Homeಕರ್ನಾಟಕಕಲಬುರಗಿ ಕೇಂದ್ರೀಯ ವಿವಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ ಅಲ್ಲಗೆಳೆದ ರಿಜಿಸ್ಟ್ರಾರ್‌‌‌‌

ಕಲಬುರಗಿ ಕೇಂದ್ರೀಯ ವಿವಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ ಅಲ್ಲಗೆಳೆದ ರಿಜಿಸ್ಟ್ರಾರ್‌‌‌‌

- Advertisement -
- Advertisement -

ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಉಪಕುಲಪತಿ ಮತ್ತು ರಿಜಿಸ್ಟ್ರಾರ್‌‌‌‌ ಭ್ರಷ್ಟಾಚಾರ ಮತ್ತು ಅಧಿಕಾರ ದುರ್ಬಳಕೆ ಮಾಡಿದ್ದಾರೆ ಎಂಬ ಆರೋಪವನ್ನು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌‌ ಪ್ರೊ. ಬಸವರಾಜ ಡೋಣೂರ ಅವರು ಅಲ್ಲಗೆಳೆದಿದ್ದು, “ತಮ್ಮ ಮೇಲಿನ ಆರೋಪವು ಸಂಪೂರ್ಣ ಕಟ್ಟುಕತೆಯಾಗಿದೆ. ಸಂಘಟನೆಗಳು ಮಾಡಿದ ಆಪಾದನೆಗಳಲ್ಲಿ ಯಾವುದೇ ಹುರುಳಿಲ್ಲ. ವಿಶ್ವವಿದ್ಯಾಲಯದ ಹೆಸರಿಗೆ ಕಳಂಕ ತರುವ ದುರುದ್ದೇಶ ಈ ಆಪಾದನೆಗಳ ಹಿಂದೆ ಕೆಲಸ ಮಾಡಿದೆ” ಎಂದು ತಿಳಿಸಿದ್ದಾರೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ), ಅಹಿಂದ ಫೋರಂ ಮತ್ತು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಸ್ಥೆ ಸೇರಿದಂತೆ ಕೆಲವು ಸಂಸ್ಥೆಗಳು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಎಂ.ವಿ. ಅಳಗವಾಡಿ ಮತ್ತು ರಿಜಿಸ್ಟ್ರಾರ್ ಪ್ರೊ. ಬಸವರಾಜ ಡೋಣೂರ ಅವರು ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಹಲವು ಆರೋಪಗಳನ್ನು ಮಾಡಿದ್ದು ರಾಷ್ಟ್ರಪತಿಗೂ ಪತ್ರ ಬರೆದಿದ್ದಾರೆ ಎಂದು ವರದಿಯಾಗಿತ್ತು.

ಇದಕ್ಕೆ ಪತ್ರಿಕ್ರಿಯಿಸಿರುವ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಡೋಣೂರ ಅವರು, “ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಮತ್ತು ಪ್ರಭಾರ ಕುಲಸಚಿವರ ವಿರುದ್ಧ ವಿವಿಧ ಸಂಘಟನೆಗಳು ಮಾಡಿದ ಅಧಿಕಾರ ದುರ್ಬಳಿಕೆಯ ಆರೋಪ ಅಸತ್ಯದಿಂದ ಕೂಡಿದ್ದು ಇದೊಂದು ಸಂಪೂರ್ಣ ಕಟ್ಟುಕತೆಯಾಗಿದೆ. ಈ ಸಂಘಟನೆಗಳು ಮಾಡಿದ ಆಪಾದನೆಗಳಲ್ಲಿ ಯಾವುದೇ ಹುರುಳಿಲ್ಲ. ವಿಶ್ವವಿದ್ಯಾಲಯದ ಹೆಸರಿಗೆ ಕಳಂಕ ತರುವ ದುರುದ್ದೇಶ ಈ ಆಪಾದನೆಗಳ ಹಿಂದೆ ಕೆಲಸ ಮಾಡಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಪ್ರಭಾರಿಗಳ ಕಾರ್ಯಶೈಲಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ

ವಿಶ್ವವಿದ್ಯಾಲಯ ನೇಮಕಾತಿಯಲ್ಲಿ ಆಕ್ರಮ ಎಸಗಿದೆ ಎಂಬ ಆರೋಪಕ್ಕೆ ಪ್ರತಿಕ್ರಯಿಸಿರುವ ಅವರು, “ವಿಶ್ವವಿದ್ಯಾಲಯದಲ್ಲಿ ನೇಮಕಾತಿಯೇ ಮಾಡಿಲ್ಲ, ಆದ್ದರಿಂದ ಆಕ್ರಮ ಹೇಗೆ ನಡೆಯುತ್ತದೆ? ಹಂಗಾಮಿ ಆಡಳಿತ ಯಾವ ನೇಮಕಾತಿಯನ್ನೂ ಮಾಡಿಲ್ಲ. ಬದಲಿಗೆ ಆಕ್ರಮದಿಂದ ವಿಶ್ವವಿದ್ಯಾಲಯದ ಒಳಗೆ ನುಗ್ಗಿದ ಕೆಲವರನ್ನು ಮರಳಿ ಕಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ಹಣಕಾಸಿನ ದುರ್ಬಳಿಕೆಯ ಆರೋಪಕ್ಕೆ ಉತ್ತರಿಸಿರುವ ಅವರು, “ಕಾರ್ಯಕಾರಿ ಮಂಡಳಿಯು ಯಾವುದೇ ಅಧಿಕಾರಿಗೆ ಹಣಕಾಸು ಬಳಸುವ ಅಧಿಕಾರ ನೀಡುವುದಿಲ್ಲ. ಹೀಗಿರುವಾಗ ಕಾರ್ಯಕಾರಿ ಮಂಡಳಿಯ ನಿಯಮ ಮುರಿಯುವ ಪ್ರಶ್ನೆಯೇ ಇಲ್ಲಿ ಬರುವುದಿಲ್ಲ. ಹಂಗಾಮಿ ಕುಲಪತಿ 4 ಲಕ್ಷ ಹಣ ಬಳಸಲು ಕುಲಸಚಿವರಿಗೆ ಅಧಿಕಾರ ನೀಡಿದ್ದಾರೆ ಎಂಬುದು ಸಹ ಕಲ್ಪಿತ. ಕುಲಸಚಿವರಿಗೆ ಕೇವಲ 10 ಸಾವಿರ ರೂಪಾಯಿ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವಷ್ಟೆ ಇದೆ” ಎಂದು ಹೇಳಿದ್ದಾರೆ.

ಟೆಂಡರ್ ಪ್ರಕ್ರಿಯೆ ನಡೆಸದೆ 5 ಲಕ್ಷ ರೂಪಾಯಿವರೆಗೆ ಸಾಮಗ್ರಿಗಳನ್ನು ಖರೀದಿಸಿದ್ದಾರೆ ಎಂಬ ಆರೋಪವನ್ನು ಪ್ರೊ. ಡೋಣೂರ ಸಂಪೂರ್ಣ ಸುಳ್ಳು ಎಂದು  ಹೇಳಿದ್ದಾರೆ. “ವಿಶ್ವವಿದ್ಯಾಲಯದಲ್ಲಿ ಪರ್ಚೆಸ್ ವಿಭಾಗ ಮತ್ತು ಪರ್ಚೆಸ್ ಸಮಿತಿ ಇರುತ್ತವೆ. ಇವು ವಿಶ್ವವಿದ್ಯಾಲಯಕ್ಕೆ ಬೇಕಾದ ವಸ್ತುಗಳನ್ನು ಹಣಕಾಸು ನಿಯಮಗಳಿಗೆ ಅನುಸಾರವಾಗಿ ಖರೀದಿಸುತ್ತವೆ. ಟೆಂಡರ್ ಉಲ್ಲಂಘನೆಯಾಗಿದೆ ಎಂಬುದು ಕಫೋಲಕಲ್ಪಿತ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಶಿವಾನಂದ ಅವರನ್ನು ಕಾನೂನುಬಾಹಿರವಾಗಿ ಮುಂದುವರೆಸಲಾಗಿದೆ ಎಂಬ ಆರೋಪ ಕೂಡ ಸು‌ಳ್ಳು ಆರೋಪವಾಗಿದೆ ಎಂದು ಅವರು ತಿಳಿಸಿದ್ದಾರೆ. “ವಿಶ್ವವಿದ್ಯಾಲಯವು ಅವರನ್ನು ಐದು ವರ್ಷಗಳ ಅಥವಾ 62 ವರ್ಷ ಎರಡರಲ್ಲಿ ಯಾವುದು ಮೊದಲು ಸಂಭವಿಸುತ್ತದೆಯೋ ಆ ಅವಧಿಗೆ ಡೆಪ್ಯೂಟೇಶನ್ ಮೇಲೆ ನೇಮಕ ಮಾಡಿತ್ತು. ಅವರನ್ನು ಮುಂದುವರೆಸುವ ಬಗ್ಗೆ ಕಾರ್ಯಕಾರಿ ಮಂಡಳಿಯಲ್ಲಿ ಚರ್ಚಿಸಲಾಗಿದೆ. ಯುಜಿಸಿ,ಎಮ್‌ಎಚ್‌ಆರ್‌ಡಿ ಮತ್ತು ರಾಷ್ಟ್ರಪತಿ ನಿರ್ದೇಶಿತ ಸದಸ್ಯರನ್ನು ಒಳಗೊಂಡ 13 ಜನರ ಕಾರ್ಯಕಾರಿ ಮಂಡಳಿ ಶಿವಾನಂದ ಅವರನ್ನು ಮುಂದುವರೆಸುವ ವಿಷಯದಲ್ಲಿ ಸೂಕ್ತ ನಿರ್ಣಯ ತೆಗೆದುಕೊಂಡಿದೆ. ಇದು ಕೇವಲ ಕುಲಪತಿ ಮತ್ತು ಕುಲಸಚಿವರ ನಿರ್ಧಾರ ಅಲ್ಲ” ಎಂದು ಅವರು ತಿಳಿಸಿದ್ದಾರೆ.

“ಸಂಘಟನೆಗಳು ಮಾಡಿದ ಎಲ್ಲಾ ಆರೋಪಗಳಲು ಅಸತ್ಯದಿಂದ ಕೂಡಿದ್ದು ವಿಶ್ವವಿದ್ಯಾಲಯದ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಸಂದೇಶ ರವಾನಿಸುವ ಉದ್ದೇಶ ಇದರ ಹಿಂದೆ ಕೆಲಸ ಮಾಡಿದೆ. ಯಾವುದೇ ಒಂದು ಶಿಕ್ಷಣ ಸಂಸ್ಥೆಯ ಬಗ್ಗೆ ಇಂಥ ತಪ್ಪು ಮಾಹಿತಿ ನೀಡುವುದು, ಇಲ್ಲಸಲ್ಲದ ಸುಳ್ಳು ಆರೋಪ ಮಾಡುವುದು, ವಿಶ್ವವಿದ್ಯಾಲಯದ ಅಧಿಕಾರಿಗಳ ಚಾರಿತ್ರ‍್ಯದ ಮೇಲೆ ವೃತಾ ಆರೋಪ ಮಾಡುವುದು ಮತ್ತು ಒಂದು ರಾಷ್ಟ್ರೀಯ ವಿಶ್ವವಿದ್ಯಾಲಯದ ಬಗ್ಗೆ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವುದು ಪ್ರಶ್ನಾರ್ಹ ಕ್ರಮ. ಎಲ್ಲ ಸಾಮಾಜಿಕ, ಸಾಂಸ್ಕೃತಿಕ ಸಂಘಟನೆಗಳಿಗೂ ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಜವಾಬ್ದಾರಿಗಳು ಇರಬೇಕು” ಎಂದು ಪ್ರೊ. ಡೋಣೂರ ಹೇಳಿದ್ದಾರೆ.

“ವಿಶ್ವವಿದ್ಯಾಲಯದ ಪ್ರಗತಿ ಸಹಿಸದ, ಶೈಕ್ಷಣಿಕ, ಆಡಳಿತಾತ್ಮಕ ಮತ್ತು ಸಂಶೋಧನಾತ್ಮಕ ಅಭಿವೃದ್ಧಿಗಾಗಿ ಕುಲಪತಿಗಳು ಕೈಕೊಂಡ ಕ್ರಮಗಳನ್ನು ಸಹಿಸದ ಕೆಲವು ಶಕ್ತಿಗಳು ಇತ್ತೀಚೆಗೆ ವಿಶ್ವವಿದ್ಯಾಲಯದ ಹೆಸರಿಗೆ ಮಸಿ ಬಡಿಯುವ ಕೆಲಸದಲ್ಲಿ ತೊಡಗಿವೆ. ಇಂಥ ಆರೋಪಗಳನ್ನು ಸಾರ್ವಜನಿಕರು ನಂಬಬಾರದು” ಎಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಪ್ರೊ. ಬಸವರಾಜ ಡೋಣೂರ ಅವರು ತಮ್ಮ ಸ್ಪಷ್ಟೀಕರಣದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಿ.ಬಿ ಮೆಹ್ತಾ, ಅರವಿಂದ್ ಸುಬ್ರಮಣಿಯನ್ ರಾಜೀನಾಮೆ: ಲೋಪಗಳನ್ನು ಒಪ್ಪಿಕೊಂಡ ಅಶೋಕ ವಿವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...