Homeಕರ್ನಾಟಕಕಲಬುರಗಿ ಕೇಂದ್ರೀಯ ವಿವಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ ಅಲ್ಲಗೆಳೆದ ರಿಜಿಸ್ಟ್ರಾರ್‌‌‌‌

ಕಲಬುರಗಿ ಕೇಂದ್ರೀಯ ವಿವಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ ಅಲ್ಲಗೆಳೆದ ರಿಜಿಸ್ಟ್ರಾರ್‌‌‌‌

- Advertisement -
- Advertisement -

ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಉಪಕುಲಪತಿ ಮತ್ತು ರಿಜಿಸ್ಟ್ರಾರ್‌‌‌‌ ಭ್ರಷ್ಟಾಚಾರ ಮತ್ತು ಅಧಿಕಾರ ದುರ್ಬಳಕೆ ಮಾಡಿದ್ದಾರೆ ಎಂಬ ಆರೋಪವನ್ನು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌‌ ಪ್ರೊ. ಬಸವರಾಜ ಡೋಣೂರ ಅವರು ಅಲ್ಲಗೆಳೆದಿದ್ದು, “ತಮ್ಮ ಮೇಲಿನ ಆರೋಪವು ಸಂಪೂರ್ಣ ಕಟ್ಟುಕತೆಯಾಗಿದೆ. ಸಂಘಟನೆಗಳು ಮಾಡಿದ ಆಪಾದನೆಗಳಲ್ಲಿ ಯಾವುದೇ ಹುರುಳಿಲ್ಲ. ವಿಶ್ವವಿದ್ಯಾಲಯದ ಹೆಸರಿಗೆ ಕಳಂಕ ತರುವ ದುರುದ್ದೇಶ ಈ ಆಪಾದನೆಗಳ ಹಿಂದೆ ಕೆಲಸ ಮಾಡಿದೆ” ಎಂದು ತಿಳಿಸಿದ್ದಾರೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ), ಅಹಿಂದ ಫೋರಂ ಮತ್ತು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಸ್ಥೆ ಸೇರಿದಂತೆ ಕೆಲವು ಸಂಸ್ಥೆಗಳು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಎಂ.ವಿ. ಅಳಗವಾಡಿ ಮತ್ತು ರಿಜಿಸ್ಟ್ರಾರ್ ಪ್ರೊ. ಬಸವರಾಜ ಡೋಣೂರ ಅವರು ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಹಲವು ಆರೋಪಗಳನ್ನು ಮಾಡಿದ್ದು ರಾಷ್ಟ್ರಪತಿಗೂ ಪತ್ರ ಬರೆದಿದ್ದಾರೆ ಎಂದು ವರದಿಯಾಗಿತ್ತು.

ಇದಕ್ಕೆ ಪತ್ರಿಕ್ರಿಯಿಸಿರುವ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಡೋಣೂರ ಅವರು, “ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಮತ್ತು ಪ್ರಭಾರ ಕುಲಸಚಿವರ ವಿರುದ್ಧ ವಿವಿಧ ಸಂಘಟನೆಗಳು ಮಾಡಿದ ಅಧಿಕಾರ ದುರ್ಬಳಿಕೆಯ ಆರೋಪ ಅಸತ್ಯದಿಂದ ಕೂಡಿದ್ದು ಇದೊಂದು ಸಂಪೂರ್ಣ ಕಟ್ಟುಕತೆಯಾಗಿದೆ. ಈ ಸಂಘಟನೆಗಳು ಮಾಡಿದ ಆಪಾದನೆಗಳಲ್ಲಿ ಯಾವುದೇ ಹುರುಳಿಲ್ಲ. ವಿಶ್ವವಿದ್ಯಾಲಯದ ಹೆಸರಿಗೆ ಕಳಂಕ ತರುವ ದುರುದ್ದೇಶ ಈ ಆಪಾದನೆಗಳ ಹಿಂದೆ ಕೆಲಸ ಮಾಡಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಪ್ರಭಾರಿಗಳ ಕಾರ್ಯಶೈಲಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ

ವಿಶ್ವವಿದ್ಯಾಲಯ ನೇಮಕಾತಿಯಲ್ಲಿ ಆಕ್ರಮ ಎಸಗಿದೆ ಎಂಬ ಆರೋಪಕ್ಕೆ ಪ್ರತಿಕ್ರಯಿಸಿರುವ ಅವರು, “ವಿಶ್ವವಿದ್ಯಾಲಯದಲ್ಲಿ ನೇಮಕಾತಿಯೇ ಮಾಡಿಲ್ಲ, ಆದ್ದರಿಂದ ಆಕ್ರಮ ಹೇಗೆ ನಡೆಯುತ್ತದೆ? ಹಂಗಾಮಿ ಆಡಳಿತ ಯಾವ ನೇಮಕಾತಿಯನ್ನೂ ಮಾಡಿಲ್ಲ. ಬದಲಿಗೆ ಆಕ್ರಮದಿಂದ ವಿಶ್ವವಿದ್ಯಾಲಯದ ಒಳಗೆ ನುಗ್ಗಿದ ಕೆಲವರನ್ನು ಮರಳಿ ಕಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ಹಣಕಾಸಿನ ದುರ್ಬಳಿಕೆಯ ಆರೋಪಕ್ಕೆ ಉತ್ತರಿಸಿರುವ ಅವರು, “ಕಾರ್ಯಕಾರಿ ಮಂಡಳಿಯು ಯಾವುದೇ ಅಧಿಕಾರಿಗೆ ಹಣಕಾಸು ಬಳಸುವ ಅಧಿಕಾರ ನೀಡುವುದಿಲ್ಲ. ಹೀಗಿರುವಾಗ ಕಾರ್ಯಕಾರಿ ಮಂಡಳಿಯ ನಿಯಮ ಮುರಿಯುವ ಪ್ರಶ್ನೆಯೇ ಇಲ್ಲಿ ಬರುವುದಿಲ್ಲ. ಹಂಗಾಮಿ ಕುಲಪತಿ 4 ಲಕ್ಷ ಹಣ ಬಳಸಲು ಕುಲಸಚಿವರಿಗೆ ಅಧಿಕಾರ ನೀಡಿದ್ದಾರೆ ಎಂಬುದು ಸಹ ಕಲ್ಪಿತ. ಕುಲಸಚಿವರಿಗೆ ಕೇವಲ 10 ಸಾವಿರ ರೂಪಾಯಿ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವಷ್ಟೆ ಇದೆ” ಎಂದು ಹೇಳಿದ್ದಾರೆ.

ಟೆಂಡರ್ ಪ್ರಕ್ರಿಯೆ ನಡೆಸದೆ 5 ಲಕ್ಷ ರೂಪಾಯಿವರೆಗೆ ಸಾಮಗ್ರಿಗಳನ್ನು ಖರೀದಿಸಿದ್ದಾರೆ ಎಂಬ ಆರೋಪವನ್ನು ಪ್ರೊ. ಡೋಣೂರ ಸಂಪೂರ್ಣ ಸುಳ್ಳು ಎಂದು  ಹೇಳಿದ್ದಾರೆ. “ವಿಶ್ವವಿದ್ಯಾಲಯದಲ್ಲಿ ಪರ್ಚೆಸ್ ವಿಭಾಗ ಮತ್ತು ಪರ್ಚೆಸ್ ಸಮಿತಿ ಇರುತ್ತವೆ. ಇವು ವಿಶ್ವವಿದ್ಯಾಲಯಕ್ಕೆ ಬೇಕಾದ ವಸ್ತುಗಳನ್ನು ಹಣಕಾಸು ನಿಯಮಗಳಿಗೆ ಅನುಸಾರವಾಗಿ ಖರೀದಿಸುತ್ತವೆ. ಟೆಂಡರ್ ಉಲ್ಲಂಘನೆಯಾಗಿದೆ ಎಂಬುದು ಕಫೋಲಕಲ್ಪಿತ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಶಿವಾನಂದ ಅವರನ್ನು ಕಾನೂನುಬಾಹಿರವಾಗಿ ಮುಂದುವರೆಸಲಾಗಿದೆ ಎಂಬ ಆರೋಪ ಕೂಡ ಸು‌ಳ್ಳು ಆರೋಪವಾಗಿದೆ ಎಂದು ಅವರು ತಿಳಿಸಿದ್ದಾರೆ. “ವಿಶ್ವವಿದ್ಯಾಲಯವು ಅವರನ್ನು ಐದು ವರ್ಷಗಳ ಅಥವಾ 62 ವರ್ಷ ಎರಡರಲ್ಲಿ ಯಾವುದು ಮೊದಲು ಸಂಭವಿಸುತ್ತದೆಯೋ ಆ ಅವಧಿಗೆ ಡೆಪ್ಯೂಟೇಶನ್ ಮೇಲೆ ನೇಮಕ ಮಾಡಿತ್ತು. ಅವರನ್ನು ಮುಂದುವರೆಸುವ ಬಗ್ಗೆ ಕಾರ್ಯಕಾರಿ ಮಂಡಳಿಯಲ್ಲಿ ಚರ್ಚಿಸಲಾಗಿದೆ. ಯುಜಿಸಿ,ಎಮ್‌ಎಚ್‌ಆರ್‌ಡಿ ಮತ್ತು ರಾಷ್ಟ್ರಪತಿ ನಿರ್ದೇಶಿತ ಸದಸ್ಯರನ್ನು ಒಳಗೊಂಡ 13 ಜನರ ಕಾರ್ಯಕಾರಿ ಮಂಡಳಿ ಶಿವಾನಂದ ಅವರನ್ನು ಮುಂದುವರೆಸುವ ವಿಷಯದಲ್ಲಿ ಸೂಕ್ತ ನಿರ್ಣಯ ತೆಗೆದುಕೊಂಡಿದೆ. ಇದು ಕೇವಲ ಕುಲಪತಿ ಮತ್ತು ಕುಲಸಚಿವರ ನಿರ್ಧಾರ ಅಲ್ಲ” ಎಂದು ಅವರು ತಿಳಿಸಿದ್ದಾರೆ.

“ಸಂಘಟನೆಗಳು ಮಾಡಿದ ಎಲ್ಲಾ ಆರೋಪಗಳಲು ಅಸತ್ಯದಿಂದ ಕೂಡಿದ್ದು ವಿಶ್ವವಿದ್ಯಾಲಯದ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಸಂದೇಶ ರವಾನಿಸುವ ಉದ್ದೇಶ ಇದರ ಹಿಂದೆ ಕೆಲಸ ಮಾಡಿದೆ. ಯಾವುದೇ ಒಂದು ಶಿಕ್ಷಣ ಸಂಸ್ಥೆಯ ಬಗ್ಗೆ ಇಂಥ ತಪ್ಪು ಮಾಹಿತಿ ನೀಡುವುದು, ಇಲ್ಲಸಲ್ಲದ ಸುಳ್ಳು ಆರೋಪ ಮಾಡುವುದು, ವಿಶ್ವವಿದ್ಯಾಲಯದ ಅಧಿಕಾರಿಗಳ ಚಾರಿತ್ರ‍್ಯದ ಮೇಲೆ ವೃತಾ ಆರೋಪ ಮಾಡುವುದು ಮತ್ತು ಒಂದು ರಾಷ್ಟ್ರೀಯ ವಿಶ್ವವಿದ್ಯಾಲಯದ ಬಗ್ಗೆ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವುದು ಪ್ರಶ್ನಾರ್ಹ ಕ್ರಮ. ಎಲ್ಲ ಸಾಮಾಜಿಕ, ಸಾಂಸ್ಕೃತಿಕ ಸಂಘಟನೆಗಳಿಗೂ ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಜವಾಬ್ದಾರಿಗಳು ಇರಬೇಕು” ಎಂದು ಪ್ರೊ. ಡೋಣೂರ ಹೇಳಿದ್ದಾರೆ.

“ವಿಶ್ವವಿದ್ಯಾಲಯದ ಪ್ರಗತಿ ಸಹಿಸದ, ಶೈಕ್ಷಣಿಕ, ಆಡಳಿತಾತ್ಮಕ ಮತ್ತು ಸಂಶೋಧನಾತ್ಮಕ ಅಭಿವೃದ್ಧಿಗಾಗಿ ಕುಲಪತಿಗಳು ಕೈಕೊಂಡ ಕ್ರಮಗಳನ್ನು ಸಹಿಸದ ಕೆಲವು ಶಕ್ತಿಗಳು ಇತ್ತೀಚೆಗೆ ವಿಶ್ವವಿದ್ಯಾಲಯದ ಹೆಸರಿಗೆ ಮಸಿ ಬಡಿಯುವ ಕೆಲಸದಲ್ಲಿ ತೊಡಗಿವೆ. ಇಂಥ ಆರೋಪಗಳನ್ನು ಸಾರ್ವಜನಿಕರು ನಂಬಬಾರದು” ಎಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಪ್ರೊ. ಬಸವರಾಜ ಡೋಣೂರ ಅವರು ತಮ್ಮ ಸ್ಪಷ್ಟೀಕರಣದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಿ.ಬಿ ಮೆಹ್ತಾ, ಅರವಿಂದ್ ಸುಬ್ರಮಣಿಯನ್ ರಾಜೀನಾಮೆ: ಲೋಪಗಳನ್ನು ಒಪ್ಪಿಕೊಂಡ ಅಶೋಕ ವಿವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...