Homeಕರ್ನಾಟಕಕಲಬುರಗಿ ಕೇಂದ್ರೀಯ ವಿವಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ ಅಲ್ಲಗೆಳೆದ ರಿಜಿಸ್ಟ್ರಾರ್‌‌‌‌

ಕಲಬುರಗಿ ಕೇಂದ್ರೀಯ ವಿವಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ ಅಲ್ಲಗೆಳೆದ ರಿಜಿಸ್ಟ್ರಾರ್‌‌‌‌

- Advertisement -
- Advertisement -

ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಉಪಕುಲಪತಿ ಮತ್ತು ರಿಜಿಸ್ಟ್ರಾರ್‌‌‌‌ ಭ್ರಷ್ಟಾಚಾರ ಮತ್ತು ಅಧಿಕಾರ ದುರ್ಬಳಕೆ ಮಾಡಿದ್ದಾರೆ ಎಂಬ ಆರೋಪವನ್ನು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌‌ ಪ್ರೊ. ಬಸವರಾಜ ಡೋಣೂರ ಅವರು ಅಲ್ಲಗೆಳೆದಿದ್ದು, “ತಮ್ಮ ಮೇಲಿನ ಆರೋಪವು ಸಂಪೂರ್ಣ ಕಟ್ಟುಕತೆಯಾಗಿದೆ. ಸಂಘಟನೆಗಳು ಮಾಡಿದ ಆಪಾದನೆಗಳಲ್ಲಿ ಯಾವುದೇ ಹುರುಳಿಲ್ಲ. ವಿಶ್ವವಿದ್ಯಾಲಯದ ಹೆಸರಿಗೆ ಕಳಂಕ ತರುವ ದುರುದ್ದೇಶ ಈ ಆಪಾದನೆಗಳ ಹಿಂದೆ ಕೆಲಸ ಮಾಡಿದೆ” ಎಂದು ತಿಳಿಸಿದ್ದಾರೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ), ಅಹಿಂದ ಫೋರಂ ಮತ್ತು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಸ್ಥೆ ಸೇರಿದಂತೆ ಕೆಲವು ಸಂಸ್ಥೆಗಳು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಎಂ.ವಿ. ಅಳಗವಾಡಿ ಮತ್ತು ರಿಜಿಸ್ಟ್ರಾರ್ ಪ್ರೊ. ಬಸವರಾಜ ಡೋಣೂರ ಅವರು ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಹಲವು ಆರೋಪಗಳನ್ನು ಮಾಡಿದ್ದು ರಾಷ್ಟ್ರಪತಿಗೂ ಪತ್ರ ಬರೆದಿದ್ದಾರೆ ಎಂದು ವರದಿಯಾಗಿತ್ತು.

ಇದಕ್ಕೆ ಪತ್ರಿಕ್ರಿಯಿಸಿರುವ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಡೋಣೂರ ಅವರು, “ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಮತ್ತು ಪ್ರಭಾರ ಕುಲಸಚಿವರ ವಿರುದ್ಧ ವಿವಿಧ ಸಂಘಟನೆಗಳು ಮಾಡಿದ ಅಧಿಕಾರ ದುರ್ಬಳಿಕೆಯ ಆರೋಪ ಅಸತ್ಯದಿಂದ ಕೂಡಿದ್ದು ಇದೊಂದು ಸಂಪೂರ್ಣ ಕಟ್ಟುಕತೆಯಾಗಿದೆ. ಈ ಸಂಘಟನೆಗಳು ಮಾಡಿದ ಆಪಾದನೆಗಳಲ್ಲಿ ಯಾವುದೇ ಹುರುಳಿಲ್ಲ. ವಿಶ್ವವಿದ್ಯಾಲಯದ ಹೆಸರಿಗೆ ಕಳಂಕ ತರುವ ದುರುದ್ದೇಶ ಈ ಆಪಾದನೆಗಳ ಹಿಂದೆ ಕೆಲಸ ಮಾಡಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಪ್ರಭಾರಿಗಳ ಕಾರ್ಯಶೈಲಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ

ವಿಶ್ವವಿದ್ಯಾಲಯ ನೇಮಕಾತಿಯಲ್ಲಿ ಆಕ್ರಮ ಎಸಗಿದೆ ಎಂಬ ಆರೋಪಕ್ಕೆ ಪ್ರತಿಕ್ರಯಿಸಿರುವ ಅವರು, “ವಿಶ್ವವಿದ್ಯಾಲಯದಲ್ಲಿ ನೇಮಕಾತಿಯೇ ಮಾಡಿಲ್ಲ, ಆದ್ದರಿಂದ ಆಕ್ರಮ ಹೇಗೆ ನಡೆಯುತ್ತದೆ? ಹಂಗಾಮಿ ಆಡಳಿತ ಯಾವ ನೇಮಕಾತಿಯನ್ನೂ ಮಾಡಿಲ್ಲ. ಬದಲಿಗೆ ಆಕ್ರಮದಿಂದ ವಿಶ್ವವಿದ್ಯಾಲಯದ ಒಳಗೆ ನುಗ್ಗಿದ ಕೆಲವರನ್ನು ಮರಳಿ ಕಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ಹಣಕಾಸಿನ ದುರ್ಬಳಿಕೆಯ ಆರೋಪಕ್ಕೆ ಉತ್ತರಿಸಿರುವ ಅವರು, “ಕಾರ್ಯಕಾರಿ ಮಂಡಳಿಯು ಯಾವುದೇ ಅಧಿಕಾರಿಗೆ ಹಣಕಾಸು ಬಳಸುವ ಅಧಿಕಾರ ನೀಡುವುದಿಲ್ಲ. ಹೀಗಿರುವಾಗ ಕಾರ್ಯಕಾರಿ ಮಂಡಳಿಯ ನಿಯಮ ಮುರಿಯುವ ಪ್ರಶ್ನೆಯೇ ಇಲ್ಲಿ ಬರುವುದಿಲ್ಲ. ಹಂಗಾಮಿ ಕುಲಪತಿ 4 ಲಕ್ಷ ಹಣ ಬಳಸಲು ಕುಲಸಚಿವರಿಗೆ ಅಧಿಕಾರ ನೀಡಿದ್ದಾರೆ ಎಂಬುದು ಸಹ ಕಲ್ಪಿತ. ಕುಲಸಚಿವರಿಗೆ ಕೇವಲ 10 ಸಾವಿರ ರೂಪಾಯಿ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವಷ್ಟೆ ಇದೆ” ಎಂದು ಹೇಳಿದ್ದಾರೆ.

ಟೆಂಡರ್ ಪ್ರಕ್ರಿಯೆ ನಡೆಸದೆ 5 ಲಕ್ಷ ರೂಪಾಯಿವರೆಗೆ ಸಾಮಗ್ರಿಗಳನ್ನು ಖರೀದಿಸಿದ್ದಾರೆ ಎಂಬ ಆರೋಪವನ್ನು ಪ್ರೊ. ಡೋಣೂರ ಸಂಪೂರ್ಣ ಸುಳ್ಳು ಎಂದು  ಹೇಳಿದ್ದಾರೆ. “ವಿಶ್ವವಿದ್ಯಾಲಯದಲ್ಲಿ ಪರ್ಚೆಸ್ ವಿಭಾಗ ಮತ್ತು ಪರ್ಚೆಸ್ ಸಮಿತಿ ಇರುತ್ತವೆ. ಇವು ವಿಶ್ವವಿದ್ಯಾಲಯಕ್ಕೆ ಬೇಕಾದ ವಸ್ತುಗಳನ್ನು ಹಣಕಾಸು ನಿಯಮಗಳಿಗೆ ಅನುಸಾರವಾಗಿ ಖರೀದಿಸುತ್ತವೆ. ಟೆಂಡರ್ ಉಲ್ಲಂಘನೆಯಾಗಿದೆ ಎಂಬುದು ಕಫೋಲಕಲ್ಪಿತ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಶಿವಾನಂದ ಅವರನ್ನು ಕಾನೂನುಬಾಹಿರವಾಗಿ ಮುಂದುವರೆಸಲಾಗಿದೆ ಎಂಬ ಆರೋಪ ಕೂಡ ಸು‌ಳ್ಳು ಆರೋಪವಾಗಿದೆ ಎಂದು ಅವರು ತಿಳಿಸಿದ್ದಾರೆ. “ವಿಶ್ವವಿದ್ಯಾಲಯವು ಅವರನ್ನು ಐದು ವರ್ಷಗಳ ಅಥವಾ 62 ವರ್ಷ ಎರಡರಲ್ಲಿ ಯಾವುದು ಮೊದಲು ಸಂಭವಿಸುತ್ತದೆಯೋ ಆ ಅವಧಿಗೆ ಡೆಪ್ಯೂಟೇಶನ್ ಮೇಲೆ ನೇಮಕ ಮಾಡಿತ್ತು. ಅವರನ್ನು ಮುಂದುವರೆಸುವ ಬಗ್ಗೆ ಕಾರ್ಯಕಾರಿ ಮಂಡಳಿಯಲ್ಲಿ ಚರ್ಚಿಸಲಾಗಿದೆ. ಯುಜಿಸಿ,ಎಮ್‌ಎಚ್‌ಆರ್‌ಡಿ ಮತ್ತು ರಾಷ್ಟ್ರಪತಿ ನಿರ್ದೇಶಿತ ಸದಸ್ಯರನ್ನು ಒಳಗೊಂಡ 13 ಜನರ ಕಾರ್ಯಕಾರಿ ಮಂಡಳಿ ಶಿವಾನಂದ ಅವರನ್ನು ಮುಂದುವರೆಸುವ ವಿಷಯದಲ್ಲಿ ಸೂಕ್ತ ನಿರ್ಣಯ ತೆಗೆದುಕೊಂಡಿದೆ. ಇದು ಕೇವಲ ಕುಲಪತಿ ಮತ್ತು ಕುಲಸಚಿವರ ನಿರ್ಧಾರ ಅಲ್ಲ” ಎಂದು ಅವರು ತಿಳಿಸಿದ್ದಾರೆ.

“ಸಂಘಟನೆಗಳು ಮಾಡಿದ ಎಲ್ಲಾ ಆರೋಪಗಳಲು ಅಸತ್ಯದಿಂದ ಕೂಡಿದ್ದು ವಿಶ್ವವಿದ್ಯಾಲಯದ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಸಂದೇಶ ರವಾನಿಸುವ ಉದ್ದೇಶ ಇದರ ಹಿಂದೆ ಕೆಲಸ ಮಾಡಿದೆ. ಯಾವುದೇ ಒಂದು ಶಿಕ್ಷಣ ಸಂಸ್ಥೆಯ ಬಗ್ಗೆ ಇಂಥ ತಪ್ಪು ಮಾಹಿತಿ ನೀಡುವುದು, ಇಲ್ಲಸಲ್ಲದ ಸುಳ್ಳು ಆರೋಪ ಮಾಡುವುದು, ವಿಶ್ವವಿದ್ಯಾಲಯದ ಅಧಿಕಾರಿಗಳ ಚಾರಿತ್ರ‍್ಯದ ಮೇಲೆ ವೃತಾ ಆರೋಪ ಮಾಡುವುದು ಮತ್ತು ಒಂದು ರಾಷ್ಟ್ರೀಯ ವಿಶ್ವವಿದ್ಯಾಲಯದ ಬಗ್ಗೆ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವುದು ಪ್ರಶ್ನಾರ್ಹ ಕ್ರಮ. ಎಲ್ಲ ಸಾಮಾಜಿಕ, ಸಾಂಸ್ಕೃತಿಕ ಸಂಘಟನೆಗಳಿಗೂ ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಜವಾಬ್ದಾರಿಗಳು ಇರಬೇಕು” ಎಂದು ಪ್ರೊ. ಡೋಣೂರ ಹೇಳಿದ್ದಾರೆ.

“ವಿಶ್ವವಿದ್ಯಾಲಯದ ಪ್ರಗತಿ ಸಹಿಸದ, ಶೈಕ್ಷಣಿಕ, ಆಡಳಿತಾತ್ಮಕ ಮತ್ತು ಸಂಶೋಧನಾತ್ಮಕ ಅಭಿವೃದ್ಧಿಗಾಗಿ ಕುಲಪತಿಗಳು ಕೈಕೊಂಡ ಕ್ರಮಗಳನ್ನು ಸಹಿಸದ ಕೆಲವು ಶಕ್ತಿಗಳು ಇತ್ತೀಚೆಗೆ ವಿಶ್ವವಿದ್ಯಾಲಯದ ಹೆಸರಿಗೆ ಮಸಿ ಬಡಿಯುವ ಕೆಲಸದಲ್ಲಿ ತೊಡಗಿವೆ. ಇಂಥ ಆರೋಪಗಳನ್ನು ಸಾರ್ವಜನಿಕರು ನಂಬಬಾರದು” ಎಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಪ್ರೊ. ಬಸವರಾಜ ಡೋಣೂರ ಅವರು ತಮ್ಮ ಸ್ಪಷ್ಟೀಕರಣದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಿ.ಬಿ ಮೆಹ್ತಾ, ಅರವಿಂದ್ ಸುಬ್ರಮಣಿಯನ್ ರಾಜೀನಾಮೆ: ಲೋಪಗಳನ್ನು ಒಪ್ಪಿಕೊಂಡ ಅಶೋಕ ವಿವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...