Homeಅಂಕಣಗಳುಮಾತು ಮರೆತ ಭಾರತ; ದಲಿತ್ ಫೈಲ್ಸ್: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಸಾಸನೂರು ಹತ್ಯಾಕಾಂಡ

ಮಾತು ಮರೆತ ಭಾರತ; ದಲಿತ್ ಫೈಲ್ಸ್: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಸಾಸನೂರು ಹತ್ಯಾಕಾಂಡ

- Advertisement -
- Advertisement -

ಭಾರತ ದೇಶವು ಬ್ರಿಟಿಷರಿಂದ ಸ್ವಾತಂತ್ರ್ಯಗೊಳ್ಳುವ ಹತ್ತು ತಿಂಗಳ ಮುಂಚೆ 1946ರಲ್ಲಿ ಕರ್ನಾಟಕದಲ್ಲಿ ಒಂದು ಭೀಕರ ದಲಿತರ ಹತ್ಯಾಕಾಂಡವಾಗುತ್ತದೆ. ಈ ಹತ್ಯಾಕಾಂಡ ನಡೆದ ವಲಯದ ಪೊಲೀಸ್ ಸ್ಟೇಷನ್ನಿಗೆ ಡಾ. ಬಿ. ಆರ್. ಅಂಬೇಡ್ಕರ್ ಅವರು ಖುದ್ದು ಭೇಟಿಕೊಟ್ಟು ಪ್ರಕರಣದ ಬಗ್ಗೆ ವಿಚಾರಿಸಿಕೊಂಡು ಹೋಗಿದ್ದಾರೆ. ಅಂತಹ ಭೀಕರ ಘಟನೆಯನ್ನು ಕರ್ನಾಟಕದ ದಲಿತರೂ ಸಹ ಮರೆತುಬಿಟ್ಟಿದ್ದಾರೆ. ಸಂವಿಧಾನ ಸಭೆಯಲ್ಲಿ ದಲಿತರಿಗೆ ರಕ್ಷಣೆ ಹಾಗೂ ಘನತೆ ಕೊಡುತ್ತೇವೆ ಎಂದು ಆಶ್ವಾಸನೆ ನೀಡಿದ ದಲಿತೇತರರೂ ಸಹ ತಮ್ಮ ಮಾತನ್ನು ಮರೆತುಬಿಟ್ಟಿದ್ದಾರೆ. ಈ ಸಾಸನೂರು ಘಟನೆಯನ್ನು ಪ್ರೊ. ಎನ್. ಚಿನ್ನಸ್ವಾಮಿ ಸೋಸಲೆ ಅವರು ’ದಲಿತರ ಬದುಕು-ಮೆಲುಕು’ ಕೃತಿಯಲ್ಲಿ ನಮೂದಿಸಿದ್ದಾರೆ.

ವಿಜಾಪುರ ಜಿಲ್ಲೆಯಲ್ಲಿನ ಬಸವನ ಬಾಗೇವಾಡಿ ತಾಲ್ಲೂಕಿನ ಸಾಸನೂರ ಗ್ರಾಮವು ವಿಜಾಪುರದಿಂದ ಸುಮಾರು 65 ಕಿ.ಮೀ. ಅಂತರದಲ್ಲಿದೆ. ಈ ಗ್ರಾಮದಲ್ಲಿ ದಲಿತರ ಒಂದು ಜಾತಿಯ ಮೇಲೆ ನಡೆಸಿದ ದೌರ್ಜನ್ಯ ಪ್ರಕರಣ ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಈ ದೌರ್ಜನ್ಯ ನಡೆಸಿದವರು ರೆಡ್ಡಿ ಜನಾಂಗದವರು. 22ನೇ ಅಕ್ಟೋಬರ್ 1946ರ ಮುಂಜಾನೆಯಂದು ದಲಿತರ ಮೇಲೆ ರೆಡ್ಡಿ ಜನಾಂಗದವರು ದೌರ್ಜನ್ಯವೆಸಗಿದರೆಂದು ದಾಖಲಾಗಿದೆ. ದಲಿತರು ಮೇಲ್ಜಾತಿಯ ರೆಡ್ಡಿಗಳಿಗೆ ಅಣ್ಣಾ, ಅಪ್ಪಾ, ಅವ್ವಾ ಎಂದು ಕರೆಯದೆ ಸ್ವಾಭಿಮಾನದ ಬದುಕು ನಡೆಸುತ್ತಿದ್ದದ್ದೇ ಈ ಘಟನೆ ನಡೆಯಲು ಬಹುಮುಖ್ಯ ಕಾರಣವಾಗಿದೆ. ಇದನ್ನು ಸಹಿಸದ ಮೇಲ್ಜಾತಿಯವರು ದಲಿತರ ಮೇಲೆ ದಬ್ಬಾಳಿಕೆಯನ್ನು ಮಾಡತೊಡಗಿದರು.
ಇದರಿಂದ ಜಗ್ಗದ ದಲಿತರು ದೌರ್ಜನ್ಯಕ್ಕೆ ಎದುರಾಗಿ ತಿರುಗಿಬಿದ್ದರು.

ಆದರೆ ಹೀಗೆ ತಿರುಗಿಬಿದ್ದ ದಲಿತರನ್ನು ವಿರುದ್ಧ ಬೀಳುವ ಅಲ್ಲಿನ ಮೇಲ್ಜಾತಿಗಳ ಜನರು, ತಮ್ಮ ಹೊಲದಲ್ಲಿ ಬೆಳೆದ ದವಸಗಳನ್ನು ರಾಶಿ ಮಾಡಿಕೊಂಡು ಬರುತ್ತಿದ್ದಾಗ ಅವರ ಹಾದಿಯಲ್ಲಿಯೇ ಗಾಡಿಯನ್ನು ನಿಲ್ಲಿಸಿ ತಮಗೆ ಬೇಕಾದಷ್ಟು ಆಹಾರ ಧಾನ್ಯವನ್ನು ದಬ್ಬಾಳಿಕೆಯಿಂದ ದಲಿತರು ಕಸಿದುಕೊಂಡು ಹೋಗುತ್ತಿದ್ದರೆಂದು ಆಪಾದಿಸುತ್ತಾರೆ. ಜೊತೆಗೆ ಆಯುಧ ಪೂಜಾ ಸಂದರ್ಭದಲ್ಲಿ ಎತ್ತುಗಳನ್ನು ಶೃಂಗರಿಸಿ ಊರಿನ ಕೇರಿಗಳಲ್ಲಿ ಮೆರವಣಿಗೆ ಮಾಡಲು ದಲಿತರು ಸಿದ್ಧರಾಗಿದ್ದರು. ಆದರೆ ಈ ಎತ್ತುಗಳ ಮೆರವಣಿಗೆಯನ್ನು ತಡೆಗಟ್ಟುವುದು ಮೇಲ್ಜಾತಿಯವರ ಪ್ರತಿಷ್ಠೆಯ ವಿಷಯವಾಗಿತ್ತು.

ಇದರ ಜೊತೆಜೊತೆಗೆ ನಡೆದ ಮತ್ತೊಂದು ಘಟನೆ ಇದು. ಸಾಸನೂರ ಗ್ರಾಮದ ದಲಿತರಾದ ಹೊನ್ನಪ್ಪ ಸಾಸನೂರ ಮತ್ತು ಯಲ್ಲಪ್ಪ ಸಾಸನೂರ ಎಂಬ ಇಬ್ಬರು ಸಹೋದರರು ಕುಸ್ತಿಪಟುಗಳಾಗಿದ್ದರು. ಈ ಇಬ್ಬರು ಪಕ್ಕದ ತುಂಬಗಿ ಗ್ರಾಮಕ್ಕೆ ಕುಸ್ತಿ ಆಡಲು ಹೋಗಿದ್ದರು. ಅಲ್ಲಿಗೆ ಹೋದಾಗ ಮೇಲ್ಜಾತಿಯವರಿಗೆ ಹೊನ್ನಪ್ಪನ ಕಾಲು ತಾಕಿದ್ದನ್ನು ನೆಪ ಮಾಡಲಾಯಿತು. ಹೊಲೆಯನ ಕಾಲು ತಾಕಿತೆಂದು ತುಂಬಗಿಯ ಮೇಲ್ಜಾತಿಯವರು ಹೊನ್ನಪ್ಪನಿಗೆ ಜೀವ ಹೋಗುವ ಹಾಗೆ ಬಡಿದರು. ಇದರಿಂದ ಜೀವಕ್ಕೆ ಹೆದರಿ ಯಲ್ಲಪ್ಪ ಅಲ್ಲಿಂದ ಓಡಿಹೋದ. ತದನಂತರ ಹೊನ್ನಪ್ಪನಿಗೂ ಎಚ್ಚರವಾಯ್ತು; ಇಬ್ಬರೂ ತಮ್ಮ ಊರಾದ ಸಾಸನೂರಿಗೆ ಬಂದರು.

ಇನ್ನೊಂದು ದಿನ ತುಂಬಗಿಯ ಮೇಲ್ಜಾತಿಯ ಜನರು ಬೀಗರ ಊರಾದ ಸಾಸನೂರಿಗೆ ಬರುವ ಸುದ್ದಿಯನ್ನು ತಿಳಿದು ಹೊನ್ನಪ್ಪ ಮತ್ತು ಯಲ್ಲಪ್ಪ ತಮ್ಮ ಸೇಡನ್ನು ತೀರಿಸಿಕೊಳ್ಳಲು ಡೋಣಿಯಲ್ಲಿ ಕಾದು ಕುಳಿತುಕೊಂಡಿದ್ದರು. ಈ ಸುದ್ದಿಯು ಮೇಲ್ಜಾತಿಯವರಿಗೆ ಗೊತ್ತಾದಾಗ ಎರಡೂ ಗುಂಪುಗಳ ಮಧ್ಯೆ ವೈರತ್ವ ಮತ್ತಷ್ಟು ಉಲ್ಬಣಗೊಂಡಿತು. ಉರಿಯುವ ಬೆಂಕಿಗೆ ತುಪ್ಪ ಹಾಕಿದ ಹಾಗಾಯಿತು ಎಂಬಂತೆ ಮತ್ತಷ್ಟು ವಿಕೋಪಕ್ಕೇರಿತು.

ಇದೇ ಸಮಯದಲ್ಲಿ ಒಬ್ಬ ಮೇಲ್ಜಾತಿಯ ಹೆಣ್ಣುಮಗಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಳು. ಈ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅಲ್ಲಿನ ಜನರು ಹೇಳುವುದೇನೆಂದರೆ, ಅವಳಿಗೆ ದಲಿತ ವ್ಯಕ್ತಿಯೊಬ್ಬನೊಂದಿಗೆ ಅನೈತಿಕ ಸಂಬಂಧವಿತ್ತು ಮತ್ತು ಆ ಅನೈತಿಕ ವಿಷಯ ಎಲ್ಲ ಮೇಲ್ಜಾತಿಯವರಿಗೆ ಗೊತ್ತಾಗಿದ್ದರಿಂದ ಅವಳು ಆತ್ಮಹತ್ಯೆ ಮಾಡಿಕೊಂಡಳೆಂದು. ಆದರೆ ಇನ್ನೊಂದು ಕಡೆ ಮೇಲ್ಜಾತಿಯವರು ಈ ಸಂಬಂಧಕ್ಕೆ ಬಣ್ಣ ಕೊಟ್ಟು ದಲಿತರು ಮೇಲ್ಜಾತಿಯ ಹೆಣ್ಣುಮಕ್ಕಳನ್ನು ಪೀಡಿಸುವುದು, ಅತ್ಯಾಚಾರವೆಸಗುವುದು, ಅನೈತಿಕ ಚಟುವಟಿಕೆ
ಗಳಿಗೆ ಒತ್ತಾಯ ಮಾಡುವುದು ಮುಂತಾದ ದುಷ್ಕೃತ್ಯಗಳನ್ನು ಮಾಡುತ್ತಿದ್ದಾರೆಂದು ಹಬ್ಬಿಸಿದರು. ಹಾಗೆಯೇ ಈ ಹೆಣ್ಣುಮಗಳೊಂದಿಗೂ ನಡೆದುಕೊಂಡಿರುವ ಕಾರಣ ಮಾನಕ್ಕೆ ಅಂಜಿ ಆತ್ಮಹತ್ಯೆ ಮಾಡಿಕೊಂಡಳು ಎಂದು ಕತೆಕಟ್ಟಿದರು. ಈ ಮೇಲ್ವರ್ಗದವರ ಮಾತನ್ನು ಅಂದಿನ ಘಟನೆಯನ್ನು ನೋಡಿರುವ ಸಂಗಪ್ಪನವರು ತಳ್ಳಿಹಾಕುತ್ತಾರೆ.

ದಲಿತರು ಹೀಗೆ ತಿರುಗಿಬಿದ್ದದ್ದರಿಂದಾಗಿ ಮೇಲ್ಜಾತಿಯ ರೆಡ್ಡಿಗಳು ದಲಿತರ ಮೇಲೆ ಮಾಟ-ಮಂತ್ರಗಳನ್ನು ಮಾಡಿಸಲು ಒಬ್ಬ ಮಾಂತ್ರಿಕನ ಬಳಿ ಹೋದರಂತೆ. ಮಾಟಗಾರನು ದೀಪಾವಳಿ ಬಲಿಪಾಡ್ಯದ ದಿನದಂದು ದಲಿತರನ್ನು ಬಲಿ ತೆಗೆದುಕೊಂಡರೆ ಯಾವ ಸಮಸ್ಯೆಯೂ ನಿಮಗೆ ಬರುವುದಿಲ್ಲ ಎಂದು ಹೇಳಿದನಂತೆ. ಅದರ ಪ್ರಕಾರ ಮೇಲ್ಜಾತಿಯವರು ದಲಿತರನ್ನು ಹೊಡೆಯಲು ತಯಾರಿ ಮಾಡಿಕೊಂಡು ದಾಸಪ್ಪನೆಂಬ ಸವರ್ಣೀಯನನ್ನು ಹೊಲಗೇರಿಯಲ್ಲಿ ಹಾಯ್ದು ಕಸ ಚೆಲ್ಲಲು ಕಳುಹಿಸಿಕೊಟ್ಟರು. ಆಗ ಅಲ್ಲಿನ ದಲಿತರು ದಾಸಪ್ಪನನ್ನು ವಿಚಾರಿಸಲಾಗಿ ಅವನು ಕಸ ಚೆಲ್ಲಲು ಬಂದಿರುವುದಾಗಿ ತಿಳಿಸಿದನು. ’ಹಿಡಕೋರಲೆ ಅವನನ್ನು’ ಅಂದ ತಕ್ಷಣ ಅವನು ಸಾರ್ವಜನಿಕವಾಗಿ ಕೂಗುತ್ತಾ, ’ನನ್ನನ್ನು ಹೊಲೆಯರು ಹೊಡೆದರೆಂದು’ ಹೇಳಿದಾಗ ಮನೆಯ ಮೇಲೆ ನಿಂತ ಸವರ್ಣೀಯರು ಹೊಲೆಯರತ್ತ ಕಲ್ಲುಗಳನ್ನು ಬಿಸಾಡಿದರು. ಅದಕ್ಕೆ ಪ್ರತಿಯಾಗಿ ಹೊಲೆಯರು ಸವರ್ಣೀಯರನ್ನು ಹೊಡೆದು ಊರೊಳಕ್ಕೆ ಓಡಿಸಿದರು. ತದನಂತರ ಹೊಲೆಯರೆಲ್ಲ ಒಟ್ಟಾಗಿ ಒಂದು ಮನೆಯಲ್ಲಿ ಸೇಂದಿಯನ್ನು ಕುಡಿಯುತ್ತಾ ಈ ಜಗಳದ ಕುರಿತು ಮಾತನಾಡುತ್ತಿದ್ದರು. ಇದನ್ನು ಸಾಸನೂರಿನ ವ್ಯಕ್ತಿಯು ನೋಡಿ ರೆಡ್ಡಿ ಜನಾಂಗಕ್ಕೆ ಈ ವಿಷಯವನ್ನು ತಿಳಿಸಿದನು. ಇದನ್ನು ತಿಳಿದ ಊರಿನ ಜನರು ಹೊಲೆಯರ ಕೇರಿಗೆ ಬಂದು, ಅಮಲಿನಲ್ಲಿ ಒಟ್ಟಿಗೆ ಸೇರಿದ್ದ ಹೊಲೆಯರ ಕೋಣೆಯ ಬಾಗಿಲನ್ನು ಹೊರಗಿನಿಂದಲೇ ಮುಚ್ಚಿದರು ಮತ್ತು ಕಿಟಕಿ ಮುಖಾಂತರ ಬೆಂಕಿಯಲ್ಲಿ ಮೆಣಸಿನಕಾಯಿಯನ್ನು ಎಸೆದು ಘಾಟು ಎಬ್ಬಿಸಿ ಆ ಮನೆಗೆ ಬೆಂಕಿಯನ್ನು ಹಚ್ಚಿದರು.

ಇದರಿಂದ ವಿಚಲಿತಗೊಂಡ ದಲಿತರು ಮನೆಯೊಳಗೆ ಚೀರಾಡತೊಡಗಿದ್ದರು. ಜಾಗ ಮಾಡಿಕೊಂಡು ಹೊರಬಂದ ದಲಿತರನ್ನು ಒಬ್ಬೊಬ್ಬರಾಗಿ ಕೊಂದರು. ಹೀಗೆ ಒಟ್ಟು 14 ಜನರಲ್ಲಿ 13 ಜನರನ್ನು ಕಡಿದು ಕೊಂದಿರುವ ಪ್ರಕರಣ ಬಸವನ ಬಾಗೇವಾಡಿ ತಾಲ್ಲೂಕಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಆದರೆ ಮೇಲ್ಜಾತಿಯ ರೆಡ್ಡಿಗಳಿಗೆ ಹೆದರಿ ಶಾಮೀಲಾದ ದಲಿತರ ಮತ್ತೊಂದು ಜಾತಿಯವರು ಆಸೆ ಆಮಿಷಗಳಿಗೆ ಬಲಿಯಾದರು. ಅವರ ಕುಟುಂಬಗಳ ಸಂಪೂರ್ಣ ಜವಾಬ್ದಾರಿಯನ್ನು ನೋಡಿಕೊಳ್ಳುವುದಾಗಿ ಸವರ್ಣೀಯರು ತಿಳಿಸಿದಾಗ ಆ ಕೊಲೆಯನ್ನು ತಾವೇ ಮಾಡಿದ್ದೇವೆಂದು ಮತ್ತೊಂದು ದಲಿತ ಜಾತಿಯವರು ತಮ್ಮ ಮೇಲೆ ಹಾಕಿಕೊಂಡರು. ಭಯಗೊಂಡ ಕೊಲೆ ಬೆದರಿಕೆಗೊಳಗಾದ ದಲಿತರು ಊರು ಬಿಟ್ಟು ಬೇರೆಬೇರೆ ಊರುಗಳಿಗೆ ಹೋಗಿ ನೆಲೆಸಿದರು. ಇದರಿಂದಾಗಿ ದೌರ್ಜನ್ಯ ಮಾಡಿದ ಸವರ್ಣೀಯರು ಕುತಂತ್ರದಿಂದ ಪಾರಾದರಲ್ಲದೆ ಈ ಪ್ರಕರಣ ಸಂಬಂಧ ಮತ್ತೊಂದು ದಲಿತ ಜಾತಿಯವರಿಗೆ ಶಿಕ್ಷೆಯಾಯಿತು. ದಲಿತರನ್ನು ಕೊಂದದ್ದಕ್ಕೆ ದಲಿತರೇ ಶಿಕ್ಷೆ ಅನುಭವಿಸುವಂತಾಯಿತು. ಈ ದೌರ್ಜನ್ಯ ಘಟನೆಯ ಸಲುವಾಗಿ ಡಾ. ಅಂಬೇಡ್ಕರ್ ಅವರು ಬಸವನಬಾಗೇವಾಡಿ ಪೊಲೀಸ್ ಠಾಣೆಗೆ ಭೇಟಿ ನೀಡಿದರು ಎಂದು 1946ರ ಬೀಟ್ ಡೈರಿಯಲ್ಲಿ ದಾಖಲಾಗಿದೆ.

ಇದೇ ಸಾಸನೂರಿಗೆ ಸಂಬಂಧಿಸಿದಂತೆ ಇಂತಹ ಹಲವು ಘಟನೆಗಳ ರಹಸ್ಯಗಳೇ ತುಂಬಿಹೋಗಿವೆ. ಸಾಸನೂರಿನಿಂದ ಬೇರೆಡೆಗೆ ಬಂದು ನೆಲೆಸಿರುವ ದಲಿತರು 1930ರ ದಶಕದಲ್ಲಿ ಅಂಬೇಡ್ಕರ್ ಅವರ ಮಹಾಡ್ ಸತ್ಯಾಗ್ರಹದ ಪ್ರಭಾವಕ್ಕೆ ಒಳಗಾಗಿ ಸಾಸನೂರಿನ ದಲಿತರನ್ನೂ ಕೆರೆನೀರು ಮುಟ್ಟುವ ಸಾಹಸಕ್ಕೆ ಕೈ ಹಾಕಿದ್ದರೆಂಬ ಕತೆಯೂ ಇದೆ. ಆ ಘಟನೆಯಲ್ಲಿಯೂ ಮರಗದಮ್ಮ ಜಾತ್ರೆಯಲ್ಲಿ ಮರಗದಮ್ಮನಿಗೆ ಸತ್ಯಾಗ್ರಹ ಮಾಡಿದ ದಲಿತರನ್ನೇ ಬಲಿ ನೀಡಲಾಯಿತೆಂದೂ ಹೇಳಲಾಗುತ್ತದೆ. ಇದರ ಸತ್ಯಾಸತ್ಯತೆಯನ್ನು ಸಂಶೋಧನೆಗಳೇ ಬಯಲುಗೊಳಿಸಬೇಕಿದೆ.

ಅದೇನೇ ಇರಲಿ ಬ್ರಿಟಿಷರಿಂದ ಭಾರತೀಯರಿಗೆ ಸ್ವತಂತ್ರ ಬಂದಿದೆಯಾದರೂ ದಲಿತೇತರ ಮೇಲ್ಜಾತಿಗಳಿಂದ ದಲಿತರಿಗೆ ಸ್ವಾತಂತ್ರ್ಯ ದೊರಕಿಲ್ಲ. ಇದಕ್ಕೆ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮವೇ ಆಗಬೇಕಿದೆ ಎನಿಸುತ್ತದೆ.


ಇದನ್ನೂ ಓದಿ: ಮಾತು ಮರೆತ ಭಾರತ; ಸ್ವತಂತ್ರ ಪೂರ್ವ ಭಾರತದ ಕೆಲವು ದಲಿತ್ ಫೈಲ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...