Homeಮುಖಪುಟಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

- Advertisement -
- Advertisement -

ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೆಲಂಗಾಣದ ಹೈದರಾಬಾದ್‌ನಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ.

ಚುನಾವಣಾ ರ್ಯಾಲಿಯಲ್ಲಿ ಮಕ್ಕಳನ್ನು ತೊಡಗಿಸಿಕೊಂಡ ಆರೋಪದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅವರ ಸಂಪುಟ ಸಹೋದ್ಯೋಗಿ ಮತ್ತು ತೆಲಂಗಾಣ ಬಿಜೆಪಿ ಮುಖ್ಯಸ್ಥ ಜಿ ಕಿಶನ್ ರೆಡ್ಡಿ, ಗೋಶಾಮಹಲ್ ಶಾಸಕ ಟಿ. ರಾಜಾ ಸಿಂಗ್, ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಮತ್ತು ಹೈದರಾಬಾದ್‌ನ ಬಿಜೆಪಿ ನಾಯಕ ಟಿ. ಯಮನ್ ಸಿಂಗ್ ವಿರುದ್ಧ ಹೈದರಾಬಾದ್ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.

ಬಿಜೆಪಿ ಚುನಾವಣಾ ಪ್ರಚಾರದ ಪೋಟೋ ವೈರಲ್‌ ಆಗಿದೆ. ಅದರಲ್ಲಿ ಮಕ್ಕಳು ಬಿಜೆಪಿ ಫಲಕಗಳು ಮತ್ತು ಬಲೂನ್‌ಗಳನ್ನು ಹಿಡಿದಿದ್ದರು ಮತ್ತು ಸಚಿವರು ಮತ್ತು ಇತರ ಬಿಜೆಪಿ ಪದಾಧಿಕಾರಿಗಳೊಂದಿಗೆ ವೇದಿಕೆಯಲ್ಲಿ ನಿಂತುಕೊಂಡಿದ್ದಾರೆ.

ಮೊಘಲ್‌ಪುರ ಪೊಲೀಸರು ಗುರುವಾರ ದಾಖಲಿಸಿದ ಎಫ್‌ಐಆರ್‌ನಲ್ಲಿ ಅಮಿತ್‌ ಶಾ ಅವರನ್ನು ಆರೋಪಿ ನಂ.3 ಎಂದು ಹೆಸರಿಸಲಾಗಿದೆ. ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಘಟಕದ ಉಪಾಧ್ಯಕ್ಷ ಜಿ ನಿರಂಜನ್ ಅವರು ತೆಲಂಗಾಣ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಿದ ನಂತರ ಅಮಿತ್‌ ಶಾ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಚುನಾವಣಾ ಆಯೋಗವು ಇತ್ತೀಚೆಗೆ ಚುನಾವಣಾ ಸಂಬಂಧಿತ ಪ್ರಚಾರ ಅಥವಾ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ರಾಜಕೀಯ ಪಕ್ಷಗಳಿಗೆ ಸ್ಪಷ್ಟವಾಗಿ ನಿರ್ದೇಶಿಸಿತ್ತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು  ಮೇ.1ರಂದು ಹೈದರಾಬಾದ್ ಲೋಕಸಭಾ ಕ್ಷೇತ್ರದ ಲಾದರ್ವಾಜಾದಿಂದ ಸುಧಾ ಟಾಕೀಸ್‌ವರೆಗೆ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದರು. ರ್ಯಾಲಿಯು ಸುಧಾ ಟಾಕೀಸ್‌ನಲ್ಲಿ ಸಾರ್ವಜನಿಕ ಸಭೆಯೊಂದಿಗೆ ಸಮಾಪ್ತಿಯಾಗಿತ್ತು, ಅಲ್ಲಿ ವೇದಿಕೆಯಲ್ಲಿ ಅಮಿತ್ ಶಾ ಅವರೊಂದಿಗೆ ಕೆಲವು ಮಕ್ಕಳನ್ನು ಕಾಣಬಹುದು. ಅದರಲ್ಲಿ ಓರ್ವ ಮಗು ಬಿಜೆಪಿ ಭಾವುಟ ಪ್ರದರ್ಶಿಸುತ್ತಿರುವುದು ಕಂಡು ಬಂದಿದೆ. ಇದು ಚುನಾವಣಾ ಆಯೋಗದ ಮಾರ್ಗಸೂಚಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಚುನಾವಣಾ ಆಯೋಗ, ಘಟನೆಯ ಕುರಿತು ತನಿಖೆ ನಡೆಸುವಂತೆ ಹೈದರಾಬಾದ್ ಪೊಲೀಸ್ ಆಯುಕ್ತರಿಗೆ ಆದೇಶಿಸಿದೆ. ಹೈದರಾಬಾದ್ ಪೊಲೀಸ್ ಕಮಿಷನರ್ ಕೊತಕೋಟಾ ಶ್ರೀನಿವಾಸ್ ರೆಡ್ಡಿ ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ದಕ್ಷಿಣ ವಲಯ ಡಿಸಿಪಿ ಸ್ನೇಹಾ ಮೆಹ್ರಾ ಅವರಿಗೆ ಆದೇಶ ನೀಡಿದ್ದಾರೆ. ಆದೇಶದ ನಂತರ ಮೊಘಲ್ಪುರ ಪೊಲೀಸರು ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಇದನ್ನು ಓದಿ: ಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...