Homeಮುಖಪುಟ‘ಜೈಶ್ರೀರಾಮ್’ ಹೇಳದೇ ಇದ್ದುದಕ್ಕೆ 10 ವರ್ಷದ ಬಾಲಕನನ್ನು ತೀವ್ರವಾಗಿ ಥಳಿಸಿದ ಬಿಜೆಪಿ ಕಾರ್ಯಕರ್ತ!

‘ಜೈಶ್ರೀರಾಮ್’ ಹೇಳದೇ ಇದ್ದುದಕ್ಕೆ 10 ವರ್ಷದ ಬಾಲಕನನ್ನು ತೀವ್ರವಾಗಿ ಥಳಿಸಿದ ಬಿಜೆಪಿ ಕಾರ್ಯಕರ್ತ!

- Advertisement -
- Advertisement -

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಫುಲಿಯಾದಲ್ಲಿ ಸೋಮವಾರ ಮಧ್ಯಾಹ್ನ ‘ಜೈ ಶ್ರೀ ರಾಮ್’ ಎಂದು ಜಪಿಸಲು ನಿರಾಕರಿಸಿದ್ದಕ್ಕಾಗಿ 10 ವರ್ಷದ ಬಾಲಕನನ್ನು ಬಿಜೆಪಿ ಕಾರ್ಯಕರ್ತರೊಬ್ಬರು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಟೆಲೆಗ್ರಾಫ್ ಇಂಡಿಯಾ ವರದಿ ಮಾಡಿದೆ.

ಇತ್ತೀಚೆಗೆ ತಾಯಿಯನ್ನು ಕಳೆದುಕೊಂಡ 4 ನೇ ತರಗತಿ ವಿದ್ಯಾರ್ಥಿ ಮಹಾದೇವ್ ಶರ್ಮಾಗೆ ಅನೇಕ ಗಾಯಗಳಾಗಿದ್ದು, ರಣಘಾಟ್ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು ಆರೋಪಿ ಫುಲಿಯಾಪರಾದ ಚಹಾ ಅಂಗಡಿಯ ಮಾಲೀಕ ಮಹಾದೇಬ್ ಪ್ರಮಣಿಕ್ ಅವರನ್ನು ಥಳಿಸಿದ್ದಾರೆ. ಪ್ರತಿಭಟನಾಕಾರರು ಪ್ರಮಣಿಕ್ ಬಂಧನಕ್ಕೆ ಒತ್ತಾಯಿಸಿ ಎನ್‌ಎಚ್-12 ಹೆದ್ದಾರಿಯನ್ನು ಬಂದ್ ಮಾಡಿದ್ದರು.

ಸು-ಮೋಟು ಆಧಾರದ ಮೇಲೆ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು. ಬಿಜೆಪಿಯ ಮಹಿಳಾ ವಿಭಾಗದ ಸ್ಥಳೀಯ ಮುಖ್ಯಸ್ಥೆ ಮಿಥು ಪ್ರಮಣಿಕ್ ಅವರ ಪತಿ ಮಹಾದೇವ್ ಪ್ರಮಣಿಕ್ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಲಕ ತೃಣಮೂಲ ಕಾಂಗ್ರೆಸ್ ಬೆಂಬಲಿಗನಾಗಿರುವ ಬಡಗಿಯೊಬ್ಬರ ಮಗ ಎಂದು ಪೊಲೀಸರು ಹೇಳಿದ್ದಾರೆ. “ಹುಡುಗ ಪ್ರಮಣಿಕ್ ಚಹಾ ಅಂಗಡಿ ಎದುರು ಹಾದುಹೋಗುತ್ತಿದ್ದ. ಹುಡುಗನ್ನು ಕರೆದ ಪ್ರಮಣಿಕ್, ಹುಡುಗನ ತಂದೆ ಟಿಎಂಸಿ ಬೆಂಬಲಿಸುತ್ತಿರುವುದನ್ನು ಉಲ್ಲೇಖಿಸಿ ನಿಂದಿಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಏಪ್ರಿಲ್ 17 ರಂದು ಇಲ್ಲಿ ನಡೆದ ಮತದಾನದ ಸಂದರ್ಭದಲ್ಲಿ ಬಾಲಕನ ತಂದೆ ಟಿಎಂಸಿ ಪರ ಕೆಲಸ ಮಾಡಿದ್ದಕ್ಕೆ ಪ್ರಮಣಿಕ್ ಕೆರಳಿದ್ದ ಎನ್ನಲಾಗಿದೆ.

“ಆರೋಪಿ ಹುಡುಗನಿಗೆ ಬೆದರಿಕೆ ಹಾಕಿ ಜೈಶ್ರೀರಾಮ್ ಎಂದು ಜಪಿಸಲು ಒತ್ತಾಯ ಮಾಡಿದ. ಹುಡುಗ ಅದನ್ನು ನಿರಾಕರಿಸಿದನು” ಎಂದು ಆ ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ ಎಂದು ಟೆಲೆಗ್ರಾಫ್ ಇಂಡಿಯಾ ವರದಿಯಲ್ಲಿ ಹೇಳಲಾಗಿದೆ.

ನಂತರ ಪ್ರಮಣಿಕ್ ಬಾಲಕನ ಮೇಲೆ ವಿಪರೀತವಾಗಿ ಹಲ್ಲೆ ನಡೆಸಿದ್ದಾನೆ. ಕೆಲವು ಗ್ರಾಮಸ್ಥರು ಸಹಾಯಕ್ಕಾಗಿ ಧಾವಿಸುವವರೆಗೂ ಬಾಲಕನಿಗೆ ಪ್ರಮಣಿಕ್ ಹೊಡೆದ ಎಂದು ವರದಿಯಾಗಿದೆ.
ಆಘಾತಕ್ಕೊಳಗಾಗಿದ್ದ ಬಾಲಕ ಆಸ್ಪತ್ರೆಯ ಹಾಸಿಗೆಯಿಂದ ಹೀಗೆ ಹೇಳಿದ್ದಾನೆ: “ಅವನು (ಪ್ರಮಣಿಕ್) ನಾನು‘ ಜೈ ಶ್ರೀ ರಾಮ್ ’ಎಂದು ಜಪಿಸಲು ಒತ್ತಾಯಿಸಿ ನನ್ನ ತಂದೆಯನ್ನು ನಿಂದಿಸುತ್ತಿದ್ದ. ನಾನು ನಿರಾಕರಿಸಿದಾಗ, ಅವನು ನನ್ನನ್ನು ಹೊಡೆಯಲು ಶುರು ಮಾಡಿದ ತದನಂತರ ನನ್ನನ್ನು ಒದೆಯತೊಡಗಿದ.. ಅದೃಷ್ಟವಶಾತ್, ಕೆಲವು ಸ್ಥಳೀಯರು ಸಹಾಯ ಮಾಡಲು ಧಾವಿಸಿದರು.”

ಬಾಲಕನ ಮುಖ, ತಲೆ ಮತ್ತು ಬೆನ್ನಿಗೆ ಗಾಯಗಳಾಗಿವೆ ಮತ್ತು ಸಿ.ಟಿ ಸ್ಕ್ಯಾನ್‌ಗೆ ಸೂಚಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. “ಹುಡುಗ ಆಘಾತದಲ್ಲಿದ್ದಾನೆ, ಆದರೆ ವೈದ್ಯಕೀಯವಾಗಿ ಆರೋಗ್ಯ ಸ್ಥಿರವಾಗಿದೆ” ಎಂದು ವೈದ್ಯರೊಬ್ಬರು ಹೇಳಿದ್ದಾರೆ.

ಸ್ಥಳೀಯ ತೃಣಮೂಲ ಯುವ ವಿಭಾಗದ ನಾಯಕ ಪೀಟರ್ ಮುಖರ್ಜಿ, “ಕೆಲವು ಗ್ರಾಮಸ್ಥರು ಹುಡುಗನನ್ನು ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ರಕ್ಷಿಸಿ ನನಗೆ ಮಾಹಿತಿ ನೀಡಿದರು. ನಾನು ತಕ್ಷಣ ಸ್ಥಳಕ್ಕೆ ಧಾವಿಸಿ ಆಸ್ಪತ್ರೆಗೆ ಕರೆದೊಯ್ದೆ. ಬಿಜೆಪಿ ಎಷ್ಟು ಕ್ರೂರವಾಗಬಹುದು ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿತು. ತಾಯಿಯನ್ನು ಕಳೆದುಕೊಂಡ 10 ವರ್ಷದ ಬಾಲಕನ್ನು ಅವರು ಬಿಡಲಿಲ್ಲ ಎಂದು ಊಹಿಸಲಾಗದು’ ಎಂದಿದ್ದಾರೆ.

ಆರೋಪಿ ಪತ್ನಿ ಬಿಜೆಪಿ ಮಹಿಳಾ ಮೋರ್ಚಾ ನಾಯಕಿ ಮಿಥು ಪ್ರಮಣಿಕ್, ಈ ದಾಳಿಯನ್ನು ಒಪ್ಪಿಕೊಂಡಿದ್ದಾರೆ, ಆದರೆ ಹುಡುಗ ಪ್ರಚೋದನೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
“ನನ್ನ ಪತಿ ಹುಡುಗನಿಗೆ ‘ಜೈ ಶ್ರೀ ರಾಮ್’ ಎಂದು ಜಪಿಸುವಂತೆ ಕೇಳಿದ್ದು ನಿಜ. ಆದರೆ ಹುಡುಗನು ಅವನಿಗೆ ತಿಳಿದಿರುವ ಕಾರಣ ಹಾಗೆ ಕೇಳಿದ್ದಾನೆ. ವಾಸ್ತವವಾಗಿ, ಅಂಗಡಿಯಲ್ಲಿದ್ದ ಕೆಲವು ಗ್ರಾಹಕರು, ಹುಡುಗ ನನ್ನ ಗಂಡ ‘ಜೈ ಬಾಂಗ್ಲಾ’ ಎಂದು ಜಪಿಸುವಂತೆ ಕೇಳಬೇಕು ಎಂದು ತಮಾಷೆ ಮಾಡಿದರು. ಆದರೆ ಆ ಹುಡುಗ ಕಲ್ಲು ಎತ್ತಿಕೊಂಡು ಅಂಗಡಿಯ ಮೇಲೆ ಎಸೆದು ಗಾಜಿನ ಪಾತ್ರೆಗಳನ್ನು ಒಡೆದ. ಇದು ನನ್ನ ಪತಿಗೆ ಕೋಪ ತರಿಸಿದ್ದರಿಂದ ಹೊಡೆದಿದ್ದಾನೆ’ ಎಂದು ಸಮರ್ಥಸಿಕೊಂಡಿದ್ದಾರೆ.

ಹುಡುಗನ ತಂದೆ, ಶ್ಯಾಮ್‌ಚಂದ್ ಶರ್ಮಾ, ತನ್ನ 10 ವರ್ಷದ ಮಗನನ್ನು ತನ್ನ ರಾಜಕೀಯ ಒಲವುಗಳಿಗಾಗಿ ಹಿಂಸಾಚಾರಕ್ಕೆ ಒಳಪಡಿಸಬಹುದೆಂದು ಊಹಿಸಿರಲಿಲ್ಲ ಎಂದಿದ್ದಾರೆ.

“ಚುನಾವಣೆಯ ದಿನದಂದು ಬಿಜೆಪಿ ಕಾರ್ಯಕರ್ತರು ಮತದಾರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದರು, ಅದನ್ನು ನಾನು ಪ್ರತಿಭಟಿಸಿದೆ. ಆದ್ದರಿಂದ, ಅವರು ನನ್ನ ಮಗನ ಮೇಲೆ ಹಲ್ಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡರು ಎಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ಈಗಾಗಲೇ ತನಿಖೆ ಆರಂಭಿಸಲಾಗಿದೆ ಎಂದು ಸಂತಪುರ ಪೊಲೀಸರು ತಿಳಿಸಿದ್ದಾರೆ. “ಪೊಲೀಸ್ ತಂಡ ಆರೋಪಿ ಮನೆಗೆ ಭೇಟಿ ನೀಡಿದೆ. ನಿಖರವಾಗಿ ಏನಾಯಿತು ಎಂದು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ. ಸಂಜೆಯವರೆಗೆ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿ: 2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು: ಡಾ.ಕಫೀಲ್ ಖಾನ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...