Homeಮುಖಪುಟ‘ಜೈಶ್ರೀರಾಮ್’ ಹೇಳದೇ ಇದ್ದುದಕ್ಕೆ 10 ವರ್ಷದ ಬಾಲಕನನ್ನು ತೀವ್ರವಾಗಿ ಥಳಿಸಿದ ಬಿಜೆಪಿ ಕಾರ್ಯಕರ್ತ!

‘ಜೈಶ್ರೀರಾಮ್’ ಹೇಳದೇ ಇದ್ದುದಕ್ಕೆ 10 ವರ್ಷದ ಬಾಲಕನನ್ನು ತೀವ್ರವಾಗಿ ಥಳಿಸಿದ ಬಿಜೆಪಿ ಕಾರ್ಯಕರ್ತ!

- Advertisement -
- Advertisement -

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಫುಲಿಯಾದಲ್ಲಿ ಸೋಮವಾರ ಮಧ್ಯಾಹ್ನ ‘ಜೈ ಶ್ರೀ ರಾಮ್’ ಎಂದು ಜಪಿಸಲು ನಿರಾಕರಿಸಿದ್ದಕ್ಕಾಗಿ 10 ವರ್ಷದ ಬಾಲಕನನ್ನು ಬಿಜೆಪಿ ಕಾರ್ಯಕರ್ತರೊಬ್ಬರು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಟೆಲೆಗ್ರಾಫ್ ಇಂಡಿಯಾ ವರದಿ ಮಾಡಿದೆ.

ಇತ್ತೀಚೆಗೆ ತಾಯಿಯನ್ನು ಕಳೆದುಕೊಂಡ 4 ನೇ ತರಗತಿ ವಿದ್ಯಾರ್ಥಿ ಮಹಾದೇವ್ ಶರ್ಮಾಗೆ ಅನೇಕ ಗಾಯಗಳಾಗಿದ್ದು, ರಣಘಾಟ್ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು ಆರೋಪಿ ಫುಲಿಯಾಪರಾದ ಚಹಾ ಅಂಗಡಿಯ ಮಾಲೀಕ ಮಹಾದೇಬ್ ಪ್ರಮಣಿಕ್ ಅವರನ್ನು ಥಳಿಸಿದ್ದಾರೆ. ಪ್ರತಿಭಟನಾಕಾರರು ಪ್ರಮಣಿಕ್ ಬಂಧನಕ್ಕೆ ಒತ್ತಾಯಿಸಿ ಎನ್‌ಎಚ್-12 ಹೆದ್ದಾರಿಯನ್ನು ಬಂದ್ ಮಾಡಿದ್ದರು.

ಸು-ಮೋಟು ಆಧಾರದ ಮೇಲೆ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು. ಬಿಜೆಪಿಯ ಮಹಿಳಾ ವಿಭಾಗದ ಸ್ಥಳೀಯ ಮುಖ್ಯಸ್ಥೆ ಮಿಥು ಪ್ರಮಣಿಕ್ ಅವರ ಪತಿ ಮಹಾದೇವ್ ಪ್ರಮಣಿಕ್ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಲಕ ತೃಣಮೂಲ ಕಾಂಗ್ರೆಸ್ ಬೆಂಬಲಿಗನಾಗಿರುವ ಬಡಗಿಯೊಬ್ಬರ ಮಗ ಎಂದು ಪೊಲೀಸರು ಹೇಳಿದ್ದಾರೆ. “ಹುಡುಗ ಪ್ರಮಣಿಕ್ ಚಹಾ ಅಂಗಡಿ ಎದುರು ಹಾದುಹೋಗುತ್ತಿದ್ದ. ಹುಡುಗನ್ನು ಕರೆದ ಪ್ರಮಣಿಕ್, ಹುಡುಗನ ತಂದೆ ಟಿಎಂಸಿ ಬೆಂಬಲಿಸುತ್ತಿರುವುದನ್ನು ಉಲ್ಲೇಖಿಸಿ ನಿಂದಿಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಏಪ್ರಿಲ್ 17 ರಂದು ಇಲ್ಲಿ ನಡೆದ ಮತದಾನದ ಸಂದರ್ಭದಲ್ಲಿ ಬಾಲಕನ ತಂದೆ ಟಿಎಂಸಿ ಪರ ಕೆಲಸ ಮಾಡಿದ್ದಕ್ಕೆ ಪ್ರಮಣಿಕ್ ಕೆರಳಿದ್ದ ಎನ್ನಲಾಗಿದೆ.

“ಆರೋಪಿ ಹುಡುಗನಿಗೆ ಬೆದರಿಕೆ ಹಾಕಿ ಜೈಶ್ರೀರಾಮ್ ಎಂದು ಜಪಿಸಲು ಒತ್ತಾಯ ಮಾಡಿದ. ಹುಡುಗ ಅದನ್ನು ನಿರಾಕರಿಸಿದನು” ಎಂದು ಆ ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ ಎಂದು ಟೆಲೆಗ್ರಾಫ್ ಇಂಡಿಯಾ ವರದಿಯಲ್ಲಿ ಹೇಳಲಾಗಿದೆ.

ನಂತರ ಪ್ರಮಣಿಕ್ ಬಾಲಕನ ಮೇಲೆ ವಿಪರೀತವಾಗಿ ಹಲ್ಲೆ ನಡೆಸಿದ್ದಾನೆ. ಕೆಲವು ಗ್ರಾಮಸ್ಥರು ಸಹಾಯಕ್ಕಾಗಿ ಧಾವಿಸುವವರೆಗೂ ಬಾಲಕನಿಗೆ ಪ್ರಮಣಿಕ್ ಹೊಡೆದ ಎಂದು ವರದಿಯಾಗಿದೆ.
ಆಘಾತಕ್ಕೊಳಗಾಗಿದ್ದ ಬಾಲಕ ಆಸ್ಪತ್ರೆಯ ಹಾಸಿಗೆಯಿಂದ ಹೀಗೆ ಹೇಳಿದ್ದಾನೆ: “ಅವನು (ಪ್ರಮಣಿಕ್) ನಾನು‘ ಜೈ ಶ್ರೀ ರಾಮ್ ’ಎಂದು ಜಪಿಸಲು ಒತ್ತಾಯಿಸಿ ನನ್ನ ತಂದೆಯನ್ನು ನಿಂದಿಸುತ್ತಿದ್ದ. ನಾನು ನಿರಾಕರಿಸಿದಾಗ, ಅವನು ನನ್ನನ್ನು ಹೊಡೆಯಲು ಶುರು ಮಾಡಿದ ತದನಂತರ ನನ್ನನ್ನು ಒದೆಯತೊಡಗಿದ.. ಅದೃಷ್ಟವಶಾತ್, ಕೆಲವು ಸ್ಥಳೀಯರು ಸಹಾಯ ಮಾಡಲು ಧಾವಿಸಿದರು.”

ಬಾಲಕನ ಮುಖ, ತಲೆ ಮತ್ತು ಬೆನ್ನಿಗೆ ಗಾಯಗಳಾಗಿವೆ ಮತ್ತು ಸಿ.ಟಿ ಸ್ಕ್ಯಾನ್‌ಗೆ ಸೂಚಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. “ಹುಡುಗ ಆಘಾತದಲ್ಲಿದ್ದಾನೆ, ಆದರೆ ವೈದ್ಯಕೀಯವಾಗಿ ಆರೋಗ್ಯ ಸ್ಥಿರವಾಗಿದೆ” ಎಂದು ವೈದ್ಯರೊಬ್ಬರು ಹೇಳಿದ್ದಾರೆ.

ಸ್ಥಳೀಯ ತೃಣಮೂಲ ಯುವ ವಿಭಾಗದ ನಾಯಕ ಪೀಟರ್ ಮುಖರ್ಜಿ, “ಕೆಲವು ಗ್ರಾಮಸ್ಥರು ಹುಡುಗನನ್ನು ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ರಕ್ಷಿಸಿ ನನಗೆ ಮಾಹಿತಿ ನೀಡಿದರು. ನಾನು ತಕ್ಷಣ ಸ್ಥಳಕ್ಕೆ ಧಾವಿಸಿ ಆಸ್ಪತ್ರೆಗೆ ಕರೆದೊಯ್ದೆ. ಬಿಜೆಪಿ ಎಷ್ಟು ಕ್ರೂರವಾಗಬಹುದು ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿತು. ತಾಯಿಯನ್ನು ಕಳೆದುಕೊಂಡ 10 ವರ್ಷದ ಬಾಲಕನ್ನು ಅವರು ಬಿಡಲಿಲ್ಲ ಎಂದು ಊಹಿಸಲಾಗದು’ ಎಂದಿದ್ದಾರೆ.

ಆರೋಪಿ ಪತ್ನಿ ಬಿಜೆಪಿ ಮಹಿಳಾ ಮೋರ್ಚಾ ನಾಯಕಿ ಮಿಥು ಪ್ರಮಣಿಕ್, ಈ ದಾಳಿಯನ್ನು ಒಪ್ಪಿಕೊಂಡಿದ್ದಾರೆ, ಆದರೆ ಹುಡುಗ ಪ್ರಚೋದನೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
“ನನ್ನ ಪತಿ ಹುಡುಗನಿಗೆ ‘ಜೈ ಶ್ರೀ ರಾಮ್’ ಎಂದು ಜಪಿಸುವಂತೆ ಕೇಳಿದ್ದು ನಿಜ. ಆದರೆ ಹುಡುಗನು ಅವನಿಗೆ ತಿಳಿದಿರುವ ಕಾರಣ ಹಾಗೆ ಕೇಳಿದ್ದಾನೆ. ವಾಸ್ತವವಾಗಿ, ಅಂಗಡಿಯಲ್ಲಿದ್ದ ಕೆಲವು ಗ್ರಾಹಕರು, ಹುಡುಗ ನನ್ನ ಗಂಡ ‘ಜೈ ಬಾಂಗ್ಲಾ’ ಎಂದು ಜಪಿಸುವಂತೆ ಕೇಳಬೇಕು ಎಂದು ತಮಾಷೆ ಮಾಡಿದರು. ಆದರೆ ಆ ಹುಡುಗ ಕಲ್ಲು ಎತ್ತಿಕೊಂಡು ಅಂಗಡಿಯ ಮೇಲೆ ಎಸೆದು ಗಾಜಿನ ಪಾತ್ರೆಗಳನ್ನು ಒಡೆದ. ಇದು ನನ್ನ ಪತಿಗೆ ಕೋಪ ತರಿಸಿದ್ದರಿಂದ ಹೊಡೆದಿದ್ದಾನೆ’ ಎಂದು ಸಮರ್ಥಸಿಕೊಂಡಿದ್ದಾರೆ.

ಹುಡುಗನ ತಂದೆ, ಶ್ಯಾಮ್‌ಚಂದ್ ಶರ್ಮಾ, ತನ್ನ 10 ವರ್ಷದ ಮಗನನ್ನು ತನ್ನ ರಾಜಕೀಯ ಒಲವುಗಳಿಗಾಗಿ ಹಿಂಸಾಚಾರಕ್ಕೆ ಒಳಪಡಿಸಬಹುದೆಂದು ಊಹಿಸಿರಲಿಲ್ಲ ಎಂದಿದ್ದಾರೆ.

“ಚುನಾವಣೆಯ ದಿನದಂದು ಬಿಜೆಪಿ ಕಾರ್ಯಕರ್ತರು ಮತದಾರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದರು, ಅದನ್ನು ನಾನು ಪ್ರತಿಭಟಿಸಿದೆ. ಆದ್ದರಿಂದ, ಅವರು ನನ್ನ ಮಗನ ಮೇಲೆ ಹಲ್ಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡರು ಎಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ಈಗಾಗಲೇ ತನಿಖೆ ಆರಂಭಿಸಲಾಗಿದೆ ಎಂದು ಸಂತಪುರ ಪೊಲೀಸರು ತಿಳಿಸಿದ್ದಾರೆ. “ಪೊಲೀಸ್ ತಂಡ ಆರೋಪಿ ಮನೆಗೆ ಭೇಟಿ ನೀಡಿದೆ. ನಿಖರವಾಗಿ ಏನಾಯಿತು ಎಂದು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ. ಸಂಜೆಯವರೆಗೆ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿ: 2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು: ಡಾ.ಕಫೀಲ್ ಖಾನ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...