Homeಕರ್ನಾಟಕಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ ಎಂದು 

ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. 

ನವೆಂಬರ್ 30ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರ ಸಹಯೋಗದಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿ:

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು ಲಕ್ಷಕ್ಕೂ ಹೆಚ್ಚಿದೆ. 1882 ನೇ ಗೆಜೆಟ್ ಬಂದಾಗ ಸಕಲೇಶಪುರದಲ್ಲಿದ್ದು, ಬರಗಾಲದ ಸಂದರ್ಭದಲ್ಲಿ ಹೇಮಾವತಿ ನದಿ ಬತ್ತಿದಾಗ ಪಕ್ಕದ ಜಿಲ್ಲೆ ಸುಳ್ಯಕ್ಕೆ ಬಂದು ನೆಲೆಯೂರುತ್ತಾರೆ, ತುಳು, ಕೊಂಕಣಿ ಜೊತೆಗೆ ಕನ್ನಡ ಸೇರಿ ಅರೆಭಾಷೆಯಾಗಿದೆ. ಹೋಗುತ್ತೇನೆ ಎನ್ನುವುದು ವೋನೆ, ಬರುತ್ತೇನೆ ಎನ್ನುವುದು ಬನೇ ಎಂದು ಹೇಳುತ್ತಾರೆ. ಹೀಗೆ ಕೆಲವು ಅಕ್ಷರಗಳು ಬಿಟ್ಟುಹೋಗಿ ಅರೆಭಾಷೆಯಾಗಿದೆ ಎಂದರು. ಮೂಲತ: ಗೌಡ ಸಮುದಾಯಕ್ಕೆ ಸೇರಿರುವ ಇವರನ್ನು ಅರೆಭಾಷೆ ಗೌಡರು ಎನ್ನುತ್ತಾರೆ. ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿಯಾಗಿದೆ ಎಂದು ಹೇಳಿದರು.  

ಕರ್ನಾಟಕದಲ್ಲಿ 230 ಸಣ್ಣ ಭಾಷೆಗಳಿವೆ:

ಅರೆಭಾಷಿಕರಾಗಿದ್ದ ಕುರುಂಜಿ ವೆಂಕಟರಮಣಗೌಡರು ನನಗೆ ಪರಿಚಿತರು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಕರ್ನಾಟಕದಲ್ಲಿ 230 ಸಣ್ಣ ಭಾಷೆಗಳಿವೆ. ಇವೆಲ್ಲವೂ ಕನ್ನಡದಿಂದಲೇ ಹುಟ್ಟಿದ್ದು, ಅರೆಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಅಕಾಡೆಮಿ ಮಾಡಲಿ ಎಂದರು. 

ಇದೇ ವೇಳೆ ಭಾಗಮಂಡಲದಲ್ಲಿ ನಾಡಗೌಡ ಸಮುದಾಯಕ್ಕೆ ಒಂದು ಕೋಟಿ ರೂಗಳನ್ನು ಹಿಂದೆ ಒದಗಿಸಲಾಗಿತ್ತು. ಪ್ರಸ್ತುತ 50 ಲಕ್ಷ ರೂಪಾಯಿ ಬೇಡಿಕೆಯನ್ನು ಈಡೇರಿಸಲಾಗುವುದು. ಇತರೆ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು. 

ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು: ಭರವಸೆ

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆ ಇದ್ದು, ಇದನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು. 

ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿಗೆ ಭಾಜನರಾದ ಕೆ.ಆರ್.ಗಂಡಾಧಾರ, ಯು. ಪಿ.ಶಿವಾನಂದ ಹಾಗೂ ಡಿ.ಎಸ್.ಆನಂದ ಅವರಿಗೆ  ಸರ್ಕಾರದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿದರು. 

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಭೈರತಿ ಸುರೇಶ್, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಶಾಸಕ ಅಂತರಗೌಡ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಅರೆಭಾಷೆ  ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಗಾಯತ್ರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...