Homeಕರ್ನಾಟಕಕಲಬುರಗಿ ಕೇಂದ್ರೀಯ ವಿವಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ ಅಲ್ಲಗೆಳೆದ ರಿಜಿಸ್ಟ್ರಾರ್‌‌‌‌

ಕಲಬುರಗಿ ಕೇಂದ್ರೀಯ ವಿವಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ ಅಲ್ಲಗೆಳೆದ ರಿಜಿಸ್ಟ್ರಾರ್‌‌‌‌

- Advertisement -
- Advertisement -

ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಉಪಕುಲಪತಿ ಮತ್ತು ರಿಜಿಸ್ಟ್ರಾರ್‌‌‌‌ ಭ್ರಷ್ಟಾಚಾರ ಮತ್ತು ಅಧಿಕಾರ ದುರ್ಬಳಕೆ ಮಾಡಿದ್ದಾರೆ ಎಂಬ ಆರೋಪವನ್ನು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌‌ ಪ್ರೊ. ಬಸವರಾಜ ಡೋಣೂರ ಅವರು ಅಲ್ಲಗೆಳೆದಿದ್ದು, “ತಮ್ಮ ಮೇಲಿನ ಆರೋಪವು ಸಂಪೂರ್ಣ ಕಟ್ಟುಕತೆಯಾಗಿದೆ. ಸಂಘಟನೆಗಳು ಮಾಡಿದ ಆಪಾದನೆಗಳಲ್ಲಿ ಯಾವುದೇ ಹುರುಳಿಲ್ಲ. ವಿಶ್ವವಿದ್ಯಾಲಯದ ಹೆಸರಿಗೆ ಕಳಂಕ ತರುವ ದುರುದ್ದೇಶ ಈ ಆಪಾದನೆಗಳ ಹಿಂದೆ ಕೆಲಸ ಮಾಡಿದೆ” ಎಂದು ತಿಳಿಸಿದ್ದಾರೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ), ಅಹಿಂದ ಫೋರಂ ಮತ್ತು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಸ್ಥೆ ಸೇರಿದಂತೆ ಕೆಲವು ಸಂಸ್ಥೆಗಳು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಎಂ.ವಿ. ಅಳಗವಾಡಿ ಮತ್ತು ರಿಜಿಸ್ಟ್ರಾರ್ ಪ್ರೊ. ಬಸವರಾಜ ಡೋಣೂರ ಅವರು ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಹಲವು ಆರೋಪಗಳನ್ನು ಮಾಡಿದ್ದು ರಾಷ್ಟ್ರಪತಿಗೂ ಪತ್ರ ಬರೆದಿದ್ದಾರೆ ಎಂದು ವರದಿಯಾಗಿತ್ತು.

ಇದಕ್ಕೆ ಪತ್ರಿಕ್ರಿಯಿಸಿರುವ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಡೋಣೂರ ಅವರು, “ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಮತ್ತು ಪ್ರಭಾರ ಕುಲಸಚಿವರ ವಿರುದ್ಧ ವಿವಿಧ ಸಂಘಟನೆಗಳು ಮಾಡಿದ ಅಧಿಕಾರ ದುರ್ಬಳಿಕೆಯ ಆರೋಪ ಅಸತ್ಯದಿಂದ ಕೂಡಿದ್ದು ಇದೊಂದು ಸಂಪೂರ್ಣ ಕಟ್ಟುಕತೆಯಾಗಿದೆ. ಈ ಸಂಘಟನೆಗಳು ಮಾಡಿದ ಆಪಾದನೆಗಳಲ್ಲಿ ಯಾವುದೇ ಹುರುಳಿಲ್ಲ. ವಿಶ್ವವಿದ್ಯಾಲಯದ ಹೆಸರಿಗೆ ಕಳಂಕ ತರುವ ದುರುದ್ದೇಶ ಈ ಆಪಾದನೆಗಳ ಹಿಂದೆ ಕೆಲಸ ಮಾಡಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಪ್ರಭಾರಿಗಳ ಕಾರ್ಯಶೈಲಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ

ವಿಶ್ವವಿದ್ಯಾಲಯ ನೇಮಕಾತಿಯಲ್ಲಿ ಆಕ್ರಮ ಎಸಗಿದೆ ಎಂಬ ಆರೋಪಕ್ಕೆ ಪ್ರತಿಕ್ರಯಿಸಿರುವ ಅವರು, “ವಿಶ್ವವಿದ್ಯಾಲಯದಲ್ಲಿ ನೇಮಕಾತಿಯೇ ಮಾಡಿಲ್ಲ, ಆದ್ದರಿಂದ ಆಕ್ರಮ ಹೇಗೆ ನಡೆಯುತ್ತದೆ? ಹಂಗಾಮಿ ಆಡಳಿತ ಯಾವ ನೇಮಕಾತಿಯನ್ನೂ ಮಾಡಿಲ್ಲ. ಬದಲಿಗೆ ಆಕ್ರಮದಿಂದ ವಿಶ್ವವಿದ್ಯಾಲಯದ ಒಳಗೆ ನುಗ್ಗಿದ ಕೆಲವರನ್ನು ಮರಳಿ ಕಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ಹಣಕಾಸಿನ ದುರ್ಬಳಿಕೆಯ ಆರೋಪಕ್ಕೆ ಉತ್ತರಿಸಿರುವ ಅವರು, “ಕಾರ್ಯಕಾರಿ ಮಂಡಳಿಯು ಯಾವುದೇ ಅಧಿಕಾರಿಗೆ ಹಣಕಾಸು ಬಳಸುವ ಅಧಿಕಾರ ನೀಡುವುದಿಲ್ಲ. ಹೀಗಿರುವಾಗ ಕಾರ್ಯಕಾರಿ ಮಂಡಳಿಯ ನಿಯಮ ಮುರಿಯುವ ಪ್ರಶ್ನೆಯೇ ಇಲ್ಲಿ ಬರುವುದಿಲ್ಲ. ಹಂಗಾಮಿ ಕುಲಪತಿ 4 ಲಕ್ಷ ಹಣ ಬಳಸಲು ಕುಲಸಚಿವರಿಗೆ ಅಧಿಕಾರ ನೀಡಿದ್ದಾರೆ ಎಂಬುದು ಸಹ ಕಲ್ಪಿತ. ಕುಲಸಚಿವರಿಗೆ ಕೇವಲ 10 ಸಾವಿರ ರೂಪಾಯಿ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವಷ್ಟೆ ಇದೆ” ಎಂದು ಹೇಳಿದ್ದಾರೆ.

ಟೆಂಡರ್ ಪ್ರಕ್ರಿಯೆ ನಡೆಸದೆ 5 ಲಕ್ಷ ರೂಪಾಯಿವರೆಗೆ ಸಾಮಗ್ರಿಗಳನ್ನು ಖರೀದಿಸಿದ್ದಾರೆ ಎಂಬ ಆರೋಪವನ್ನು ಪ್ರೊ. ಡೋಣೂರ ಸಂಪೂರ್ಣ ಸುಳ್ಳು ಎಂದು  ಹೇಳಿದ್ದಾರೆ. “ವಿಶ್ವವಿದ್ಯಾಲಯದಲ್ಲಿ ಪರ್ಚೆಸ್ ವಿಭಾಗ ಮತ್ತು ಪರ್ಚೆಸ್ ಸಮಿತಿ ಇರುತ್ತವೆ. ಇವು ವಿಶ್ವವಿದ್ಯಾಲಯಕ್ಕೆ ಬೇಕಾದ ವಸ್ತುಗಳನ್ನು ಹಣಕಾಸು ನಿಯಮಗಳಿಗೆ ಅನುಸಾರವಾಗಿ ಖರೀದಿಸುತ್ತವೆ. ಟೆಂಡರ್ ಉಲ್ಲಂಘನೆಯಾಗಿದೆ ಎಂಬುದು ಕಫೋಲಕಲ್ಪಿತ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಶಿವಾನಂದ ಅವರನ್ನು ಕಾನೂನುಬಾಹಿರವಾಗಿ ಮುಂದುವರೆಸಲಾಗಿದೆ ಎಂಬ ಆರೋಪ ಕೂಡ ಸು‌ಳ್ಳು ಆರೋಪವಾಗಿದೆ ಎಂದು ಅವರು ತಿಳಿಸಿದ್ದಾರೆ. “ವಿಶ್ವವಿದ್ಯಾಲಯವು ಅವರನ್ನು ಐದು ವರ್ಷಗಳ ಅಥವಾ 62 ವರ್ಷ ಎರಡರಲ್ಲಿ ಯಾವುದು ಮೊದಲು ಸಂಭವಿಸುತ್ತದೆಯೋ ಆ ಅವಧಿಗೆ ಡೆಪ್ಯೂಟೇಶನ್ ಮೇಲೆ ನೇಮಕ ಮಾಡಿತ್ತು. ಅವರನ್ನು ಮುಂದುವರೆಸುವ ಬಗ್ಗೆ ಕಾರ್ಯಕಾರಿ ಮಂಡಳಿಯಲ್ಲಿ ಚರ್ಚಿಸಲಾಗಿದೆ. ಯುಜಿಸಿ,ಎಮ್‌ಎಚ್‌ಆರ್‌ಡಿ ಮತ್ತು ರಾಷ್ಟ್ರಪತಿ ನಿರ್ದೇಶಿತ ಸದಸ್ಯರನ್ನು ಒಳಗೊಂಡ 13 ಜನರ ಕಾರ್ಯಕಾರಿ ಮಂಡಳಿ ಶಿವಾನಂದ ಅವರನ್ನು ಮುಂದುವರೆಸುವ ವಿಷಯದಲ್ಲಿ ಸೂಕ್ತ ನಿರ್ಣಯ ತೆಗೆದುಕೊಂಡಿದೆ. ಇದು ಕೇವಲ ಕುಲಪತಿ ಮತ್ತು ಕುಲಸಚಿವರ ನಿರ್ಧಾರ ಅಲ್ಲ” ಎಂದು ಅವರು ತಿಳಿಸಿದ್ದಾರೆ.

“ಸಂಘಟನೆಗಳು ಮಾಡಿದ ಎಲ್ಲಾ ಆರೋಪಗಳಲು ಅಸತ್ಯದಿಂದ ಕೂಡಿದ್ದು ವಿಶ್ವವಿದ್ಯಾಲಯದ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಸಂದೇಶ ರವಾನಿಸುವ ಉದ್ದೇಶ ಇದರ ಹಿಂದೆ ಕೆಲಸ ಮಾಡಿದೆ. ಯಾವುದೇ ಒಂದು ಶಿಕ್ಷಣ ಸಂಸ್ಥೆಯ ಬಗ್ಗೆ ಇಂಥ ತಪ್ಪು ಮಾಹಿತಿ ನೀಡುವುದು, ಇಲ್ಲಸಲ್ಲದ ಸುಳ್ಳು ಆರೋಪ ಮಾಡುವುದು, ವಿಶ್ವವಿದ್ಯಾಲಯದ ಅಧಿಕಾರಿಗಳ ಚಾರಿತ್ರ‍್ಯದ ಮೇಲೆ ವೃತಾ ಆರೋಪ ಮಾಡುವುದು ಮತ್ತು ಒಂದು ರಾಷ್ಟ್ರೀಯ ವಿಶ್ವವಿದ್ಯಾಲಯದ ಬಗ್ಗೆ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವುದು ಪ್ರಶ್ನಾರ್ಹ ಕ್ರಮ. ಎಲ್ಲ ಸಾಮಾಜಿಕ, ಸಾಂಸ್ಕೃತಿಕ ಸಂಘಟನೆಗಳಿಗೂ ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಜವಾಬ್ದಾರಿಗಳು ಇರಬೇಕು” ಎಂದು ಪ್ರೊ. ಡೋಣೂರ ಹೇಳಿದ್ದಾರೆ.

“ವಿಶ್ವವಿದ್ಯಾಲಯದ ಪ್ರಗತಿ ಸಹಿಸದ, ಶೈಕ್ಷಣಿಕ, ಆಡಳಿತಾತ್ಮಕ ಮತ್ತು ಸಂಶೋಧನಾತ್ಮಕ ಅಭಿವೃದ್ಧಿಗಾಗಿ ಕುಲಪತಿಗಳು ಕೈಕೊಂಡ ಕ್ರಮಗಳನ್ನು ಸಹಿಸದ ಕೆಲವು ಶಕ್ತಿಗಳು ಇತ್ತೀಚೆಗೆ ವಿಶ್ವವಿದ್ಯಾಲಯದ ಹೆಸರಿಗೆ ಮಸಿ ಬಡಿಯುವ ಕೆಲಸದಲ್ಲಿ ತೊಡಗಿವೆ. ಇಂಥ ಆರೋಪಗಳನ್ನು ಸಾರ್ವಜನಿಕರು ನಂಬಬಾರದು” ಎಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಪ್ರೊ. ಬಸವರಾಜ ಡೋಣೂರ ಅವರು ತಮ್ಮ ಸ್ಪಷ್ಟೀಕರಣದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಿ.ಬಿ ಮೆಹ್ತಾ, ಅರವಿಂದ್ ಸುಬ್ರಮಣಿಯನ್ ರಾಜೀನಾಮೆ: ಲೋಪಗಳನ್ನು ಒಪ್ಪಿಕೊಂಡ ಅಶೋಕ ವಿವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...