Homeಮುಖಪುಟ‘ಜೈಶ್ರೀರಾಮ್’ ಹೇಳದೇ ಇದ್ದುದಕ್ಕೆ 10 ವರ್ಷದ ಬಾಲಕನನ್ನು ತೀವ್ರವಾಗಿ ಥಳಿಸಿದ ಬಿಜೆಪಿ ಕಾರ್ಯಕರ್ತ!

‘ಜೈಶ್ರೀರಾಮ್’ ಹೇಳದೇ ಇದ್ದುದಕ್ಕೆ 10 ವರ್ಷದ ಬಾಲಕನನ್ನು ತೀವ್ರವಾಗಿ ಥಳಿಸಿದ ಬಿಜೆಪಿ ಕಾರ್ಯಕರ್ತ!

- Advertisement -
- Advertisement -

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಫುಲಿಯಾದಲ್ಲಿ ಸೋಮವಾರ ಮಧ್ಯಾಹ್ನ ‘ಜೈ ಶ್ರೀ ರಾಮ್’ ಎಂದು ಜಪಿಸಲು ನಿರಾಕರಿಸಿದ್ದಕ್ಕಾಗಿ 10 ವರ್ಷದ ಬಾಲಕನನ್ನು ಬಿಜೆಪಿ ಕಾರ್ಯಕರ್ತರೊಬ್ಬರು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಟೆಲೆಗ್ರಾಫ್ ಇಂಡಿಯಾ ವರದಿ ಮಾಡಿದೆ.

ಇತ್ತೀಚೆಗೆ ತಾಯಿಯನ್ನು ಕಳೆದುಕೊಂಡ 4 ನೇ ತರಗತಿ ವಿದ್ಯಾರ್ಥಿ ಮಹಾದೇವ್ ಶರ್ಮಾಗೆ ಅನೇಕ ಗಾಯಗಳಾಗಿದ್ದು, ರಣಘಾಟ್ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು ಆರೋಪಿ ಫುಲಿಯಾಪರಾದ ಚಹಾ ಅಂಗಡಿಯ ಮಾಲೀಕ ಮಹಾದೇಬ್ ಪ್ರಮಣಿಕ್ ಅವರನ್ನು ಥಳಿಸಿದ್ದಾರೆ. ಪ್ರತಿಭಟನಾಕಾರರು ಪ್ರಮಣಿಕ್ ಬಂಧನಕ್ಕೆ ಒತ್ತಾಯಿಸಿ ಎನ್‌ಎಚ್-12 ಹೆದ್ದಾರಿಯನ್ನು ಬಂದ್ ಮಾಡಿದ್ದರು.

ಸು-ಮೋಟು ಆಧಾರದ ಮೇಲೆ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು. ಬಿಜೆಪಿಯ ಮಹಿಳಾ ವಿಭಾಗದ ಸ್ಥಳೀಯ ಮುಖ್ಯಸ್ಥೆ ಮಿಥು ಪ್ರಮಣಿಕ್ ಅವರ ಪತಿ ಮಹಾದೇವ್ ಪ್ರಮಣಿಕ್ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಲಕ ತೃಣಮೂಲ ಕಾಂಗ್ರೆಸ್ ಬೆಂಬಲಿಗನಾಗಿರುವ ಬಡಗಿಯೊಬ್ಬರ ಮಗ ಎಂದು ಪೊಲೀಸರು ಹೇಳಿದ್ದಾರೆ. “ಹುಡುಗ ಪ್ರಮಣಿಕ್ ಚಹಾ ಅಂಗಡಿ ಎದುರು ಹಾದುಹೋಗುತ್ತಿದ್ದ. ಹುಡುಗನ್ನು ಕರೆದ ಪ್ರಮಣಿಕ್, ಹುಡುಗನ ತಂದೆ ಟಿಎಂಸಿ ಬೆಂಬಲಿಸುತ್ತಿರುವುದನ್ನು ಉಲ್ಲೇಖಿಸಿ ನಿಂದಿಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಏಪ್ರಿಲ್ 17 ರಂದು ಇಲ್ಲಿ ನಡೆದ ಮತದಾನದ ಸಂದರ್ಭದಲ್ಲಿ ಬಾಲಕನ ತಂದೆ ಟಿಎಂಸಿ ಪರ ಕೆಲಸ ಮಾಡಿದ್ದಕ್ಕೆ ಪ್ರಮಣಿಕ್ ಕೆರಳಿದ್ದ ಎನ್ನಲಾಗಿದೆ.

“ಆರೋಪಿ ಹುಡುಗನಿಗೆ ಬೆದರಿಕೆ ಹಾಕಿ ಜೈಶ್ರೀರಾಮ್ ಎಂದು ಜಪಿಸಲು ಒತ್ತಾಯ ಮಾಡಿದ. ಹುಡುಗ ಅದನ್ನು ನಿರಾಕರಿಸಿದನು” ಎಂದು ಆ ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ ಎಂದು ಟೆಲೆಗ್ರಾಫ್ ಇಂಡಿಯಾ ವರದಿಯಲ್ಲಿ ಹೇಳಲಾಗಿದೆ.

ನಂತರ ಪ್ರಮಣಿಕ್ ಬಾಲಕನ ಮೇಲೆ ವಿಪರೀತವಾಗಿ ಹಲ್ಲೆ ನಡೆಸಿದ್ದಾನೆ. ಕೆಲವು ಗ್ರಾಮಸ್ಥರು ಸಹಾಯಕ್ಕಾಗಿ ಧಾವಿಸುವವರೆಗೂ ಬಾಲಕನಿಗೆ ಪ್ರಮಣಿಕ್ ಹೊಡೆದ ಎಂದು ವರದಿಯಾಗಿದೆ.
ಆಘಾತಕ್ಕೊಳಗಾಗಿದ್ದ ಬಾಲಕ ಆಸ್ಪತ್ರೆಯ ಹಾಸಿಗೆಯಿಂದ ಹೀಗೆ ಹೇಳಿದ್ದಾನೆ: “ಅವನು (ಪ್ರಮಣಿಕ್) ನಾನು‘ ಜೈ ಶ್ರೀ ರಾಮ್ ’ಎಂದು ಜಪಿಸಲು ಒತ್ತಾಯಿಸಿ ನನ್ನ ತಂದೆಯನ್ನು ನಿಂದಿಸುತ್ತಿದ್ದ. ನಾನು ನಿರಾಕರಿಸಿದಾಗ, ಅವನು ನನ್ನನ್ನು ಹೊಡೆಯಲು ಶುರು ಮಾಡಿದ ತದನಂತರ ನನ್ನನ್ನು ಒದೆಯತೊಡಗಿದ.. ಅದೃಷ್ಟವಶಾತ್, ಕೆಲವು ಸ್ಥಳೀಯರು ಸಹಾಯ ಮಾಡಲು ಧಾವಿಸಿದರು.”

ಬಾಲಕನ ಮುಖ, ತಲೆ ಮತ್ತು ಬೆನ್ನಿಗೆ ಗಾಯಗಳಾಗಿವೆ ಮತ್ತು ಸಿ.ಟಿ ಸ್ಕ್ಯಾನ್‌ಗೆ ಸೂಚಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. “ಹುಡುಗ ಆಘಾತದಲ್ಲಿದ್ದಾನೆ, ಆದರೆ ವೈದ್ಯಕೀಯವಾಗಿ ಆರೋಗ್ಯ ಸ್ಥಿರವಾಗಿದೆ” ಎಂದು ವೈದ್ಯರೊಬ್ಬರು ಹೇಳಿದ್ದಾರೆ.

ಸ್ಥಳೀಯ ತೃಣಮೂಲ ಯುವ ವಿಭಾಗದ ನಾಯಕ ಪೀಟರ್ ಮುಖರ್ಜಿ, “ಕೆಲವು ಗ್ರಾಮಸ್ಥರು ಹುಡುಗನನ್ನು ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ರಕ್ಷಿಸಿ ನನಗೆ ಮಾಹಿತಿ ನೀಡಿದರು. ನಾನು ತಕ್ಷಣ ಸ್ಥಳಕ್ಕೆ ಧಾವಿಸಿ ಆಸ್ಪತ್ರೆಗೆ ಕರೆದೊಯ್ದೆ. ಬಿಜೆಪಿ ಎಷ್ಟು ಕ್ರೂರವಾಗಬಹುದು ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿತು. ತಾಯಿಯನ್ನು ಕಳೆದುಕೊಂಡ 10 ವರ್ಷದ ಬಾಲಕನ್ನು ಅವರು ಬಿಡಲಿಲ್ಲ ಎಂದು ಊಹಿಸಲಾಗದು’ ಎಂದಿದ್ದಾರೆ.

ಆರೋಪಿ ಪತ್ನಿ ಬಿಜೆಪಿ ಮಹಿಳಾ ಮೋರ್ಚಾ ನಾಯಕಿ ಮಿಥು ಪ್ರಮಣಿಕ್, ಈ ದಾಳಿಯನ್ನು ಒಪ್ಪಿಕೊಂಡಿದ್ದಾರೆ, ಆದರೆ ಹುಡುಗ ಪ್ರಚೋದನೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
“ನನ್ನ ಪತಿ ಹುಡುಗನಿಗೆ ‘ಜೈ ಶ್ರೀ ರಾಮ್’ ಎಂದು ಜಪಿಸುವಂತೆ ಕೇಳಿದ್ದು ನಿಜ. ಆದರೆ ಹುಡುಗನು ಅವನಿಗೆ ತಿಳಿದಿರುವ ಕಾರಣ ಹಾಗೆ ಕೇಳಿದ್ದಾನೆ. ವಾಸ್ತವವಾಗಿ, ಅಂಗಡಿಯಲ್ಲಿದ್ದ ಕೆಲವು ಗ್ರಾಹಕರು, ಹುಡುಗ ನನ್ನ ಗಂಡ ‘ಜೈ ಬಾಂಗ್ಲಾ’ ಎಂದು ಜಪಿಸುವಂತೆ ಕೇಳಬೇಕು ಎಂದು ತಮಾಷೆ ಮಾಡಿದರು. ಆದರೆ ಆ ಹುಡುಗ ಕಲ್ಲು ಎತ್ತಿಕೊಂಡು ಅಂಗಡಿಯ ಮೇಲೆ ಎಸೆದು ಗಾಜಿನ ಪಾತ್ರೆಗಳನ್ನು ಒಡೆದ. ಇದು ನನ್ನ ಪತಿಗೆ ಕೋಪ ತರಿಸಿದ್ದರಿಂದ ಹೊಡೆದಿದ್ದಾನೆ’ ಎಂದು ಸಮರ್ಥಸಿಕೊಂಡಿದ್ದಾರೆ.

ಹುಡುಗನ ತಂದೆ, ಶ್ಯಾಮ್‌ಚಂದ್ ಶರ್ಮಾ, ತನ್ನ 10 ವರ್ಷದ ಮಗನನ್ನು ತನ್ನ ರಾಜಕೀಯ ಒಲವುಗಳಿಗಾಗಿ ಹಿಂಸಾಚಾರಕ್ಕೆ ಒಳಪಡಿಸಬಹುದೆಂದು ಊಹಿಸಿರಲಿಲ್ಲ ಎಂದಿದ್ದಾರೆ.

“ಚುನಾವಣೆಯ ದಿನದಂದು ಬಿಜೆಪಿ ಕಾರ್ಯಕರ್ತರು ಮತದಾರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದರು, ಅದನ್ನು ನಾನು ಪ್ರತಿಭಟಿಸಿದೆ. ಆದ್ದರಿಂದ, ಅವರು ನನ್ನ ಮಗನ ಮೇಲೆ ಹಲ್ಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡರು ಎಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ಈಗಾಗಲೇ ತನಿಖೆ ಆರಂಭಿಸಲಾಗಿದೆ ಎಂದು ಸಂತಪುರ ಪೊಲೀಸರು ತಿಳಿಸಿದ್ದಾರೆ. “ಪೊಲೀಸ್ ತಂಡ ಆರೋಪಿ ಮನೆಗೆ ಭೇಟಿ ನೀಡಿದೆ. ನಿಖರವಾಗಿ ಏನಾಯಿತು ಎಂದು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ. ಸಂಜೆಯವರೆಗೆ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿ: 2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು: ಡಾ.ಕಫೀಲ್ ಖಾನ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...