ ಎಸೆದು ಗಾಜಿನ ಪಾತ್ರೆಗಳನ್ನು ಒಡೆದ. ಇದು ನನ್ನ ಪತಿಗೆ ಕೋಪ ತರಿಸಿದ್ದರಿಂದ ಹೊಡೆದಿದ್ದಾನೆ’ ಎಂದು ಸಮರ್ಥಸಿಕೊಂಡಿದ್ದಾರೆ.

ಹುಡುಗನ ತಂದೆ, ಶ್ಯಾಮ್‌ಚಂದ್ ಶರ್ಮಾ, ತನ್ನ 10 ವರ್ಷದ ಮಗನನ್ನು ತನ್ನ ರಾಜಕೀಯ ಒಲವುಗಳಿಗಾಗಿ ಹಿಂಸಾಚಾರಕ್ಕೆ ಒಳಪಡಿಸಬಹುದೆಂದು ಊಹಿಸಿರಲಿಲ್ಲ ಎಂದಿದ್ದಾರೆ.

“ಚುನಾವಣೆಯ ದಿನದಂದು ಬಿಜೆಪಿ ಕಾರ್ಯಕರ್ತರು ಮತದಾರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದರು, ಅದನ್ನು ನಾನು ಪ್ರತಿಭಟಿಸಿದೆ. ಆದ್ದರಿಂದ, ಅವರು ನನ್ನ ಮಗನ ಮೇಲೆ ಹಲ್ಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡರು ಎಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ಈಗಾಗಲೇ ತನಿಖೆ ಆರಂಭಿಸಲಾಗಿದೆ ಎಂದು ಸಂತಪುರ ಪೊಲೀಸರು ತಿಳಿಸಿದ್ದಾರೆ. “ಪೊಲೀಸ್ ತಂಡ ಆರೋಪಿ ಮನೆಗೆ ಭೇಟಿ ನೀಡಿದೆ. ನಿಖರವಾಗಿ ಏನಾಯಿತು ಎಂದು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ. ಸಂಜೆಯವರೆಗೆ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿ: 2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು: ಡಾ.ಕಫೀಲ್ ಖಾನ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...